Homeಮುಖಪುಟಪತ್ರಕರ್ತ ವಿಶ್ವೇಶ್ವರ ಭಟ್ಟರಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ

ಪತ್ರಕರ್ತ ವಿಶ್ವೇಶ್ವರ ಭಟ್ಟರಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ

- Advertisement -
- Advertisement -

ವಿಶ್ವವಾಣಿ ಪತ್ರಿಕೆಯ ಸಂಪಾದಕರಾದ ವಿಶ್ವೇಶ್ವರ್ ಭಟ್ ತಮ್ಮ ಅಂಕಣ ಬರಹದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಬಣ್ಣವನ್ನು ಅವಮಾನಕರ ರೀತಿಯಲ್ಲಿ ಚಿತ್ರಿಸಿ ಜನಾಂಗೀಯ ನಿಂದನೆಗೈದಿದ್ದಾರೆ.

ವಿಶ್ವವಾಣಿ ಪತ್ರಿಕೆಯ ಅಕ್ಟೋಬರ್ 06ರ ನೂರೆಂಟು ವಿಶ್ವ ಎಂಬ ಅಂಕಣದಲ್ಲಿ ನದಿಯ ಹೆಸರಿಟ್ಟುಕೊಂಡು ನೀರಿಗಾಗಿ ನರಳುವ ಜೋರ್ಡಾನ್! ಎಂಬ ಬರಹದಲ್ಲಿ “ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ!” ಎಂದು ಬರೆಯುವ ಮೂಲಕ ರಾಷ್ಟ್ರಪತಿಯವರ ಮೈಬಣ್ಣವನ್ನು ಅವಹೇಳನ ಮಾಡಿದ್ದಾರೆ ಎಂದು ಪೀಪಲ್ ಮೀಡಿಯಾ ವರದಿ ಮಾಡಿದೆ.

ವಿಶ್ವೇಶ್ವರ ಭಟ್ ತಮ್ಮ ಅಂಕಣದಲ್ಲಿ ಜೋರ್ಡಾನ್ ದೇಶದ ಬಿಸಿಲಿನ ಝಳವನ್ನು ವರ್ಣಿಸುವಾಗ “ಅಪ್ಪಟ ಬೀನ್ಕಿ ಕೆಂಡ! ಅರ್ಧಗಂಟೆ ಆ ಮರುಭೂಮಿಯಲ್ಲಿ ನಿಂತರೆ ಇಡೀ ಶರೀರವೆಲ್ಲ ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ! ಕಣ್ಮುಚ್ಚಿದರೂ ಜೋಗದ ಜಲಪಾತದಂತೆ ಸುರಿಯುವ ನಿಗಿನಿಗಿ ಬಿಸಿಲ ಧಾರೆ” ಎಂದು ಬರೆದಿದ್ದಾರೆ. ಆ ಮೂಲಕ ನಮ್ಮ ರಾಷ್ಟ್ರಪತಿಯವರ ಬಣ್ಣವನ್ನು ಅಪಹಾಸ್ಯ ಮಾಡಿದ್ದಾರೆ.

ರಾಷ್ಟ್ರಪತಿ ಸ್ಥಾನಕ್ಕೆ ಮುರ್ಮುರವರ ಹೆಸರು ಘೋಷಣೆಗೊಂಡ ದಿನದಿಂದಲೂ ಅವರ ಹೆಸರಿನ ಕಾರಣಕ್ಕೆ ಹಲವರು ಅವಹೇಳನ ಮಾಡಿ ಟೀಕೆಗೆ ಗುರಿಯಾಗಿದ್ದರು. ದ್ರೌಪದಿ ಹೆಸರಿದ್ದ ಕಾರಣಕ್ಕೆ ಗೇಲಿ ಮಾಡಲಾಗಿತ್ತು. ಕನ್ನಡ ಪ್ರಭ ಪತ್ರಿಕೆ ‘ದ್ರೌಪದಿ ಮಹಾಭಾರತದ ರಾಷ್ಟ್ರಪತಿ’ ಎಂದು ಕರೆದಿತ್ತು. ಅಲ್ಲದೆ ಪ್ರತಿಭಾ ಪಾಟೀಲ್ ನಂತರ ಮೊದಲ ಮಹಿಳಾ ರಾಷ್ಟ್ರಪತಿ ಎಂದು ಬರೆದಿತ್ತು. ಇತ್ತೀಚೆಗೆ ಬಿಜೆಪಿ ಶಾಸಕ ಕೂಡ ಮೊದಲ ಮಹಿಳಾ ರಾಷ್ಟ್ರಪತಿ ಎಂದು ಬ್ಯಾನರ್‌ನಲ್ಲಿ ಬರೆಸಿದ್ದರು.

ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಮಾತಿನ ನಡುವೆ ರಾಷ್ಟ್ರಪತ್ನಿ ಎಂದು ಹೇಳಿದ್ದಕ್ಕಾಗಿ ಬಿಜೆಪಿ ಸಂಸತ್ತಿನ ಕಲಾಪ ನಡೆಯದಂತೆ 2-3 ದಿನ ಭಾರೀ ಪ್ರತಿಭಟನೆ ನಡೆಸಿತ್ತು. ಚೌಧರಿ ಬಾಯ್ತಪ್ಪಿನಿಂದ ಆದ ಪ್ರಮಾದ ಎಂದು ಕ್ಷಮೆ ಕೇಳಿದರೂ ಸಹ ಬಿಜೆಪಿ ಪ್ರತಿಭಟನೆ ನಿಂತಿರಲಿಲ್ಲ. ಈಗ ಪತ್ರಕರ್ತ ವಿಶ್ವೇಶ್ವರ ಭಟ್ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ವಿರುದ್ಧ ಜನಾಂಗೀಯ ನಿಂದನೆ ನಡೆಸಿದ್ದಾರೆ. ಇದಕ್ಕೆ ಬಿಜೆಪಿ ಹೇಗೆ ಪ್ರತಿಕ್ರಿಯಿಸುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ; ಬುಡಕಟ್ಟು ಮಹಿಳೆ ಅತ್ಯುನ್ನತ ಸ್ಥಾನಕ್ಕೇರಿರುವುದು ಪ್ರಜಾಪ್ರಭುತ್ವದ ಶಕ್ತಿ: ನೂತನ ರಾಷ್ಟ್ರಪತಿ ಮುರ್ಮು ಮೊದಲ ಭಾಷಣ ಹೀಗಿತ್ತು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನುವಾದಿ ವಿಶ್ವೇಶ್ವರಬಟ್ಟನಿಗೆ ಆದಿವಾಸಿ ಮಹಿಳೆಯೊಬ್ಬರು ಈ ದೇಶದ ರಾಷ್ಟ್ರಪತಿ ಆಗಿರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಇಂತಹ ಮಾತುಗಳು ಬರುತ್ತಿವೆ.

  2. ಭಾರತ ದೇಶದ ಪ್ರಪ್ರಥಮ ಪ್ರಜೆ…
    ಭಾರತ ದೇಶದ ಸೇನೆಯ ಮುಖ್ಯಸ್ಥರು…
    ಭಾರತ ದೇಶದ ಸಂವಿಧಾನಿಕ ಮುಖ್ಯಸ್ಥರು
    ಭಾರತ ದೇಶದ ಅತ್ಯುನ್ನತ ಹುದ್ದೆ..
    ಅಲಂಕರಿಸಿದ ಗೌರವಾನ್ವಿತ ರಾಷ್ಟ್ರಪತಿಗಳು ಆದ
    ದ್ರೌಪದಿ ಮುರ್ಮುರವರು ನಮ್ಮ ಭಾರತೀಯರ ಹೆಮ್ಮೆ. ಮಾನ್ಯರ ಬಗ್ಗೆ ಈ ರೀತಿಯ ಕ್ಷುಲ್ಲಕ; ಕೀಳು ಮನಸ್ಥಿತಿ ಹೊಂದಿರುವ ಭಟ್ ರವರಿಗೆ ದಿಕ್ಕಾರ…

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...