Homeಅಂತರಾಷ್ಟ್ರೀಯಇಂಗ್ಲೆಂಡ್‌ನಲ್ಲಿ ಸಿಖ್ ಯುವತಿ ಮೇಲೆ 'ಜನಾಂಗೀಯ ಪ್ರೇರಿತ' ಅತ್ಯಾಚಾರ: ಖಂಡನೆ ವ್ಯಕ್ತಪಡಿಸಿದ 40 ಸಂಘಟನೆಗಳು, ನ್ಯಾಯಕ್ಕಾಗಿ...

ಇಂಗ್ಲೆಂಡ್‌ನಲ್ಲಿ ಸಿಖ್ ಯುವತಿ ಮೇಲೆ ‘ಜನಾಂಗೀಯ ಪ್ರೇರಿತ’ ಅತ್ಯಾಚಾರ: ಖಂಡನೆ ವ್ಯಕ್ತಪಡಿಸಿದ 40 ಸಂಘಟನೆಗಳು, ನ್ಯಾಯಕ್ಕಾಗಿ ಒತ್ತಾಯ

- Advertisement -
- Advertisement -

ಸೆಪ್ಟೆಂಬರ್ 9ರಂದು ಇಂಗ್ಲೆಂಡ್‌ನ ವೆಸ್ಟ್ ಮಿಡ್‌ಲ್ಯಾಂಡ್ಸ್‌ ಪ್ರಾಂತ್ಯದ ಓಲ್ಡ್‌ಬರಿ ಟೇಮ್ ರಸ್ತೆ ಬಳಿ ‘ಜನಾಂಗೀಯ ಪ್ರೇರಿತ ದಾಳಿ’ಯಲ್ಲಿ ಸಿಖ್ ಯುವತಿ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.

20 ವರ್ಷದ ಯುವತಿ ಮೇಲೆ ಇಬ್ಬರು ಬಿಳಿಯ ಪುರುಷರು ಹಲ್ಲೆ ನಡೆಸಿ, ಅತ್ಯಾಚಾರವೆಸಗಿದ್ದಾರೆ. ಅಲ್ಲದೆ, “ನೀನು ಇಲ್ಲಿಗೆ ಸೇರಿದವಲಲ್ಲ, ಹೊರಟು ಹೋಗು” ಎಂಬುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಘಟನೆ ಖಂಡಿಸಿ ಸಿಖ್ ಸಮುದಾಯದ ಜನರು ಪ್ರತಿಭಟನೆ ನಡೆಸಿದ ನಂತರ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ದುಷ್ಕೃತ್ಯ ಖಂಡಿಸಿ ಹಲವಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರೆ, ಸಾಮಾಜಿಕ ಮಾಧ್ಯಮಗಳಲ್ಲಿ ನೂರಾರು ಜನರು ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ.

ಅತ್ಯಾಚಾರ ಸಂತ್ರಸ್ತೆಯ ಪರವಾಗಿ ದಕ್ಷಿಣ ಏಷ್ಯಾದ 40 ಕಪ್ಪುವರ್ಣ, ವಲಸಿಗ, ನಿರಾಶ್ರಿತರ ಮತ್ತು ಜನಾಂಗೀಯ ವಿರೋಧಿ ಸಂಘಟನೆಗಳು ಒಗ್ಗಟ್ಟು ಪ್ರದರ್ಶಿಸಿವೆ.

ತಮ್ಮ ಹೇಳಿಕೆಯಲ್ಲಿ ಸಂಘಟನೆಗಳು, ಭಯಾನಕ ಲೈಂಗಿಕ ಮತ್ತು ಜನಾಂಗೀಯ ದೌರ್ಜನ್ಯವನ್ನು ಹೇಳಿಕೊಳ್ಳಲು ಮುಂದೆ ಬಂದ ಸಂತ್ರಸ್ತೆಯ ಧೈರ್ಯವನ್ನು ಶ್ಲಾಘಿಸಿವೆ. “ನಾವು ಸಂತ್ರಸ್ತೆಯ ಜೊತೆ ಬಲವಾದ ಒಗ್ಗಟ್ಟನ್ನು ವ್ಯಕ್ತಪಡಿಸುತ್ತೇವೆ ಮತ್ತು ಬೇಷರತ್ತಾಗಿ ಆಕೆಯ ಬೆಂಬಲಕ್ಕೆ ನಿಲ್ಲುತ್ತೇವೆ” ಎಂದು ಹೇಳಿವೆ.

ಸಿಖ್ ವುಮೆನ್ ಏಡ್, ಸೌತ್ ಏಷ್ಯಾ ಸಾಲಿಡಾರಿಟಿ ಗ್ರೂಪ್, ಮಿಲಿಯನ್ ವುಮೆನ್ ರೈಸ್ ಮೂವ್‌ಮೆಂಟ್, ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಯುಕೆ, ಬರ್ಮಿಂಗ್‌ಹ್ಯಾಮ್ ಬ್ಲ್ಯಾಕ್ ಸಿಸ್ಟರ್ಸ್, ಇಂಡಿಯನ್ ವರ್ಕರ್ಸ್ ಅಸೋಸಿಯೇಷನ್ ​​(ಜಿಬಿ), ವುಮೆನ್ ಅಸಿಲಮ್ ಸೀಕರ್ಸ್, ರೆಫ್ಯೂಜೀಸ್ ಅಂಡ್ ಮೈಗ್ರಂಟ್ಸ್ (ವಾರ್ಮ್), ಯುಕೆ ಇಂಡಿಯನ್ ಮುಸ್ಲಿಂ ಕೌನ್ಸಿಲ್ (ಯುಕೆ-ಐಎಂಸಿ), ಕ್ಯಾಸ್ಟ್‌ವಾಚ್ ಯುಕೆ, ಇಂಡಿಯಾ ಲೇಬರ್ ಸಾಲಿಡಾರಿಟಿ (ಐಎಲ್ಎಸ್), ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ ಯುಕೆ, ಮುಸ್ಲಿಂ ಸೋಶಿಯಲ್ ಜಸ್ಟೀಸ್ ಇನಿಶಿಯೇಟಿವ್ ಮತ್ತು ಸ್ಟ್ರೈವ್ ಯುಕೆ ಸೇರಿದಂತೆ ಇತರ ಸಂಘಟನೆಗಳು ಸಂತ್ರಸ್ತೆಯ ಪರ ಹೇಳಿಕೆಗೆ ಸಹಿ ಹಾಕಿವೆ ಎಂದು ವರದಿಗಳು ಹೇಳಿವೆ.

ಸಂತ್ರಸ್ತ ಯುವತಿ ಸಿಖ್ ಫೆಡರೇಶನ್ (ಯುಕೆ) ಮೂಲಕ ಸಾರ್ವಜನಿಕ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ಸ್ಥಳೀಯ ಸಮುದಾಯ ತನಗೆ ತೋರಿಸಿದ ಪ್ರೀತಿಗೆ ನಿಜವಾಗಿಯೂ ವಿನಮ್ರಳಲಾಗಿದ್ದೇನೆ” ಎಂದು ಹೇಳಿರುವುದಾಗಿ ವರದಿಗಳು ವಿವರಿಸಿವೆ.

ಬಿಳಿಯರ ಪ್ರಾಬಲ್ಯವಾದಿ ಅಭಿಯಾನಗಳಿಗೆ ಹೆಸರುವಾಸಿಯಾದ ಟಾಮಿ ರಾಬಿನ್ಸನ್ ನೇತೃತ್ವದಲ್ಲಿ ಸಾವಿರಾರು ಬಲಪಂಥೀಯರು ಲಂಡನ್‌ನ ಬೀದಿಗಳಲ್ಲಿ ಇಸ್ಲಾಮೋಫೋಬಿಕ್, ವಲಸಿಗ ವಿರೋಧಿ ಮತ್ತು ಜನಾಂಗೀಯ ಘೋಷಣೆಗಳೊಂದಿಗೆ ಮೆರವಣಿಗೆ ನಡೆಸಿದ ಅದೇ ದಿನ ಓಲ್ಡ್‌ಬರಿ ಘಟನೆ ಬೆಳಕಿಗೆ ಬಂದಿದೆ.

ಸಂತ್ರಸ್ತೆಯ ಪರ ಹೇಳಿಕೆಗೆ ಸಹಿ ಹಾಕಿದವರು, ಬಲಪಂಥೀಯ ಅಭಿಯಾನಗಳು ಜನಾಂಗೀಯ ಅಲ್ಪಸಂಖ್ಯಾತರು, ವಲಸಿಗರು ಮತ್ತು ನಿರಾಶ್ರಿತರ ವಿರುದ್ದ ದೌರ್ಜನ್ಯವನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿವೆ. ಈ ವಾತಾವರಣವು ಜನಾಂಗೀಯ ಪ್ರೇರಿತ ಅತ್ಯಾಚಾರ ಸೇರಿದಂತೆ ಇಂತಹ ಘಟನೆಗಳಿಗೆ ಕಾರಣವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿವೆ.

ಗಾಝಾ ನಗರದಲ್ಲಿ ಆಕ್ರಮಣ ವಿಸ್ತರಿಸಿದ ಇಸ್ರೇಲ್: ಅಸಹಾಯಕ ನಾಗರಿಕರಿಂದ ಮಹಾ ಪಲಾಯನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...