Homeಅಂತರಾಷ್ಟ್ರೀಯಇಂಗ್ಲೆಂಡ್‌ನಲ್ಲಿ ಸಿಖ್ ಯುವತಿ ಮೇಲೆ 'ಜನಾಂಗೀಯ ಪ್ರೇರಿತ' ಅತ್ಯಾಚಾರ: ಖಂಡನೆ ವ್ಯಕ್ತಪಡಿಸಿದ 40 ಸಂಘಟನೆಗಳು, ನ್ಯಾಯಕ್ಕಾಗಿ...

ಇಂಗ್ಲೆಂಡ್‌ನಲ್ಲಿ ಸಿಖ್ ಯುವತಿ ಮೇಲೆ ‘ಜನಾಂಗೀಯ ಪ್ರೇರಿತ’ ಅತ್ಯಾಚಾರ: ಖಂಡನೆ ವ್ಯಕ್ತಪಡಿಸಿದ 40 ಸಂಘಟನೆಗಳು, ನ್ಯಾಯಕ್ಕಾಗಿ ಒತ್ತಾಯ

- Advertisement -
- Advertisement -

ಸೆಪ್ಟೆಂಬರ್ 9ರಂದು ಇಂಗ್ಲೆಂಡ್‌ನ ವೆಸ್ಟ್ ಮಿಡ್‌ಲ್ಯಾಂಡ್ಸ್‌ ಪ್ರಾಂತ್ಯದ ಓಲ್ಡ್‌ಬರಿ ಟೇಮ್ ರಸ್ತೆ ಬಳಿ ‘ಜನಾಂಗೀಯ ಪ್ರೇರಿತ ದಾಳಿ’ಯಲ್ಲಿ ಸಿಖ್ ಯುವತಿ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.

20 ವರ್ಷದ ಯುವತಿ ಮೇಲೆ ಇಬ್ಬರು ಬಿಳಿಯ ಪುರುಷರು ಹಲ್ಲೆ ನಡೆಸಿ, ಅತ್ಯಾಚಾರವೆಸಗಿದ್ದಾರೆ. ಅಲ್ಲದೆ, “ನೀನು ಇಲ್ಲಿಗೆ ಸೇರಿದವಲಲ್ಲ, ಹೊರಟು ಹೋಗು” ಎಂಬುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಘಟನೆ ಖಂಡಿಸಿ ಸಿಖ್ ಸಮುದಾಯದ ಜನರು ಪ್ರತಿಭಟನೆ ನಡೆಸಿದ ನಂತರ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ದುಷ್ಕೃತ್ಯ ಖಂಡಿಸಿ ಹಲವಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರೆ, ಸಾಮಾಜಿಕ ಮಾಧ್ಯಮಗಳಲ್ಲಿ ನೂರಾರು ಜನರು ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ.

ಅತ್ಯಾಚಾರ ಸಂತ್ರಸ್ತೆಯ ಪರವಾಗಿ ದಕ್ಷಿಣ ಏಷ್ಯಾದ 40 ಕಪ್ಪುವರ್ಣ, ವಲಸಿಗ, ನಿರಾಶ್ರಿತರ ಮತ್ತು ಜನಾಂಗೀಯ ವಿರೋಧಿ ಸಂಘಟನೆಗಳು ಒಗ್ಗಟ್ಟು ಪ್ರದರ್ಶಿಸಿವೆ.

ತಮ್ಮ ಹೇಳಿಕೆಯಲ್ಲಿ ಸಂಘಟನೆಗಳು, ಭಯಾನಕ ಲೈಂಗಿಕ ಮತ್ತು ಜನಾಂಗೀಯ ದೌರ್ಜನ್ಯವನ್ನು ಹೇಳಿಕೊಳ್ಳಲು ಮುಂದೆ ಬಂದ ಸಂತ್ರಸ್ತೆಯ ಧೈರ್ಯವನ್ನು ಶ್ಲಾಘಿಸಿವೆ. “ನಾವು ಸಂತ್ರಸ್ತೆಯ ಜೊತೆ ಬಲವಾದ ಒಗ್ಗಟ್ಟನ್ನು ವ್ಯಕ್ತಪಡಿಸುತ್ತೇವೆ ಮತ್ತು ಬೇಷರತ್ತಾಗಿ ಆಕೆಯ ಬೆಂಬಲಕ್ಕೆ ನಿಲ್ಲುತ್ತೇವೆ” ಎಂದು ಹೇಳಿವೆ.

ಸಿಖ್ ವುಮೆನ್ ಏಡ್, ಸೌತ್ ಏಷ್ಯಾ ಸಾಲಿಡಾರಿಟಿ ಗ್ರೂಪ್, ಮಿಲಿಯನ್ ವುಮೆನ್ ರೈಸ್ ಮೂವ್‌ಮೆಂಟ್, ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಯುಕೆ, ಬರ್ಮಿಂಗ್‌ಹ್ಯಾಮ್ ಬ್ಲ್ಯಾಕ್ ಸಿಸ್ಟರ್ಸ್, ಇಂಡಿಯನ್ ವರ್ಕರ್ಸ್ ಅಸೋಸಿಯೇಷನ್ ​​(ಜಿಬಿ), ವುಮೆನ್ ಅಸಿಲಮ್ ಸೀಕರ್ಸ್, ರೆಫ್ಯೂಜೀಸ್ ಅಂಡ್ ಮೈಗ್ರಂಟ್ಸ್ (ವಾರ್ಮ್), ಯುಕೆ ಇಂಡಿಯನ್ ಮುಸ್ಲಿಂ ಕೌನ್ಸಿಲ್ (ಯುಕೆ-ಐಎಂಸಿ), ಕ್ಯಾಸ್ಟ್‌ವಾಚ್ ಯುಕೆ, ಇಂಡಿಯಾ ಲೇಬರ್ ಸಾಲಿಡಾರಿಟಿ (ಐಎಲ್ಎಸ್), ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ ಯುಕೆ, ಮುಸ್ಲಿಂ ಸೋಶಿಯಲ್ ಜಸ್ಟೀಸ್ ಇನಿಶಿಯೇಟಿವ್ ಮತ್ತು ಸ್ಟ್ರೈವ್ ಯುಕೆ ಸೇರಿದಂತೆ ಇತರ ಸಂಘಟನೆಗಳು ಸಂತ್ರಸ್ತೆಯ ಪರ ಹೇಳಿಕೆಗೆ ಸಹಿ ಹಾಕಿವೆ ಎಂದು ವರದಿಗಳು ಹೇಳಿವೆ.

ಸಂತ್ರಸ್ತ ಯುವತಿ ಸಿಖ್ ಫೆಡರೇಶನ್ (ಯುಕೆ) ಮೂಲಕ ಸಾರ್ವಜನಿಕ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ಸ್ಥಳೀಯ ಸಮುದಾಯ ತನಗೆ ತೋರಿಸಿದ ಪ್ರೀತಿಗೆ ನಿಜವಾಗಿಯೂ ವಿನಮ್ರಳಲಾಗಿದ್ದೇನೆ” ಎಂದು ಹೇಳಿರುವುದಾಗಿ ವರದಿಗಳು ವಿವರಿಸಿವೆ.

ಬಿಳಿಯರ ಪ್ರಾಬಲ್ಯವಾದಿ ಅಭಿಯಾನಗಳಿಗೆ ಹೆಸರುವಾಸಿಯಾದ ಟಾಮಿ ರಾಬಿನ್ಸನ್ ನೇತೃತ್ವದಲ್ಲಿ ಸಾವಿರಾರು ಬಲಪಂಥೀಯರು ಲಂಡನ್‌ನ ಬೀದಿಗಳಲ್ಲಿ ಇಸ್ಲಾಮೋಫೋಬಿಕ್, ವಲಸಿಗ ವಿರೋಧಿ ಮತ್ತು ಜನಾಂಗೀಯ ಘೋಷಣೆಗಳೊಂದಿಗೆ ಮೆರವಣಿಗೆ ನಡೆಸಿದ ಅದೇ ದಿನ ಓಲ್ಡ್‌ಬರಿ ಘಟನೆ ಬೆಳಕಿಗೆ ಬಂದಿದೆ.

ಸಂತ್ರಸ್ತೆಯ ಪರ ಹೇಳಿಕೆಗೆ ಸಹಿ ಹಾಕಿದವರು, ಬಲಪಂಥೀಯ ಅಭಿಯಾನಗಳು ಜನಾಂಗೀಯ ಅಲ್ಪಸಂಖ್ಯಾತರು, ವಲಸಿಗರು ಮತ್ತು ನಿರಾಶ್ರಿತರ ವಿರುದ್ದ ದೌರ್ಜನ್ಯವನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿವೆ. ಈ ವಾತಾವರಣವು ಜನಾಂಗೀಯ ಪ್ರೇರಿತ ಅತ್ಯಾಚಾರ ಸೇರಿದಂತೆ ಇಂತಹ ಘಟನೆಗಳಿಗೆ ಕಾರಣವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿವೆ.

ಗಾಝಾ ನಗರದಲ್ಲಿ ಆಕ್ರಮಣ ವಿಸ್ತರಿಸಿದ ಇಸ್ರೇಲ್: ಅಸಹಾಯಕ ನಾಗರಿಕರಿಂದ ಮಹಾ ಪಲಾಯನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...