Homeಮುಖಪುಟಪತ್ರಕರ್ತ ವಿಶ್ವೇಶ್ವರ ಭಟ್ಟರಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ

ಪತ್ರಕರ್ತ ವಿಶ್ವೇಶ್ವರ ಭಟ್ಟರಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ

- Advertisement -
- Advertisement -

ವಿಶ್ವವಾಣಿ ಪತ್ರಿಕೆಯ ಸಂಪಾದಕರಾದ ವಿಶ್ವೇಶ್ವರ್ ಭಟ್ ತಮ್ಮ ಅಂಕಣ ಬರಹದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಬಣ್ಣವನ್ನು ಅವಮಾನಕರ ರೀತಿಯಲ್ಲಿ ಚಿತ್ರಿಸಿ ಜನಾಂಗೀಯ ನಿಂದನೆಗೈದಿದ್ದಾರೆ.

ವಿಶ್ವವಾಣಿ ಪತ್ರಿಕೆಯ ಅಕ್ಟೋಬರ್ 06ರ ನೂರೆಂಟು ವಿಶ್ವ ಎಂಬ ಅಂಕಣದಲ್ಲಿ ನದಿಯ ಹೆಸರಿಟ್ಟುಕೊಂಡು ನೀರಿಗಾಗಿ ನರಳುವ ಜೋರ್ಡಾನ್! ಎಂಬ ಬರಹದಲ್ಲಿ “ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ!” ಎಂದು ಬರೆಯುವ ಮೂಲಕ ರಾಷ್ಟ್ರಪತಿಯವರ ಮೈಬಣ್ಣವನ್ನು ಅವಹೇಳನ ಮಾಡಿದ್ದಾರೆ ಎಂದು ಪೀಪಲ್ ಮೀಡಿಯಾ ವರದಿ ಮಾಡಿದೆ.

ವಿಶ್ವೇಶ್ವರ ಭಟ್ ತಮ್ಮ ಅಂಕಣದಲ್ಲಿ ಜೋರ್ಡಾನ್ ದೇಶದ ಬಿಸಿಲಿನ ಝಳವನ್ನು ವರ್ಣಿಸುವಾಗ “ಅಪ್ಪಟ ಬೀನ್ಕಿ ಕೆಂಡ! ಅರ್ಧಗಂಟೆ ಆ ಮರುಭೂಮಿಯಲ್ಲಿ ನಿಂತರೆ ಇಡೀ ಶರೀರವೆಲ್ಲ ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ! ಕಣ್ಮುಚ್ಚಿದರೂ ಜೋಗದ ಜಲಪಾತದಂತೆ ಸುರಿಯುವ ನಿಗಿನಿಗಿ ಬಿಸಿಲ ಧಾರೆ” ಎಂದು ಬರೆದಿದ್ದಾರೆ. ಆ ಮೂಲಕ ನಮ್ಮ ರಾಷ್ಟ್ರಪತಿಯವರ ಬಣ್ಣವನ್ನು ಅಪಹಾಸ್ಯ ಮಾಡಿದ್ದಾರೆ.

ರಾಷ್ಟ್ರಪತಿ ಸ್ಥಾನಕ್ಕೆ ಮುರ್ಮುರವರ ಹೆಸರು ಘೋಷಣೆಗೊಂಡ ದಿನದಿಂದಲೂ ಅವರ ಹೆಸರಿನ ಕಾರಣಕ್ಕೆ ಹಲವರು ಅವಹೇಳನ ಮಾಡಿ ಟೀಕೆಗೆ ಗುರಿಯಾಗಿದ್ದರು. ದ್ರೌಪದಿ ಹೆಸರಿದ್ದ ಕಾರಣಕ್ಕೆ ಗೇಲಿ ಮಾಡಲಾಗಿತ್ತು. ಕನ್ನಡ ಪ್ರಭ ಪತ್ರಿಕೆ ‘ದ್ರೌಪದಿ ಮಹಾಭಾರತದ ರಾಷ್ಟ್ರಪತಿ’ ಎಂದು ಕರೆದಿತ್ತು. ಅಲ್ಲದೆ ಪ್ರತಿಭಾ ಪಾಟೀಲ್ ನಂತರ ಮೊದಲ ಮಹಿಳಾ ರಾಷ್ಟ್ರಪತಿ ಎಂದು ಬರೆದಿತ್ತು. ಇತ್ತೀಚೆಗೆ ಬಿಜೆಪಿ ಶಾಸಕ ಕೂಡ ಮೊದಲ ಮಹಿಳಾ ರಾಷ್ಟ್ರಪತಿ ಎಂದು ಬ್ಯಾನರ್‌ನಲ್ಲಿ ಬರೆಸಿದ್ದರು.

ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಮಾತಿನ ನಡುವೆ ರಾಷ್ಟ್ರಪತ್ನಿ ಎಂದು ಹೇಳಿದ್ದಕ್ಕಾಗಿ ಬಿಜೆಪಿ ಸಂಸತ್ತಿನ ಕಲಾಪ ನಡೆಯದಂತೆ 2-3 ದಿನ ಭಾರೀ ಪ್ರತಿಭಟನೆ ನಡೆಸಿತ್ತು. ಚೌಧರಿ ಬಾಯ್ತಪ್ಪಿನಿಂದ ಆದ ಪ್ರಮಾದ ಎಂದು ಕ್ಷಮೆ ಕೇಳಿದರೂ ಸಹ ಬಿಜೆಪಿ ಪ್ರತಿಭಟನೆ ನಿಂತಿರಲಿಲ್ಲ. ಈಗ ಪತ್ರಕರ್ತ ವಿಶ್ವೇಶ್ವರ ಭಟ್ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ವಿರುದ್ಧ ಜನಾಂಗೀಯ ನಿಂದನೆ ನಡೆಸಿದ್ದಾರೆ. ಇದಕ್ಕೆ ಬಿಜೆಪಿ ಹೇಗೆ ಪ್ರತಿಕ್ರಿಯಿಸುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ; ಬುಡಕಟ್ಟು ಮಹಿಳೆ ಅತ್ಯುನ್ನತ ಸ್ಥಾನಕ್ಕೇರಿರುವುದು ಪ್ರಜಾಪ್ರಭುತ್ವದ ಶಕ್ತಿ: ನೂತನ ರಾಷ್ಟ್ರಪತಿ ಮುರ್ಮು ಮೊದಲ ಭಾಷಣ ಹೀಗಿತ್ತು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನುವಾದಿ ವಿಶ್ವೇಶ್ವರಬಟ್ಟನಿಗೆ ಆದಿವಾಸಿ ಮಹಿಳೆಯೊಬ್ಬರು ಈ ದೇಶದ ರಾಷ್ಟ್ರಪತಿ ಆಗಿರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಇಂತಹ ಮಾತುಗಳು ಬರುತ್ತಿವೆ.

  2. ಭಾರತ ದೇಶದ ಪ್ರಪ್ರಥಮ ಪ್ರಜೆ…
    ಭಾರತ ದೇಶದ ಸೇನೆಯ ಮುಖ್ಯಸ್ಥರು…
    ಭಾರತ ದೇಶದ ಸಂವಿಧಾನಿಕ ಮುಖ್ಯಸ್ಥರು
    ಭಾರತ ದೇಶದ ಅತ್ಯುನ್ನತ ಹುದ್ದೆ..
    ಅಲಂಕರಿಸಿದ ಗೌರವಾನ್ವಿತ ರಾಷ್ಟ್ರಪತಿಗಳು ಆದ
    ದ್ರೌಪದಿ ಮುರ್ಮುರವರು ನಮ್ಮ ಭಾರತೀಯರ ಹೆಮ್ಮೆ. ಮಾನ್ಯರ ಬಗ್ಗೆ ಈ ರೀತಿಯ ಕ್ಷುಲ್ಲಕ; ಕೀಳು ಮನಸ್ಥಿತಿ ಹೊಂದಿರುವ ಭಟ್ ರವರಿಗೆ ದಿಕ್ಕಾರ…

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...