Homeಮುಖಪುಟದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ: ಬೇಷರತ್ ಕ್ಷಮೆಯಾಚಿಸಿದ ವಿಶ್ವೇಶ್ವರ ಭಟ್

ದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ: ಬೇಷರತ್ ಕ್ಷಮೆಯಾಚಿಸಿದ ವಿಶ್ವೇಶ್ವರ ಭಟ್

- Advertisement -
- Advertisement -

ತಮ್ಮ ಅಂಕಣ ಬರಹದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಬಣ್ಣವನ್ನು ಅವಮಾನಕರ ರೀತಿಯಲ್ಲಿ ಚಿತ್ರಿಸಿ ಜನಾಂಗೀಯ ನಿಂದನೆಗೈದ ಪ್ರಕರಣದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ರಾಷ್ಟ್ರೀಯ ಮಹಿಳಾ ಆಯೋಗದ ಎದುರು ಬೇಷರತ್ ಕ್ಷಮೆಯಾಚಿಸಿದ್ದಾರೆ.

ಗೌರವಾನ್ವಿತ ರಾಷ್ಟ್ರಪತಿಯವರ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವುದನ್ನು ರಾಷ್ಟ್ರೀಯ ಮಹಿಳಾ ಆಯೋಗವು (NCW) ಗುರುತಿಸಿದೆ. ಈ ಕುರಿತು ಅಕ್ಟೋಬರ್ 26ರಂದು ವಿಚಾರಣೆಗೆ ಹಾಜರಾಗುವಂತೆ ಪತ್ರಕರ್ತ ವಿಶ್ವೇಶ್ವರ ಭಟ್‌ರವರಿಗೆ ನೋಟಿಸ್ ನೀಡಲಾಗಿದೆ ಎಂದು NCW ಈ ಹಿಂದೆ ತಿಳಿಸಿತ್ತು.

ಈ ಹಿನ್ನೆಲೆಯಲ್ಲಿ ಆಯೋಗದ ಮುಂದೆ ಹಾಜರಾದ ವಿಶ್ವೇಶ್ವರ ಭಟ್ “ಭಾರತದ ರಾಷ್ಟ್ರಪತಿಯವರನ್ನು ಅವಮಾನಿಸುವ ಯಾವುದೇ ದುರುದ್ದೇಶ ತನಗೆ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿ ಕ್ಷೆಮೆ ಯಾಚಿಸಿದ್ದಾರೆ, ಲಿಖಿತವಾಗಿಯೂ ಕ್ಷಮೆ ಕೇಳಿದ್ದಾರೆ” ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾರವರ ಹೇಳಿಕೆ ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ. ರಾಷ್ಟ್ರೀಯ ಮಹಿಳಾ ಆಯೋಗವು ಕ್ಷಮಾಪಣೆ ಪತ್ರದ ವಿವರಗಳನ್ನು ರಾಷ್ಟ್ರಪತಿ ಭವನಕ್ಕೆ ಕಳುಹಿಸಲಿದೆ ಎಂದು ಅವರು ಹೇಳೀದ್ದಾರೆ ಎನ್ನಲಾಗಿದೆ.

ವಿಶ್ವವಾಣಿ ಪತ್ರಿಕೆಯ ಅಕ್ಟೋಬರ್ 06ರ ನೂರೆಂಟು ವಿಶ್ವ ಎಂಬ ಅಂಕಣದಲ್ಲಿ ವಿಶ್ವೇಶ್ವರ್ ಭಟ್‌ ನದಿಯ ಹೆಸರಿಟ್ಟುಕೊಂಡು ನೀರಿಗಾಗಿ ನರಳುವ ಜೋರ್ಡಾನ್! ಎಂಬ ಬರಹದಲ್ಲಿ “ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ!” ಎಂದು ಬರೆಯುವ ಮೂಲಕ ರಾಷ್ಟ್ರಪತಿಯವರ ಮೈಬಣ್ಣವನ್ನು ಅವಹೇಳನ ಮಾಡಿದ್ದರು.

ವಿಶ್ವೇಶ್ವರ ಭಟ್ ತಮ್ಮ ಅಂಕಣದಲ್ಲಿ ಜೋರ್ಡಾನ್ ದೇಶದ ಬಿಸಿಲಿನ ಝಳವನ್ನು ವರ್ಣಿಸುವಾಗ “ಅಪ್ಪಟ ಬೀನ್ಕಿ ಕೆಂಡ! ಅರ್ಧಗಂಟೆ ಆ ಮರುಭೂಮಿಯಲ್ಲಿ ನಿಂತರೆ ಇಡೀ ಶರೀರವೆಲ್ಲ ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ! ಕಣ್ಮುಚ್ಚಿದರೂ ಜೋಗದ ಜಲಪಾತದಂತೆ ಸುರಿಯುವ ನಿಗಿನಿಗಿ ಬಿಸಿಲ ಧಾರೆ” ಎಂದು ಬರೆದಿದ್ದಾರೆ. ಆ ಮೂಲಕ ನಮ್ಮ ರಾಷ್ಟ್ರಪತಿಯವರ ಬಣ್ಣವನ್ನು ಅಪಹಾಸ್ಯ ಮಾಡಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಪತ್ರಕರ್ತ ವಿಶ್ವೇಶ್ವರ್ ಭಟ್‌ರನ್ನು ಬಂಧಿಸಬೇಕೆಂದು ಆಗ್ರಹಗಳು ಕೇಳಿಬಂದಿದ್ದವು. ಹಿಂದೆಲ್ಲ ರಾಷ್ಟ್ರಪತಿಗಳನ್ನು ಅವಮಾನಿಸಿದಾಗ ಪ್ರತಿಭಟಿಸಿದ್ದ ಬಿಜೆಪಿ ಹೀಗೇಕೆ ಸುಮ್ಮನಿದೆ ಎಂದು ಪ್ರಶ್ನಿಸಲಾಗಿತ್ತು.

ಆದರೆ ವಿಶ್ವೇಶ್ವರ ಭಟ್ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದರು. ರಾಷ್ಟ್ರಪತಿಗಳಿಗೆ ಅವಮಾನವಾಗಿಲ್ಲ ಎಂದು ವಾದಿಸಿದ್ದರು. ಆ ಸಂದರ್ಭದಲ್ಲಿ ಮೊಹಮ್ಮದ್ ಮಫಾಜ್ ಎಂಬುವವರು ಸೇರಿದಂತೆ ಹಲವಾರು ಜನರು ರಾಷ್ಟ್ರೀಯ ಮಹಿಳಾ ಆಯೋಗವನ್ನು, ರಾಷ್ಟ್ರಪತಿ ಭವನವನ್ನು ಟ್ವಿಟರ್‌ನಲ್ಲಿ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು. ಕೊನೆಗೂ ಮಹಿಳಾ ಆಯೋಗ ವಿಶ್ವೇಶ್ವರ್ ಭಟ್‌ಗೆ ಸಮನ್ಸ್ ನೀಡಿ ಕ್ಷಮೆ ಯಾಚಿಸುವಂತೆ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...