Homeದಲಿತ್ ಫೈಲ್ಸ್ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

- Advertisement -
- Advertisement -

2025 ರ ಅಕ್ಟೋಬರ್ 1 ರಂದು ರಾಯ್ ಬರೇಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಗುಂಪೊಂದು ಫತೇಪುರದ ದಲಿತ ವ್ಯಕ್ತಿ ಹರಿಓಂ ವಾಲ್ಮೀಕಿಯನ್ನು ಥಳಿಸಿ ಕ್ರೂರವಾಗಿ ಕೊಂದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿ ಫತೇಪುರದಲ್ಲಿ ಬಲಿಪಶುವಿನ ಕುಟುಂಬವನ್ನು ಭೇಟಿ ಮಾಡಿ, ರಾಜ್ಯ ಸರ್ಕಾರವು ಆರೋಪಿಗಳನ್ನು ರಕ್ಷಿಸುತ್ತಿದೆ, ದೃಢ ಕ್ರಮ ಕೈಗೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿದರು. ಈ ಘಟನೆಯು ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದ್ದು, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಹರಿಓಂ ವಾಲ್ಮೀಕಿ ರಾಯ್ ಬರೇಲಿಯ ಉಂಚಹಾರ್ ಪ್ರದೇಶದಲ್ಲಿ ತನ್ನ ಅತ್ತೆ-ಮಾವಂದಿರನ್ನು ಭೇಟಿ ಮಾಡಲು ಹೋಗಿದ್ದಾಗ, ಅವರನ್ನು ಕಳ್ಳನೆಂದು ತಪ್ಪಾಗಿ ಭಾವಿಸಿ ಸ್ಥಳೀಯ ಗುಂಪೊಂದು ಹಲ್ಲೆ ನಡೆಸಿತು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಹರಿಓಂ ಹಲ್ಲೆಯ ಸಮಯದಲ್ಲಿ ರಾಹುಲ್ ಗಾಂಧಿಯ ಹೆಸರನ್ನು ಪದೇ ಪದೇ ಉಲ್ಲೇಖಿಸಿ, ದಾಳಿಕೋರರಿಂದ ಉಳಿಸುವಂತೆ ಬೇಡಿಕೊಂಡರು. ಇದಕ್ಕೆ ಪ್ರತಿಕ್ರಿಯೆಯಾಗಿ, ಗುಂಪು ಇದು ಬಾಬಾ (ಸಿಎಂ ಯೋಗಿ) ನಿಯಮ, ರಾಹುಲ್ ಗಾಂಧಿಯ ನಿಯಮವಲ್ಲ ಎಂದು ಹೇಳಿತು.

ಹಲ್ಲೆಯ ನಂತರ ಪೊಲೀಸರು ಸ್ಥಳಕ್ಕೆ ಬಂದರಾದರೂ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲು ವಿಫಲರಾದರು ಎಂದು ಆರೋಪಿಸಲಾಗಿದೆ. ಇದು ಅವನ ಸಾವಿಗೆ ಕಾರಣವಾಯಿತು. ನಂತರ, ಹರಿಓಂ ಕಳ್ಳ ಎಂದು ಹೇಳಲಾಯಿತು, ಮೃತನ ಹೆಂಡತಿ ದೇಹವನ್ನು ಗುರುತಿಸಿ ಗಂಡನ ಮುಗ್ಧನೆಂದು ಹೇಳಿದರು.

ಘಟನೆಯ ನಂತರ, ರಾಯ್ ಬರೇಲಿ ಪೊಲೀಸರ ನಿರ್ಲಕ್ಷ್ಯಕ್ಕಾಗಿ ಕೆಲವು ಅಧಿಕಾರಿಗಳನ್ನು ಅಮಾನತುಗೊಳಿಸಲಾಯಿತು. ಆದದೆ, ಇಲ್ಲಿಯವರೆಗೆ ಕೇವಲ 17 ಆರೋಪಿಗಳನ್ನು ಮಾತ್ರ ಬಂಧಿಸಲಾಗಿದೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ. ಹಲ್ಲೆಕೋರರಲ್ಲಿ ಹಲವರು ಬಿಜೆಪಿಗೆ ಸಂಬಂಧಿಸಿದವರು ಎಂದು ಹೇಳಲಾಗುತ್ತಿದೆ. ಕೆಲವರು ತಲೆಮರೆಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಬಲಿಪಶುವಿನ ಕುಟುಂಬದ ಪ್ರಕಾರ, ಇದು ರಾಜಕೀಯ ಹಸ್ತಕ್ಷೇಪ ಮತ್ತು ತಪ್ಪಿತಸ್ಥರನ್ನು ರಕ್ಷಿಸುವ ಪ್ರಯತ್ನವನ್ನು ಎಂದು ಹೇಳಿದ್ದಾರೆ.

ದುಃಖಿತ ಕುಟುಂಬವನ್ನು ಭೇಟಿಯಾದ ರಾಹುಲ್

ಪ್ರಕರಣದ ವಿವರಗಳನ್ನು ತಿಳಿದ ನಂತರ, ರಾಹುಲ್ ಗಾಂಧಿ ಅಕ್ಟೋಬರ್ 17 ರಂದು ದೆಹಲಿಯಿಂದ ಕಾನ್ಪುರಕ್ಕೆ ವಿಮಾನದ ಮೂಲಕ ತೆರಳಿ, ನಂತರ ರಸ್ತೆ ಮೂಲಕ ಫತೇಪುರಕ್ಕೆ ಪ್ರಯಾಣ ಬೆಳೆಸಿದರು. ಆರಂಭದಲ್ಲಿ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಭಾವ್ಯ ಬೆದರಿಕೆಗಳನ್ನು ಉಲ್ಲೇಖಿಸಿ ಸ್ಥಳೀಯ ಆಡಳಿತವು ಅವರನ್ನು ತಡೆಯಲು ಪ್ರಯತ್ನಿಸಿತು. ಆದರೆ, ರಾಹುಲ್ ಗಾಂಧಿ ಬಲಿಪಶುವಿನ ಕುಟುಂಬವನ್ನು ಭೇಟಿ ಮಾಡದೆ ಹಿಂತಿರುಗಲು ನಿರಾಕರಿಸಿದರು. ಅಂತಿಮವಾಗಿ, ಅವರಿಗೆ ಮುಂದುವರಿಯಲು ಅವಕಾಶ ನೀಡಲಾಯಿತು.

ಭೇಟಿಯ ಸಮಯದಲ್ಲಿ, ಹರಿಓಂ ಅವರ ತಂದೆ ರಾಹುಲ್ ಗಾಂಧಿಯವರೊಂದಿಗೆ ಮಾತನಾಡುವಾಗ ಕಣ್ಣೀರು ಹಾಕಿದರು ಎಂದು ವರದಿಯಾಗಿದೆ. ಅವರ ತಾಯಿ ಕೂಡ ಅಳುತ್ತಿದ್ದರು. ರಾಹುಲ್ ಗಾಂಧಿ ಅವರು ಪೋಷಕರಿಗೆ ಸಾಂತ್ವನದ ಮಾತುಗಳನ್ನು ಹೇಳಿದರು. ಕಾಂಗ್ರೆಸ್ ಪಕ್ಷವು ಅವರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಬೆಂಬಲ ನೀಡುತ್ತದೆ ಎಂದು ಭರವಸೆ ನೀಡಿದರು. ಹರಿಓಂ ಅವರ ಸಹೋದರಿ ಕುಸುಮ್, ಸರ್ಕಾರ ಕುಟುಂಬವನ್ನು ತಮ್ಮ ಮನೆಗೆ ಸೀಮಿತಗೊಳಿಸಿದೆ, ಹೊರಗಿನವರೊಂದಿಗೆ ಮಾತನಾಡುವುದನ್ನು ನಿರ್ಬಂಧಿಸಿದೆ ಎಂದು ಆರೋಪಿಸಿದರು, ಇದು ಕಾಂಗ್ರೆಸ್ ನಾಯಕರನ್ನು ಮತ್ತಷ್ಟು ಕೆರಳಿಸಿತು.

ಅಪರಾಧಿಗಳನ್ನು ರಕ್ಷಿಸುವುದನ್ನು ನಿಲ್ಲಿಸಿ: ರಾಹುಲ್

ಕುಟುಂಬದ ಭೇಟಿಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಘಟನೆಯನ್ನು ಬಲವಾದ ಪದಗಳಲ್ಲಿ ಖಂಡಿಸಿದರು. ಹರಿಓಂ ಅಪರಾಧಿಯಲ್ಲ, ಅಪರಾಧಿಗೆ ಬಲಿಯಾಗಿದ್ದಾನೆ. ಹೊಣೆಗಾರರನ್ನು ರಕ್ಷಿಸುವುದನ್ನು ನಿಲ್ಲಿಸುವಂತೆ ನಾನು ಸಿಎಂ ಯೋಗಿ ಅವರನ್ನು ಒತ್ತಾಯಿಸುತ್ತೇನೆ. ಅಪರಾಧಿಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಿ. ದೇಶಾದ್ಯಂತ ದಲಿತರು ಗುಂಪು ಹತ್ಯೆಯಿಂದ ಹಿಡಿದು ಅತ್ಯಾಚಾರದವರೆಗೆ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಬಲಿಪಶುಗಳ ಜೊತೆ ನಿಂತು ನ್ಯಾಯಕ್ಕಾಗಿ ಹೋರಾಡುವುದನ್ನು ಮುಂದುವರಿಸುತ್ತದೆ” ಎಂದರು.

“ಕುಟುಂಬವು ನನ್ನನ್ನು ಭೇಟಿಯಾಗಿದೆಯೋ ಇಲ್ಲವೋ ಎಂಬುದು ಸಮಸ್ಯೆಯಲ್ಲ, ಸಮಸ್ಯೆ ಅನ್ಯಾಯ. ಕುಟುಂಬಕ್ಕೆ ಬೆದರಿಕೆ ಹಾಕಲಾಗಿದೆ, ಮೌನಗೊಳಿಸಲಾಗಿದೆ ಮತ್ತು ಪ್ರತ್ಯೇಕಿಸಲಾಗಿದೆ. ವೈದ್ಯಕೀಯ ಚಿಕಿತ್ಸೆ ಅಗತ್ಯವಿರುವ ಹರಿಓಂ ಅವರ ಸಹೋದರಿ ಕೂಡ ಆಡಳಿತಾತ್ಮಕ ಒತ್ತಡದಿಂದಾಗಿ ಮನೆಯಿಂದ ಹೊರಗೆ ಬರಲು ಸಾಧ್ಯವಾಗುತ್ತಿಲ್ಲ” ಎಂದು ಆಕ್ರೋಶ ಹೊರಹಾಕಿದರು.

ರಾಹುಲ್ ಗಾಂಧಿಯವರ ಭೇಟಿ ರಾಜ್ಯದಲ್ಲಿ ಹೊಸ ರಾಜಕೀಯ ಬಿಸಿಯನ್ನು ಹುಟ್ಟುಹಾಕಿದೆ, ಬಿಜೆಪಿ ದಲಿತ ವಿರೋಧಿ ಮತ್ತು ಅಪರಾಧಿಗಳನ್ನು ರಕ್ಷಿಸುವಲ್ಲಿ ಭಾಗಿಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಬಲಿಪಶುವಿನ ಕುಟುಂಬವನ್ನು ಬೆದರಿಸುವ ಆರೋಪದ ಮೇಲೆ ಈಗ ಪರಿಶೀಲನೆಗೆ ಒಳಪಟ್ಟಿರುವ ಸ್ಥಳೀಯ ಆಡಳಿತವನ್ನೂ ಈ ಭೇಟಿ ಬಹಿರಂಗಪಡಿಸಿದೆ.

ಹರಿಓಂ ವಾಲ್ಮೀಕಿಗೆ ನ್ಯಾಯ ಮತ್ತು ಯೋಗಿ ಆದಿತ್ಯನಾಥ್ ಸರ್ಕಾರದಿಂದ ಉತ್ತರದಾಯಿತ್ವವನ್ನು ಒತ್ತಾಯಿಸಿ ಸಂಸತ್ತಿನ ಒಳಗೆ ಮತ್ತು ಹೊರಗೆ ಈ ವಿಷಯವನ್ನು ಪ್ರಸ್ತಾಪಿಸುವುದನ್ನು ಮುಂದುವರಿಸುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ.

ಉತ್ತರ ಪ್ರದೇಶ| ದಲಿತ ಮಹಿಳಾ ಉದ್ಯೋಗಿಗೆ ಕಿರುಕುಳ; ಐಟಿಐ ಕಾಲೇಜು ಪ್ರಾಂಶುಪಾಲರು-ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...