Homeಕರ್ನಾಟಕಶಿವಮೊಗ್ಗದಲ್ಲಿ ರಾಘವೇಂದ್ರ ಸೋಲ್ತಾರೆ: ಕೆ.ಎಸ್ ಈಶ್ವರಪ್ಪ

ಶಿವಮೊಗ್ಗದಲ್ಲಿ ರಾಘವೇಂದ್ರ ಸೋಲ್ತಾರೆ: ಕೆ.ಎಸ್ ಈಶ್ವರಪ್ಪ

- Advertisement -
- Advertisement -

ಶಿವಮೊಗ್ಗ ಬಿಜೆಪಿಯಲ್ಲಿ ಬಂಡಾಯ ಶಮನಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ತನ್ನ ಮಗನಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆ ಕೋಪಗೊಂಡಿರುವ ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ, ಯಡಿಯೂರಪ್ಪ ಬಣದ ವಿರುದ್ದ ತೊಡೆ ತಟ್ಟಿದ್ದಾರೆ.

ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಯಡಿಯೂರಪ್ಪ ಅವರ ಪುತ್ರ ಬಿ.ವೈ ರಾಘವೇಂದ್ರ ಅವರನ್ನು ಸೋಲಿಸಲು ಈಶ್ವರಪ್ಪ ಅಣಿಯಾಗಿದ್ದು, “ಶಿವಮೊಗ್ಗದಲ್ಲಿ ರಾಘವೇಂದ್ರ ಸೋಲ್ತಾರೆ. ಇನ್ನು ಎಲ್ಲೆಲ್ಲಿ ಯಾರೆಲ್ಲ ಸೋಲ್ತಾರೆ ಗೊತ್ತಿಲ್ಲ” ಎಂದು ಹೇಳಿದ್ದಾರೆ.

ಯಡಿಯೂರಪ್ಪ ಬಣ ಕಾಂಗ್ರೆಸ್ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿರುವ ಈಶ್ವರಪ್ಪ, ಶಿಕಾರಿಪುರದಲ್ಲಿ ನಾಗಾರಾಜ ಗೌಡನನ್ನು ತೆಗೆದ್ರು. ಮತ್ತೋರ್ವ ಹಿಂದುಳಿದ ವರ್ಗದ ಗೂಲಿ ಮಹಾಂತೇಶ್ ಅವರನ್ನು ತೆಗೆದ್ರು. ಇವೆಲ್ಲ ಕಾಂಗ್ರೆಸ್‌ಗೆ ಲಾಭ ಮಾಡಿ ಕೊಡಲು ಎಂದಿದ್ದಾರೆ.

ಧರ್ಮ ಅಂದ್ರೆ ಜಾತಿ ಸೀಮಿತ ಅಲ್ಲ. ನಮ್ಮದು ಧರ್ಮ ಯುದ್ದ. ಈ ಯುದ್ದದಲ್ಲಿ ದುಡ್ಡು, ಜಾತಿ ಸೋಲಲಿದೆ. ಧರ್ಮ ಗೆಲ್ಲಲಿದೆ. ಯಡಿಯೂರಪ್ಪ ಬಣಕ್ಕೆ ಬಿಜೆಪಿ ಕಾರ್ಯಕರ್ತರು ಅವರ ಜೊತೆ ಇದ್ದಾರೆ ಎಂಬ ಭಾವನೆಯಿದೆ. ಆದರೆ, ಕಾರ್ಯಕರ್ತರು ನಮ್ಮ ಜೊತೆಯಿದ್ದಾರೆ ಎಂದು ಹೇಳಿದ್ದಾರೆ.

ನಾನು ಸಾಮಾನ್ಯ ಜನರ ಕೈಗೆ ಸಿಗುವ ವ್ಯಕ್ತಿ. ಜನರು ಫೋನ್ ಮಾಡಿದ್ರೆ ನಾನು ಎತ್ತುತ್ತೇನೆ. ನನಗೆ ಅನ್ಯಾಯವಾಗಿದೆ ಎಂಬ ಭಾವನೆ ಜನರಲ್ಲಿ ಇದೆ. ನಾನು ಹಿಂದುತ್ವವಾದಿ. ರಾಘವೇಂದ್ರ ಅಂಡ್ ಕಂಪನಿ ನನ್ನ ಬೆಂಬಲಿಗರಿಗೆ ಫೋನ್ ಮಾಡಿ ಬೆದರಿಕೆ ಹಾಕುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಕಾಂಗ್ರೆಸ್‌ಗೆ ಮರಳಿದ ಪರಿಷತ್ ಮಾಜಿ ಸದಸ್ಯೆ ತೇಜಸ್ವಿನಿ ಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ...

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...