Homeಮುಖಪುಟರಫೇಲ್‌ ಹಗರಣ : ನಾಳೆ ಸುಪ್ರೀಂಕೋರ್ಟ್‌‌ನಿಂದ ಮಹತ್ವದ ತೀರ್ಪು

ರಫೇಲ್‌ ಹಗರಣ : ನಾಳೆ ಸುಪ್ರೀಂಕೋರ್ಟ್‌‌ನಿಂದ ಮಹತ್ವದ ತೀರ್ಪು

- Advertisement -
- Advertisement -

ಬಹುದಿನಗಳಿಂದ ಯುಪಿಎ ಮತ್ತು ಎನ್‌ಡಿಎ ನಾಯಕರ ವಾಕ್ಸಮರಕ್ಕೆ ಮತ್ತು ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ರಫೇಲ್‌ ಯುದ್ಧ ವಿಮಾನ ಹಗರಣದ ತೀರ್ಪನ್ನು ನಾಳೆ ( ನವೆಂಬರ್‌ 14) ಸುಪ್ರೀಂಕೋರ್ಟ್‌ ಪ್ರಕಟಿಸಲಿದೆ.

ರಫೇಲ್‌ ಹಗರಣದಲ್ಲಿ ಕೇಂದ್ರ ಸರ್ಕಾರಕ್ಕೆ ಕ್ಲೀನ್‌ ಚಿಟ್‌ ನೀಡಿರುವ ಬಗ್ಗೆ ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದವು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್‌ ಗುರುವಾರ (ನಾಳೆ) ತೀರ್ಪು ಪ್ರಕಟಿಸಲಿದೆ. ಮೇ 10ರಂದೇ ಅರ್ಜಿ ವಿಚಾರಣೆ ಸಂಪೂರ್ಣಗೊಳಿಸಿದ್ದ ಸುಪ್ರೀಂಕೋರ್ಟ್‌ ತೀರ್ಪನ್ನು ಕಾಯ್ದಿರಿಸಿತ್ತು.

ಇದನ್ನೂ ಓದಿ: ರಫೇಲ್ ಡೀಲ್ ವೃತ್ತಾಂತ

ಫ್ರೆಂಚ್ ಸಂಸ್ಥೆ ಡಸಾಲ್ಟ್ ಏವಿಯೇಷನ್‌ ಜತೆ ಮಾಡಿಕೊಂಡ ರಫೇಲ್‌ ಫೈಟರ್‌ ಜೆಟ್‌ ಒಪ್ಪಂದದಲ್ಲಿ ಕೇಂದ್ರ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ಚುನಾವಣೆಯಲ್ಲಿ ರಫೇಲ್‌ ಅಸ್ತ್ರ ಬಳಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮೋದಿ ಸರ್ಕಾರವನ್ನು ಟೀಕಿಸುತ್ತಲೇ ಬಂದಿದ್ದರು. ಈ ಬಗ್ಗೆ ವಿಚಾರಣೆ ನಡೆದು, ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚಿಟ್ ಕೂಡ ನೀಡಲಾಗಿತ್ತು.

ಇದನ್ನೂ ಓದಿ: ರಫೇಲ್: ಕೇಂದ್ರಕ್ಕೆ ಮುಳುವಾದ ಮುಚ್ಚಿದ ಲಕೋಟೆ ಮತ್ತು ಬಿಜೆಪಿಯ ದ್ವಂದ್ವ ನಿಲುವು

ಹಗರಣದಲ್ಲಿ ಕೇಂದ್ರಕ್ಕೆ ನೀಡಲಾದ ಕ್ಲೀನ್‌ ಚಿಟ್‌ ಮರುಪರಿಶೀಲಿಸುವಂತೆ ಕಾಂಗ್ರೆ‌ಸ್‌ ನಾಯಕ ಯಶ್ವಂತ್ ಸಿನ್ಹಾ, ಅರುಣ್ ಶೌರಿ ಮತ್ತು ಕಾರ್ಯಕರ್ತ ವಕೀಲ ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್‌ ನಾಳೆ ತೀರ್ಪು ಪ್ರಕಟಿಸಲಿದೆ.

ರಫೇಲ್‌ ಹಗರಣ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌, ನ್ಯಾಯಮೂರ್ತಿ ಎಸ್‌.ಕೆ.ಕೌಲ್‌, ಕೆ.ಎಂ.ಜೋಸೆಫ್‌ ಅವರಿರುವ ತ್ರಿಸದಸ್ಯ ಪೀಠ ತೀರ್ಪು ನೀಡಲಿದೆ.

ಇದನ್ನೂ ಓದಿ: ರಫೇಲ್ ರಾದ್ಧಾಂತ: ಮೋದಿ ಭವಿಷ್ಯದ ಮೇಲೆ `ಸುಪ್ರೀಂ’ ಹೊಸ ತೀರ್ಪಿನ ಪರಿಣಾಮ ಹೇಗಿರಲಿದೆ ಗೊತ್ತಾ?

ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಆರೋಪಿಸುತ್ತಲೇ ಬಂದಿದ್ದಾರೆ. ಬಲಿಷ್ಠ ಯುದ್ಧ ವಿಮಾನ ಖರೀದಿ ಪ್ರಕ್ರಿಯೆಯಲ್ಲಿ 30 ಸಾವಿರ ಕೋಟಿ ಅಕ್ರಮವೆಸಗಿದ್ದಾರೆ ಎಂಬ ಆರೋಪವಿದೆ. ಯುದ್ಧ ವಿಮಾನ ಖರೀದಿಗಾಗಿ ಫ್ರಾನ್ಸ್‌ ಸರ್ಕಾರದೊಂದಿಗೆ ಭಾರತ ರಫೇಲ್‌ ಜೆಟ್‌ ಒಪ್ಪಂದ ಮಾಡಿಕೊಂಡಿತ್ತು. ಒಪ್ಪಂದದಲ್ಲಿ ಭಾರಿ ಅವ್ಯವಹಾರ ನಡೆದಿದೆ.

ರಫೇಲ್‌ ಯುದ್ಧ ವಿಮಾನಗಳ ಬಿಡಿ ಭಾಗಗಳ ತಯಾರಿಕೆಯ ಹೊಣೆಯನ್ನು ಎಚ್‌ಎಎಲ್‌ಗೆ ಬದಲಾಗಿ ರಿಲಯನ್ಸ್‌ ಇಂಡಸ್ಟ್ರಿಗೆ ನೀಡಲಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ರಾಹುಲ್‌ ಗಾಂಧಿ ಮಾಡಿದ್ದ ಆರೋಪವನ್ನು ರಿಲಯನ್ಸ್‌ ತಳ್ಳಿಹಾಕಿತ್ತು. ಅಷ್ಟೇ ಅಲ್ಲದೇ ಉದ್ದೇಶಿತ ಒಪ್ಪಂದಕ್ಕೂ, ರಫೇಲ್‌ ಖರೀದಿ ಪ್ರಕ್ರಿಯೆಗೂ ಯಾವುದೇ ಸಂಬಂಧವಿಲ್ಲ ಎಂದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...