Homeದಲಿತ್ ಫೈಲ್ಸ್ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

- Advertisement -
- Advertisement -

2025 ರ ಅಕ್ಟೋಬರ್ 1 ರಂದು ರಾಯ್ ಬರೇಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಗುಂಪೊಂದು ಫತೇಪುರದ ದಲಿತ ವ್ಯಕ್ತಿ ಹರಿಓಂ ವಾಲ್ಮೀಕಿಯನ್ನು ಥಳಿಸಿ ಕ್ರೂರವಾಗಿ ಕೊಂದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿ ಫತೇಪುರದಲ್ಲಿ ಬಲಿಪಶುವಿನ ಕುಟುಂಬವನ್ನು ಭೇಟಿ ಮಾಡಿ, ರಾಜ್ಯ ಸರ್ಕಾರವು ಆರೋಪಿಗಳನ್ನು ರಕ್ಷಿಸುತ್ತಿದೆ, ದೃಢ ಕ್ರಮ ಕೈಗೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿದರು. ಈ ಘಟನೆಯು ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದ್ದು, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಹರಿಓಂ ವಾಲ್ಮೀಕಿ ರಾಯ್ ಬರೇಲಿಯ ಉಂಚಹಾರ್ ಪ್ರದೇಶದಲ್ಲಿ ತನ್ನ ಅತ್ತೆ-ಮಾವಂದಿರನ್ನು ಭೇಟಿ ಮಾಡಲು ಹೋಗಿದ್ದಾಗ, ಅವರನ್ನು ಕಳ್ಳನೆಂದು ತಪ್ಪಾಗಿ ಭಾವಿಸಿ ಸ್ಥಳೀಯ ಗುಂಪೊಂದು ಹಲ್ಲೆ ನಡೆಸಿತು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಹರಿಓಂ ಹಲ್ಲೆಯ ಸಮಯದಲ್ಲಿ ರಾಹುಲ್ ಗಾಂಧಿಯ ಹೆಸರನ್ನು ಪದೇ ಪದೇ ಉಲ್ಲೇಖಿಸಿ, ದಾಳಿಕೋರರಿಂದ ಉಳಿಸುವಂತೆ ಬೇಡಿಕೊಂಡರು. ಇದಕ್ಕೆ ಪ್ರತಿಕ್ರಿಯೆಯಾಗಿ, ಗುಂಪು ಇದು ಬಾಬಾ (ಸಿಎಂ ಯೋಗಿ) ನಿಯಮ, ರಾಹುಲ್ ಗಾಂಧಿಯ ನಿಯಮವಲ್ಲ ಎಂದು ಹೇಳಿತು.

ಹಲ್ಲೆಯ ನಂತರ ಪೊಲೀಸರು ಸ್ಥಳಕ್ಕೆ ಬಂದರಾದರೂ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲು ವಿಫಲರಾದರು ಎಂದು ಆರೋಪಿಸಲಾಗಿದೆ. ಇದು ಅವನ ಸಾವಿಗೆ ಕಾರಣವಾಯಿತು. ನಂತರ, ಹರಿಓಂ ಕಳ್ಳ ಎಂದು ಹೇಳಲಾಯಿತು, ಮೃತನ ಹೆಂಡತಿ ದೇಹವನ್ನು ಗುರುತಿಸಿ ಗಂಡನ ಮುಗ್ಧನೆಂದು ಹೇಳಿದರು.

ಘಟನೆಯ ನಂತರ, ರಾಯ್ ಬರೇಲಿ ಪೊಲೀಸರ ನಿರ್ಲಕ್ಷ್ಯಕ್ಕಾಗಿ ಕೆಲವು ಅಧಿಕಾರಿಗಳನ್ನು ಅಮಾನತುಗೊಳಿಸಲಾಯಿತು. ಆದದೆ, ಇಲ್ಲಿಯವರೆಗೆ ಕೇವಲ 17 ಆರೋಪಿಗಳನ್ನು ಮಾತ್ರ ಬಂಧಿಸಲಾಗಿದೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ. ಹಲ್ಲೆಕೋರರಲ್ಲಿ ಹಲವರು ಬಿಜೆಪಿಗೆ ಸಂಬಂಧಿಸಿದವರು ಎಂದು ಹೇಳಲಾಗುತ್ತಿದೆ. ಕೆಲವರು ತಲೆಮರೆಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಬಲಿಪಶುವಿನ ಕುಟುಂಬದ ಪ್ರಕಾರ, ಇದು ರಾಜಕೀಯ ಹಸ್ತಕ್ಷೇಪ ಮತ್ತು ತಪ್ಪಿತಸ್ಥರನ್ನು ರಕ್ಷಿಸುವ ಪ್ರಯತ್ನವನ್ನು ಎಂದು ಹೇಳಿದ್ದಾರೆ.

ದುಃಖಿತ ಕುಟುಂಬವನ್ನು ಭೇಟಿಯಾದ ರಾಹುಲ್

ಪ್ರಕರಣದ ವಿವರಗಳನ್ನು ತಿಳಿದ ನಂತರ, ರಾಹುಲ್ ಗಾಂಧಿ ಅಕ್ಟೋಬರ್ 17 ರಂದು ದೆಹಲಿಯಿಂದ ಕಾನ್ಪುರಕ್ಕೆ ವಿಮಾನದ ಮೂಲಕ ತೆರಳಿ, ನಂತರ ರಸ್ತೆ ಮೂಲಕ ಫತೇಪುರಕ್ಕೆ ಪ್ರಯಾಣ ಬೆಳೆಸಿದರು. ಆರಂಭದಲ್ಲಿ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಭಾವ್ಯ ಬೆದರಿಕೆಗಳನ್ನು ಉಲ್ಲೇಖಿಸಿ ಸ್ಥಳೀಯ ಆಡಳಿತವು ಅವರನ್ನು ತಡೆಯಲು ಪ್ರಯತ್ನಿಸಿತು. ಆದರೆ, ರಾಹುಲ್ ಗಾಂಧಿ ಬಲಿಪಶುವಿನ ಕುಟುಂಬವನ್ನು ಭೇಟಿ ಮಾಡದೆ ಹಿಂತಿರುಗಲು ನಿರಾಕರಿಸಿದರು. ಅಂತಿಮವಾಗಿ, ಅವರಿಗೆ ಮುಂದುವರಿಯಲು ಅವಕಾಶ ನೀಡಲಾಯಿತು.

ಭೇಟಿಯ ಸಮಯದಲ್ಲಿ, ಹರಿಓಂ ಅವರ ತಂದೆ ರಾಹುಲ್ ಗಾಂಧಿಯವರೊಂದಿಗೆ ಮಾತನಾಡುವಾಗ ಕಣ್ಣೀರು ಹಾಕಿದರು ಎಂದು ವರದಿಯಾಗಿದೆ. ಅವರ ತಾಯಿ ಕೂಡ ಅಳುತ್ತಿದ್ದರು. ರಾಹುಲ್ ಗಾಂಧಿ ಅವರು ಪೋಷಕರಿಗೆ ಸಾಂತ್ವನದ ಮಾತುಗಳನ್ನು ಹೇಳಿದರು. ಕಾಂಗ್ರೆಸ್ ಪಕ್ಷವು ಅವರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಬೆಂಬಲ ನೀಡುತ್ತದೆ ಎಂದು ಭರವಸೆ ನೀಡಿದರು. ಹರಿಓಂ ಅವರ ಸಹೋದರಿ ಕುಸುಮ್, ಸರ್ಕಾರ ಕುಟುಂಬವನ್ನು ತಮ್ಮ ಮನೆಗೆ ಸೀಮಿತಗೊಳಿಸಿದೆ, ಹೊರಗಿನವರೊಂದಿಗೆ ಮಾತನಾಡುವುದನ್ನು ನಿರ್ಬಂಧಿಸಿದೆ ಎಂದು ಆರೋಪಿಸಿದರು, ಇದು ಕಾಂಗ್ರೆಸ್ ನಾಯಕರನ್ನು ಮತ್ತಷ್ಟು ಕೆರಳಿಸಿತು.

ಅಪರಾಧಿಗಳನ್ನು ರಕ್ಷಿಸುವುದನ್ನು ನಿಲ್ಲಿಸಿ: ರಾಹುಲ್

ಕುಟುಂಬದ ಭೇಟಿಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಘಟನೆಯನ್ನು ಬಲವಾದ ಪದಗಳಲ್ಲಿ ಖಂಡಿಸಿದರು. ಹರಿಓಂ ಅಪರಾಧಿಯಲ್ಲ, ಅಪರಾಧಿಗೆ ಬಲಿಯಾಗಿದ್ದಾನೆ. ಹೊಣೆಗಾರರನ್ನು ರಕ್ಷಿಸುವುದನ್ನು ನಿಲ್ಲಿಸುವಂತೆ ನಾನು ಸಿಎಂ ಯೋಗಿ ಅವರನ್ನು ಒತ್ತಾಯಿಸುತ್ತೇನೆ. ಅಪರಾಧಿಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಿ. ದೇಶಾದ್ಯಂತ ದಲಿತರು ಗುಂಪು ಹತ್ಯೆಯಿಂದ ಹಿಡಿದು ಅತ್ಯಾಚಾರದವರೆಗೆ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಬಲಿಪಶುಗಳ ಜೊತೆ ನಿಂತು ನ್ಯಾಯಕ್ಕಾಗಿ ಹೋರಾಡುವುದನ್ನು ಮುಂದುವರಿಸುತ್ತದೆ” ಎಂದರು.

“ಕುಟುಂಬವು ನನ್ನನ್ನು ಭೇಟಿಯಾಗಿದೆಯೋ ಇಲ್ಲವೋ ಎಂಬುದು ಸಮಸ್ಯೆಯಲ್ಲ, ಸಮಸ್ಯೆ ಅನ್ಯಾಯ. ಕುಟುಂಬಕ್ಕೆ ಬೆದರಿಕೆ ಹಾಕಲಾಗಿದೆ, ಮೌನಗೊಳಿಸಲಾಗಿದೆ ಮತ್ತು ಪ್ರತ್ಯೇಕಿಸಲಾಗಿದೆ. ವೈದ್ಯಕೀಯ ಚಿಕಿತ್ಸೆ ಅಗತ್ಯವಿರುವ ಹರಿಓಂ ಅವರ ಸಹೋದರಿ ಕೂಡ ಆಡಳಿತಾತ್ಮಕ ಒತ್ತಡದಿಂದಾಗಿ ಮನೆಯಿಂದ ಹೊರಗೆ ಬರಲು ಸಾಧ್ಯವಾಗುತ್ತಿಲ್ಲ” ಎಂದು ಆಕ್ರೋಶ ಹೊರಹಾಕಿದರು.

ರಾಹುಲ್ ಗಾಂಧಿಯವರ ಭೇಟಿ ರಾಜ್ಯದಲ್ಲಿ ಹೊಸ ರಾಜಕೀಯ ಬಿಸಿಯನ್ನು ಹುಟ್ಟುಹಾಕಿದೆ, ಬಿಜೆಪಿ ದಲಿತ ವಿರೋಧಿ ಮತ್ತು ಅಪರಾಧಿಗಳನ್ನು ರಕ್ಷಿಸುವಲ್ಲಿ ಭಾಗಿಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಬಲಿಪಶುವಿನ ಕುಟುಂಬವನ್ನು ಬೆದರಿಸುವ ಆರೋಪದ ಮೇಲೆ ಈಗ ಪರಿಶೀಲನೆಗೆ ಒಳಪಟ್ಟಿರುವ ಸ್ಥಳೀಯ ಆಡಳಿತವನ್ನೂ ಈ ಭೇಟಿ ಬಹಿರಂಗಪಡಿಸಿದೆ.

ಹರಿಓಂ ವಾಲ್ಮೀಕಿಗೆ ನ್ಯಾಯ ಮತ್ತು ಯೋಗಿ ಆದಿತ್ಯನಾಥ್ ಸರ್ಕಾರದಿಂದ ಉತ್ತರದಾಯಿತ್ವವನ್ನು ಒತ್ತಾಯಿಸಿ ಸಂಸತ್ತಿನ ಒಳಗೆ ಮತ್ತು ಹೊರಗೆ ಈ ವಿಷಯವನ್ನು ಪ್ರಸ್ತಾಪಿಸುವುದನ್ನು ಮುಂದುವರಿಸುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ.

ಉತ್ತರ ಪ್ರದೇಶ| ದಲಿತ ಮಹಿಳಾ ಉದ್ಯೋಗಿಗೆ ಕಿರುಕುಳ; ಐಟಿಐ ಕಾಲೇಜು ಪ್ರಾಂಶುಪಾಲರು-ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...