Homeಮುಖಪುಟರಫೇಲ್‌ ಹಗರಣ : ನಾಳೆ ಸುಪ್ರೀಂಕೋರ್ಟ್‌‌ನಿಂದ ಮಹತ್ವದ ತೀರ್ಪು

ರಫೇಲ್‌ ಹಗರಣ : ನಾಳೆ ಸುಪ್ರೀಂಕೋರ್ಟ್‌‌ನಿಂದ ಮಹತ್ವದ ತೀರ್ಪು

- Advertisement -
- Advertisement -

ಬಹುದಿನಗಳಿಂದ ಯುಪಿಎ ಮತ್ತು ಎನ್‌ಡಿಎ ನಾಯಕರ ವಾಕ್ಸಮರಕ್ಕೆ ಮತ್ತು ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ರಫೇಲ್‌ ಯುದ್ಧ ವಿಮಾನ ಹಗರಣದ ತೀರ್ಪನ್ನು ನಾಳೆ ( ನವೆಂಬರ್‌ 14) ಸುಪ್ರೀಂಕೋರ್ಟ್‌ ಪ್ರಕಟಿಸಲಿದೆ.

ರಫೇಲ್‌ ಹಗರಣದಲ್ಲಿ ಕೇಂದ್ರ ಸರ್ಕಾರಕ್ಕೆ ಕ್ಲೀನ್‌ ಚಿಟ್‌ ನೀಡಿರುವ ಬಗ್ಗೆ ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದವು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್‌ ಗುರುವಾರ (ನಾಳೆ) ತೀರ್ಪು ಪ್ರಕಟಿಸಲಿದೆ. ಮೇ 10ರಂದೇ ಅರ್ಜಿ ವಿಚಾರಣೆ ಸಂಪೂರ್ಣಗೊಳಿಸಿದ್ದ ಸುಪ್ರೀಂಕೋರ್ಟ್‌ ತೀರ್ಪನ್ನು ಕಾಯ್ದಿರಿಸಿತ್ತು.

ಇದನ್ನೂ ಓದಿ: ರಫೇಲ್ ಡೀಲ್ ವೃತ್ತಾಂತ

ಫ್ರೆಂಚ್ ಸಂಸ್ಥೆ ಡಸಾಲ್ಟ್ ಏವಿಯೇಷನ್‌ ಜತೆ ಮಾಡಿಕೊಂಡ ರಫೇಲ್‌ ಫೈಟರ್‌ ಜೆಟ್‌ ಒಪ್ಪಂದದಲ್ಲಿ ಕೇಂದ್ರ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ಚುನಾವಣೆಯಲ್ಲಿ ರಫೇಲ್‌ ಅಸ್ತ್ರ ಬಳಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮೋದಿ ಸರ್ಕಾರವನ್ನು ಟೀಕಿಸುತ್ತಲೇ ಬಂದಿದ್ದರು. ಈ ಬಗ್ಗೆ ವಿಚಾರಣೆ ನಡೆದು, ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚಿಟ್ ಕೂಡ ನೀಡಲಾಗಿತ್ತು.

ಇದನ್ನೂ ಓದಿ: ರಫೇಲ್: ಕೇಂದ್ರಕ್ಕೆ ಮುಳುವಾದ ಮುಚ್ಚಿದ ಲಕೋಟೆ ಮತ್ತು ಬಿಜೆಪಿಯ ದ್ವಂದ್ವ ನಿಲುವು

ಹಗರಣದಲ್ಲಿ ಕೇಂದ್ರಕ್ಕೆ ನೀಡಲಾದ ಕ್ಲೀನ್‌ ಚಿಟ್‌ ಮರುಪರಿಶೀಲಿಸುವಂತೆ ಕಾಂಗ್ರೆ‌ಸ್‌ ನಾಯಕ ಯಶ್ವಂತ್ ಸಿನ್ಹಾ, ಅರುಣ್ ಶೌರಿ ಮತ್ತು ಕಾರ್ಯಕರ್ತ ವಕೀಲ ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್‌ ನಾಳೆ ತೀರ್ಪು ಪ್ರಕಟಿಸಲಿದೆ.

ರಫೇಲ್‌ ಹಗರಣ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌, ನ್ಯಾಯಮೂರ್ತಿ ಎಸ್‌.ಕೆ.ಕೌಲ್‌, ಕೆ.ಎಂ.ಜೋಸೆಫ್‌ ಅವರಿರುವ ತ್ರಿಸದಸ್ಯ ಪೀಠ ತೀರ್ಪು ನೀಡಲಿದೆ.

ಇದನ್ನೂ ಓದಿ: ರಫೇಲ್ ರಾದ್ಧಾಂತ: ಮೋದಿ ಭವಿಷ್ಯದ ಮೇಲೆ `ಸುಪ್ರೀಂ’ ಹೊಸ ತೀರ್ಪಿನ ಪರಿಣಾಮ ಹೇಗಿರಲಿದೆ ಗೊತ್ತಾ?

ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಆರೋಪಿಸುತ್ತಲೇ ಬಂದಿದ್ದಾರೆ. ಬಲಿಷ್ಠ ಯುದ್ಧ ವಿಮಾನ ಖರೀದಿ ಪ್ರಕ್ರಿಯೆಯಲ್ಲಿ 30 ಸಾವಿರ ಕೋಟಿ ಅಕ್ರಮವೆಸಗಿದ್ದಾರೆ ಎಂಬ ಆರೋಪವಿದೆ. ಯುದ್ಧ ವಿಮಾನ ಖರೀದಿಗಾಗಿ ಫ್ರಾನ್ಸ್‌ ಸರ್ಕಾರದೊಂದಿಗೆ ಭಾರತ ರಫೇಲ್‌ ಜೆಟ್‌ ಒಪ್ಪಂದ ಮಾಡಿಕೊಂಡಿತ್ತು. ಒಪ್ಪಂದದಲ್ಲಿ ಭಾರಿ ಅವ್ಯವಹಾರ ನಡೆದಿದೆ.

ರಫೇಲ್‌ ಯುದ್ಧ ವಿಮಾನಗಳ ಬಿಡಿ ಭಾಗಗಳ ತಯಾರಿಕೆಯ ಹೊಣೆಯನ್ನು ಎಚ್‌ಎಎಲ್‌ಗೆ ಬದಲಾಗಿ ರಿಲಯನ್ಸ್‌ ಇಂಡಸ್ಟ್ರಿಗೆ ನೀಡಲಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ರಾಹುಲ್‌ ಗಾಂಧಿ ಮಾಡಿದ್ದ ಆರೋಪವನ್ನು ರಿಲಯನ್ಸ್‌ ತಳ್ಳಿಹಾಕಿತ್ತು. ಅಷ್ಟೇ ಅಲ್ಲದೇ ಉದ್ದೇಶಿತ ಒಪ್ಪಂದಕ್ಕೂ, ರಫೇಲ್‌ ಖರೀದಿ ಪ್ರಕ್ರಿಯೆಗೂ ಯಾವುದೇ ಸಂಬಂಧವಿಲ್ಲ ಎಂದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...