Homeಮುಖಪುಟರಾಯ್ ಬರೇಲಿಯನ್ನು ನನ್ನ ಹೊಸ ಕರ್ಮಭೂಮಿಯನ್ನಾಗಿ ಸ್ವೀಕರಿಸಿದ್ದೇನೆ: ರಾಹುಲ್ ಗಾಂಧಿ

ರಾಯ್ ಬರೇಲಿಯನ್ನು ನನ್ನ ಹೊಸ ಕರ್ಮಭೂಮಿಯನ್ನಾಗಿ ಸ್ವೀಕರಿಸಿದ್ದೇನೆ: ರಾಹುಲ್ ಗಾಂಧಿ

- Advertisement -
- Advertisement -

“ರಾಯ್ ಬರೇಲಿಯನ್ನು ನನ್ನ ಹೊಸ ಕರ್ಮಭೂಮಿಯನ್ನಾಗಿ ಸ್ವೀಕರಿಸಿದ್ದೇನೆ. ಏಕೆಂದರೆ, ಅದು ನನ್ನ ಇಬ್ಬರು ತಾಯಂದಿರ ಕೆಲಸದ ಸ್ಥಳವಾಗಿದೆ” ಎಂದು ನಾಮಪತ್ರ ಸಲ್ಲಿಸಿದ ನಂತರ ನಡೆದ ಮೊದಲ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದರು.

ಸೋಮವಾರ ಮಹಾರಾಜಗಂಜ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ‘ನನಗೆ ಇಬ್ಬರು ತಾಯಂದಿರು, ನನ್ನನ್ನು ರಕ್ಷಿಸಿದ ಸೋನಿಯಾ ಗಾಂಧಿ ಮತ್ತು ಇಂದಿರಾ ಗಾಂಧಿ, ರಾಯ್ ಬರೇಲಿ ನನ್ನ ಇಬ್ಬರು ತಾಯಂದಿರ ಕೆಲಸದ ಸ್ಥಳವಾಗಿದೆ. ಅದಕ್ಕಾಗಿಯೇ ನಾನು ಚುನಾವಣೆಗೆ ಸ್ಪರ್ಧಿಸಲು ಇಲ್ಲಿಗೆ ಬಂದಿದ್ದೇನೆ” ಎಂದರು.

“ರಾಯ್‌ಬರೇಲಿಯೊಂದಿಗೆ ನಮ್ಮ ಕುಟುಂಬಕ್ಕೆ 100 ವರ್ಷಗಳಷ್ಟು ಹಳೆಯ ಸಂಬಂಧವಿದೆ, ಈ ಚುನಾವಣೆಯು ಇತಿಹಾಸದಲ್ಲಿ ಸಂವಿಧಾನವನ್ನು ರಕ್ಷಿಸಲು ಹೋರಾಡುತ್ತಿರುವ ಮೊದಲ ಹೋರಾಟವಾಗಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂವಿಧಾನವನ್ನು ಹರಿದು ಹಾಕುತ್ತದೆ, ಬಡವರ ಎಲ್ಲಾ ಮಾರ್ಗಗಳನ್ನು ಮುಚ್ಚುತ್ತದೆ. ಅವರು ಅದಾನಿ ಮತ್ತು ಅಂಬಾನಿಗಾಗಿ ಸರ್ಕಾರ ರಚಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಟ್ಟುಕೊಂಡ ರಾಹುಲ್ ಗಾಂಧಿ, ‘”ಹತ್ತು ವರ್ಷಗಳಲ್ಲಿ ನರೇಂದ್ರ ಮೋದಿ ಅವರು 22 ಕೋಟ್ಯಾಧಿಪತಿಗಳಿಗೆ 16 ಲಕ್ಷ ಕೋಟಿ ರೂ.ಗಳನ್ನು ನೀಡಿದ್ದಾರೆ. ಈ ಹಣ 70 ಕೋಟಿ ಜನರ ಆದಾಯಕ್ಕೆ ಸಮಾನವಾಗಿದೆ. ಈ ಹೋರಾಟ ಬಡವರ ರಕ್ಷಣೆಗಾಗಿ ಸರ್ಕಾರ ರಚನೆಯಾದರೆ ಪ್ರತಿ ತಿಂಗಳ ಮೊದಲನೇ ತಾರೀಖಿನಂದು ಪ್ರತಿಯೊಬ್ಬ ಮಹಿಳೆಯ ಖಾತೆಗೆ 8500 ರೂಪಾಯಿಗಳನ್ನು ಜಮಾ ಮಾಡಲಾಗುವುದು” ಎಂದರು.

“ಪ್ರಧಾನಿ ಯುವಕರನ್ನು ನಿರುದ್ಯೋಗಿಗಳನ್ನಾಗಿ ಮಾಡಿದ್ದಾರೆ.ಇಂಡಿಯಾ ಅಲಯನ್ಸ್ ಸರ್ಕಾರ ರಚನೆಯಾದರೆ ಪ್ರತಿಯೊಬ್ಬ ಯುವಕನಿಗೆ ಶಿಷ್ಯವೇತನ ಸಿಗುತ್ತದೆ. ಈ ಮೂಲಕ ಮೊದಲ ಉದ್ಯೋಗ ಗ್ಯಾರಂಟಿ’ ಎಂದು ರಾಹುಲ್ ಹೇಳಿದರು.

ಹೊಸ ಸರ್ಕಾರ ಗುತ್ತಿಗೆದಾರ ವ್ಯವಸ್ಥೆಯನ್ನು ಕೊನೆಗೊಳಿಸಲಿದೆ ಎಂದು ಅವರು ಘೋಷಿಸಿದರು. ಸಾರ್ವಜನಿಕ ವಲಯವೇ ಆಗಿರಲಿ ಅಥವಾ ಸರ್ಕಾರಿ ಇಲಾಖೆಗಳೇ ಆಗಿರಲಿ, ಸರ್ಕಾರ ರಚನೆಯಾದ ಕೂಡಲೇ ಗುತ್ತಿಗೆದಾರರ ವ್ಯವಸ್ಥೆ ಕೊನೆಗೊಳ್ಳಲಿದೆ ಎಂದರು.

ಈ ವೇಳೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸಾರ್ವಜನಿಕ ಸಭೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇಬ್ಬರೂ ಒಟ್ಟಿಗೆ ವೇದಿಕೆಯಲ್ಲಿದ್ದದ್ದು ನೆರೆದಿದ್ದವರ ಉತ್ಸಾಹವನ್ನು ಹೆಚ್ಚಿಸಿತು.

ಅವರು ತಮ್ಮ ಭಾಷಣವನ್ನು ಮುಕ್ತಾಯಗೊಳಿಸುತ್ತಿದ್ದಂತೆ ಮತ್ತೊಂದು ರ್ಯಾಲಿಯಲ್ಲಿ, ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ವೇದಿಕೆಯ ಮುಂಭಾಗದಲ್ಲಿ ತಮ್ಮೊಂದಿಗೆ ಸೇರಲು ಆಹ್ವಾನಿಸಿದರು. ಆಕೆಯ ಭುಜದ ಮೇಲೆ ಕೈಯಿಟ್ಟು ಪ್ರೀತಿಯಿಂದ ಆಕೆಯ ಮುಖವನ್ನು ಮುಟ್ಟಿ, ರಾಯ್ ಬರೇಲಿ ಪ್ರಚಾರಕ್ಕಾಗಿ ಆಕೆಯ ಸಮರ್ಪಣೆಗಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.

“ನಾನು ಚುನಾವಣೆಗಾಗಿ ದೇಶಾದ್ಯಂತ ಪ್ರವಾಸ ಮಾಡುತ್ತಿದ್ದೇನೆ ಮತ್ತು ನನ್ನ ಸಹೋದರಿ ಇಲ್ಲಿ ತನ್ನ ಸಮಯವನ್ನು ವಿನಿಯೋಗಿಸುತ್ತಿದ್ದಾಳೆ. ಇದಕ್ಕಾಗಿ ಆಕೆಗೆ ದೊಡ್ಡ ಧನ್ಯವಾದಗಳು” ಎಂದು ಅವರು ಹೇಳಿದರು.

ಯಾವಾಗ ಮದುವೆಯಾಗುತ್ತೀರಿ ಎಂದು ಗುಂಪಿನಲ್ಲಿದ್ದವರು ಕೇಳಿದ ಪ್ರಶ್ನೆಯತ್ತ ಗಮನ ಹರಿಸಿದ ರಾಹುಲ್, ಸ್ವಲ್ಪ ಸಮಯದ ನಂತರ, “ಶೀಘ್ರದಲ್ಲೇ ಅದನ್ನು ಪರಿಹರಿಸಲಾಗುವುದು” ಎಂದು ಸಭಿಕರಿಗೆ ಭರವಸೆ ನೀಡಿದರು. “ಅಬ್ ಜಲ್ದಿ ಕರ್ನಿ ಪಡೆಗಿ” ಎಂದು ಹಿಂದಿಯಲ್ಲಿ ಹೇಳಿದರು.

ಇದನ್ನೂ ಓದಿ; ಅದಾನಿ-ಅಂಬಾನಿ ಟೆಂಪೋದಲ್ಲಿ ಹಣ ಕಳುಹಿಸಿದ್ದರೆ ತನಿಖೆಗೆ ಆದೇಶಿಸಿ: ಪ್ರಧಾನಿಗೆ ಖರ್ಗೆ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...