Homeಮುಖಪುಟರಫೇಲ್‌ ಹಗರಣ : ನಾಳೆ ಸುಪ್ರೀಂಕೋರ್ಟ್‌‌ನಿಂದ ಮಹತ್ವದ ತೀರ್ಪು

ರಫೇಲ್‌ ಹಗರಣ : ನಾಳೆ ಸುಪ್ರೀಂಕೋರ್ಟ್‌‌ನಿಂದ ಮಹತ್ವದ ತೀರ್ಪು

- Advertisement -
- Advertisement -

ಬಹುದಿನಗಳಿಂದ ಯುಪಿಎ ಮತ್ತು ಎನ್‌ಡಿಎ ನಾಯಕರ ವಾಕ್ಸಮರಕ್ಕೆ ಮತ್ತು ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ರಫೇಲ್‌ ಯುದ್ಧ ವಿಮಾನ ಹಗರಣದ ತೀರ್ಪನ್ನು ನಾಳೆ ( ನವೆಂಬರ್‌ 14) ಸುಪ್ರೀಂಕೋರ್ಟ್‌ ಪ್ರಕಟಿಸಲಿದೆ.

ರಫೇಲ್‌ ಹಗರಣದಲ್ಲಿ ಕೇಂದ್ರ ಸರ್ಕಾರಕ್ಕೆ ಕ್ಲೀನ್‌ ಚಿಟ್‌ ನೀಡಿರುವ ಬಗ್ಗೆ ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದವು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್‌ ಗುರುವಾರ (ನಾಳೆ) ತೀರ್ಪು ಪ್ರಕಟಿಸಲಿದೆ. ಮೇ 10ರಂದೇ ಅರ್ಜಿ ವಿಚಾರಣೆ ಸಂಪೂರ್ಣಗೊಳಿಸಿದ್ದ ಸುಪ್ರೀಂಕೋರ್ಟ್‌ ತೀರ್ಪನ್ನು ಕಾಯ್ದಿರಿಸಿತ್ತು.

ಇದನ್ನೂ ಓದಿ: ರಫೇಲ್ ಡೀಲ್ ವೃತ್ತಾಂತ

ಫ್ರೆಂಚ್ ಸಂಸ್ಥೆ ಡಸಾಲ್ಟ್ ಏವಿಯೇಷನ್‌ ಜತೆ ಮಾಡಿಕೊಂಡ ರಫೇಲ್‌ ಫೈಟರ್‌ ಜೆಟ್‌ ಒಪ್ಪಂದದಲ್ಲಿ ಕೇಂದ್ರ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ಚುನಾವಣೆಯಲ್ಲಿ ರಫೇಲ್‌ ಅಸ್ತ್ರ ಬಳಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮೋದಿ ಸರ್ಕಾರವನ್ನು ಟೀಕಿಸುತ್ತಲೇ ಬಂದಿದ್ದರು. ಈ ಬಗ್ಗೆ ವಿಚಾರಣೆ ನಡೆದು, ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚಿಟ್ ಕೂಡ ನೀಡಲಾಗಿತ್ತು.

ಇದನ್ನೂ ಓದಿ: ರಫೇಲ್: ಕೇಂದ್ರಕ್ಕೆ ಮುಳುವಾದ ಮುಚ್ಚಿದ ಲಕೋಟೆ ಮತ್ತು ಬಿಜೆಪಿಯ ದ್ವಂದ್ವ ನಿಲುವು

ಹಗರಣದಲ್ಲಿ ಕೇಂದ್ರಕ್ಕೆ ನೀಡಲಾದ ಕ್ಲೀನ್‌ ಚಿಟ್‌ ಮರುಪರಿಶೀಲಿಸುವಂತೆ ಕಾಂಗ್ರೆ‌ಸ್‌ ನಾಯಕ ಯಶ್ವಂತ್ ಸಿನ್ಹಾ, ಅರುಣ್ ಶೌರಿ ಮತ್ತು ಕಾರ್ಯಕರ್ತ ವಕೀಲ ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್‌ ನಾಳೆ ತೀರ್ಪು ಪ್ರಕಟಿಸಲಿದೆ.

ರಫೇಲ್‌ ಹಗರಣ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌, ನ್ಯಾಯಮೂರ್ತಿ ಎಸ್‌.ಕೆ.ಕೌಲ್‌, ಕೆ.ಎಂ.ಜೋಸೆಫ್‌ ಅವರಿರುವ ತ್ರಿಸದಸ್ಯ ಪೀಠ ತೀರ್ಪು ನೀಡಲಿದೆ.

ಇದನ್ನೂ ಓದಿ: ರಫೇಲ್ ರಾದ್ಧಾಂತ: ಮೋದಿ ಭವಿಷ್ಯದ ಮೇಲೆ `ಸುಪ್ರೀಂ’ ಹೊಸ ತೀರ್ಪಿನ ಪರಿಣಾಮ ಹೇಗಿರಲಿದೆ ಗೊತ್ತಾ?

ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಆರೋಪಿಸುತ್ತಲೇ ಬಂದಿದ್ದಾರೆ. ಬಲಿಷ್ಠ ಯುದ್ಧ ವಿಮಾನ ಖರೀದಿ ಪ್ರಕ್ರಿಯೆಯಲ್ಲಿ 30 ಸಾವಿರ ಕೋಟಿ ಅಕ್ರಮವೆಸಗಿದ್ದಾರೆ ಎಂಬ ಆರೋಪವಿದೆ. ಯುದ್ಧ ವಿಮಾನ ಖರೀದಿಗಾಗಿ ಫ್ರಾನ್ಸ್‌ ಸರ್ಕಾರದೊಂದಿಗೆ ಭಾರತ ರಫೇಲ್‌ ಜೆಟ್‌ ಒಪ್ಪಂದ ಮಾಡಿಕೊಂಡಿತ್ತು. ಒಪ್ಪಂದದಲ್ಲಿ ಭಾರಿ ಅವ್ಯವಹಾರ ನಡೆದಿದೆ.

ರಫೇಲ್‌ ಯುದ್ಧ ವಿಮಾನಗಳ ಬಿಡಿ ಭಾಗಗಳ ತಯಾರಿಕೆಯ ಹೊಣೆಯನ್ನು ಎಚ್‌ಎಎಲ್‌ಗೆ ಬದಲಾಗಿ ರಿಲಯನ್ಸ್‌ ಇಂಡಸ್ಟ್ರಿಗೆ ನೀಡಲಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ರಾಹುಲ್‌ ಗಾಂಧಿ ಮಾಡಿದ್ದ ಆರೋಪವನ್ನು ರಿಲಯನ್ಸ್‌ ತಳ್ಳಿಹಾಕಿತ್ತು. ಅಷ್ಟೇ ಅಲ್ಲದೇ ಉದ್ದೇಶಿತ ಒಪ್ಪಂದಕ್ಕೂ, ರಫೇಲ್‌ ಖರೀದಿ ಪ್ರಕ್ರಿಯೆಗೂ ಯಾವುದೇ ಸಂಬಂಧವಿಲ್ಲ ಎಂದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...