Homeಮುಖಪುಟಪತ್ರಕರ್ತ ವಿಶ್ವೇಶ್ವರ ಭಟ್ಟರಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ

ಪತ್ರಕರ್ತ ವಿಶ್ವೇಶ್ವರ ಭಟ್ಟರಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ

- Advertisement -
- Advertisement -

ವಿಶ್ವವಾಣಿ ಪತ್ರಿಕೆಯ ಸಂಪಾದಕರಾದ ವಿಶ್ವೇಶ್ವರ್ ಭಟ್ ತಮ್ಮ ಅಂಕಣ ಬರಹದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಬಣ್ಣವನ್ನು ಅವಮಾನಕರ ರೀತಿಯಲ್ಲಿ ಚಿತ್ರಿಸಿ ಜನಾಂಗೀಯ ನಿಂದನೆಗೈದಿದ್ದಾರೆ.

ವಿಶ್ವವಾಣಿ ಪತ್ರಿಕೆಯ ಅಕ್ಟೋಬರ್ 06ರ ನೂರೆಂಟು ವಿಶ್ವ ಎಂಬ ಅಂಕಣದಲ್ಲಿ ನದಿಯ ಹೆಸರಿಟ್ಟುಕೊಂಡು ನೀರಿಗಾಗಿ ನರಳುವ ಜೋರ್ಡಾನ್! ಎಂಬ ಬರಹದಲ್ಲಿ “ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ!” ಎಂದು ಬರೆಯುವ ಮೂಲಕ ರಾಷ್ಟ್ರಪತಿಯವರ ಮೈಬಣ್ಣವನ್ನು ಅವಹೇಳನ ಮಾಡಿದ್ದಾರೆ ಎಂದು ಪೀಪಲ್ ಮೀಡಿಯಾ ವರದಿ ಮಾಡಿದೆ.

ವಿಶ್ವೇಶ್ವರ ಭಟ್ ತಮ್ಮ ಅಂಕಣದಲ್ಲಿ ಜೋರ್ಡಾನ್ ದೇಶದ ಬಿಸಿಲಿನ ಝಳವನ್ನು ವರ್ಣಿಸುವಾಗ “ಅಪ್ಪಟ ಬೀನ್ಕಿ ಕೆಂಡ! ಅರ್ಧಗಂಟೆ ಆ ಮರುಭೂಮಿಯಲ್ಲಿ ನಿಂತರೆ ಇಡೀ ಶರೀರವೆಲ್ಲ ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ! ಕಣ್ಮುಚ್ಚಿದರೂ ಜೋಗದ ಜಲಪಾತದಂತೆ ಸುರಿಯುವ ನಿಗಿನಿಗಿ ಬಿಸಿಲ ಧಾರೆ” ಎಂದು ಬರೆದಿದ್ದಾರೆ. ಆ ಮೂಲಕ ನಮ್ಮ ರಾಷ್ಟ್ರಪತಿಯವರ ಬಣ್ಣವನ್ನು ಅಪಹಾಸ್ಯ ಮಾಡಿದ್ದಾರೆ.

ರಾಷ್ಟ್ರಪತಿ ಸ್ಥಾನಕ್ಕೆ ಮುರ್ಮುರವರ ಹೆಸರು ಘೋಷಣೆಗೊಂಡ ದಿನದಿಂದಲೂ ಅವರ ಹೆಸರಿನ ಕಾರಣಕ್ಕೆ ಹಲವರು ಅವಹೇಳನ ಮಾಡಿ ಟೀಕೆಗೆ ಗುರಿಯಾಗಿದ್ದರು. ದ್ರೌಪದಿ ಹೆಸರಿದ್ದ ಕಾರಣಕ್ಕೆ ಗೇಲಿ ಮಾಡಲಾಗಿತ್ತು. ಕನ್ನಡ ಪ್ರಭ ಪತ್ರಿಕೆ ‘ದ್ರೌಪದಿ ಮಹಾಭಾರತದ ರಾಷ್ಟ್ರಪತಿ’ ಎಂದು ಕರೆದಿತ್ತು. ಅಲ್ಲದೆ ಪ್ರತಿಭಾ ಪಾಟೀಲ್ ನಂತರ ಮೊದಲ ಮಹಿಳಾ ರಾಷ್ಟ್ರಪತಿ ಎಂದು ಬರೆದಿತ್ತು. ಇತ್ತೀಚೆಗೆ ಬಿಜೆಪಿ ಶಾಸಕ ಕೂಡ ಮೊದಲ ಮಹಿಳಾ ರಾಷ್ಟ್ರಪತಿ ಎಂದು ಬ್ಯಾನರ್‌ನಲ್ಲಿ ಬರೆಸಿದ್ದರು.

ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಮಾತಿನ ನಡುವೆ ರಾಷ್ಟ್ರಪತ್ನಿ ಎಂದು ಹೇಳಿದ್ದಕ್ಕಾಗಿ ಬಿಜೆಪಿ ಸಂಸತ್ತಿನ ಕಲಾಪ ನಡೆಯದಂತೆ 2-3 ದಿನ ಭಾರೀ ಪ್ರತಿಭಟನೆ ನಡೆಸಿತ್ತು. ಚೌಧರಿ ಬಾಯ್ತಪ್ಪಿನಿಂದ ಆದ ಪ್ರಮಾದ ಎಂದು ಕ್ಷಮೆ ಕೇಳಿದರೂ ಸಹ ಬಿಜೆಪಿ ಪ್ರತಿಭಟನೆ ನಿಂತಿರಲಿಲ್ಲ. ಈಗ ಪತ್ರಕರ್ತ ವಿಶ್ವೇಶ್ವರ ಭಟ್ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ವಿರುದ್ಧ ಜನಾಂಗೀಯ ನಿಂದನೆ ನಡೆಸಿದ್ದಾರೆ. ಇದಕ್ಕೆ ಬಿಜೆಪಿ ಹೇಗೆ ಪ್ರತಿಕ್ರಿಯಿಸುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ; ಬುಡಕಟ್ಟು ಮಹಿಳೆ ಅತ್ಯುನ್ನತ ಸ್ಥಾನಕ್ಕೇರಿರುವುದು ಪ್ರಜಾಪ್ರಭುತ್ವದ ಶಕ್ತಿ: ನೂತನ ರಾಷ್ಟ್ರಪತಿ ಮುರ್ಮು ಮೊದಲ ಭಾಷಣ ಹೀಗಿತ್ತು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನುವಾದಿ ವಿಶ್ವೇಶ್ವರಬಟ್ಟನಿಗೆ ಆದಿವಾಸಿ ಮಹಿಳೆಯೊಬ್ಬರು ಈ ದೇಶದ ರಾಷ್ಟ್ರಪತಿ ಆಗಿರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಇಂತಹ ಮಾತುಗಳು ಬರುತ್ತಿವೆ.

  2. ಭಾರತ ದೇಶದ ಪ್ರಪ್ರಥಮ ಪ್ರಜೆ…
    ಭಾರತ ದೇಶದ ಸೇನೆಯ ಮುಖ್ಯಸ್ಥರು…
    ಭಾರತ ದೇಶದ ಸಂವಿಧಾನಿಕ ಮುಖ್ಯಸ್ಥರು
    ಭಾರತ ದೇಶದ ಅತ್ಯುನ್ನತ ಹುದ್ದೆ..
    ಅಲಂಕರಿಸಿದ ಗೌರವಾನ್ವಿತ ರಾಷ್ಟ್ರಪತಿಗಳು ಆದ
    ದ್ರೌಪದಿ ಮುರ್ಮುರವರು ನಮ್ಮ ಭಾರತೀಯರ ಹೆಮ್ಮೆ. ಮಾನ್ಯರ ಬಗ್ಗೆ ಈ ರೀತಿಯ ಕ್ಷುಲ್ಲಕ; ಕೀಳು ಮನಸ್ಥಿತಿ ಹೊಂದಿರುವ ಭಟ್ ರವರಿಗೆ ದಿಕ್ಕಾರ…

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...