Homeಮುಖಪುಟಬಣ್ಣದ ಕಾರಣ ರವೀಂದ್ರನಾಥ ಟ್ಯಾಗೋರ್‌ ತಾರತಮ್ಯ ಎದುರಿಸಿದ್ದಾರೆ: ಕೇಂದ್ರ ಸಚಿವರ ವಿವಾದಿತ ಹೇಳಿಕೆ

ಬಣ್ಣದ ಕಾರಣ ರವೀಂದ್ರನಾಥ ಟ್ಯಾಗೋರ್‌ ತಾರತಮ್ಯ ಎದುರಿಸಿದ್ದಾರೆ: ಕೇಂದ್ರ ಸಚಿವರ ವಿವಾದಿತ ಹೇಳಿಕೆ

- Advertisement -
- Advertisement -

ಕೇಂದ್ರ ಶಿಕ್ಷಣ ಇಲಾಖೆಯ ರಾಜ್ಯ ಖಾತೆ ಸಚಿವ ಸುಭಾಷ್ ಸರ್ಕಾರ್, ನೊಬೆಲ್ ಪ್ರಶಸ್ತಿ ಪುರಸ್ಕೃತ ರವೀಂದ್ರನಾಥ ಟ್ಯಾಗೋರ್‌ ಅವರ ಮೈಬಣ್ಣದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಟ್ಯಾಗೋರ್‌ರ ಮೈಬಣ್ಣದ ಕಾರಣದಿಂದ ಅವರ ತಾಯಿ ತಾರತಮ್ಯ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ರವೀಂದ್ರನಾಥ ಟ್ಯಾಗೋರ್‌ ಸ್ಥಾಪಿಸಿದ ವಿಶ್ವ ಭಾರತಿ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ್ದ ಸಚಿವ ಸುಭಾಷ್ ಸರ್ಕಾರ್, ” ಟ್ಯಾಗೋರ್‌ ಅವರ ಮೈ ಬಣ್ಣ ಮನೆಯಲ್ಲಿದ್ದವರಿಗಿಂತ ಹೆಚ್ಚು ಕಪ್ಪಗಿದ್ದಿದ್ದರಿಂದ ಅವರ ತಾಯಿ  ತಾರತಮ್ಯ ಮಾಡಿದ್ದಾರೆ” ಎಂದು ಹೇಳಿದ್ದಾರೆ.

“ಟ್ಯಾಗೋರ್‌ ಅವರು ಕಪ್ಪು ಬಣ್ಣದವರಾಗಿದ್ದರು ಎಂದು  ಅವರ ತಾಯಿ ಮತ್ತು ಇತರ ಕೆಲವು ಸಂಬಂಧಿಕರು ಅವರನ್ನು ಎತ್ತಿ ಆಡಿಸಿಲ್ಲ” ಎಂದು ಸಚಿವರು ಹೇಳಿಕೊಂಡಿದ್ದಾರೆ.

“ಚರ್ಮದ ಬಣ್ಣದಲ್ಲಿ ಎರಡು ವಿಧದ ಜನರಿದ್ದಾರೆ. ಹಳದಿ ಮಿಶ್ರಿತವಾದ ಆಕರ್ಷಕ ಬಿಳುಪಿನ ಮೈಬಣ್ಣ ಹೊಂದಿರುವವರು ಮತ್ತು ಎಣ್ಣೆಗೆಂಪು ಛಾಯೆಯನ್ನು ಹೊಂದಿರುವವರು. ಟ್ಯಾಗೋರರು ಎರಡನೇ ವರ್ಗಕ್ಕೆ ಸೇರಿದವರು” ಎಂದು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.

ಇದನ್ನೂ ಓದಿ: ದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಟ್ಯಾಗೋರರ ಕವಿತೆ ವೈರಲ್

ಸಚಿವರ ಹೇಳಿಕೆಗೆ ಟ್ಯಾಗೋರ್‌ ಅಭಿಮಾನಿಗಳು, ತಜ್ಞರು ಮತ್ತು ವಿಪಕ್ಷಗಳು ಕಿಡಿ ಕಾರಿವೆ. ಶಿಕ್ಷಣ ಸಚಿವರನ್ನು ಅವಿದ್ಯಾವಂತರು ಎಂದು ಆಕ್ರೋಶ ವ್ಯಕ್ತಪಡಿಸಿವೆ.

“ಮಾನ್ಯ ಸಚಿವರು ಯಾವ ಆಧಾರದ ಮೇಲೆ ಇಂತಹ ಟೀಕೆಗಳನ್ನು ಮಾಡಿದರು. ಅವರು ಟ್ಯಾಗೋರರ ಜೀವನಚರಿತ್ರೆಯನ್ನು ಸಂಪೂರ್ಣವಾಗಿ ಓದಿದ್ದಾರೆಯೇ ಅಥವಾ ಅವರ ಬರಹಗಳನ್ನು ಸರಿಯಾಗಿ ಅರ್ಥಮಾಡಿಕೊಂಡಿದ್ದಾರೋ ಗೊತ್ತಿಲ್ಲ” ಎಂದು ವಿಶ್ವ ಭಾರತಿ ವಿಶ್ವವಿದ್ಯಾನಿಲಯ ಉಪಕುಲಪತಿ ಪಬಿತ್ರಾ ಸರ್ಕಾರ್ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್  ಸಚಿವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಸಚಿವರು ಬಂಗಾಳದ  ಅಸ್ಮಿತೆಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದೆ. “ಸುಭಾಷ್ ಸರ್ಕಾರ್ ಅವರಿಗೆ ಇತಿಹಾಸದ ಬಗ್ಗೆ ತಿಳಿದಿಲ್ಲ. ರವೀಂದ್ರನಾಥ ಟ್ಯಾಗೋರ್ ಬಿಳೀ ಮೈಬಣ್ಣ ಹೊಂದಿದ್ದ ಚರ್ಮದವರು ಎಂಬುದು ಎಲ್ಲರಿಗೂ ತಿಳಿದಿದೆ. ಇದು ಜನಾಂಗೀಯ ನಿಂದನೆ. ಸುಭಾಷ್ ಸರ್ಕಾರಕ್ಕೆ ಮತ್ತೊಮ್ಮೆ ವಿಶ್ವಭಾರತಿ ವಿಶ್ವವಿದ್ಯಾಲಯಕ್ಕೆ ಪ್ರವೇಶ  ನೀಡಬಾರದು” ಎಂದು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ಸಿಪಿಐ (ಎಂ) ಕೇಂದ್ರ ಸಮಿತಿಯ ಸದಸ್ಯ ಸುಜನ್ ಚಕ್ರವರ್ತಿ, “ಇಂತಹ ಟೀಕೆಗಳು ಬಿಜೆಪಿಯ ಜನಾಂಗೀಯ ನಿಂದನೆ ಮತ್ತು ಬಂಗಾಳಿ ವಿರೋಧಿ ಮನಸ್ಥಿತಿಯನ್ನು ಮಾತ್ರ ಪ್ರತಿಬಿಂಬಿಸುತ್ತವೆ” ಎಂದು ಟೀಕಿಸಿದ್ದಾರೆ.

ಆದರೆ, ಸಚಿವರ ಪರ ಬ್ಯಾಟ್ ಬಿಸಿರುವ ಬಂಗಾಳ ಬಿಜೆಪಿ, “ಸುಭಾಷ್ ಸರ್ಕಾರ್ ರವೀಂದ್ರನಾಥ ಟ್ಯಾಗೋರ್ ಅಥವಾ ಅವರ ಕುಟುಂಬದ ವಿರುದ್ಧ ಏನನ್ನೂ ಹೇಳಿಲ್ಲ. ಅವರು ಚರ್ಮದ ಬಣ್ಣದ ಆಧಾರದ ಮೇಲೆ ತಾರತಮ್ಯದ ವಿರುದ್ಧ ಮಾತನಾಡಿದ್ದಾರೆ. ಅವರ ಟೀಕೆಗಳು ಯಾರನ್ನೂ ಅವಮಾನಿಸುವ ಉದ್ದೇಶವನ್ನು ಹೊಂದಿಲ್ಲ. ಟಿಎಂಸಿ ಎಲ್ಲದರಲ್ಲೂ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು” ಎಂದಿದೆ.


ಇದನ್ನೂ ಓದಿ: ಯುವ ಸಂಕಲ್ಪ ಯಾತ್ರೆ:ಬಂಗಾಳದಲ್ಲಿ ಶಾಸಕ ಸೇರಿದಂತೆ 30 ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...