Homeಮುಖಪುಟರಾಯ್ ಬರೇಲಿಯನ್ನು ನನ್ನ ಹೊಸ ಕರ್ಮಭೂಮಿಯನ್ನಾಗಿ ಸ್ವೀಕರಿಸಿದ್ದೇನೆ: ರಾಹುಲ್ ಗಾಂಧಿ

ರಾಯ್ ಬರೇಲಿಯನ್ನು ನನ್ನ ಹೊಸ ಕರ್ಮಭೂಮಿಯನ್ನಾಗಿ ಸ್ವೀಕರಿಸಿದ್ದೇನೆ: ರಾಹುಲ್ ಗಾಂಧಿ

- Advertisement -
- Advertisement -

“ರಾಯ್ ಬರೇಲಿಯನ್ನು ನನ್ನ ಹೊಸ ಕರ್ಮಭೂಮಿಯನ್ನಾಗಿ ಸ್ವೀಕರಿಸಿದ್ದೇನೆ. ಏಕೆಂದರೆ, ಅದು ನನ್ನ ಇಬ್ಬರು ತಾಯಂದಿರ ಕೆಲಸದ ಸ್ಥಳವಾಗಿದೆ” ಎಂದು ನಾಮಪತ್ರ ಸಲ್ಲಿಸಿದ ನಂತರ ನಡೆದ ಮೊದಲ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದರು.

ಸೋಮವಾರ ಮಹಾರಾಜಗಂಜ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ‘ನನಗೆ ಇಬ್ಬರು ತಾಯಂದಿರು, ನನ್ನನ್ನು ರಕ್ಷಿಸಿದ ಸೋನಿಯಾ ಗಾಂಧಿ ಮತ್ತು ಇಂದಿರಾ ಗಾಂಧಿ, ರಾಯ್ ಬರೇಲಿ ನನ್ನ ಇಬ್ಬರು ತಾಯಂದಿರ ಕೆಲಸದ ಸ್ಥಳವಾಗಿದೆ. ಅದಕ್ಕಾಗಿಯೇ ನಾನು ಚುನಾವಣೆಗೆ ಸ್ಪರ್ಧಿಸಲು ಇಲ್ಲಿಗೆ ಬಂದಿದ್ದೇನೆ” ಎಂದರು.

“ರಾಯ್‌ಬರೇಲಿಯೊಂದಿಗೆ ನಮ್ಮ ಕುಟುಂಬಕ್ಕೆ 100 ವರ್ಷಗಳಷ್ಟು ಹಳೆಯ ಸಂಬಂಧವಿದೆ, ಈ ಚುನಾವಣೆಯು ಇತಿಹಾಸದಲ್ಲಿ ಸಂವಿಧಾನವನ್ನು ರಕ್ಷಿಸಲು ಹೋರಾಡುತ್ತಿರುವ ಮೊದಲ ಹೋರಾಟವಾಗಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂವಿಧಾನವನ್ನು ಹರಿದು ಹಾಕುತ್ತದೆ, ಬಡವರ ಎಲ್ಲಾ ಮಾರ್ಗಗಳನ್ನು ಮುಚ್ಚುತ್ತದೆ. ಅವರು ಅದಾನಿ ಮತ್ತು ಅಂಬಾನಿಗಾಗಿ ಸರ್ಕಾರ ರಚಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಟ್ಟುಕೊಂಡ ರಾಹುಲ್ ಗಾಂಧಿ, ‘”ಹತ್ತು ವರ್ಷಗಳಲ್ಲಿ ನರೇಂದ್ರ ಮೋದಿ ಅವರು 22 ಕೋಟ್ಯಾಧಿಪತಿಗಳಿಗೆ 16 ಲಕ್ಷ ಕೋಟಿ ರೂ.ಗಳನ್ನು ನೀಡಿದ್ದಾರೆ. ಈ ಹಣ 70 ಕೋಟಿ ಜನರ ಆದಾಯಕ್ಕೆ ಸಮಾನವಾಗಿದೆ. ಈ ಹೋರಾಟ ಬಡವರ ರಕ್ಷಣೆಗಾಗಿ ಸರ್ಕಾರ ರಚನೆಯಾದರೆ ಪ್ರತಿ ತಿಂಗಳ ಮೊದಲನೇ ತಾರೀಖಿನಂದು ಪ್ರತಿಯೊಬ್ಬ ಮಹಿಳೆಯ ಖಾತೆಗೆ 8500 ರೂಪಾಯಿಗಳನ್ನು ಜಮಾ ಮಾಡಲಾಗುವುದು” ಎಂದರು.

“ಪ್ರಧಾನಿ ಯುವಕರನ್ನು ನಿರುದ್ಯೋಗಿಗಳನ್ನಾಗಿ ಮಾಡಿದ್ದಾರೆ.ಇಂಡಿಯಾ ಅಲಯನ್ಸ್ ಸರ್ಕಾರ ರಚನೆಯಾದರೆ ಪ್ರತಿಯೊಬ್ಬ ಯುವಕನಿಗೆ ಶಿಷ್ಯವೇತನ ಸಿಗುತ್ತದೆ. ಈ ಮೂಲಕ ಮೊದಲ ಉದ್ಯೋಗ ಗ್ಯಾರಂಟಿ’ ಎಂದು ರಾಹುಲ್ ಹೇಳಿದರು.

ಹೊಸ ಸರ್ಕಾರ ಗುತ್ತಿಗೆದಾರ ವ್ಯವಸ್ಥೆಯನ್ನು ಕೊನೆಗೊಳಿಸಲಿದೆ ಎಂದು ಅವರು ಘೋಷಿಸಿದರು. ಸಾರ್ವಜನಿಕ ವಲಯವೇ ಆಗಿರಲಿ ಅಥವಾ ಸರ್ಕಾರಿ ಇಲಾಖೆಗಳೇ ಆಗಿರಲಿ, ಸರ್ಕಾರ ರಚನೆಯಾದ ಕೂಡಲೇ ಗುತ್ತಿಗೆದಾರರ ವ್ಯವಸ್ಥೆ ಕೊನೆಗೊಳ್ಳಲಿದೆ ಎಂದರು.

ಈ ವೇಳೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸಾರ್ವಜನಿಕ ಸಭೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇಬ್ಬರೂ ಒಟ್ಟಿಗೆ ವೇದಿಕೆಯಲ್ಲಿದ್ದದ್ದು ನೆರೆದಿದ್ದವರ ಉತ್ಸಾಹವನ್ನು ಹೆಚ್ಚಿಸಿತು.

ಅವರು ತಮ್ಮ ಭಾಷಣವನ್ನು ಮುಕ್ತಾಯಗೊಳಿಸುತ್ತಿದ್ದಂತೆ ಮತ್ತೊಂದು ರ್ಯಾಲಿಯಲ್ಲಿ, ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ವೇದಿಕೆಯ ಮುಂಭಾಗದಲ್ಲಿ ತಮ್ಮೊಂದಿಗೆ ಸೇರಲು ಆಹ್ವಾನಿಸಿದರು. ಆಕೆಯ ಭುಜದ ಮೇಲೆ ಕೈಯಿಟ್ಟು ಪ್ರೀತಿಯಿಂದ ಆಕೆಯ ಮುಖವನ್ನು ಮುಟ್ಟಿ, ರಾಯ್ ಬರೇಲಿ ಪ್ರಚಾರಕ್ಕಾಗಿ ಆಕೆಯ ಸಮರ್ಪಣೆಗಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.

“ನಾನು ಚುನಾವಣೆಗಾಗಿ ದೇಶಾದ್ಯಂತ ಪ್ರವಾಸ ಮಾಡುತ್ತಿದ್ದೇನೆ ಮತ್ತು ನನ್ನ ಸಹೋದರಿ ಇಲ್ಲಿ ತನ್ನ ಸಮಯವನ್ನು ವಿನಿಯೋಗಿಸುತ್ತಿದ್ದಾಳೆ. ಇದಕ್ಕಾಗಿ ಆಕೆಗೆ ದೊಡ್ಡ ಧನ್ಯವಾದಗಳು” ಎಂದು ಅವರು ಹೇಳಿದರು.

ಯಾವಾಗ ಮದುವೆಯಾಗುತ್ತೀರಿ ಎಂದು ಗುಂಪಿನಲ್ಲಿದ್ದವರು ಕೇಳಿದ ಪ್ರಶ್ನೆಯತ್ತ ಗಮನ ಹರಿಸಿದ ರಾಹುಲ್, ಸ್ವಲ್ಪ ಸಮಯದ ನಂತರ, “ಶೀಘ್ರದಲ್ಲೇ ಅದನ್ನು ಪರಿಹರಿಸಲಾಗುವುದು” ಎಂದು ಸಭಿಕರಿಗೆ ಭರವಸೆ ನೀಡಿದರು. “ಅಬ್ ಜಲ್ದಿ ಕರ್ನಿ ಪಡೆಗಿ” ಎಂದು ಹಿಂದಿಯಲ್ಲಿ ಹೇಳಿದರು.

ಇದನ್ನೂ ಓದಿ; ಅದಾನಿ-ಅಂಬಾನಿ ಟೆಂಪೋದಲ್ಲಿ ಹಣ ಕಳುಹಿಸಿದ್ದರೆ ತನಿಖೆಗೆ ಆದೇಶಿಸಿ: ಪ್ರಧಾನಿಗೆ ಖರ್ಗೆ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...