Homeಮುಖಪುಟಬಣ್ಣದ ಕಾರಣ ರವೀಂದ್ರನಾಥ ಟ್ಯಾಗೋರ್‌ ತಾರತಮ್ಯ ಎದುರಿಸಿದ್ದಾರೆ: ಕೇಂದ್ರ ಸಚಿವರ ವಿವಾದಿತ ಹೇಳಿಕೆ

ಬಣ್ಣದ ಕಾರಣ ರವೀಂದ್ರನಾಥ ಟ್ಯಾಗೋರ್‌ ತಾರತಮ್ಯ ಎದುರಿಸಿದ್ದಾರೆ: ಕೇಂದ್ರ ಸಚಿವರ ವಿವಾದಿತ ಹೇಳಿಕೆ

- Advertisement -
- Advertisement -

ಕೇಂದ್ರ ಶಿಕ್ಷಣ ಇಲಾಖೆಯ ರಾಜ್ಯ ಖಾತೆ ಸಚಿವ ಸುಭಾಷ್ ಸರ್ಕಾರ್, ನೊಬೆಲ್ ಪ್ರಶಸ್ತಿ ಪುರಸ್ಕೃತ ರವೀಂದ್ರನಾಥ ಟ್ಯಾಗೋರ್‌ ಅವರ ಮೈಬಣ್ಣದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಟ್ಯಾಗೋರ್‌ರ ಮೈಬಣ್ಣದ ಕಾರಣದಿಂದ ಅವರ ತಾಯಿ ತಾರತಮ್ಯ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ರವೀಂದ್ರನಾಥ ಟ್ಯಾಗೋರ್‌ ಸ್ಥಾಪಿಸಿದ ವಿಶ್ವ ಭಾರತಿ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ್ದ ಸಚಿವ ಸುಭಾಷ್ ಸರ್ಕಾರ್, ” ಟ್ಯಾಗೋರ್‌ ಅವರ ಮೈ ಬಣ್ಣ ಮನೆಯಲ್ಲಿದ್ದವರಿಗಿಂತ ಹೆಚ್ಚು ಕಪ್ಪಗಿದ್ದಿದ್ದರಿಂದ ಅವರ ತಾಯಿ  ತಾರತಮ್ಯ ಮಾಡಿದ್ದಾರೆ” ಎಂದು ಹೇಳಿದ್ದಾರೆ.

“ಟ್ಯಾಗೋರ್‌ ಅವರು ಕಪ್ಪು ಬಣ್ಣದವರಾಗಿದ್ದರು ಎಂದು  ಅವರ ತಾಯಿ ಮತ್ತು ಇತರ ಕೆಲವು ಸಂಬಂಧಿಕರು ಅವರನ್ನು ಎತ್ತಿ ಆಡಿಸಿಲ್ಲ” ಎಂದು ಸಚಿವರು ಹೇಳಿಕೊಂಡಿದ್ದಾರೆ.

“ಚರ್ಮದ ಬಣ್ಣದಲ್ಲಿ ಎರಡು ವಿಧದ ಜನರಿದ್ದಾರೆ. ಹಳದಿ ಮಿಶ್ರಿತವಾದ ಆಕರ್ಷಕ ಬಿಳುಪಿನ ಮೈಬಣ್ಣ ಹೊಂದಿರುವವರು ಮತ್ತು ಎಣ್ಣೆಗೆಂಪು ಛಾಯೆಯನ್ನು ಹೊಂದಿರುವವರು. ಟ್ಯಾಗೋರರು ಎರಡನೇ ವರ್ಗಕ್ಕೆ ಸೇರಿದವರು” ಎಂದು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.

ಇದನ್ನೂ ಓದಿ: ದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಟ್ಯಾಗೋರರ ಕವಿತೆ ವೈರಲ್

ಸಚಿವರ ಹೇಳಿಕೆಗೆ ಟ್ಯಾಗೋರ್‌ ಅಭಿಮಾನಿಗಳು, ತಜ್ಞರು ಮತ್ತು ವಿಪಕ್ಷಗಳು ಕಿಡಿ ಕಾರಿವೆ. ಶಿಕ್ಷಣ ಸಚಿವರನ್ನು ಅವಿದ್ಯಾವಂತರು ಎಂದು ಆಕ್ರೋಶ ವ್ಯಕ್ತಪಡಿಸಿವೆ.

“ಮಾನ್ಯ ಸಚಿವರು ಯಾವ ಆಧಾರದ ಮೇಲೆ ಇಂತಹ ಟೀಕೆಗಳನ್ನು ಮಾಡಿದರು. ಅವರು ಟ್ಯಾಗೋರರ ಜೀವನಚರಿತ್ರೆಯನ್ನು ಸಂಪೂರ್ಣವಾಗಿ ಓದಿದ್ದಾರೆಯೇ ಅಥವಾ ಅವರ ಬರಹಗಳನ್ನು ಸರಿಯಾಗಿ ಅರ್ಥಮಾಡಿಕೊಂಡಿದ್ದಾರೋ ಗೊತ್ತಿಲ್ಲ” ಎಂದು ವಿಶ್ವ ಭಾರತಿ ವಿಶ್ವವಿದ್ಯಾನಿಲಯ ಉಪಕುಲಪತಿ ಪಬಿತ್ರಾ ಸರ್ಕಾರ್ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್  ಸಚಿವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಸಚಿವರು ಬಂಗಾಳದ  ಅಸ್ಮಿತೆಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದೆ. “ಸುಭಾಷ್ ಸರ್ಕಾರ್ ಅವರಿಗೆ ಇತಿಹಾಸದ ಬಗ್ಗೆ ತಿಳಿದಿಲ್ಲ. ರವೀಂದ್ರನಾಥ ಟ್ಯಾಗೋರ್ ಬಿಳೀ ಮೈಬಣ್ಣ ಹೊಂದಿದ್ದ ಚರ್ಮದವರು ಎಂಬುದು ಎಲ್ಲರಿಗೂ ತಿಳಿದಿದೆ. ಇದು ಜನಾಂಗೀಯ ನಿಂದನೆ. ಸುಭಾಷ್ ಸರ್ಕಾರಕ್ಕೆ ಮತ್ತೊಮ್ಮೆ ವಿಶ್ವಭಾರತಿ ವಿಶ್ವವಿದ್ಯಾಲಯಕ್ಕೆ ಪ್ರವೇಶ  ನೀಡಬಾರದು” ಎಂದು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ಸಿಪಿಐ (ಎಂ) ಕೇಂದ್ರ ಸಮಿತಿಯ ಸದಸ್ಯ ಸುಜನ್ ಚಕ್ರವರ್ತಿ, “ಇಂತಹ ಟೀಕೆಗಳು ಬಿಜೆಪಿಯ ಜನಾಂಗೀಯ ನಿಂದನೆ ಮತ್ತು ಬಂಗಾಳಿ ವಿರೋಧಿ ಮನಸ್ಥಿತಿಯನ್ನು ಮಾತ್ರ ಪ್ರತಿಬಿಂಬಿಸುತ್ತವೆ” ಎಂದು ಟೀಕಿಸಿದ್ದಾರೆ.

ಆದರೆ, ಸಚಿವರ ಪರ ಬ್ಯಾಟ್ ಬಿಸಿರುವ ಬಂಗಾಳ ಬಿಜೆಪಿ, “ಸುಭಾಷ್ ಸರ್ಕಾರ್ ರವೀಂದ್ರನಾಥ ಟ್ಯಾಗೋರ್ ಅಥವಾ ಅವರ ಕುಟುಂಬದ ವಿರುದ್ಧ ಏನನ್ನೂ ಹೇಳಿಲ್ಲ. ಅವರು ಚರ್ಮದ ಬಣ್ಣದ ಆಧಾರದ ಮೇಲೆ ತಾರತಮ್ಯದ ವಿರುದ್ಧ ಮಾತನಾಡಿದ್ದಾರೆ. ಅವರ ಟೀಕೆಗಳು ಯಾರನ್ನೂ ಅವಮಾನಿಸುವ ಉದ್ದೇಶವನ್ನು ಹೊಂದಿಲ್ಲ. ಟಿಎಂಸಿ ಎಲ್ಲದರಲ್ಲೂ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು” ಎಂದಿದೆ.


ಇದನ್ನೂ ಓದಿ: ಯುವ ಸಂಕಲ್ಪ ಯಾತ್ರೆ:ಬಂಗಾಳದಲ್ಲಿ ಶಾಸಕ ಸೇರಿದಂತೆ 30 ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...