Homeಕರ್ನಾಟಕಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

2008ರಲ್ಲಿ ಜೆಡಿಎಸ್‍ನಿಂದ ಸ್ಪರ್ಧೆ ಮಾಡಿದ್ದ ಹನುಮಂತರಾಯಪ್ಪ ಅವರ ಮಗಳು ಕುಸುಮಾ ಕಾಂಗ್ರೆಸ್ ಅಭ್ಯರ್ಥಿ! ಇದು ಕಾಂಗ್ರೆಸ್‍ಗೆ ತನ್ನ ಓಟಿನ ಬೇಟೆಯನ್ನು ಮತ್ತಷ್ಟು ಹೆಚ್ಚಿಸಲು ಉಪಯೋಗ ಆಗಬಹುದು ಎಂಬ ಲೆಕ್ಕಾಚಾರ ಕೂಡಾ ಇದೆ.

- Advertisement -
- Advertisement -

ರಾಜ್ಯದ ತುಮಕೂರು ಜಿಲ್ಲೆಯ ಶಿರಾ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ವ್ಯಾಪ್ತಿಗೆ ಬರುವ ರಾಜರಾಜೇಶ್ವರಿ ನಗರದಲ್ಲಿ (ಆರ್‌ಆರ್ ನಗರ) ಉಪ ಚುನಾವಣೆ ಘೋಷಣೆಯಾಗಿದೆ. ಮುಂದಿನ ತಿಂಗಳು ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು ನವೆಂಬರ್ 10ಕ್ಕೆ ಫಲಿತಾಂಶ ಘೋಷಣೆಯಾಗಲಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ – ರಾಜ್ಯದ ಮೂರೂ ಪ್ರಮುಖ ಪಕ್ಷಗಳಿಗೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ.

ರಾಜ್ಯದಲ್ಲಿ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿರುವುದಕ್ಕೆ ಕಾರಣ ಬೇರೆಬೇರೆ. ಶಿರಾ ಕ್ಷೇತ್ರದ ಶಾಸಕರಾಗಿದ್ದ ಸತ್ಯನಾರಾಯಣ ಅವರ ಸಾವಿನಿಂದಾಗಿ ಉಪಚುನಾವಣೆ ನಡೆಯುತ್ತಿದ್ದರೆ, ಆರ್‌ಆರ್ ನಗರ ಕ್ಷೇತ್ರದ ಚುನಾವಣೆ ಆಪರೇಷನ್ ಕಮಲದ ಕೃಪೆಯಿಂದ ನಡೆಯುತ್ತಿದೆ. ಹಾಗಾಗಿಯೇ ಆರ್‌ಆರ್ ನಗರ ಕ್ಷೇತ್ರದ ಉಪಚುನಾವಣೆ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ.

ಭೌಗೋಳಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಆರ್‌ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ 2018ರ ಮಾಹಿತಿಯಂತೆ 4,71,459 ಮತದಾರರಿದ್ದಾರೆ. ಕ್ಷೇತ್ರದೊಳಗೆ ಬಿಬಿಎಂಪಿಯ ಒಟ್ಟು ಒಂಬತ್ತು ವಾರ್ಡ್‍ಗಳಿವೆ; ಅದರಲ್ಲಿ ಐದು ವಾರ್ಡ್‍ಗಳನ್ನು ಕಾಂಗ್ರೆಸ್ ಗೆದ್ದಿತ್ತು, ಬಿಜೆಪಿ ಮೂರು ಹಾಗೂ ಜೆಡಿಎಸ್ ಒಂದನ್ನು ಕೊನೆಯ ಬಾರಿ ನಡೆದ ಬಿಬಿಎಂಪಿ ಚುನಾವಣೆಯಲ್ಲಿ ಗೆದ್ದುಕೊಂಡಿದ್ದವು. (ಈಗ ಬಿಬಿಎಂಪಿ ಅವಧಿ ಪೂರ್ಣಗೊಂಡಿದ್ದು ಹೊಸದಾಗಿ ಚುನಾವಣೆ ನಡೆಯಬೇಕಿದೆ)

2008ರಲ್ಲಿ ಬಿಜೆಪಿಯ ಎಂ ಶ್ರೀನಿವಾಸ್ ಇಲ್ಲಿ ಗೆದ್ದಿದ್ದರಾದರೂ ನಂತರ ನಡೆದ ಎರಡು ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ವಿಜಯ ಪತಾಕೆಯನ್ನು ಹಾರಿಸುತ್ತಲೇ ಬಂದಿದೆ. ಕಾಂಗ್ರೆಸ್‍ನಿಂದ ವಿಜಯಿಯಾಗಿದ್ದು ಸಿನಿಮೋದ್ಯಮಿ ಮುನಿರತ್ನ ನಾಯ್ಡು ಅವರೇ ಆರ್‌ಆರ್ ನಗರ ಕ್ಷೇತ್ರದ ಈ ಬಾರಿಯ ಉಪಚುನಾವಣೆಗೆ ನೇರ ಕಾರಣಕರ್ತರು ಎನ್ನಬಹುದು.

ಮೇ 12, 2018ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಜಾಲಹಳ್ಳಿಯ ಅಪಾರ್ಟ್‍ಮೆಂಟ್ ಒಂದರಲ್ಲಿ 10 ಸಾವಿರ ಮತದಾರರ ಗುರುತಿನ ಚೀಟಿ ಸಿಕ್ಕಿ, ಚುನಾವಣಾ ಆಯೋಗ ಆರ್‌ಆರ್ ನಗರ ಕ್ಷೇತ್ರದ ಚುನಾವಣೆಯನ್ನು ಮುಂದೂಡಿತ್ತು. ಇದಾದ ಕೆಲವೇ ದಿನಗಳ ನಂತರ ಚುನಾವಣೆ ನಡೆದು (ಮೇ 28) ಕಾಂಗ್ರೆಸ್‍ನಿಂದ ಮುನಿರತ್ನ ಗೆದ್ದಿದ್ದರೂ, ರಾಜ್ಯದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಕೆಡವಲು ನಡೆದ ರಾಜಕೀಯ ಆಟದಲ್ಲಿ ಮುನಿರತ್ನ ಬಿಜೆಪಿಗೆ ಗುಳೆ ಹೋಗಿದ್ದರು. ಆಗ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ ಶಾಸಕರಲ್ಲಿ ಮುನಿರತ್ನ ಕೂಡಾ ಒಬ್ಬರು. ಇದರಿಂದಾಗಿ ಇಲ್ಲಿ ಮತ್ತೆ ಚುನಾವಣೆ ನಡೆಯುತ್ತಿದೆ.

88% ಸಾಕ್ಷರತೆಯಿರುವ ಇಲ್ಲಿ ಸಾಮಾನ್ಯವಾಗಿ ಮಧ್ಯಮವರ್ಗದ ಮತ್ತು ಬಡಜನ ಹೆಚ್ಚಿದ್ದಾರೆ ಹಾಗು ಸ್ಲಂಗಳೇ ಅತ್ಯಧಿಕವಾಗಿರುವ ಕ್ಷೇತ್ರ ಇದಾಗಿದೆ. ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ 50% ಆಸುಪಾಸಿನಲ್ಲೇ ಮತದಾನ ಆಗಿರುವ ಈ ಕ್ಷೇತ್ರದಲ್ಲಿ ಈ ಬಾರಿ ಕೊರೊನಾ ಭಯದಿಂದ 30% ರಿಂದ 35% ದಷ್ಟು ಆಸುಪಾಸು ಮತ ಚಲಾವಣೆಯಾಗಬಹುದು ಎನ್ನುತ್ತಾರೆ ರಾಜಕೀಯ ಪರಿಣಿತರು. ಮೊದಲು ಉತ್ತರಹಳ್ಳಿ ವಿಧಾನ ಸಭಾ ಕ್ಷೇತ್ರಕ್ಕೆ ಸೇರಿಕೊಂಡಿತ್ತಾದರೂ ಕ್ಷೇತ್ರ ವಿಭಜನೆಯ ನಂತರ ಆರ್‌ಆರ್ ನಗರ ಸ್ವತಂತ್ರ ವಿಧಾನಸಭಾ ಕ್ಷೇತ್ರವಾಗಿದೆ.

ಈಗಾಗಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಕುಸುಮಾ ಹನುಮಂತರಾಯಪ್ಪ ಅವರನ್ನು ಆಯ್ಕೆಮಾಡಿಕೊಂಡು ಪ್ರಚಾರದಲ್ಲಿ ತೊಡಗಿಕೊಂಡಿದೆ. ಬಿಜೆಪಿಯಲ್ಲಿ ಅಭ್ಯರ್ಥಿ ಯಾರೆಂಬ ಗೊಂದಲಗಳು ಮುಗಿದು ಮುನಿರತ್ನ ಅವರಿಗೆ ಕೊನೆಗೂ ಟಿಕೆಟ್ ನೀಡಿದೆ. ರಾಜ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬಣ ಮತ್ತು ಆರೆಸ್ಸೆಸ್ ನಿಯಂತ್ರಿತ ಬಿಎಲ್ ಸಂತೋಷ್ ಬಣಗಳ ನಡುವೆ ಮುನಿರತ್ನ ಅವರಿಗೆ ಟಿಕೆಟ್ ಕೊಡುವುದೆ ಬೇಡವೆ ಎನ್ನುವ ಬಗ್ಗೆ ಮಂಗಳವಾರ ಸಂಜೆಯವರೆಗೂ ಕುತೂಹಲವಿತ್ತು. ಯಡಿಯೂರಪ್ಪನವರು ತಮ್ಮ ಅಭ್ಯರ್ಥಿಯಾಗಿ ಮುನಿರತ್ನರನ್ನು ಶಿಫಾರಸ್ಸು ಮಾಡಿದ್ದರೆ, ಬಿಎಲ್ ಸಂತೋಷ್ ಬಣ ಮುನಿರಾಜು ಗೌಡರನ್ನು ಶಿಫಾರಸ್ಸು ಮಾಡಿದ್ದವು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಬಿಜೆಪಿಯ ಇಬ್ಬರೂ ಟಿಕೆಟ್ ಆಕಾಂಕ್ಷಿಗಳನ್ನು ಕರೆಸಿ, ಯಾರಿಗೆ ನಾಮಪತ್ರ ಒಲಿದರೂ ಪಕ್ಷಕ್ಕಾಗಿ ದುಡಿಯಬೇಕು ಎಂಬ ಕಿವಿಮಾತು ಹೇಳಿ ರಾಜಿಗೆ ಪ್ರಯತ್ನಪಟ್ಟಿರುವ ಸುದ್ದಿಯೂ ಹೊರಹೊಮ್ಮಿತ್ತು.

ಮುನಿರತ್ನ ಕಾಂಗ್ರೆಸ್‌ನಲ್ಲಿ ಶಾಸಕನಾಗಿದ್ದಾಗ ಬಿಬಿಎಂಪಿಯ ಬಿಜೆಪಿ ಕಾರ್ಪೋರೇಟರ್‌ಗಳಿಗೆ ಇನ್ನಿಲ್ಲದಂತೆ ಕಾಡಿದ್ದರು ಎನ್ನುವ ಆರೋಪ ಕೂಡಾ ಇದ್ದವು. 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮುನಿರಾಜು ಗೌಡ ಪಿ.ಎಂ 82,572 ಮತಗಳನನ್ನು ಗಳಿಸಿದ್ದರು. ಆಗ ಮುನಿರತ್ನ 1,08,064 ಮತಗಳನ್ನೂ, ಜೆಡಿಎಸ್ ಅಭ್ಯರ್ಥಿ ಜಿ ಎಚ್ ರಾಮಚಂದ್ರ 60,360 ಮತಗಳನ್ನು ಗಳಿಸಿದ್ದರು. ಬಿಜೆಪಿಯಿಂದ ಮುನಿರತ್ನ ಅವರಿಗೆ ಕೊಟ್ಟರೆ ಬಿಜೆಪಿ ಕಾರ್ಪೋರೇಟರ್‌ಗಳ ಕೆಂಗಣ್ಣಿಗೆ ಗುರಿಯಾಗುವ ಭಯ ಬಿಜೆಪಿ ಹೈಕಮಾಂಡ್ ಗಿತ್ತಾದರೂ ಕೊನೆಗೂ ಯಡಿಯೂರಪ್ಪರ ಕೈಮೇಲಾಗಿದೆ. ಅಷ್ಟೇ ಅಲ್ಲದೆ ಬಿಜೆಪಿಯು ಅತೃಪ್ತರಿಗೆ ಜೆಡಿಎಸ್ ಟಿಕಟ್ ನೀಡುತ್ತದೆ ಎನ್ನುವ ವದಂತಿಗೂ ತೆರೆಬಿದ್ದಿದೆ.

ಜೆಡಿಎಸ್ ಬಿಜೆಪಿಯ ಅಭ್ಯರ್ಥಿಯ ಆಧಾರದಲ್ಲಿ ತನ್ನ ಅಭ್ಯರ್ಥಿ ಆಯ್ಕೆ ಮಾಡುತ್ತದೆ ಎಂಬ ವದಂತಿ ಹರಡಿತ್ತು. ಒಂದು ವೇಳೆ ಬಿಜೆಪಿ ಮುನಿರಾಜು ಅವರಿಗೆ ಟಿಕೆಟ್ ನೀಡಿದರೆ ಜೆಡಿಎಸ್‍ನಿಂದ ಮುನಿರತ್ನ ಅವರಿಗೆ ಟಿಕೆಟ್ ನೀಡಲು ತುದಿಗಾಲಲ್ಲಿ ನಿಂತಿದೆ, ಅದಕ್ಕಾಗಿಯೇ ಜೆಡಿಎಸ್ ತನ್ನ ಅಭ್ಯರ್ಥಿಯ ಹೆಸರು ಘೋಷಿಸಿರಲಿಲ್ಲ ಎನ್ನಲಾಗಿತ್ತು. ಇದೀಗ ಅದಕ್ಕೆ ತೆರೆಬಿದ್ದಿದ್ದು ವಿ. ಕೃಷ್ಣಮೂರ್ತಿ ಅವರಿಗೆ ಜೆಡಿಎಸ್ ಟಿಕೆಟ್ ನೀಡಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ “ನನ್ನ ಹಾಗೂ ಮುನಿರತ್ನ ಮಧ್ಯೆ ಸ್ನೇಹ ಇದೆ. ಆದರೆ ಸ್ನೇಹವೇ ಬೇರೆ, ಚುನಾವಣೆ ಬೇರೆ. ನಾನು ಮತ್ತು ಮುನಿರತ್ನ ಸಿನಿಮಾ ಕ್ಷೇತ್ರದವರು. ಹೀಗಾಗಿ ನಮ್ಮ ನಡುವಿನ ಸ್ನೇಹ ಚುನಾವಣೆ ಸಂದರ್ಭದಲಿ ಅನ್ವಯಿಸಲ್ಲ” ಎಂದು ಹೇಳಿದ್ದಾರೆ.

ಈ ಬಾರಿಯ ವಿಶೇಷವೇನೆಂದರೆ 2008ರಲ್ಲಿ ಜೆಡಿಎಸ್‍ನಿಂದ ಸ್ಪರ್ಧೆ ಮಾಡಿದ್ದ ಹನುಮಂತರಾಯಪ್ಪ ಅವರ ಮಗಳು ಕುಸುಮಾ ಕಾಂಗ್ರೆಸ್ ಅಭ್ಯರ್ಥಿ! ಇದು ಕಾಂಗ್ರೆಸ್‍ಗೆ ತನ್ನ ಓಟಿನ ಬೇಟೆಯನ್ನು ಮತ್ತಷ್ಟು ಹೆಚ್ಚಿಸಲು ಉಪಯೋಗ ಆಗಬಹುದು ಎಂಬ ಲೆಕ್ಕಾಚಾರ ಕೂಡಾ ಇದೆ. ಅಷ್ಟೇ ಅಲ್ಲದೆ ಕ್ಷೇತ್ರದಲ್ಲಿ ಒಕ್ಕಲಿಗರ ಮತಗಳು ನಿರ್ಣಾಯಕವಾಗಿದ್ದು, ಕುಸುಮಾ ಅವರು ತಮ್ಮ ಇತ್ತೀಚೆಗಿನ ಸಂದರ್ಶನದಲ್ಲಿ ‘ಒಕ್ಕಲಿಗ ಹೆಣ್ಣು ಮಗಳಾಗಿರುವುದರ ಬಗ್ಗೆ ಹೆಮ್ಮಯಿದೆ’ ಎಂದು ಕೂಡ ಹೇಳಿದ್ದರು.

ಅಲ್ಲದೆ ಕುಸುಮ ಅವರು ದಿವಂಗತ ಜಿಲ್ಲಾಧಿಕಾರಿ ಡಿಕೆ ರವಿಯವರ ಪತ್ನಿಯಾಗಿದ್ದು, ರವಿ ಅವರ ಹೆಸರಿನಲ್ಲಿ ಈ ಹಿಂದೆ ಬಿಜೆಪಿ ರಾಜಕೀಯ ಮಾಡಿತ್ತು. ಅಷ್ಟೇ ಅಲ್ಲದೆ ಸಂಸದೆ ಶೋಭ ಕರಂದ್ಲಾಜೆ, ಕುಸುಮಾ ತಮ್ಮ ಪತಿಯ ಹೆಸರನ್ನು ಬಳಸಬಾರದು ಎಂದು ಡಿಕೆ ರವಿಯ ಬಗೆಗಿನ ಚರ್ಚೆಯನ್ನು ಈಗಾಗಲೇ ಮತ್ತೆ ಮುನ್ನಲೆಗೆ ತಂದಿದ್ದಾರೆ. ಅಕ್ಟೋಬರ್ 16 ರೊಳಗೆ ನಾಮಪತ್ರ ಸಲ್ಲಿಸಬೇಕಾಗಿದ್ದು, ಅ.19 ನಾಮಪತ್ರ ವಾಪಾಸು ಪಡೆಯಲು ಕೊನೆಯ ದಿನಾಂಕವಾಗಿದೆ. ಒಟ್ಟಿನಲ್ಲಿ ಪಕ್ಷಾಂತರದಿಂದ ಸೃಷ್ಟಿಯಾಗಿರುವ ಈ ಉಪಚುನಾವಣೆ ಪ್ರತಿಷ್ಟೆಯ ಕಣವಾಗಿದ್ದು ಇಡೀ ರಾಜ್ಯದ ಗಮನ ಸೆಳೆದಿರುವುದು ನಿಜ.


ಇದನ್ನೂ ಓದಿ: ಉಪಚುನಾವಣೆ: ಆರ್‌.ಆರ್‌ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ರವಿ ಪತ್ನಿ ಕುಸುಮಾ-ಸಿದ್ದರಾಮಯ್ಯ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...