Homeಮುಖಪುಟಬಣ್ಣದ ಕಾರಣ ರವೀಂದ್ರನಾಥ ಟ್ಯಾಗೋರ್‌ ತಾರತಮ್ಯ ಎದುರಿಸಿದ್ದಾರೆ: ಕೇಂದ್ರ ಸಚಿವರ ವಿವಾದಿತ ಹೇಳಿಕೆ

ಬಣ್ಣದ ಕಾರಣ ರವೀಂದ್ರನಾಥ ಟ್ಯಾಗೋರ್‌ ತಾರತಮ್ಯ ಎದುರಿಸಿದ್ದಾರೆ: ಕೇಂದ್ರ ಸಚಿವರ ವಿವಾದಿತ ಹೇಳಿಕೆ

- Advertisement -
- Advertisement -

ಕೇಂದ್ರ ಶಿಕ್ಷಣ ಇಲಾಖೆಯ ರಾಜ್ಯ ಖಾತೆ ಸಚಿವ ಸುಭಾಷ್ ಸರ್ಕಾರ್, ನೊಬೆಲ್ ಪ್ರಶಸ್ತಿ ಪುರಸ್ಕೃತ ರವೀಂದ್ರನಾಥ ಟ್ಯಾಗೋರ್‌ ಅವರ ಮೈಬಣ್ಣದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಟ್ಯಾಗೋರ್‌ರ ಮೈಬಣ್ಣದ ಕಾರಣದಿಂದ ಅವರ ತಾಯಿ ತಾರತಮ್ಯ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ರವೀಂದ್ರನಾಥ ಟ್ಯಾಗೋರ್‌ ಸ್ಥಾಪಿಸಿದ ವಿಶ್ವ ಭಾರತಿ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ್ದ ಸಚಿವ ಸುಭಾಷ್ ಸರ್ಕಾರ್, ” ಟ್ಯಾಗೋರ್‌ ಅವರ ಮೈ ಬಣ್ಣ ಮನೆಯಲ್ಲಿದ್ದವರಿಗಿಂತ ಹೆಚ್ಚು ಕಪ್ಪಗಿದ್ದಿದ್ದರಿಂದ ಅವರ ತಾಯಿ  ತಾರತಮ್ಯ ಮಾಡಿದ್ದಾರೆ” ಎಂದು ಹೇಳಿದ್ದಾರೆ.

“ಟ್ಯಾಗೋರ್‌ ಅವರು ಕಪ್ಪು ಬಣ್ಣದವರಾಗಿದ್ದರು ಎಂದು  ಅವರ ತಾಯಿ ಮತ್ತು ಇತರ ಕೆಲವು ಸಂಬಂಧಿಕರು ಅವರನ್ನು ಎತ್ತಿ ಆಡಿಸಿಲ್ಲ” ಎಂದು ಸಚಿವರು ಹೇಳಿಕೊಂಡಿದ್ದಾರೆ.

“ಚರ್ಮದ ಬಣ್ಣದಲ್ಲಿ ಎರಡು ವಿಧದ ಜನರಿದ್ದಾರೆ. ಹಳದಿ ಮಿಶ್ರಿತವಾದ ಆಕರ್ಷಕ ಬಿಳುಪಿನ ಮೈಬಣ್ಣ ಹೊಂದಿರುವವರು ಮತ್ತು ಎಣ್ಣೆಗೆಂಪು ಛಾಯೆಯನ್ನು ಹೊಂದಿರುವವರು. ಟ್ಯಾಗೋರರು ಎರಡನೇ ವರ್ಗಕ್ಕೆ ಸೇರಿದವರು” ಎಂದು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.

ಇದನ್ನೂ ಓದಿ: ದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಟ್ಯಾಗೋರರ ಕವಿತೆ ವೈರಲ್

ಸಚಿವರ ಹೇಳಿಕೆಗೆ ಟ್ಯಾಗೋರ್‌ ಅಭಿಮಾನಿಗಳು, ತಜ್ಞರು ಮತ್ತು ವಿಪಕ್ಷಗಳು ಕಿಡಿ ಕಾರಿವೆ. ಶಿಕ್ಷಣ ಸಚಿವರನ್ನು ಅವಿದ್ಯಾವಂತರು ಎಂದು ಆಕ್ರೋಶ ವ್ಯಕ್ತಪಡಿಸಿವೆ.

“ಮಾನ್ಯ ಸಚಿವರು ಯಾವ ಆಧಾರದ ಮೇಲೆ ಇಂತಹ ಟೀಕೆಗಳನ್ನು ಮಾಡಿದರು. ಅವರು ಟ್ಯಾಗೋರರ ಜೀವನಚರಿತ್ರೆಯನ್ನು ಸಂಪೂರ್ಣವಾಗಿ ಓದಿದ್ದಾರೆಯೇ ಅಥವಾ ಅವರ ಬರಹಗಳನ್ನು ಸರಿಯಾಗಿ ಅರ್ಥಮಾಡಿಕೊಂಡಿದ್ದಾರೋ ಗೊತ್ತಿಲ್ಲ” ಎಂದು ವಿಶ್ವ ಭಾರತಿ ವಿಶ್ವವಿದ್ಯಾನಿಲಯ ಉಪಕುಲಪತಿ ಪಬಿತ್ರಾ ಸರ್ಕಾರ್ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್  ಸಚಿವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಸಚಿವರು ಬಂಗಾಳದ  ಅಸ್ಮಿತೆಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದೆ. “ಸುಭಾಷ್ ಸರ್ಕಾರ್ ಅವರಿಗೆ ಇತಿಹಾಸದ ಬಗ್ಗೆ ತಿಳಿದಿಲ್ಲ. ರವೀಂದ್ರನಾಥ ಟ್ಯಾಗೋರ್ ಬಿಳೀ ಮೈಬಣ್ಣ ಹೊಂದಿದ್ದ ಚರ್ಮದವರು ಎಂಬುದು ಎಲ್ಲರಿಗೂ ತಿಳಿದಿದೆ. ಇದು ಜನಾಂಗೀಯ ನಿಂದನೆ. ಸುಭಾಷ್ ಸರ್ಕಾರಕ್ಕೆ ಮತ್ತೊಮ್ಮೆ ವಿಶ್ವಭಾರತಿ ವಿಶ್ವವಿದ್ಯಾಲಯಕ್ಕೆ ಪ್ರವೇಶ  ನೀಡಬಾರದು” ಎಂದು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ಸಿಪಿಐ (ಎಂ) ಕೇಂದ್ರ ಸಮಿತಿಯ ಸದಸ್ಯ ಸುಜನ್ ಚಕ್ರವರ್ತಿ, “ಇಂತಹ ಟೀಕೆಗಳು ಬಿಜೆಪಿಯ ಜನಾಂಗೀಯ ನಿಂದನೆ ಮತ್ತು ಬಂಗಾಳಿ ವಿರೋಧಿ ಮನಸ್ಥಿತಿಯನ್ನು ಮಾತ್ರ ಪ್ರತಿಬಿಂಬಿಸುತ್ತವೆ” ಎಂದು ಟೀಕಿಸಿದ್ದಾರೆ.

ಆದರೆ, ಸಚಿವರ ಪರ ಬ್ಯಾಟ್ ಬಿಸಿರುವ ಬಂಗಾಳ ಬಿಜೆಪಿ, “ಸುಭಾಷ್ ಸರ್ಕಾರ್ ರವೀಂದ್ರನಾಥ ಟ್ಯಾಗೋರ್ ಅಥವಾ ಅವರ ಕುಟುಂಬದ ವಿರುದ್ಧ ಏನನ್ನೂ ಹೇಳಿಲ್ಲ. ಅವರು ಚರ್ಮದ ಬಣ್ಣದ ಆಧಾರದ ಮೇಲೆ ತಾರತಮ್ಯದ ವಿರುದ್ಧ ಮಾತನಾಡಿದ್ದಾರೆ. ಅವರ ಟೀಕೆಗಳು ಯಾರನ್ನೂ ಅವಮಾನಿಸುವ ಉದ್ದೇಶವನ್ನು ಹೊಂದಿಲ್ಲ. ಟಿಎಂಸಿ ಎಲ್ಲದರಲ್ಲೂ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು” ಎಂದಿದೆ.


ಇದನ್ನೂ ಓದಿ: ಯುವ ಸಂಕಲ್ಪ ಯಾತ್ರೆ:ಬಂಗಾಳದಲ್ಲಿ ಶಾಸಕ ಸೇರಿದಂತೆ 30 ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...