Homeಮುಖಪುಟದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ: ಬೇಷರತ್ ಕ್ಷಮೆಯಾಚಿಸಿದ ವಿಶ್ವೇಶ್ವರ ಭಟ್

ದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ: ಬೇಷರತ್ ಕ್ಷಮೆಯಾಚಿಸಿದ ವಿಶ್ವೇಶ್ವರ ಭಟ್

- Advertisement -
- Advertisement -

ತಮ್ಮ ಅಂಕಣ ಬರಹದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಬಣ್ಣವನ್ನು ಅವಮಾನಕರ ರೀತಿಯಲ್ಲಿ ಚಿತ್ರಿಸಿ ಜನಾಂಗೀಯ ನಿಂದನೆಗೈದ ಪ್ರಕರಣದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ರಾಷ್ಟ್ರೀಯ ಮಹಿಳಾ ಆಯೋಗದ ಎದುರು ಬೇಷರತ್ ಕ್ಷಮೆಯಾಚಿಸಿದ್ದಾರೆ.

ಗೌರವಾನ್ವಿತ ರಾಷ್ಟ್ರಪತಿಯವರ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವುದನ್ನು ರಾಷ್ಟ್ರೀಯ ಮಹಿಳಾ ಆಯೋಗವು (NCW) ಗುರುತಿಸಿದೆ. ಈ ಕುರಿತು ಅಕ್ಟೋಬರ್ 26ರಂದು ವಿಚಾರಣೆಗೆ ಹಾಜರಾಗುವಂತೆ ಪತ್ರಕರ್ತ ವಿಶ್ವೇಶ್ವರ ಭಟ್‌ರವರಿಗೆ ನೋಟಿಸ್ ನೀಡಲಾಗಿದೆ ಎಂದು NCW ಈ ಹಿಂದೆ ತಿಳಿಸಿತ್ತು.

ಈ ಹಿನ್ನೆಲೆಯಲ್ಲಿ ಆಯೋಗದ ಮುಂದೆ ಹಾಜರಾದ ವಿಶ್ವೇಶ್ವರ ಭಟ್ “ಭಾರತದ ರಾಷ್ಟ್ರಪತಿಯವರನ್ನು ಅವಮಾನಿಸುವ ಯಾವುದೇ ದುರುದ್ದೇಶ ತನಗೆ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿ ಕ್ಷೆಮೆ ಯಾಚಿಸಿದ್ದಾರೆ, ಲಿಖಿತವಾಗಿಯೂ ಕ್ಷಮೆ ಕೇಳಿದ್ದಾರೆ” ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾರವರ ಹೇಳಿಕೆ ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ. ರಾಷ್ಟ್ರೀಯ ಮಹಿಳಾ ಆಯೋಗವು ಕ್ಷಮಾಪಣೆ ಪತ್ರದ ವಿವರಗಳನ್ನು ರಾಷ್ಟ್ರಪತಿ ಭವನಕ್ಕೆ ಕಳುಹಿಸಲಿದೆ ಎಂದು ಅವರು ಹೇಳೀದ್ದಾರೆ ಎನ್ನಲಾಗಿದೆ.

ವಿಶ್ವವಾಣಿ ಪತ್ರಿಕೆಯ ಅಕ್ಟೋಬರ್ 06ರ ನೂರೆಂಟು ವಿಶ್ವ ಎಂಬ ಅಂಕಣದಲ್ಲಿ ವಿಶ್ವೇಶ್ವರ್ ಭಟ್‌ ನದಿಯ ಹೆಸರಿಟ್ಟುಕೊಂಡು ನೀರಿಗಾಗಿ ನರಳುವ ಜೋರ್ಡಾನ್! ಎಂಬ ಬರಹದಲ್ಲಿ “ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ!” ಎಂದು ಬರೆಯುವ ಮೂಲಕ ರಾಷ್ಟ್ರಪತಿಯವರ ಮೈಬಣ್ಣವನ್ನು ಅವಹೇಳನ ಮಾಡಿದ್ದರು.

ವಿಶ್ವೇಶ್ವರ ಭಟ್ ತಮ್ಮ ಅಂಕಣದಲ್ಲಿ ಜೋರ್ಡಾನ್ ದೇಶದ ಬಿಸಿಲಿನ ಝಳವನ್ನು ವರ್ಣಿಸುವಾಗ “ಅಪ್ಪಟ ಬೀನ್ಕಿ ಕೆಂಡ! ಅರ್ಧಗಂಟೆ ಆ ಮರುಭೂಮಿಯಲ್ಲಿ ನಿಂತರೆ ಇಡೀ ಶರೀರವೆಲ್ಲ ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ! ಕಣ್ಮುಚ್ಚಿದರೂ ಜೋಗದ ಜಲಪಾತದಂತೆ ಸುರಿಯುವ ನಿಗಿನಿಗಿ ಬಿಸಿಲ ಧಾರೆ” ಎಂದು ಬರೆದಿದ್ದಾರೆ. ಆ ಮೂಲಕ ನಮ್ಮ ರಾಷ್ಟ್ರಪತಿಯವರ ಬಣ್ಣವನ್ನು ಅಪಹಾಸ್ಯ ಮಾಡಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಪತ್ರಕರ್ತ ವಿಶ್ವೇಶ್ವರ್ ಭಟ್‌ರನ್ನು ಬಂಧಿಸಬೇಕೆಂದು ಆಗ್ರಹಗಳು ಕೇಳಿಬಂದಿದ್ದವು. ಹಿಂದೆಲ್ಲ ರಾಷ್ಟ್ರಪತಿಗಳನ್ನು ಅವಮಾನಿಸಿದಾಗ ಪ್ರತಿಭಟಿಸಿದ್ದ ಬಿಜೆಪಿ ಹೀಗೇಕೆ ಸುಮ್ಮನಿದೆ ಎಂದು ಪ್ರಶ್ನಿಸಲಾಗಿತ್ತು.

ಆದರೆ ವಿಶ್ವೇಶ್ವರ ಭಟ್ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದರು. ರಾಷ್ಟ್ರಪತಿಗಳಿಗೆ ಅವಮಾನವಾಗಿಲ್ಲ ಎಂದು ವಾದಿಸಿದ್ದರು. ಆ ಸಂದರ್ಭದಲ್ಲಿ ಮೊಹಮ್ಮದ್ ಮಫಾಜ್ ಎಂಬುವವರು ಸೇರಿದಂತೆ ಹಲವಾರು ಜನರು ರಾಷ್ಟ್ರೀಯ ಮಹಿಳಾ ಆಯೋಗವನ್ನು, ರಾಷ್ಟ್ರಪತಿ ಭವನವನ್ನು ಟ್ವಿಟರ್‌ನಲ್ಲಿ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು. ಕೊನೆಗೂ ಮಹಿಳಾ ಆಯೋಗ ವಿಶ್ವೇಶ್ವರ್ ಭಟ್‌ಗೆ ಸಮನ್ಸ್ ನೀಡಿ ಕ್ಷಮೆ ಯಾಚಿಸುವಂತೆ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...