Homeಮುಖಪುಟರಾಯ್ ಬರೇಲಿಯನ್ನು ನನ್ನ ಹೊಸ ಕರ್ಮಭೂಮಿಯನ್ನಾಗಿ ಸ್ವೀಕರಿಸಿದ್ದೇನೆ: ರಾಹುಲ್ ಗಾಂಧಿ

ರಾಯ್ ಬರೇಲಿಯನ್ನು ನನ್ನ ಹೊಸ ಕರ್ಮಭೂಮಿಯನ್ನಾಗಿ ಸ್ವೀಕರಿಸಿದ್ದೇನೆ: ರಾಹುಲ್ ಗಾಂಧಿ

- Advertisement -
- Advertisement -

“ರಾಯ್ ಬರೇಲಿಯನ್ನು ನನ್ನ ಹೊಸ ಕರ್ಮಭೂಮಿಯನ್ನಾಗಿ ಸ್ವೀಕರಿಸಿದ್ದೇನೆ. ಏಕೆಂದರೆ, ಅದು ನನ್ನ ಇಬ್ಬರು ತಾಯಂದಿರ ಕೆಲಸದ ಸ್ಥಳವಾಗಿದೆ” ಎಂದು ನಾಮಪತ್ರ ಸಲ್ಲಿಸಿದ ನಂತರ ನಡೆದ ಮೊದಲ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದರು.

ಸೋಮವಾರ ಮಹಾರಾಜಗಂಜ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ‘ನನಗೆ ಇಬ್ಬರು ತಾಯಂದಿರು, ನನ್ನನ್ನು ರಕ್ಷಿಸಿದ ಸೋನಿಯಾ ಗಾಂಧಿ ಮತ್ತು ಇಂದಿರಾ ಗಾಂಧಿ, ರಾಯ್ ಬರೇಲಿ ನನ್ನ ಇಬ್ಬರು ತಾಯಂದಿರ ಕೆಲಸದ ಸ್ಥಳವಾಗಿದೆ. ಅದಕ್ಕಾಗಿಯೇ ನಾನು ಚುನಾವಣೆಗೆ ಸ್ಪರ್ಧಿಸಲು ಇಲ್ಲಿಗೆ ಬಂದಿದ್ದೇನೆ” ಎಂದರು.

“ರಾಯ್‌ಬರೇಲಿಯೊಂದಿಗೆ ನಮ್ಮ ಕುಟುಂಬಕ್ಕೆ 100 ವರ್ಷಗಳಷ್ಟು ಹಳೆಯ ಸಂಬಂಧವಿದೆ, ಈ ಚುನಾವಣೆಯು ಇತಿಹಾಸದಲ್ಲಿ ಸಂವಿಧಾನವನ್ನು ರಕ್ಷಿಸಲು ಹೋರಾಡುತ್ತಿರುವ ಮೊದಲ ಹೋರಾಟವಾಗಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂವಿಧಾನವನ್ನು ಹರಿದು ಹಾಕುತ್ತದೆ, ಬಡವರ ಎಲ್ಲಾ ಮಾರ್ಗಗಳನ್ನು ಮುಚ್ಚುತ್ತದೆ. ಅವರು ಅದಾನಿ ಮತ್ತು ಅಂಬಾನಿಗಾಗಿ ಸರ್ಕಾರ ರಚಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಟ್ಟುಕೊಂಡ ರಾಹುಲ್ ಗಾಂಧಿ, ‘”ಹತ್ತು ವರ್ಷಗಳಲ್ಲಿ ನರೇಂದ್ರ ಮೋದಿ ಅವರು 22 ಕೋಟ್ಯಾಧಿಪತಿಗಳಿಗೆ 16 ಲಕ್ಷ ಕೋಟಿ ರೂ.ಗಳನ್ನು ನೀಡಿದ್ದಾರೆ. ಈ ಹಣ 70 ಕೋಟಿ ಜನರ ಆದಾಯಕ್ಕೆ ಸಮಾನವಾಗಿದೆ. ಈ ಹೋರಾಟ ಬಡವರ ರಕ್ಷಣೆಗಾಗಿ ಸರ್ಕಾರ ರಚನೆಯಾದರೆ ಪ್ರತಿ ತಿಂಗಳ ಮೊದಲನೇ ತಾರೀಖಿನಂದು ಪ್ರತಿಯೊಬ್ಬ ಮಹಿಳೆಯ ಖಾತೆಗೆ 8500 ರೂಪಾಯಿಗಳನ್ನು ಜಮಾ ಮಾಡಲಾಗುವುದು” ಎಂದರು.

“ಪ್ರಧಾನಿ ಯುವಕರನ್ನು ನಿರುದ್ಯೋಗಿಗಳನ್ನಾಗಿ ಮಾಡಿದ್ದಾರೆ.ಇಂಡಿಯಾ ಅಲಯನ್ಸ್ ಸರ್ಕಾರ ರಚನೆಯಾದರೆ ಪ್ರತಿಯೊಬ್ಬ ಯುವಕನಿಗೆ ಶಿಷ್ಯವೇತನ ಸಿಗುತ್ತದೆ. ಈ ಮೂಲಕ ಮೊದಲ ಉದ್ಯೋಗ ಗ್ಯಾರಂಟಿ’ ಎಂದು ರಾಹುಲ್ ಹೇಳಿದರು.

ಹೊಸ ಸರ್ಕಾರ ಗುತ್ತಿಗೆದಾರ ವ್ಯವಸ್ಥೆಯನ್ನು ಕೊನೆಗೊಳಿಸಲಿದೆ ಎಂದು ಅವರು ಘೋಷಿಸಿದರು. ಸಾರ್ವಜನಿಕ ವಲಯವೇ ಆಗಿರಲಿ ಅಥವಾ ಸರ್ಕಾರಿ ಇಲಾಖೆಗಳೇ ಆಗಿರಲಿ, ಸರ್ಕಾರ ರಚನೆಯಾದ ಕೂಡಲೇ ಗುತ್ತಿಗೆದಾರರ ವ್ಯವಸ್ಥೆ ಕೊನೆಗೊಳ್ಳಲಿದೆ ಎಂದರು.

ಈ ವೇಳೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸಾರ್ವಜನಿಕ ಸಭೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇಬ್ಬರೂ ಒಟ್ಟಿಗೆ ವೇದಿಕೆಯಲ್ಲಿದ್ದದ್ದು ನೆರೆದಿದ್ದವರ ಉತ್ಸಾಹವನ್ನು ಹೆಚ್ಚಿಸಿತು.

ಅವರು ತಮ್ಮ ಭಾಷಣವನ್ನು ಮುಕ್ತಾಯಗೊಳಿಸುತ್ತಿದ್ದಂತೆ ಮತ್ತೊಂದು ರ್ಯಾಲಿಯಲ್ಲಿ, ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ವೇದಿಕೆಯ ಮುಂಭಾಗದಲ್ಲಿ ತಮ್ಮೊಂದಿಗೆ ಸೇರಲು ಆಹ್ವಾನಿಸಿದರು. ಆಕೆಯ ಭುಜದ ಮೇಲೆ ಕೈಯಿಟ್ಟು ಪ್ರೀತಿಯಿಂದ ಆಕೆಯ ಮುಖವನ್ನು ಮುಟ್ಟಿ, ರಾಯ್ ಬರೇಲಿ ಪ್ರಚಾರಕ್ಕಾಗಿ ಆಕೆಯ ಸಮರ್ಪಣೆಗಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.

“ನಾನು ಚುನಾವಣೆಗಾಗಿ ದೇಶಾದ್ಯಂತ ಪ್ರವಾಸ ಮಾಡುತ್ತಿದ್ದೇನೆ ಮತ್ತು ನನ್ನ ಸಹೋದರಿ ಇಲ್ಲಿ ತನ್ನ ಸಮಯವನ್ನು ವಿನಿಯೋಗಿಸುತ್ತಿದ್ದಾಳೆ. ಇದಕ್ಕಾಗಿ ಆಕೆಗೆ ದೊಡ್ಡ ಧನ್ಯವಾದಗಳು” ಎಂದು ಅವರು ಹೇಳಿದರು.

ಯಾವಾಗ ಮದುವೆಯಾಗುತ್ತೀರಿ ಎಂದು ಗುಂಪಿನಲ್ಲಿದ್ದವರು ಕೇಳಿದ ಪ್ರಶ್ನೆಯತ್ತ ಗಮನ ಹರಿಸಿದ ರಾಹುಲ್, ಸ್ವಲ್ಪ ಸಮಯದ ನಂತರ, “ಶೀಘ್ರದಲ್ಲೇ ಅದನ್ನು ಪರಿಹರಿಸಲಾಗುವುದು” ಎಂದು ಸಭಿಕರಿಗೆ ಭರವಸೆ ನೀಡಿದರು. “ಅಬ್ ಜಲ್ದಿ ಕರ್ನಿ ಪಡೆಗಿ” ಎಂದು ಹಿಂದಿಯಲ್ಲಿ ಹೇಳಿದರು.

ಇದನ್ನೂ ಓದಿ; ಅದಾನಿ-ಅಂಬಾನಿ ಟೆಂಪೋದಲ್ಲಿ ಹಣ ಕಳುಹಿಸಿದ್ದರೆ ತನಿಖೆಗೆ ಆದೇಶಿಸಿ: ಪ್ರಧಾನಿಗೆ ಖರ್ಗೆ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...