Homeಮುಖಪುಟಸಂವಿಧಾನದ ನಿಜ ಆಶಯಗಳನ್ನು ಎತ್ತಿಹಿಡಿದ ಗರ್ಭಪಾತ ಹಕ್ಕಿನ ತೀರ್ಪು

ಸಂವಿಧಾನದ ನಿಜ ಆಶಯಗಳನ್ನು ಎತ್ತಿಹಿಡಿದ ಗರ್ಭಪಾತ ಹಕ್ಕಿನ ತೀರ್ಪು

- Advertisement -
- Advertisement -

ಇತ್ತೀಚೆಗೆ ಬಂದ ಸುಪ್ರೀಂಕೋರ್ಟಿನ ಗರ್ಭಪಾತದ ಬಗೆಗಿನ ತೀರ್ಪು ಬದಲಾಗುತ್ತಿರುವ ಸಮಯದ ಅಗತ್ಯ ಹಾಗೂ ಧೋರಣೆ ಹೇಗಿರಬೇಕು ಎಂಬುದನ್ನು ಎತ್ತಿ ತೋರಿಸುತ್ತದೆ.

ಭಾರತದಲ್ಲಿ ಕಾನೂನುಬದ್ಧವಾದ ಗರ್ಭಪಾತದ ಅವಕಾಶ 1971ರಿಂದಲೇ ಇತ್ತು. ಆದರೆ ಪಿತೃಪ್ರಧಾನ ವ್ಯವಸ್ಥೆಯ ಅಡಿಯಲ್ಲಿ ಹೆಣ್ಣು ಮಗುವಿನ ಹುಟ್ಟು ಎಂಬುದೇ ಒಂದು ಶಾಪದಂತೆ ನೋಡುವ ಜನರು ಲಕ್ಷಾಂತರ ಸಂಖ್ಯೆಯಲ್ಲಿ ಕಾನೂನುಬಾಹಿರವಾಗಿ ಹೆಣ್ಣು ಭ್ರೂಣಹತ್ಯೆ ಮಾಡುತ್ತ ಜನಸಂಖ್ಯಾ ಅನುಪಾತದಲ್ಲಿ ಏರುಪೇರುಗಳಾದುದರಿಂದ ಸಮಸ್ಯೆಗಳು ತಲೆದೋರಿದವು. ಅದನ್ನು ನಿಯಂತ್ರಿಸಲು ಅನೇಕ ನೀತಿ ನಿಯಮಗಳು ಜಾರಿಗೆ ಬಂದು ಗರ್ಭಪಾತ ಅನೇಕ ಅಂಕುಶಗಳಿಗೆ ಒಳಪಟ್ಟಿತ್ತು. ಭಾರತದಲ್ಲಷ್ಟೇ ಅಲ್ಲ ಪ್ರಪಂಚದಾದ್ಯಂತ ಗರ್ಭಧಾರಣೆಯ ಸುತ್ತು ನಿರಂತರ ಚರ್ಚೆಗಳನ್ನು ಕೇಳುತ್ತಲೇ ಇರುತ್ತೇವೆ. ಇತ್ತೀಚೆಗೆ ಅಮೆರಿಕದ ಸುಪ್ರೀಂಕೋರ್ಟ್ ಗರ್ಭಪಾತವನ್ನು ಕಾನೂನುಬಾಹಿರ ಎಂದು ತೀರ್ಪುನೀಡಿ ಅಲ್ಲಿನ ಸೂಕ್ಷ್ಮ ಮತ್ತು ಸಂವೇದನಾಶೀಲ ಜನರ ವಿಮರ್ಶೆಗೆ ಗುರಿಯಾಗಿದೆ. ದೇಶ ಯಾವುದಾದರೇನು, ಪ್ರಜಾತಂತ್ರ ವ್ಯವಸ್ಥೆ ಎಷ್ಟು ಪರಿಣಾಮಕಾರಿಯಾಗಿದ್ದರೇನು, ಅಲ್ಲಿ ಕೊನೆಗೆ ನಡೆಯುವುದು ಪುರುಷಪ್ರಧಾನ ಮನಸ್ಥಿತಿಗಳ ಆಡಳಿತವೇ ಎಂಬುದನ್ನು ಅದು ತೋರಿಸಿಕೊಟ್ಟಿತ್ತು.

ಅತ್ಯಂತ ಮುಂದುವರಿದ ದೇಶ ಎನ್ನುತ್ತಲೇ ಅಮೆರಿಕದ ಸುಪ್ರೀಂಕೋರ್ಟ್ ಅತ್ಯಂತ ಪುರೋಗಾಮಿ ನಡೆಗೆ ತೀರ್ಪಿತ್ತಾಗ, ಕೆಲವರಿಗೆ ಅದು ಆಶ್ಚರ್ಯವೆನಿಸಿತಾದರೂ, ಈ ಮನಸ್ಥಿತಿ ಅಲ್ಲಿನ ಬಲಪಂಥೀಯರಲ್ಲಿ ಎಂದಿನಿಂದಲೂ ಇದೆ ಎಂಬುದು ಸತ್ಯ. ಡೊನಾಲ್ಡ್ ಟ್ರಂಪ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿದಾಗಲೇ ಗರ್ಭಪಾತ ಕಾನೂನು ತೆಗೆದುಹಾಕುವ ಆಶ್ವಾಸನೆ ನೀಡಿದ್ದರು ಮತ್ತು ಅದಕ್ಕೆ ಪೂರಕವಾಗಿ ಸುಪ್ರೀಂಕೋರ್ಟಿಗೆ ಮೂರು ನ್ಯಾಯಮೂರ್ತಿಗಳನ್ನು ನೇಮಕ ಮಾಡಿದ್ದರು. ಇಂಥ ಹಿನ್ನೆಲೆಯಲ್ಲಿ ಭಾರತದ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸಂವಿಧಾನದ ಆಶಯಗಳನ್ನು ನಿಜವಾದ ಅರ್ಥದಲ್ಲಿ ಎತ್ತಿಹಿಡಿದಿದೆ ಎನ್ನಬಹುದು.

ಜಸ್ಟಿಸ್ ಎನ್.ವೈ ಚಂದ್ರಚೂಡ್, ಜಸ್ಟಿಸ್ ಎ.ಎಸ್ ಬೋಪಣ್ಣ ಹಾಗೂ ಪರ್ಡಿವಾಲ ಅವರ ವಿಭಾಗೀಯ ಪೀಠ 1971ರ ಕಾಯ್ದೆಗೆ ಮಹತ್ವದ ಬದಲಾವಣೆಗಳನ್ನು ಮಾಡುತ್ತ ಸಂವಿಧಾನದ 14 ಮತ್ತು 21ನೇ ಪರಿಚ್ಛೇದದ ಅಡಿಯಲ್ಲಿ ಹೆಣ್ಣಿಗೆ ಅವಳ ದೇಹದ ಮೇಲೆ ಸಂಪೂರ್ಣವಾದ ಹಕ್ಕನ್ನು ನೀಡಿ ಅವಳ ಇಚ್ಛೆ ಮತ್ತು ವ್ಯಕ್ತಿತ್ವಕ್ಕೆ ಸಂಪೂರ್ಣ ಮನ್ನಣೆಯನ್ನು ನೀಡಿದ್ದಾರೆ.

ಪ್ರಮುಖ ಅಂಶಗಳು

1. ಅವಿವಾಹಿತ ಮಹಿಳೆಗೂ ಗರ್ಭಪಾತದ ಹಕ್ಕು ಇಲ್ಲಿಯವರೆಗೂ ಗರ್ಭಪಾತ ಎಂಬುದು ಕೇವಲ ವಿವಾಹಿತ ಸ್ತ್ರೀಯರಿಗೆ ಮಾತ್ರ ನೀಡಲಾಗಿದ್ದ ಹಕ್ಕಾಗಿತ್ತು. ಈ ತೀರ್ಪಿನಲ್ಲಿ ನ್ಯಾಯಮೂರ್ತಿಗಳು, “ವಿವಾಹಿತ ಮತ್ತು ಅವಿವಾಹಿತ ಎಂಬ ವ್ಯತ್ಯಾಸ ಕೃತಕವಾದದ್ದು ಮತ್ತು ಸಂವಿಧಾನ ವಿರೋಧಿಯಾದದ್ದು; ಹಾಗೆ ಮಾಡುವುದರಿಂದ ಅವರ ದೇಹದ ಸ್ವಾಯತ್ತತೆಯ ಮೇಲಷ್ಟೇ ಅಲ್ಲದೆ ಅವರ ಮುಂದಿನ ಬದುಕನ್ನೂ ಇದು ದುರ್ಬಲಗೊಳಿಸುತ್ತದೆ” ಎಂದು ಹೇಳಿದ್ದಾರೆ. ಎಲ್ಲಿಯೂ ಮಹಿಳೆಯ ಗಂಡ ಎಂಬ ಪದವನ್ನು ಬಳಸದೆ ಜೊತೆಗಾರ (Partner) ಎಂದು ಹೇಳುತ್ತಾರೆ. ಕಾನೂನು ಎಂಬುದು ನಿಂತ ನೀರಲ್ಲ ಅದು ನಿರಂತರವಾಗಿ ಬದಲಾಗುತ್ತಿರುವ ಕಾಲಕ್ಕೆ ಸ್ಪಂದಿಸುವಂತೆ ಇರಬೇಕು ಎನ್ನುತ್ತಾರೆ. ಗಂಡ ಮತ್ತು ಹೆಂಡತಿ ಎಂಬ ಸಂಬಂಧಗಳ ಜೊತೆಗೇ ಲಿವ್‌ಇನ್ ಜೋಡಿಗಳ ಹಕ್ಕನ್ನು ಎತ್ತಿಹಿಡಿದಿದ್ದಾರೆ.

2. ಅನೈಚ್ಛಿಕವಾದ ಅಥವಾ ಬೇರೆ ಕಾರಣಗಳಿಂದ ಬೇಡವಾದ ಗರ್ಭವನ್ನು ತೆಗೆಸುವ ಅವಧಿಯನ್ನು 24 ವಾರಕ್ಕೆ ಏರಿಸುವ ಮೂಲಕ ಜೊತೆಗಾರರಿಗೆ ಅಥವಾ ಮಹಿಳೆಗೆ ತೀರ್ಮಾನ ತೆಗೆದುಕೊಳ್ಳಲು ಹೆಚ್ಚಿನ ಸಮಯಾವಕಾಶವನ್ನು ನೀಡಲಾಗಿದೆ.

3. ಅತ್ಯಾಚಾರ ಎಂಬ ಪದವನ್ನು ವೈವಾಹಿಕ ಸಂಬಂಧಕ್ಕೂ ವಿಸ್ತರಿಸುವ ಮೂಲಕ ವೈವಾಹಿಕ ಅತ್ಯಾಚಾರದಿಂದ ಗರ್ಭಧರಿಸಿದ ಹೆಣ್ಣು ಮಕ್ಕಳೂ ಗರ್ಭಪಾತ ಮಾಡಿಸಲು ಅವಕಾಶ ನೀಡಲಾಗಿದೆ.

ವಿವಾಹ ಎಂಬುದನ್ನು ಅತ್ಯಾಚಾರದ ಪರಿಧಿಯಿಂದ ದೂರ ಇಟ್ಟಿರುವ ಸರ್ಕಾರಗಳು ಇಲ್ಲಿಯವರೆಗೂ ವೈವಾಹಿತ ಅತ್ಯಾಚಾರವನ್ನು ಅಪರಾಧ ಎಂದು ಪರಿಗಣಿಸಿಲ್ಲ; ಹಾಗೆ ಮಾಡುವುದರಿಂದ ಕುಟುಂಬ ವ್ಯವಸ್ಥೆಯೇ ಕುಸಿದುಬೀಳುತ್ತದೆ ಎಂಬ ವಾದ ಮುಂದಿಟ್ಟು, ಒಲ್ಲದ ಮದುವೆಯಲ್ಲಿ ಹೆಣ್ಣು ಬಲವಂತದಿಂದ ಎಲ್ಲವನ್ನೂ ಸಹಿಸಿಕೊಳ್ಳುವಂತೆ ಮಾಡಲಾಗಿದೆ. ಆದರೆ ಈ ಬದಲಾದ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ಒಲ್ಲದ ಸಂಭೋಗದಿಂದ ಧರಿಸಿದ ಗರ್ಭವನ್ನು ತೆಗೆಸುವ ಹಕ್ಕು ಮಹಿಳೆಗೆ ಇದೆ ಹಾಗೂ ಅವಳ ದೇಹ ಅವಳ ಸ್ವಾಯತ್ತತೆ; ಅದನ್ನು ಪುರುಷ ಪ್ರಧಾನ ವ್ಯವಸ್ಥೆಯ ದೃಷ್ಟಿಕೋನದಿಂದ ನೋಡುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿಸುಪ್ರೀಂಕೋರ್ಟ್: ಬದಲಾವಣೆಯ ಗಾಳಿ ಜಸ್ಟಿಸ್ ಯು.ಯು ಲಲಿತ್

4. ಸಂತಾನೋತ್ಪತ್ತಿಯ ಹಕ್ಕುಗಳು ಎಂಬುದನ್ನು ವಿವರಿಸುತ್ತ ನ್ಯಾಯಮೂರ್ತಿಗಳು, ಇದು ಕೇವಲ ಮಕ್ಕಳನ್ನು ಹೆರುವುದಕ್ಕಷ್ಟೇ ಅಲ್ಲದೆ, ಸಂತಾನ ನಿಯಂತ್ರಣ ಪ್ರಕ್ರಿಯೆಗಳು ಮತ್ತು ಸೌಲಭ್ಯಗಳ ಬಗೆಗೆ ಸರಿಯಾದ ಮಾಹಿತಿ ಮತ್ತು ಜ್ಞಾನ ಹೊಂದುವುದೂ ಆಗಿದೆ ಎಂದು ಹೇಳುತ್ತಾರೆ. ಯಾವಾಗ ಮಕ್ಕಳನ್ನು ಹೆರಬೇಕು, ಎಷ್ಟು ಮಕ್ಕಳನ್ನು ಹೆರಬೇಕು ಎಂಬ ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳಲೂ ಹೆಣ್ಣು ಸಂಪೂರ್ಣವಾಗಿ ಸ್ವತಂತ್ರಳು ಎಂದು ಹೇಳುವ ಮೂಲಕ ಹೆಣ್ಣಿನ ಹಕ್ಕನ್ನು ಗಂಡಿಗೆ ಸರಿಸಮನಾಗಿ ಗುರ್ತಿಸಿದ್ದಾರೆ.

ನ್ಯಾಯಮೂರ್ತಿಗಳು ನೀಡಿದ ತೀರ್ಪು ಅತ್ಯಂತ ಸಂವೇದನಾಶೀಲವಾಗಿರುವುದರೆ ಜೊತೆಗೇ ಸಮಾನತೆ ಎಂಬ ಹಕ್ಕಿನ ನಿಜವಾದ ವ್ಯಾಖ್ಯಾನವಾಗಿದೆ. ದೇಶದೆಲ್ಲೆಡೆ ಬಹುತೇಕ ಎಲ್ಲರೂ ಈ ತೀರ್ಪಿಗೆ ಸಮ್ಮತಿ ಸಹಮತವನ್ನೇ ಸೂಚಿಸಿದ್ದರೂ ಸಹಿತ ಕೆಲವರು ತಮ್ಮ ಆತಂಕಗಳನ್ನು ವ್ಯಕ್ತಪಡಿಸಿದ್ದಾರೆ. ಈ ಆತಂಕಗಳು ನಿರಾಧಾರವಾದದ್ದು ಅಲ್ಲವಾದರೂ ಅವಕ್ಕೆ ಕೋರ್ಟು ಗಮನದಲ್ಲಿಟ್ಟುಕೊಂಡೇ ತೀರ್ಪು ನೀಡಿದೆ.

ಆತಂಕಗಳು

1. ಭಾರತದಲ್ಲಿ ವೈವಾಹಿತ ಅತ್ಯಾಚಾರವನ್ನು ಅಪರಾಧ ಎಂದು ಪರಿಗಣಿಸಿಲ್ಲ. ಹಾಗಾದರೆ ಅಂತ ಸಂದರ್ಭದಲ್ಲಿ ಇದನ್ನು ಹೇಗೆ ಅರ್ಥೈಸುವುದು.

ಈಗಾಗಲೇ ಹೇಳಿದಂತೆ ನ್ಯಾಯಮೂರ್ತಿಗಳು ಹೆಣ್ಣಿನ ಸಮಾನತೆಯ ಹಕ್ಕು ಮತ್ತು ಅವಳಿಗೆ ತನ್ನ ದೇಹದ ಮೇಲಿನ ಸ್ವಾಯತ್ತತೆಯ ಹಕ್ಕನ್ನು ಎತ್ತಿ ಹಿಡಿದಾಗ ಇಲ್ಲಿ ಸಂವಿಧಾನ ನೀಡಿದ ಮೂಲಭೂತ ಹಕ್ಕುಗಳು ಮುಖ್ಯವಾಗುತ್ತವೆ ಹೊರತು ಇತರ ಕಾನೂನುಗಳಲ್ಲ. ಏಕೆಂದರೆ ನಿಸ್ಸಂಶಯವಾಗಿ ಸಂವಿಧಾನ ಎಲ್ಲಾ ಕಾನೂನಗಳಿಗೂ ಮೂಲ.

2. ಒಲ್ಲದ ಗರ್ಭಧಾರಣೆ ಎಂಬ ಕಾರಣಕ್ಕೆ ಹೆಣ್ಣು ಭ್ರೂಣಹತ್ಯೆ ಹೆಚ್ಚಾಗಬಹುದು. ಅದರಿಂದ ಸಮಾಜದ ಸಮತೋಲನ ಕೆಡಬಹುದು ಎಂಬುದು.

ಡೊನಾಲ್ಡ್ ಟ್ರಂಪ್

ತೀರ್ಪು ನೀಡುವ ಸಂದರ್ಭದಲ್ಲಿ ಇದನ್ನು ವಿವರಿಸುತ್ತ ಭ್ರೂಣಲಿಂಗ ಪತ್ತೆ ಹಚ್ಚುವ ಕಾಯ್ದೆಯನ್ನು ಹೇಗೆ ಬಲಪಡಿಸಬೇಕು ಎಂಬ ಬಗ್ಗೆಯೂ ಹೇಳಲಾಗಿದೆ. ಏಕೆಂದರೆ ಭ್ರೂಣದ ಲಿಂಗ ಪತ್ತೆ ಆಗದೆ ಹೆಣ್ಣು ಮಗು ಎಂಬ ಕಾರಣಕ್ಕೆ ಗರ್ಭಪಾತ ಮಾಡಿಸುವುದು ಅಸಾಧ್ಯ ಅದಕ್ಕೆಂದೇ ಬಲವಾದ ಕಾನೂನುಗಳನ್ನು ರಚಿಸುವ ಮೂಲಕ ಇಂತಹ ದುರುಪಯೋಗ ತಡೆಯುತ್ತೇವೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

3. 24 ವಾರಗಳು ಎಂಬುದು ಸ್ವಲ್ಪ ಮುಂದುವರಿದ ಗರ್ಭವಾದ್ದರಿಂದ ಅಂಥ ಸಂದರ್ಭದಲ್ಲಿ ಗರ್ಭಪಾತ ಮಾಡಿಸಲು ಹೋಗಿ ಗರ್ಭಿಣಿಯರಿಗೆ ಅಪಾಯವಾಗುವ ಸಂಭವವಿದೆ.

24 ವಾರ ಎಂಬುದು 6ನೇ ತಿಂಗಳ ಗರ್ಭ; ಹಾಗಾಗಿ ಸುರ್ಪೀಂಕೋರ್ಟ್ ಎಲ್ಲಾ ಬಗೆಯ ಸುರಕ್ಷತಾ ಕ್ರಮಗಳನ್ನು ವಿವರಿಸುತ್ತಲೇ ಇದಕ್ಕೆ ಅನುಮತಿ ನೀಡಿದೆ. ಗರ್ಭದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗಳು ಕೆಲವೊಮ್ಮೆ ಗರ್ಭಧಾರಣೆಯ ಪ್ರಾರಂಭಿಕ ತಿಂಗಳುಗಳಲ್ಲಿ ಪತ್ತೆಯಾಗುವುದಿಲ್ಲ ಅಥವಾ ಗರ್ಭಿಣಿ ಇರುವ ಸ್ಥಳದಲ್ಲಿ ಅಂತಹ ಪರೀಕ್ಷೆಗಳಿಗೆ ಅವಕಾಶ ಇರುವುದಿಲ್ಲ. ಆದ್ದರಿಂದ ಸ್ವಲ್ಪ ತಡವಾದರೂ ಸಹಿತ ಸುರಕ್ಷಿತವಾದ ಪ್ರಕ್ರಿಯೆಗಳ ಮೂಲಕ ಗರ್ಭಪಾತ ಮಾಡುವುದರಿಂದ ಒಂದು ಮಗು ವಿಕಲಚೇತನವಾಗಿ ಜೀವನಪರ್ಯಂತ ನರಳುವುದನ್ನು ತಡೆಯಬಹುದು.

ಇದನ್ನೂ ಓದಿಗರ್ಭಪಾತಕ್ಕೆ ವಿವಾಹಿತ ಮತ್ತು ಅವಿವಾಹಿತ ಮಹಿಳೆ ಎಂಬ ಬೇಧವಿರಬಾರದು: ಸುಪ್ರೀಂ

ಇಲ್ಲಿಯವರೆಗೂ ಚಾಲ್ತಿಯಲ್ಲಿದ್ದ ಕಾಯ್ದೆಯ ಪ್ರಕಾರ ಗರ್ಭಪಾತ ಕಾನೂನಿನಲ್ಲಿ ಹೇಳಲಾದ ಕಾರಣಗಳ ಪ್ರಕಾರವೇ ಗರ್ಭಪಾತ ಮಾಡಲಾಗುತ್ತಿದೆ ಎಂಬುದನ್ನು ಹೆಣ್ಣುಮಗಳೇ ಸಾಬೀತುಪಡಿಸಬೇಕಾಗಿತ್ತು. ಸ್ವಲ್ಪ ಹೆಚ್ಚುಕಮ್ಮಿ ಆದರೂ ಅದನ್ನು ಅಪರಾಧವೆಂದು ಪರಿಗಣಿಸುವ ಸಾಧ್ಯತೆಯಿತ್ತು. ಈ ಎಲ್ಲ ಹಿನ್ನೆಲೆಯಲ್ಲಿ ನೇರ ಮತ್ತು ಪರೋಕ್ಷವಾದ ಅನೇಕ ನಿಯಮಗಳು ತೊಡಕಾಗಿದ್ದವು. ಇಂಥ ತೊಡಕುಗಳಿಂದ ತಪ್ಪಿಸಿಕೊಳ್ಳಲು ಜನರು ಕಾನೂನುಬಾಹಿರವಾಗಿ ನಡೆಯುತ್ತಿರುವ ಸಾವಿರಾರು ಗರ್ಭಪಾತ ಕೇಂದ್ರಗಳಿಗೆ ಹೋಗಿ ಅಲ್ಲಿನ ಅಸುರಕ್ಷಿತ ವಾತಾವರಣದಲ್ಲಿ ಪ್ರಾಣ ಕಳೆದುಕೊಂಡ ಉದಾಹರಣೆಗಳೂ ಬೇಕಾದಷ್ಟಿವೆ.

ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಸಮೀಕ್ಷೆಯ ಪ್ರಕಾರ ಯಾವ ದೇಶಗಳಲ್ಲಿ ಗರ್ಭಪಾತಕ್ಕೆ ಕಾನೂನಿನ ಸಹಮತ ಮತ್ತು ರಕ್ಷಣೆ ಇದೆಯೋ ಅಲ್ಲಿ ಗರ್ಭಪಾತದ ಸಮಯದಲ್ಲಿ ಅಸುರಕ್ಷಿತ ಕ್ರಮಗಳಿಂದ ಪ್ರಾಣ ಕಳೆದುಕೊಳ್ಳುವ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆ ಇದೆ. ಈ ಸಮೀಕ್ಷೆ ಪ್ರಕಾರ ಕೆನಡಾದಲ್ಲಿ ಗರ್ಭಪಾತದ ಸಮಯದಲ್ಲಿ ಸಾವಿನ ಸಂಖ್ಯೆ ಶೂನ್ಯ. ಸುಪೀಂ ಕೋರ್ಟಿನ ಈ ಸುರಕ್ಷಿತ ಗರ್ಭಪಾತ ಕಾನೂನಿನ ಜೊತೆಗೆ ಭ್ರೂಣಲಿಂಗ ಪತ್ತೆ ಸಂಪೂರ್ಣವಾಗಿ ನಿಂತರೆ ಬಹುಶಃ ನಮ್ಮ ದೇಶದ ಹೆಣ್ಣುಮಕ್ಕಳ ಸುರಕ್ಷತೆ ಸಾಧಿಸಬಹುದು.

ರಾಜಲಕ್ಷ್ಮಿ ಅಂಕಲಗಿ

ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು, ಹಲವು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ. ಕಾನೂನು ವಿಷಯಗಳ ಮೇಲೆ ಹಲವು ಲೇಖನಗಳನ್ನು ಪ್ರಕಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....