Homeದಲಿತ್ ಫೈಲ್ಸ್ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

- Advertisement -
- Advertisement -

2025 ರ ಅಕ್ಟೋಬರ್ 1 ರಂದು ರಾಯ್ ಬರೇಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಗುಂಪೊಂದು ಫತೇಪುರದ ದಲಿತ ವ್ಯಕ್ತಿ ಹರಿಓಂ ವಾಲ್ಮೀಕಿಯನ್ನು ಥಳಿಸಿ ಕ್ರೂರವಾಗಿ ಕೊಂದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿ ಫತೇಪುರದಲ್ಲಿ ಬಲಿಪಶುವಿನ ಕುಟುಂಬವನ್ನು ಭೇಟಿ ಮಾಡಿ, ರಾಜ್ಯ ಸರ್ಕಾರವು ಆರೋಪಿಗಳನ್ನು ರಕ್ಷಿಸುತ್ತಿದೆ, ದೃಢ ಕ್ರಮ ಕೈಗೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿದರು. ಈ ಘಟನೆಯು ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದ್ದು, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಹರಿಓಂ ವಾಲ್ಮೀಕಿ ರಾಯ್ ಬರೇಲಿಯ ಉಂಚಹಾರ್ ಪ್ರದೇಶದಲ್ಲಿ ತನ್ನ ಅತ್ತೆ-ಮಾವಂದಿರನ್ನು ಭೇಟಿ ಮಾಡಲು ಹೋಗಿದ್ದಾಗ, ಅವರನ್ನು ಕಳ್ಳನೆಂದು ತಪ್ಪಾಗಿ ಭಾವಿಸಿ ಸ್ಥಳೀಯ ಗುಂಪೊಂದು ಹಲ್ಲೆ ನಡೆಸಿತು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಹರಿಓಂ ಹಲ್ಲೆಯ ಸಮಯದಲ್ಲಿ ರಾಹುಲ್ ಗಾಂಧಿಯ ಹೆಸರನ್ನು ಪದೇ ಪದೇ ಉಲ್ಲೇಖಿಸಿ, ದಾಳಿಕೋರರಿಂದ ಉಳಿಸುವಂತೆ ಬೇಡಿಕೊಂಡರು. ಇದಕ್ಕೆ ಪ್ರತಿಕ್ರಿಯೆಯಾಗಿ, ಗುಂಪು ಇದು ಬಾಬಾ (ಸಿಎಂ ಯೋಗಿ) ನಿಯಮ, ರಾಹುಲ್ ಗಾಂಧಿಯ ನಿಯಮವಲ್ಲ ಎಂದು ಹೇಳಿತು.

ಹಲ್ಲೆಯ ನಂತರ ಪೊಲೀಸರು ಸ್ಥಳಕ್ಕೆ ಬಂದರಾದರೂ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲು ವಿಫಲರಾದರು ಎಂದು ಆರೋಪಿಸಲಾಗಿದೆ. ಇದು ಅವನ ಸಾವಿಗೆ ಕಾರಣವಾಯಿತು. ನಂತರ, ಹರಿಓಂ ಕಳ್ಳ ಎಂದು ಹೇಳಲಾಯಿತು, ಮೃತನ ಹೆಂಡತಿ ದೇಹವನ್ನು ಗುರುತಿಸಿ ಗಂಡನ ಮುಗ್ಧನೆಂದು ಹೇಳಿದರು.

ಘಟನೆಯ ನಂತರ, ರಾಯ್ ಬರೇಲಿ ಪೊಲೀಸರ ನಿರ್ಲಕ್ಷ್ಯಕ್ಕಾಗಿ ಕೆಲವು ಅಧಿಕಾರಿಗಳನ್ನು ಅಮಾನತುಗೊಳಿಸಲಾಯಿತು. ಆದದೆ, ಇಲ್ಲಿಯವರೆಗೆ ಕೇವಲ 17 ಆರೋಪಿಗಳನ್ನು ಮಾತ್ರ ಬಂಧಿಸಲಾಗಿದೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ. ಹಲ್ಲೆಕೋರರಲ್ಲಿ ಹಲವರು ಬಿಜೆಪಿಗೆ ಸಂಬಂಧಿಸಿದವರು ಎಂದು ಹೇಳಲಾಗುತ್ತಿದೆ. ಕೆಲವರು ತಲೆಮರೆಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಬಲಿಪಶುವಿನ ಕುಟುಂಬದ ಪ್ರಕಾರ, ಇದು ರಾಜಕೀಯ ಹಸ್ತಕ್ಷೇಪ ಮತ್ತು ತಪ್ಪಿತಸ್ಥರನ್ನು ರಕ್ಷಿಸುವ ಪ್ರಯತ್ನವನ್ನು ಎಂದು ಹೇಳಿದ್ದಾರೆ.

ದುಃಖಿತ ಕುಟುಂಬವನ್ನು ಭೇಟಿಯಾದ ರಾಹುಲ್

ಪ್ರಕರಣದ ವಿವರಗಳನ್ನು ತಿಳಿದ ನಂತರ, ರಾಹುಲ್ ಗಾಂಧಿ ಅಕ್ಟೋಬರ್ 17 ರಂದು ದೆಹಲಿಯಿಂದ ಕಾನ್ಪುರಕ್ಕೆ ವಿಮಾನದ ಮೂಲಕ ತೆರಳಿ, ನಂತರ ರಸ್ತೆ ಮೂಲಕ ಫತೇಪುರಕ್ಕೆ ಪ್ರಯಾಣ ಬೆಳೆಸಿದರು. ಆರಂಭದಲ್ಲಿ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಭಾವ್ಯ ಬೆದರಿಕೆಗಳನ್ನು ಉಲ್ಲೇಖಿಸಿ ಸ್ಥಳೀಯ ಆಡಳಿತವು ಅವರನ್ನು ತಡೆಯಲು ಪ್ರಯತ್ನಿಸಿತು. ಆದರೆ, ರಾಹುಲ್ ಗಾಂಧಿ ಬಲಿಪಶುವಿನ ಕುಟುಂಬವನ್ನು ಭೇಟಿ ಮಾಡದೆ ಹಿಂತಿರುಗಲು ನಿರಾಕರಿಸಿದರು. ಅಂತಿಮವಾಗಿ, ಅವರಿಗೆ ಮುಂದುವರಿಯಲು ಅವಕಾಶ ನೀಡಲಾಯಿತು.

ಭೇಟಿಯ ಸಮಯದಲ್ಲಿ, ಹರಿಓಂ ಅವರ ತಂದೆ ರಾಹುಲ್ ಗಾಂಧಿಯವರೊಂದಿಗೆ ಮಾತನಾಡುವಾಗ ಕಣ್ಣೀರು ಹಾಕಿದರು ಎಂದು ವರದಿಯಾಗಿದೆ. ಅವರ ತಾಯಿ ಕೂಡ ಅಳುತ್ತಿದ್ದರು. ರಾಹುಲ್ ಗಾಂಧಿ ಅವರು ಪೋಷಕರಿಗೆ ಸಾಂತ್ವನದ ಮಾತುಗಳನ್ನು ಹೇಳಿದರು. ಕಾಂಗ್ರೆಸ್ ಪಕ್ಷವು ಅವರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಬೆಂಬಲ ನೀಡುತ್ತದೆ ಎಂದು ಭರವಸೆ ನೀಡಿದರು. ಹರಿಓಂ ಅವರ ಸಹೋದರಿ ಕುಸುಮ್, ಸರ್ಕಾರ ಕುಟುಂಬವನ್ನು ತಮ್ಮ ಮನೆಗೆ ಸೀಮಿತಗೊಳಿಸಿದೆ, ಹೊರಗಿನವರೊಂದಿಗೆ ಮಾತನಾಡುವುದನ್ನು ನಿರ್ಬಂಧಿಸಿದೆ ಎಂದು ಆರೋಪಿಸಿದರು, ಇದು ಕಾಂಗ್ರೆಸ್ ನಾಯಕರನ್ನು ಮತ್ತಷ್ಟು ಕೆರಳಿಸಿತು.

ಅಪರಾಧಿಗಳನ್ನು ರಕ್ಷಿಸುವುದನ್ನು ನಿಲ್ಲಿಸಿ: ರಾಹುಲ್

ಕುಟುಂಬದ ಭೇಟಿಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಘಟನೆಯನ್ನು ಬಲವಾದ ಪದಗಳಲ್ಲಿ ಖಂಡಿಸಿದರು. ಹರಿಓಂ ಅಪರಾಧಿಯಲ್ಲ, ಅಪರಾಧಿಗೆ ಬಲಿಯಾಗಿದ್ದಾನೆ. ಹೊಣೆಗಾರರನ್ನು ರಕ್ಷಿಸುವುದನ್ನು ನಿಲ್ಲಿಸುವಂತೆ ನಾನು ಸಿಎಂ ಯೋಗಿ ಅವರನ್ನು ಒತ್ತಾಯಿಸುತ್ತೇನೆ. ಅಪರಾಧಿಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಿ. ದೇಶಾದ್ಯಂತ ದಲಿತರು ಗುಂಪು ಹತ್ಯೆಯಿಂದ ಹಿಡಿದು ಅತ್ಯಾಚಾರದವರೆಗೆ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಬಲಿಪಶುಗಳ ಜೊತೆ ನಿಂತು ನ್ಯಾಯಕ್ಕಾಗಿ ಹೋರಾಡುವುದನ್ನು ಮುಂದುವರಿಸುತ್ತದೆ” ಎಂದರು.

“ಕುಟುಂಬವು ನನ್ನನ್ನು ಭೇಟಿಯಾಗಿದೆಯೋ ಇಲ್ಲವೋ ಎಂಬುದು ಸಮಸ್ಯೆಯಲ್ಲ, ಸಮಸ್ಯೆ ಅನ್ಯಾಯ. ಕುಟುಂಬಕ್ಕೆ ಬೆದರಿಕೆ ಹಾಕಲಾಗಿದೆ, ಮೌನಗೊಳಿಸಲಾಗಿದೆ ಮತ್ತು ಪ್ರತ್ಯೇಕಿಸಲಾಗಿದೆ. ವೈದ್ಯಕೀಯ ಚಿಕಿತ್ಸೆ ಅಗತ್ಯವಿರುವ ಹರಿಓಂ ಅವರ ಸಹೋದರಿ ಕೂಡ ಆಡಳಿತಾತ್ಮಕ ಒತ್ತಡದಿಂದಾಗಿ ಮನೆಯಿಂದ ಹೊರಗೆ ಬರಲು ಸಾಧ್ಯವಾಗುತ್ತಿಲ್ಲ” ಎಂದು ಆಕ್ರೋಶ ಹೊರಹಾಕಿದರು.

ರಾಹುಲ್ ಗಾಂಧಿಯವರ ಭೇಟಿ ರಾಜ್ಯದಲ್ಲಿ ಹೊಸ ರಾಜಕೀಯ ಬಿಸಿಯನ್ನು ಹುಟ್ಟುಹಾಕಿದೆ, ಬಿಜೆಪಿ ದಲಿತ ವಿರೋಧಿ ಮತ್ತು ಅಪರಾಧಿಗಳನ್ನು ರಕ್ಷಿಸುವಲ್ಲಿ ಭಾಗಿಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಬಲಿಪಶುವಿನ ಕುಟುಂಬವನ್ನು ಬೆದರಿಸುವ ಆರೋಪದ ಮೇಲೆ ಈಗ ಪರಿಶೀಲನೆಗೆ ಒಳಪಟ್ಟಿರುವ ಸ್ಥಳೀಯ ಆಡಳಿತವನ್ನೂ ಈ ಭೇಟಿ ಬಹಿರಂಗಪಡಿಸಿದೆ.

ಹರಿಓಂ ವಾಲ್ಮೀಕಿಗೆ ನ್ಯಾಯ ಮತ್ತು ಯೋಗಿ ಆದಿತ್ಯನಾಥ್ ಸರ್ಕಾರದಿಂದ ಉತ್ತರದಾಯಿತ್ವವನ್ನು ಒತ್ತಾಯಿಸಿ ಸಂಸತ್ತಿನ ಒಳಗೆ ಮತ್ತು ಹೊರಗೆ ಈ ವಿಷಯವನ್ನು ಪ್ರಸ್ತಾಪಿಸುವುದನ್ನು ಮುಂದುವರಿಸುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ.

ಉತ್ತರ ಪ್ರದೇಶ| ದಲಿತ ಮಹಿಳಾ ಉದ್ಯೋಗಿಗೆ ಕಿರುಕುಳ; ಐಟಿಐ ಕಾಲೇಜು ಪ್ರಾಂಶುಪಾಲರು-ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...