Homeದಲಿತ್ ಫೈಲ್ಸ್ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

- Advertisement -
- Advertisement -

2025 ರ ಅಕ್ಟೋಬರ್ 1 ರಂದು ರಾಯ್ ಬರೇಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಗುಂಪೊಂದು ಫತೇಪುರದ ದಲಿತ ವ್ಯಕ್ತಿ ಹರಿಓಂ ವಾಲ್ಮೀಕಿಯನ್ನು ಥಳಿಸಿ ಕ್ರೂರವಾಗಿ ಕೊಂದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿ ಫತೇಪುರದಲ್ಲಿ ಬಲಿಪಶುವಿನ ಕುಟುಂಬವನ್ನು ಭೇಟಿ ಮಾಡಿ, ರಾಜ್ಯ ಸರ್ಕಾರವು ಆರೋಪಿಗಳನ್ನು ರಕ್ಷಿಸುತ್ತಿದೆ, ದೃಢ ಕ್ರಮ ಕೈಗೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿದರು. ಈ ಘಟನೆಯು ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದ್ದು, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಹರಿಓಂ ವಾಲ್ಮೀಕಿ ರಾಯ್ ಬರೇಲಿಯ ಉಂಚಹಾರ್ ಪ್ರದೇಶದಲ್ಲಿ ತನ್ನ ಅತ್ತೆ-ಮಾವಂದಿರನ್ನು ಭೇಟಿ ಮಾಡಲು ಹೋಗಿದ್ದಾಗ, ಅವರನ್ನು ಕಳ್ಳನೆಂದು ತಪ್ಪಾಗಿ ಭಾವಿಸಿ ಸ್ಥಳೀಯ ಗುಂಪೊಂದು ಹಲ್ಲೆ ನಡೆಸಿತು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಹರಿಓಂ ಹಲ್ಲೆಯ ಸಮಯದಲ್ಲಿ ರಾಹುಲ್ ಗಾಂಧಿಯ ಹೆಸರನ್ನು ಪದೇ ಪದೇ ಉಲ್ಲೇಖಿಸಿ, ದಾಳಿಕೋರರಿಂದ ಉಳಿಸುವಂತೆ ಬೇಡಿಕೊಂಡರು. ಇದಕ್ಕೆ ಪ್ರತಿಕ್ರಿಯೆಯಾಗಿ, ಗುಂಪು ಇದು ಬಾಬಾ (ಸಿಎಂ ಯೋಗಿ) ನಿಯಮ, ರಾಹುಲ್ ಗಾಂಧಿಯ ನಿಯಮವಲ್ಲ ಎಂದು ಹೇಳಿತು.

ಹಲ್ಲೆಯ ನಂತರ ಪೊಲೀಸರು ಸ್ಥಳಕ್ಕೆ ಬಂದರಾದರೂ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲು ವಿಫಲರಾದರು ಎಂದು ಆರೋಪಿಸಲಾಗಿದೆ. ಇದು ಅವನ ಸಾವಿಗೆ ಕಾರಣವಾಯಿತು. ನಂತರ, ಹರಿಓಂ ಕಳ್ಳ ಎಂದು ಹೇಳಲಾಯಿತು, ಮೃತನ ಹೆಂಡತಿ ದೇಹವನ್ನು ಗುರುತಿಸಿ ಗಂಡನ ಮುಗ್ಧನೆಂದು ಹೇಳಿದರು.

ಘಟನೆಯ ನಂತರ, ರಾಯ್ ಬರೇಲಿ ಪೊಲೀಸರ ನಿರ್ಲಕ್ಷ್ಯಕ್ಕಾಗಿ ಕೆಲವು ಅಧಿಕಾರಿಗಳನ್ನು ಅಮಾನತುಗೊಳಿಸಲಾಯಿತು. ಆದದೆ, ಇಲ್ಲಿಯವರೆಗೆ ಕೇವಲ 17 ಆರೋಪಿಗಳನ್ನು ಮಾತ್ರ ಬಂಧಿಸಲಾಗಿದೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ. ಹಲ್ಲೆಕೋರರಲ್ಲಿ ಹಲವರು ಬಿಜೆಪಿಗೆ ಸಂಬಂಧಿಸಿದವರು ಎಂದು ಹೇಳಲಾಗುತ್ತಿದೆ. ಕೆಲವರು ತಲೆಮರೆಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಬಲಿಪಶುವಿನ ಕುಟುಂಬದ ಪ್ರಕಾರ, ಇದು ರಾಜಕೀಯ ಹಸ್ತಕ್ಷೇಪ ಮತ್ತು ತಪ್ಪಿತಸ್ಥರನ್ನು ರಕ್ಷಿಸುವ ಪ್ರಯತ್ನವನ್ನು ಎಂದು ಹೇಳಿದ್ದಾರೆ.

ದುಃಖಿತ ಕುಟುಂಬವನ್ನು ಭೇಟಿಯಾದ ರಾಹುಲ್

ಪ್ರಕರಣದ ವಿವರಗಳನ್ನು ತಿಳಿದ ನಂತರ, ರಾಹುಲ್ ಗಾಂಧಿ ಅಕ್ಟೋಬರ್ 17 ರಂದು ದೆಹಲಿಯಿಂದ ಕಾನ್ಪುರಕ್ಕೆ ವಿಮಾನದ ಮೂಲಕ ತೆರಳಿ, ನಂತರ ರಸ್ತೆ ಮೂಲಕ ಫತೇಪುರಕ್ಕೆ ಪ್ರಯಾಣ ಬೆಳೆಸಿದರು. ಆರಂಭದಲ್ಲಿ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಭಾವ್ಯ ಬೆದರಿಕೆಗಳನ್ನು ಉಲ್ಲೇಖಿಸಿ ಸ್ಥಳೀಯ ಆಡಳಿತವು ಅವರನ್ನು ತಡೆಯಲು ಪ್ರಯತ್ನಿಸಿತು. ಆದರೆ, ರಾಹುಲ್ ಗಾಂಧಿ ಬಲಿಪಶುವಿನ ಕುಟುಂಬವನ್ನು ಭೇಟಿ ಮಾಡದೆ ಹಿಂತಿರುಗಲು ನಿರಾಕರಿಸಿದರು. ಅಂತಿಮವಾಗಿ, ಅವರಿಗೆ ಮುಂದುವರಿಯಲು ಅವಕಾಶ ನೀಡಲಾಯಿತು.

ಭೇಟಿಯ ಸಮಯದಲ್ಲಿ, ಹರಿಓಂ ಅವರ ತಂದೆ ರಾಹುಲ್ ಗಾಂಧಿಯವರೊಂದಿಗೆ ಮಾತನಾಡುವಾಗ ಕಣ್ಣೀರು ಹಾಕಿದರು ಎಂದು ವರದಿಯಾಗಿದೆ. ಅವರ ತಾಯಿ ಕೂಡ ಅಳುತ್ತಿದ್ದರು. ರಾಹುಲ್ ಗಾಂಧಿ ಅವರು ಪೋಷಕರಿಗೆ ಸಾಂತ್ವನದ ಮಾತುಗಳನ್ನು ಹೇಳಿದರು. ಕಾಂಗ್ರೆಸ್ ಪಕ್ಷವು ಅವರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಬೆಂಬಲ ನೀಡುತ್ತದೆ ಎಂದು ಭರವಸೆ ನೀಡಿದರು. ಹರಿಓಂ ಅವರ ಸಹೋದರಿ ಕುಸುಮ್, ಸರ್ಕಾರ ಕುಟುಂಬವನ್ನು ತಮ್ಮ ಮನೆಗೆ ಸೀಮಿತಗೊಳಿಸಿದೆ, ಹೊರಗಿನವರೊಂದಿಗೆ ಮಾತನಾಡುವುದನ್ನು ನಿರ್ಬಂಧಿಸಿದೆ ಎಂದು ಆರೋಪಿಸಿದರು, ಇದು ಕಾಂಗ್ರೆಸ್ ನಾಯಕರನ್ನು ಮತ್ತಷ್ಟು ಕೆರಳಿಸಿತು.

ಅಪರಾಧಿಗಳನ್ನು ರಕ್ಷಿಸುವುದನ್ನು ನಿಲ್ಲಿಸಿ: ರಾಹುಲ್

ಕುಟುಂಬದ ಭೇಟಿಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಘಟನೆಯನ್ನು ಬಲವಾದ ಪದಗಳಲ್ಲಿ ಖಂಡಿಸಿದರು. ಹರಿಓಂ ಅಪರಾಧಿಯಲ್ಲ, ಅಪರಾಧಿಗೆ ಬಲಿಯಾಗಿದ್ದಾನೆ. ಹೊಣೆಗಾರರನ್ನು ರಕ್ಷಿಸುವುದನ್ನು ನಿಲ್ಲಿಸುವಂತೆ ನಾನು ಸಿಎಂ ಯೋಗಿ ಅವರನ್ನು ಒತ್ತಾಯಿಸುತ್ತೇನೆ. ಅಪರಾಧಿಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಿ. ದೇಶಾದ್ಯಂತ ದಲಿತರು ಗುಂಪು ಹತ್ಯೆಯಿಂದ ಹಿಡಿದು ಅತ್ಯಾಚಾರದವರೆಗೆ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಬಲಿಪಶುಗಳ ಜೊತೆ ನಿಂತು ನ್ಯಾಯಕ್ಕಾಗಿ ಹೋರಾಡುವುದನ್ನು ಮುಂದುವರಿಸುತ್ತದೆ” ಎಂದರು.

“ಕುಟುಂಬವು ನನ್ನನ್ನು ಭೇಟಿಯಾಗಿದೆಯೋ ಇಲ್ಲವೋ ಎಂಬುದು ಸಮಸ್ಯೆಯಲ್ಲ, ಸಮಸ್ಯೆ ಅನ್ಯಾಯ. ಕುಟುಂಬಕ್ಕೆ ಬೆದರಿಕೆ ಹಾಕಲಾಗಿದೆ, ಮೌನಗೊಳಿಸಲಾಗಿದೆ ಮತ್ತು ಪ್ರತ್ಯೇಕಿಸಲಾಗಿದೆ. ವೈದ್ಯಕೀಯ ಚಿಕಿತ್ಸೆ ಅಗತ್ಯವಿರುವ ಹರಿಓಂ ಅವರ ಸಹೋದರಿ ಕೂಡ ಆಡಳಿತಾತ್ಮಕ ಒತ್ತಡದಿಂದಾಗಿ ಮನೆಯಿಂದ ಹೊರಗೆ ಬರಲು ಸಾಧ್ಯವಾಗುತ್ತಿಲ್ಲ” ಎಂದು ಆಕ್ರೋಶ ಹೊರಹಾಕಿದರು.

ರಾಹುಲ್ ಗಾಂಧಿಯವರ ಭೇಟಿ ರಾಜ್ಯದಲ್ಲಿ ಹೊಸ ರಾಜಕೀಯ ಬಿಸಿಯನ್ನು ಹುಟ್ಟುಹಾಕಿದೆ, ಬಿಜೆಪಿ ದಲಿತ ವಿರೋಧಿ ಮತ್ತು ಅಪರಾಧಿಗಳನ್ನು ರಕ್ಷಿಸುವಲ್ಲಿ ಭಾಗಿಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಬಲಿಪಶುವಿನ ಕುಟುಂಬವನ್ನು ಬೆದರಿಸುವ ಆರೋಪದ ಮೇಲೆ ಈಗ ಪರಿಶೀಲನೆಗೆ ಒಳಪಟ್ಟಿರುವ ಸ್ಥಳೀಯ ಆಡಳಿತವನ್ನೂ ಈ ಭೇಟಿ ಬಹಿರಂಗಪಡಿಸಿದೆ.

ಹರಿಓಂ ವಾಲ್ಮೀಕಿಗೆ ನ್ಯಾಯ ಮತ್ತು ಯೋಗಿ ಆದಿತ್ಯನಾಥ್ ಸರ್ಕಾರದಿಂದ ಉತ್ತರದಾಯಿತ್ವವನ್ನು ಒತ್ತಾಯಿಸಿ ಸಂಸತ್ತಿನ ಒಳಗೆ ಮತ್ತು ಹೊರಗೆ ಈ ವಿಷಯವನ್ನು ಪ್ರಸ್ತಾಪಿಸುವುದನ್ನು ಮುಂದುವರಿಸುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ.

ಉತ್ತರ ಪ್ರದೇಶ| ದಲಿತ ಮಹಿಳಾ ಉದ್ಯೋಗಿಗೆ ಕಿರುಕುಳ; ಐಟಿಐ ಕಾಲೇಜು ಪ್ರಾಂಶುಪಾಲರು-ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...