Homeಅಂತರಾಷ್ಟ್ರೀಯಇಂಗ್ಲೆಂಡ್‌ನಲ್ಲಿ ಸಿಖ್ ಯುವತಿ ಮೇಲೆ 'ಜನಾಂಗೀಯ ಪ್ರೇರಿತ' ಅತ್ಯಾಚಾರ: ಖಂಡನೆ ವ್ಯಕ್ತಪಡಿಸಿದ 40 ಸಂಘಟನೆಗಳು, ನ್ಯಾಯಕ್ಕಾಗಿ...

ಇಂಗ್ಲೆಂಡ್‌ನಲ್ಲಿ ಸಿಖ್ ಯುವತಿ ಮೇಲೆ ‘ಜನಾಂಗೀಯ ಪ್ರೇರಿತ’ ಅತ್ಯಾಚಾರ: ಖಂಡನೆ ವ್ಯಕ್ತಪಡಿಸಿದ 40 ಸಂಘಟನೆಗಳು, ನ್ಯಾಯಕ್ಕಾಗಿ ಒತ್ತಾಯ

- Advertisement -
- Advertisement -

ಸೆಪ್ಟೆಂಬರ್ 9ರಂದು ಇಂಗ್ಲೆಂಡ್‌ನ ವೆಸ್ಟ್ ಮಿಡ್‌ಲ್ಯಾಂಡ್ಸ್‌ ಪ್ರಾಂತ್ಯದ ಓಲ್ಡ್‌ಬರಿ ಟೇಮ್ ರಸ್ತೆ ಬಳಿ ‘ಜನಾಂಗೀಯ ಪ್ರೇರಿತ ದಾಳಿ’ಯಲ್ಲಿ ಸಿಖ್ ಯುವತಿ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.

20 ವರ್ಷದ ಯುವತಿ ಮೇಲೆ ಇಬ್ಬರು ಬಿಳಿಯ ಪುರುಷರು ಹಲ್ಲೆ ನಡೆಸಿ, ಅತ್ಯಾಚಾರವೆಸಗಿದ್ದಾರೆ. ಅಲ್ಲದೆ, “ನೀನು ಇಲ್ಲಿಗೆ ಸೇರಿದವಲಲ್ಲ, ಹೊರಟು ಹೋಗು” ಎಂಬುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಘಟನೆ ಖಂಡಿಸಿ ಸಿಖ್ ಸಮುದಾಯದ ಜನರು ಪ್ರತಿಭಟನೆ ನಡೆಸಿದ ನಂತರ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ದುಷ್ಕೃತ್ಯ ಖಂಡಿಸಿ ಹಲವಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರೆ, ಸಾಮಾಜಿಕ ಮಾಧ್ಯಮಗಳಲ್ಲಿ ನೂರಾರು ಜನರು ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ.

ಅತ್ಯಾಚಾರ ಸಂತ್ರಸ್ತೆಯ ಪರವಾಗಿ ದಕ್ಷಿಣ ಏಷ್ಯಾದ 40 ಕಪ್ಪುವರ್ಣ, ವಲಸಿಗ, ನಿರಾಶ್ರಿತರ ಮತ್ತು ಜನಾಂಗೀಯ ವಿರೋಧಿ ಸಂಘಟನೆಗಳು ಒಗ್ಗಟ್ಟು ಪ್ರದರ್ಶಿಸಿವೆ.

ತಮ್ಮ ಹೇಳಿಕೆಯಲ್ಲಿ ಸಂಘಟನೆಗಳು, ಭಯಾನಕ ಲೈಂಗಿಕ ಮತ್ತು ಜನಾಂಗೀಯ ದೌರ್ಜನ್ಯವನ್ನು ಹೇಳಿಕೊಳ್ಳಲು ಮುಂದೆ ಬಂದ ಸಂತ್ರಸ್ತೆಯ ಧೈರ್ಯವನ್ನು ಶ್ಲಾಘಿಸಿವೆ. “ನಾವು ಸಂತ್ರಸ್ತೆಯ ಜೊತೆ ಬಲವಾದ ಒಗ್ಗಟ್ಟನ್ನು ವ್ಯಕ್ತಪಡಿಸುತ್ತೇವೆ ಮತ್ತು ಬೇಷರತ್ತಾಗಿ ಆಕೆಯ ಬೆಂಬಲಕ್ಕೆ ನಿಲ್ಲುತ್ತೇವೆ” ಎಂದು ಹೇಳಿವೆ.

ಸಿಖ್ ವುಮೆನ್ ಏಡ್, ಸೌತ್ ಏಷ್ಯಾ ಸಾಲಿಡಾರಿಟಿ ಗ್ರೂಪ್, ಮಿಲಿಯನ್ ವುಮೆನ್ ರೈಸ್ ಮೂವ್‌ಮೆಂಟ್, ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಯುಕೆ, ಬರ್ಮಿಂಗ್‌ಹ್ಯಾಮ್ ಬ್ಲ್ಯಾಕ್ ಸಿಸ್ಟರ್ಸ್, ಇಂಡಿಯನ್ ವರ್ಕರ್ಸ್ ಅಸೋಸಿಯೇಷನ್ ​​(ಜಿಬಿ), ವುಮೆನ್ ಅಸಿಲಮ್ ಸೀಕರ್ಸ್, ರೆಫ್ಯೂಜೀಸ್ ಅಂಡ್ ಮೈಗ್ರಂಟ್ಸ್ (ವಾರ್ಮ್), ಯುಕೆ ಇಂಡಿಯನ್ ಮುಸ್ಲಿಂ ಕೌನ್ಸಿಲ್ (ಯುಕೆ-ಐಎಂಸಿ), ಕ್ಯಾಸ್ಟ್‌ವಾಚ್ ಯುಕೆ, ಇಂಡಿಯಾ ಲೇಬರ್ ಸಾಲಿಡಾರಿಟಿ (ಐಎಲ್ಎಸ್), ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ ಯುಕೆ, ಮುಸ್ಲಿಂ ಸೋಶಿಯಲ್ ಜಸ್ಟೀಸ್ ಇನಿಶಿಯೇಟಿವ್ ಮತ್ತು ಸ್ಟ್ರೈವ್ ಯುಕೆ ಸೇರಿದಂತೆ ಇತರ ಸಂಘಟನೆಗಳು ಸಂತ್ರಸ್ತೆಯ ಪರ ಹೇಳಿಕೆಗೆ ಸಹಿ ಹಾಕಿವೆ ಎಂದು ವರದಿಗಳು ಹೇಳಿವೆ.

ಸಂತ್ರಸ್ತ ಯುವತಿ ಸಿಖ್ ಫೆಡರೇಶನ್ (ಯುಕೆ) ಮೂಲಕ ಸಾರ್ವಜನಿಕ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ಸ್ಥಳೀಯ ಸಮುದಾಯ ತನಗೆ ತೋರಿಸಿದ ಪ್ರೀತಿಗೆ ನಿಜವಾಗಿಯೂ ವಿನಮ್ರಳಲಾಗಿದ್ದೇನೆ” ಎಂದು ಹೇಳಿರುವುದಾಗಿ ವರದಿಗಳು ವಿವರಿಸಿವೆ.

ಬಿಳಿಯರ ಪ್ರಾಬಲ್ಯವಾದಿ ಅಭಿಯಾನಗಳಿಗೆ ಹೆಸರುವಾಸಿಯಾದ ಟಾಮಿ ರಾಬಿನ್ಸನ್ ನೇತೃತ್ವದಲ್ಲಿ ಸಾವಿರಾರು ಬಲಪಂಥೀಯರು ಲಂಡನ್‌ನ ಬೀದಿಗಳಲ್ಲಿ ಇಸ್ಲಾಮೋಫೋಬಿಕ್, ವಲಸಿಗ ವಿರೋಧಿ ಮತ್ತು ಜನಾಂಗೀಯ ಘೋಷಣೆಗಳೊಂದಿಗೆ ಮೆರವಣಿಗೆ ನಡೆಸಿದ ಅದೇ ದಿನ ಓಲ್ಡ್‌ಬರಿ ಘಟನೆ ಬೆಳಕಿಗೆ ಬಂದಿದೆ.

ಸಂತ್ರಸ್ತೆಯ ಪರ ಹೇಳಿಕೆಗೆ ಸಹಿ ಹಾಕಿದವರು, ಬಲಪಂಥೀಯ ಅಭಿಯಾನಗಳು ಜನಾಂಗೀಯ ಅಲ್ಪಸಂಖ್ಯಾತರು, ವಲಸಿಗರು ಮತ್ತು ನಿರಾಶ್ರಿತರ ವಿರುದ್ದ ದೌರ್ಜನ್ಯವನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿವೆ. ಈ ವಾತಾವರಣವು ಜನಾಂಗೀಯ ಪ್ರೇರಿತ ಅತ್ಯಾಚಾರ ಸೇರಿದಂತೆ ಇಂತಹ ಘಟನೆಗಳಿಗೆ ಕಾರಣವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿವೆ.

ಗಾಝಾ ನಗರದಲ್ಲಿ ಆಕ್ರಮಣ ವಿಸ್ತರಿಸಿದ ಇಸ್ರೇಲ್: ಅಸಹಾಯಕ ನಾಗರಿಕರಿಂದ ಮಹಾ ಪಲಾಯನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...