Homeಮುಖಪುಟರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ: ಪತ್ರಕರ್ತ ವಿಶ್ವೇಶ್ವರ್‌ ಭಟ್‌ಗೆ NCW ಸಮನ್ಸ್

ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ: ಪತ್ರಕರ್ತ ವಿಶ್ವೇಶ್ವರ್‌ ಭಟ್‌ಗೆ NCW ಸಮನ್ಸ್

- Advertisement -
- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಬಣ್ಣವನ್ನು ಅವಮಾನಕರ ರೀತಿಯಲ್ಲಿ ಚಿತ್ರಿಸಿ ಜನಾಂಗೀಯ ನಿಂದನೆಗೈದ ಆರೋಪದ ಮೇಲೆ ವಿಶ್ವವಾಣಿ ಪತ್ರಿಕೆಯ ಸಂಪಾದಕರಾದ ವಿಶ್ವೇಶ್ವರ್ ಭಟ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಸಮನ್ಸ್ ನೀಡಿದೆ.

ಗೌರವಾನ್ವಿತ ರಾಷ್ಟ್ರಪತಿಯವರ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವುದನ್ನು ರಾಷ್ಟ್ರೀಯ ಮಹಿಳಾ ಆಯೋಗವು ಗುರುತಿಸಿದೆ. ಈ ಕುರಿತು ಅಕ್ಟೋಬರ್ 26ರಂದು ವಿಚಾರಣೆಗೆ ಹಾಜರಾಗುವಂತೆ ಪತ್ರಕರ್ತ ವಿಶ್ವೇಶ್ವರ ಭಟ್‌ರವರಿಗೆ ನೋಟಿಸ್ ನೀಡಲಾಗಿದೆ ಎಂದು NCW ಟ್ವೀಟ್ ಮಾಡಿದೆ.

ವಿಶ್ವವಾಣಿ ಪತ್ರಿಕೆಯ ಅಕ್ಟೋಬರ್ 06ರ ನೂರೆಂಟು ವಿಶ್ವ ಎಂಬ ಅಂಕಣದಲ್ಲಿ ವಿಶ್ವೇಶ್ವರ್ ಭಟ್‌ ನದಿಯ ಹೆಸರಿಟ್ಟುಕೊಂಡು ನೀರಿಗಾಗಿ ನರಳುವ ಜೋರ್ಡಾನ್! ಎಂಬ ಬರಹದಲ್ಲಿ “ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ!” ಎಂದು ಬರೆಯುವ ಮೂಲಕ ರಾಷ್ಟ್ರಪತಿಯವರ ಮೈಬಣ್ಣವನ್ನು ಅವಹೇಳನ ಮಾಡಿದ್ದರು.

ವಿಶ್ವೇಶ್ವರ ಭಟ್ ತಮ್ಮ ಅಂಕಣದಲ್ಲಿ ಜೋರ್ಡಾನ್ ದೇಶದ ಬಿಸಿಲಿನ ಝಳವನ್ನು ವರ್ಣಿಸುವಾಗ “ಅಪ್ಪಟ ಬೀನ್ಕಿ ಕೆಂಡ! ಅರ್ಧಗಂಟೆ ಆ ಮರುಭೂಮಿಯಲ್ಲಿ ನಿಂತರೆ ಇಡೀ ಶರೀರವೆಲ್ಲ ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ! ಕಣ್ಮುಚ್ಚಿದರೂ ಜೋಗದ ಜಲಪಾತದಂತೆ ಸುರಿಯುವ ನಿಗಿನಿಗಿ ಬಿಸಿಲ ಧಾರೆ” ಎಂದು ಬರೆದಿದ್ದಾರೆ. ಆ ಮೂಲಕ ನಮ್ಮ ರಾಷ್ಟ್ರಪತಿಯವರ ಬಣ್ಣವನ್ನು ಅಪಹಾಸ್ಯ ಮಾಡಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಪತ್ರಕರ್ತ ವಿಶ್ವೇಶ್ವರ್ ಭಟ್‌ರನ್ನು ಬಂಧಿಸಬೇಕೆಂದು ಆಗ್ರಹಗಳು ಕೇಳಿಬಂದಿದ್ದವು. ಹಿಂದೆಲ್ಲ ರಾಷ್ಟ್ರಪತಿಗಳನ್ನು ಅವಮಾನಿಸಿದಾಗ ಪ್ರತಿಭಟಿಸಿದ್ದ ಬಿಜೆಪಿ ಹೀಗೇಕೆ ಸುಮ್ಮನಿದೆ ಎಂದು ಪ್ರಶ್ನಿಸಲಾಗಿತ್ತು.

ಹಲವಾರು ಜನರು ರಾಷ್ಟ್ರೀಯ ಮಹಿಳಾ ಆಯೋಗವನ್ನು ಟ್ವಿಟರ್‌ನಲ್ಲಿ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು. ಕೊನೆಗೂ ಮಹಿಳಾ ಆಯೋಗ ವಿಶ್ವೇಶ್ವರ್ ಭಟ್‌ಗೆ ಸಮನ್ಸ್ ನೀಡಿದ್ದು ವಿಚಾರಣೆಗೆ ಮುಂದಾಗಿದೆ.

 

ಇದನ್ನೂ ಓದಿ; ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...