Homeಮುಖಪುಟಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ 'ಸೇಡಿನ ರಾಜಕಾರಣ'ಎಂದ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ “ಸೇಡಿನ ರಾಜಕಾರಣ” ಎಂಬ ಆರೋಪ ಮಾಡಿದ್ದಾರೆ.

ರಾಘವ್ ಚಡ್ಡಾ ಅವರು 2022ರಲ್ಲಿ ಎಎಪಿ ಅಭ್ಯರ್ಥಿಯಾಗಿ ಪಂಜಾಬ್‌ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಈ ವರ್ಷದ (2026) ಆರಂಭದಲ್ಲಿ ಬಿಜೆಪಿ ಸೇರಿದ್ದರು. ತನ್ನ ಮತ ಮೊಹಾಲಿಯ ನೋಂದಣಿಯಾಗಿದೆ ಎಂದಿರುವ ಅವರು, ‘ಶಿಫ್ಟೆಡ್’ ಎಂದು ವರ್ಗೀಕರಿಸಿ ಕರಡು ಪಟ್ಟಿಯಿಂದ ಹೆಸರು ಕೈ ಬಿಟ್ಟಿರುವುದನ್ನು ಪ್ರಶ್ನಿಸಿದ್ದಾರೆ.

ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳುವ ಮೊದಲು, ಹಕ್ಕುಗಳು ಮತ್ತು ಆಕ್ಷೇಪಣೆಗಳ (claims and objections) ಪ್ರಕ್ರಿಯೆಯ ಅವಧಿಯಲ್ಲಿ ಈ ತಪ್ಪನ್ನು ಸರಿಪಡಿಸಬಹುದು ಎಂದಿದ್ದಾರೆ.

“ಅದೃಷ್ಟವಶಾತ್, ಇವು ಕೇವಲ ಕರಡು ಮತದಾರರ ಪಟ್ಟಿಗಳಷ್ಟೇ ಆಗಿದ್ದು, ಅಂತಿಮ ಮತದಾರರ ಪಟ್ಟಿಗಳಲ್ಲ. ಪ್ರಸ್ತುತ ಚಾಲ್ತಿಯಲ್ಲಿರುವ ‘ಹಕ್ಕುಗಳು ಮತ್ತು ಆಕ್ಷೇಪಣೆಗಳ’ ಪ್ರಕ್ರಿಯೆಯ ಅವಧಿಯಲ್ಲಿ ಹೆಸರುಗಳನ್ನು ಸರಿಪಡಿಸಲಾಗುತ್ತದೆ. ಅಂತಿಮ ಮತದಾರರ ಪಟ್ಟಿಗಳು ಅಕ್ಟೋಬರ್ 2026ರಲ್ಲಿ ಪ್ರಕಟಗೊಳ್ಳಲಿವೆ. ನಾನು ಈಗಾಗಲೇ ಎಸ್‌ಐಆರ್ ಮಾರ್ಗಸೂಚಿಗಳ ಅಡಿಯಲ್ಲಿ ಒದಗಿಸಲಾದ ಪರಿಹಾರಗಳನ್ನು ಪಡೆದುಕೊಳ್ಳುವ ಪ್ರಕ್ರಿಯೆಯಲ್ಲಿದ್ದೇನೆ” ಎಂದು ಚಡ್ಡಾ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಆದಾಗ್ಯೂ, ಈ ಹೆಸರು ಕೈಬಿಟ್ಟಿರುವುದು ಕೇವಲ ಕ್ಲರಿಕಲ್ ತಪ್ಪು (clerical error) ಅಲ್ಲ, ಬದಲಿಗೆ ರಾಜಕೀಯ ಸೇಡಿನ ಉದ್ದೇಶಪೂರ್ವಕ ಕೃತ್ಯ ಎಂದು ಚಡ್ಡಾ ಆರೋಪಿಸಿದ್ದಾರೆ.

“ಇದು ಕೇವಲ ಒಂದು ಸಾಧಾರಣ ಕ್ಲರಿಕಲ್ ತಪ್ಪು ಎಂದು ತೋರುತ್ತಿಲ್ಲ. ಇದು ಸ್ಪಷ್ಟವಾಗಿ ರಾಜಕೀಯ ಸೇಡಿನ ಪ್ರಕರಣವಾಗಿದೆ. ನನ್ನನ್ನು ‘ಸ್ಥಳಾಂತರಗೊಂಡಿದ್ದಾರೆ’ ಎಂದು ಗುರುತಿಸಿದವರು ಯಾರು? ಎಎಪಿ ಪಂಜಾಬ್ ಸರ್ಕಾರದ ಅಧಿಕಾರಿಯೊಬ್ಬರು. ಆ ವರ್ಗೀಕರಣವನ್ನು ಪರಿಶೀಲಿಸಿ ದೃಢೀಕರಿಸಿದವರು ಯಾರು?” ಎಂದು ಅವರು ಪ್ರಶ್ನಿಸಿದ್ದಾರೆ.

“ಮತ್ತದೇ ಎಎಪಿ ಪಂಜಾಬ್ ಸರ್ಕಾರದ ಅಧಿಕಾರಿಯೇ. ಉನ್ನತ ಮಟ್ಟದಲ್ಲಿ ಇದನ್ನು ಪ್ರಕ್ರಿಯೆಗೊಳಿಸಿದವರು ಯಾರು? ಮತ್ತೊಮ್ಮೆ, ಅದೇ ಎಎಪಿ ಪಂಜಾಬ್ ಸರ್ಕಾರದ ಅಧಿಕಾರಿ” ಎಂದು ಅವರು ಆರೋಪ ಮಾಡಿದ್ದಾರೆ.

ತಮ್ಮ ವರ್ಗಾವಣೆ ಮತ್ತು ನೇಮಕಾತಿಗಳನ್ನು ರಾಜ್ಯ ಸರ್ಕಾರವೇ ನಿಯಂತ್ರಿಸುವುದರಿಂದ, ಈ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತೊಡಗಿರುವ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಒಳಗಾಗುವ ಸಾಧ್ಯತೆಯಿದೆ ಎಂದೂ ಚಡ್ಡಾ ಪ್ರತಿಪಾದಿಸಿದ್ದಾರೆ.

ಆದಾಗ್ಯೂ, ಎಎಪಿ ಈ ಆರೋಪಗಳನ್ನು ತಿರಸ್ಕರಿಸಿದೆ. ಕರಡು ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ ಚಡ್ಡಾ ಅವರು ಇದರ ಹೊರೆಯನ್ನು ಪಕ್ಷ ಮತ್ತು ಪಂಜಾಬ್ ಸರ್ಕಾರದ ಮೇಲೆ ಹೊರಿಸಲು ಯತ್ನಿಸುತ್ತಿದ್ದಾರೆ ಎಂದು ಹೇಳಿದೆ.

“ರಾಘವ್ ಚಡ್ಡಾ ಅವರು ಹಿಂದಿನ ದಿನಾಂಕದ (backdated) ಪ್ರಕ್ರಿಯೆಯ ಮೂಲಕ ದೆಹಲಿಯಲ್ಲಿ ತಮ್ಮ ಮತದಾರರ ನೋಂದಣಿಯನ್ನು ಮಾಡಿಸಲು ಪ್ರಯತ್ನಿಸುತ್ತಿರುವುದನ್ನು ರಾಷ್ಟ್ರೀಯ ಇಂಗ್ಲಿಷ್ ದಿನಪತ್ರಿಕೆಯೊಂದು ಪತ್ತೆಹಚ್ಚಿದೆ. ಈಗ ಅವರು ಇದರ ಸಂಪೂರ್ಣ ಹೊರೆಯನ್ನು ಆಮ್ ಆದ್ಮಿ ಪಕ್ಷ (ಎಎಎಪಿ) ಮತ್ತು ಪಂಜಾಬ್ ಸರ್ಕಾರದ ಮೇಲೆ ಹೊರಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಪಕ್ಷವು ತಿಳಿಸಿದೆ.

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಚುನಾವಣಾ ಆಯೋಗವೇ ನಿರ್ವಹಿಸುತ್ತದೆ ಮತ್ತು ಮತದಾರರ ಪಟ್ಟಿಯಲ್ಲಿ ಯಾರ ಹೆಸರನ್ನು ಸೇರಿಸಬೇಕು ಅಥವಾ ಕೈಬಿಡಬೇಕು ಎಂಬುದನ್ನು ನಿರ್ಧರಿಸುವಲ್ಲಿ ಪಂಜಾಬ್ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಆಪ್ ಹೇಳಿದೆ.

“ಎಸ್‌ಐಆರ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗ ನಡೆಸುತ್ತದೆಯೇ ಹೊರತು ರಾಜ್ಯ ಸರ್ಕಾರವಲ್ಲ, ಆದ್ದರಿಂದ ಮತದಾರರ ಪಟ್ಟಿಯಲ್ಲಿ ಯಾರ ಹೆಸರನ್ನು ಸೇರಿಸಬೇಕು ಅಥವಾ ಕೈಬಿಡಬೇಕು ಎಂದು ನಿರ್ಧರಿಸುವಲ್ಲಿ ಪಂಜಾಬ್ ಸರ್ಕಾರಕ್ಕೆ ಯಾವುದೇ ಪಾತ್ರವಿಲ್ಲ” ಎಂದಿದೆ.

ಪಕ್ಷವು ಮುಂದುವರಿದು ಚಡ್ಡಾ ಅವರು ದೆಹಲಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಪ್ರತಿಪಾದಿಸಿದೆ ಮತ್ತು ಹೆಸರು ಕೈಬಿಟ್ಟಿರುವುದಕ್ಕೆ ಪಂಜಾಬ್ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವ ಅವರ ನಿರ್ಧಾರವನ್ನು ಪ್ರಶ್ನಿಸಿದೆ.

“ರಾಘವ್ ಚಡ್ಡಾ ಅವರು ಪಂಜಾಬ್‌ನಲ್ಲಿ ಅಲ್ಲ, ದೆಹಲಿಯಲ್ಲಿ ವಾಸಿಸುತ್ತಿದ್ದಾರೆ ಎಂಬುದು ಸಾರ್ವಜನಿಕ ದಾಖಲೆಯಾಗಿದೆ. ಅವರು ಪಂಜಾಬ್‌ನಲ್ಲಿ ವಾಸಿಸದೇ ಇದ್ದಲ್ಲಿ, ತಮ್ಮ ಮತದಾರರ ನೋಂದಣಿಯನ್ನು ಮುಂದುವರಿಸುವುದು ಅಥವಾ ಸ್ಥಳಾಂತರಿಸುವುದು ಅವರ ಸ್ವಂತ ಜವಾಬ್ದಾರಿಯಾಗಿತ್ತು. ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವುದಕ್ಕೆ ಅವರು ಈಗ ಎಎಪಿ ಅಥವಾ ಪಂಜಾಬ್ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ” ಎಂದು ಪಕ್ಷವು ಹೇಳಿದೆ.

ಎಎಪಿ ಮುಂದುವರಿದು, ರಾಘವ್ ಚಡ್ಡಾ ಅವರು ಹಿಂದಿನ ದಿನಾಂಕದ (backdated) ಪ್ರಕ್ರಿಯೆಯ ಮೂಲಕ ದೆಹಲಿಯಲ್ಲಿ ತಮ್ಮ ಮತದಾರರ ನೋಂದಣಿಯನ್ನು ಮರುಸ್ಥಾಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದೆ ಮತ್ತು ಅಂತಹ ಯಾವುದೇ ಪ್ರಕ್ರಿಯೆ ನಡೆದಿದ್ದರೆ ತನಿಖೆ ನಡೆಸಬೇಕೆಂದು ಆಗ್ರಹಿಸಿದೆ.

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ನಡುವೆಯೇ ಈ ವಿವಾದ ಉಂಟಾಗಿದೆ. ಕರಡು ಪಟ್ಟಿಯಿಂದ ಹೆಸರುಗಳು ಕೈಬಿಟ್ಟುಹೋಗಿರುವ ಮತದಾರರು ನಿಗದಿಪಡಿಸಿದ ಕಾಲಾವಕಾಶದೊಳಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಅಂತಿಮ ಮತದಾರರ ಪಟ್ಟಿಯು ಅಕ್ಟೋಬರ್ 12ರಂದು ಪ್ರಕಟಗೊಳ್ಳಲು ನಿರ್ಧರಿಸಲಾಗಿದೆ.











ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...