Homeಮುಖಪುಟಬಣ್ಣದ ಕಾರಣ ರವೀಂದ್ರನಾಥ ಟ್ಯಾಗೋರ್‌ ತಾರತಮ್ಯ ಎದುರಿಸಿದ್ದಾರೆ: ಕೇಂದ್ರ ಸಚಿವರ ವಿವಾದಿತ ಹೇಳಿಕೆ

ಬಣ್ಣದ ಕಾರಣ ರವೀಂದ್ರನಾಥ ಟ್ಯಾಗೋರ್‌ ತಾರತಮ್ಯ ಎದುರಿಸಿದ್ದಾರೆ: ಕೇಂದ್ರ ಸಚಿವರ ವಿವಾದಿತ ಹೇಳಿಕೆ

- Advertisement -
- Advertisement -

ಕೇಂದ್ರ ಶಿಕ್ಷಣ ಇಲಾಖೆಯ ರಾಜ್ಯ ಖಾತೆ ಸಚಿವ ಸುಭಾಷ್ ಸರ್ಕಾರ್, ನೊಬೆಲ್ ಪ್ರಶಸ್ತಿ ಪುರಸ್ಕೃತ ರವೀಂದ್ರನಾಥ ಟ್ಯಾಗೋರ್‌ ಅವರ ಮೈಬಣ್ಣದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಟ್ಯಾಗೋರ್‌ರ ಮೈಬಣ್ಣದ ಕಾರಣದಿಂದ ಅವರ ತಾಯಿ ತಾರತಮ್ಯ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ರವೀಂದ್ರನಾಥ ಟ್ಯಾಗೋರ್‌ ಸ್ಥಾಪಿಸಿದ ವಿಶ್ವ ಭಾರತಿ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ್ದ ಸಚಿವ ಸುಭಾಷ್ ಸರ್ಕಾರ್, ” ಟ್ಯಾಗೋರ್‌ ಅವರ ಮೈ ಬಣ್ಣ ಮನೆಯಲ್ಲಿದ್ದವರಿಗಿಂತ ಹೆಚ್ಚು ಕಪ್ಪಗಿದ್ದಿದ್ದರಿಂದ ಅವರ ತಾಯಿ  ತಾರತಮ್ಯ ಮಾಡಿದ್ದಾರೆ” ಎಂದು ಹೇಳಿದ್ದಾರೆ.

“ಟ್ಯಾಗೋರ್‌ ಅವರು ಕಪ್ಪು ಬಣ್ಣದವರಾಗಿದ್ದರು ಎಂದು  ಅವರ ತಾಯಿ ಮತ್ತು ಇತರ ಕೆಲವು ಸಂಬಂಧಿಕರು ಅವರನ್ನು ಎತ್ತಿ ಆಡಿಸಿಲ್ಲ” ಎಂದು ಸಚಿವರು ಹೇಳಿಕೊಂಡಿದ್ದಾರೆ.

“ಚರ್ಮದ ಬಣ್ಣದಲ್ಲಿ ಎರಡು ವಿಧದ ಜನರಿದ್ದಾರೆ. ಹಳದಿ ಮಿಶ್ರಿತವಾದ ಆಕರ್ಷಕ ಬಿಳುಪಿನ ಮೈಬಣ್ಣ ಹೊಂದಿರುವವರು ಮತ್ತು ಎಣ್ಣೆಗೆಂಪು ಛಾಯೆಯನ್ನು ಹೊಂದಿರುವವರು. ಟ್ಯಾಗೋರರು ಎರಡನೇ ವರ್ಗಕ್ಕೆ ಸೇರಿದವರು” ಎಂದು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.

ಇದನ್ನೂ ಓದಿ: ದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಟ್ಯಾಗೋರರ ಕವಿತೆ ವೈರಲ್

ಸಚಿವರ ಹೇಳಿಕೆಗೆ ಟ್ಯಾಗೋರ್‌ ಅಭಿಮಾನಿಗಳು, ತಜ್ಞರು ಮತ್ತು ವಿಪಕ್ಷಗಳು ಕಿಡಿ ಕಾರಿವೆ. ಶಿಕ್ಷಣ ಸಚಿವರನ್ನು ಅವಿದ್ಯಾವಂತರು ಎಂದು ಆಕ್ರೋಶ ವ್ಯಕ್ತಪಡಿಸಿವೆ.

“ಮಾನ್ಯ ಸಚಿವರು ಯಾವ ಆಧಾರದ ಮೇಲೆ ಇಂತಹ ಟೀಕೆಗಳನ್ನು ಮಾಡಿದರು. ಅವರು ಟ್ಯಾಗೋರರ ಜೀವನಚರಿತ್ರೆಯನ್ನು ಸಂಪೂರ್ಣವಾಗಿ ಓದಿದ್ದಾರೆಯೇ ಅಥವಾ ಅವರ ಬರಹಗಳನ್ನು ಸರಿಯಾಗಿ ಅರ್ಥಮಾಡಿಕೊಂಡಿದ್ದಾರೋ ಗೊತ್ತಿಲ್ಲ” ಎಂದು ವಿಶ್ವ ಭಾರತಿ ವಿಶ್ವವಿದ್ಯಾನಿಲಯ ಉಪಕುಲಪತಿ ಪಬಿತ್ರಾ ಸರ್ಕಾರ್ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್  ಸಚಿವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಸಚಿವರು ಬಂಗಾಳದ  ಅಸ್ಮಿತೆಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದೆ. “ಸುಭಾಷ್ ಸರ್ಕಾರ್ ಅವರಿಗೆ ಇತಿಹಾಸದ ಬಗ್ಗೆ ತಿಳಿದಿಲ್ಲ. ರವೀಂದ್ರನಾಥ ಟ್ಯಾಗೋರ್ ಬಿಳೀ ಮೈಬಣ್ಣ ಹೊಂದಿದ್ದ ಚರ್ಮದವರು ಎಂಬುದು ಎಲ್ಲರಿಗೂ ತಿಳಿದಿದೆ. ಇದು ಜನಾಂಗೀಯ ನಿಂದನೆ. ಸುಭಾಷ್ ಸರ್ಕಾರಕ್ಕೆ ಮತ್ತೊಮ್ಮೆ ವಿಶ್ವಭಾರತಿ ವಿಶ್ವವಿದ್ಯಾಲಯಕ್ಕೆ ಪ್ರವೇಶ  ನೀಡಬಾರದು” ಎಂದು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ಸಿಪಿಐ (ಎಂ) ಕೇಂದ್ರ ಸಮಿತಿಯ ಸದಸ್ಯ ಸುಜನ್ ಚಕ್ರವರ್ತಿ, “ಇಂತಹ ಟೀಕೆಗಳು ಬಿಜೆಪಿಯ ಜನಾಂಗೀಯ ನಿಂದನೆ ಮತ್ತು ಬಂಗಾಳಿ ವಿರೋಧಿ ಮನಸ್ಥಿತಿಯನ್ನು ಮಾತ್ರ ಪ್ರತಿಬಿಂಬಿಸುತ್ತವೆ” ಎಂದು ಟೀಕಿಸಿದ್ದಾರೆ.

ಆದರೆ, ಸಚಿವರ ಪರ ಬ್ಯಾಟ್ ಬಿಸಿರುವ ಬಂಗಾಳ ಬಿಜೆಪಿ, “ಸುಭಾಷ್ ಸರ್ಕಾರ್ ರವೀಂದ್ರನಾಥ ಟ್ಯಾಗೋರ್ ಅಥವಾ ಅವರ ಕುಟುಂಬದ ವಿರುದ್ಧ ಏನನ್ನೂ ಹೇಳಿಲ್ಲ. ಅವರು ಚರ್ಮದ ಬಣ್ಣದ ಆಧಾರದ ಮೇಲೆ ತಾರತಮ್ಯದ ವಿರುದ್ಧ ಮಾತನಾಡಿದ್ದಾರೆ. ಅವರ ಟೀಕೆಗಳು ಯಾರನ್ನೂ ಅವಮಾನಿಸುವ ಉದ್ದೇಶವನ್ನು ಹೊಂದಿಲ್ಲ. ಟಿಎಂಸಿ ಎಲ್ಲದರಲ್ಲೂ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು” ಎಂದಿದೆ.


ಇದನ್ನೂ ಓದಿ: ಯುವ ಸಂಕಲ್ಪ ಯಾತ್ರೆ:ಬಂಗಾಳದಲ್ಲಿ ಶಾಸಕ ಸೇರಿದಂತೆ 30 ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...