Homeಅಂಕಣಗಳುಹವ್ಯಕ ತರುಣರ ಸಮಸ್ಯೆ ಹಾಗೇ ಉಳಿಯಿತಲ್ಲಾ!

ಹವ್ಯಕ ತರುಣರ ಸಮಸ್ಯೆ ಹಾಗೇ ಉಳಿಯಿತಲ್ಲಾ!

- Advertisement -
- Advertisement -

ಈ ವರ್ಷದ ಅಂತ್ಯಭಾಗದಲ್ಲಿ ನಡೆದ ಮಹತ್ವದ ಘಟನೆಗಳಲ್ಲಿ ಮೊದಲನೆಯದಾವುದೆಂದರೆ, ಅದು ಅಖಿಲ ಹವ್ಯಕ ಮಹಾಸಭಾದ ಅಮೃತ ಮಹೋತ್ಸವವಂತಲ್ಲಾ. ಹವ್ಯಕ ಸಮಾಜ ನಮ್ಮ ನಡುವೆ ತುಂಬಾ ಪ್ರಭಾವಿಯಾದ ಸಮಾಜ ಎಂಬುದರಲ್ಲಿ ಎರಡನೇ ಮಾತಿಲ್ಲ, ಮೂರನೇ ಸದ್ದಿಲ್ಲ! ಈ ಜನಾಂಗದ ಜಗದ್ಗುರು ಮಠದ ಭಕ್ತೆಗೆ ನಾನೇ ರಾಮ, ನೀನೇ ನನಗಾಗಿ ಜನ್ಮವೆತ್ತಿ ಹುಡುಕುತ್ತಾ ಬಂದ ಸೀತೆ ಎಂದು ನಂಬಿಸಿದ ಪುರುಷೋತ್ತಮ. ಸದರಿ ರಾಘವನ ರಾಸಲೀಲೆ ಅತಿಯಾದ ಕಾರಣಕ್ಕೆ ನೊಂದ ಸೀತೆ ಕೋರ್ಟ್ ಮೆಟ್ಟಿಲೇರಿದಳು. ಆದರೇನು ರಾಘವೇಶ್ವರನ ಪ್ರಭಾವಕ್ಕೆ ಅಂಜಿದ ಜಡ್ಜ್‍ಗಳು ಈ ಕೇಸನ್ನು ನಾವು ಮುಟ್ಟುವುದಿಲ್ಲ ಎಂದು ಹಿಂದೆ ಸರಿದರು. ಧೈರ್ಯ ಮಾಡಿದ ಜಡ್ಜ್ ಒಬ್ಬರು `ಈ ರಾಮನ ಅಪರಾವತಾರಿ, ಪೊಲೀಸರ ಸ್ಥಳ ತನಿಖಾ ವರದಿ ಪ್ರಕಾರ 159 ಬಾರಿ ರತಿಸುಖ ರಾಸಲೀಲೆ ನಡೆಸಿರುವುದರಿಂದ ಒಪ್ಪಿತ ವಿಲಾಸ ಕ್ರೀಡೆಯಾಗುತ್ತದೆ. ಆದ್ದರಿಂದ ಇದು ಅತ್ಯಾಚಾರಕ್ಕೆ ದೂರ’ ಎನ್ನಲಾಗಿ ಇಡೀ ಹವ್ಯಕರಲ್ಲಿನ ರಾಘು ಅಭಿಮಾನಿಗಳು ಅಂದೇ ಅಮೃತ ಮಹೋತ್ಸವ ಮಾಡಿ ರಾಘು ಮೆರೆಸುವ ತೀರ್ಮಾನ ಕೈಗೊಂಡರಂತಲ್ಲಾ ಥೂತ್ತೇರಿ.

******

 

ರಾಘವೇಶ್ವರ ನೆಲೆಸಿರುವ ಪ್ರದೇಶದ ಶಾಸಕ ಹರತಾಳ ಹಾಲಪ್ಪ ರಾಘವನ ಪರಮ ಭಕ್ತ. ಆದ್ದರಿಂದ ಸಾಗರದ ಹವ್ಯಕರು ಆತನನ್ನು ಗೆಲ್ಲಿಸಿದರಂತಲ್ಲಾ. ಯಾಕೆಂದರೆ ಆ ಹಾಳು ತಿಮ್ಮಪ್ಪ ದಿನ ಬೆಳಗಾಯ್ತೆಂದರೆ ಜನಗಳ ಕೆಲಸ ಕುರಿತು ಯೋಚಿಸುತ್ತಾನೆ. ಕಾರ್ಯಕರ್ತರ ಖಾಸಗಿ ವಿಷಯವನೆಂದೂ ಕೇಳಿಲ್ಲ. ಅದೇ ಹಾಲಪ್ಪ ಜನರ ಖಾಸಗಿ ವಿಷಯ ಕೇಳುತ್ತಾನೆ. ಸಾಧ್ಯವಾದರೆ ಮನೆಗೂ ಬಂದುಬಿಡುತ್ತಾನೆ. ನಮ್ಮ ಮಡದಿಯ ಕೈಯಿಂದ ಕಾಫಿ ಮಾಡಿಸಿಕೊಂಡು ಕುಡಿಯುತ್ತಾನೆ. ನಮ್ಮ ಕೈಯಿಂದಲೇ ಬೀಡಿ ಸಿಗರೇಟು ಮಾತ್ರೆ ತರಿಸುತ್ತಾನೆ. ಇಂತಹ ಜನಾನುರಾಗಿ ಹಾಲಪ್ಪನೆಲ್ಲಿ ಆ ತಿಮ್ಮಪ್ಪನೆಲ್ಲಿ ಎಂದು ಚಿಂತಿಸಿ ಹಾಲಪ್ಪನನ್ನೇ ಆರಿಸಿದರಂತಲ್ಲಾ. ಅಂಥಾ ರಾಘವನಿಗೆ ಇಂತ ಹಾಲಪ್ಪನೇ ಸರಿ ಎಂದು ಹವ್ಯಕರು ಚಿಂತಿಸಿದ್ದಾಗ ರಾಘವನ ರಾಡಿ ತೆಗೆಯದೆ ಮೌನವಾಗಿದ್ದ ತಿಮ್ಮಪ್ಪನಿಗೆ ಹವ್ಯಕರು ಸರಿಯಾದ ಶಾಸ್ತಿ ಮಾಡಿದರಲ್ಲಾ. ಸದರಿ ಹಾಲಪ್ಪ ಯಾರಾದರೂ ಹವ್ಯಕರನ್ನ ಬೈದರೆ ನಾನು ಸುಮ್ಮನಿರುವುದಿಲ್ಲ, ರಾತ್ರಿ ನಿಮ್ಮ ಮನೆಗೇ ಬಂದು ಬಿಡುತ್ತೇನೆಂದು ಹೆದರಿಸಿದ್ದಾನಂತಲ್ಲಾ ಥೂತ್ತೇರಿ.

******

 

ಹವ್ಯಕರು ಹೆಚ್ಚು ನೆಲೆಸಿರುವ ಸಾಗರ ಪ್ರಾಂತ್ಯದಲ್ಲಿನ ಪ್ರತಿ ಹಳ್ಳಿಗಳಿಲ್ಲಿ 20ರಿಂದ 30 ಹುಡುಗರು ಅವಿವಾಹಿತರಾಗಿಯೇ ಇದ್ದಾರಂತಲ್ಲಾ. ಈ ಸಮಸ್ಯೆ ರಾಮಚಂದ್ರಾಪುರ ಮಠದ ಗುರುಗಳನ್ನ ತೀವ್ರವಾಗಿ ಕಾಡಬೇಕಿತ್ತು. ಆದರೆ ತರುಣರ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಿಕೊಂಡ ಗುರುಗಳ ಅನೈತಿಕ ಬದುಕನ್ನೇ ಮನ್ನಿಸಿದ ಜನ, ಅವರಿಗೆ ಪೂರ್ಣ ಬೆಂಬಲ ಕೊಡುವ ನಿರ್ಣಯವನ್ನೇ ಕೈಗೊಂಡರಂತಲ್ಲಾ. ಕಾರಣ ಈ ರಾಮಚಂದ್ರಾಪುರ ಮಠ ಜಗತ್ತಿನ ಏಕೈಕ ಮಠ ಅಂತಹ ಮಠದಲ್ಲಿ ಈ ತರಹ ಇರುವ ಏಕೈಕ ಜಗದ್ಗುರು ರಾಘವೇಶ್ವರ ಅವರ ಅಜನ್ಮ ಬ್ರಹ್ಮಚಾರಿ ಬದುಕನ್ನ ಕೊಂಡಾಡುತ್ತ ತರುಣರು, ಕನ್ಯೆ ಇಲ್ಲದ ತಮ್ಮ ಬದುಕನ್ನು ಪೂರ್ಣಗೊಳಿಸಬೇಕು ಎಂಬ ಗುಪ್ತ ಚರ್ಚೆ ಬೆಂಗಳೂರಲ್ಲಿ ಆಯ್ತಂತಲ್ಲಾ. ಅದೇನಾದರಾಗಲಿ ಅಖಿಲ ಭಾರತ ಹವ್ಯಕ ಮಹಾಸಭೆಯಲ್ಲಿ ಹವ್ಯಕ ತರುಣರ ಲೈಂಗಿಕ ಸಮಸ್ಯೆ ಚರ್ಚೆಗೇ ಬರದಿರುವುದಕ್ಕೆ ಕಾರಣ `ಎಲ್ಲರೂ ಅವರ ಜಗದ್ಗುರು ದಾರಿಯಲ್ಲಿ ನಡೆಯುತ್ತಾರೆ, ಇಲ್ಲವಾದಲ್ಲಿ ಅವರ ಬದುಕು ಅವರ ಕೈಯಲ್ಲಿ’ ಎಂಬ ತಾತ್ಸಾರದ ಮನೋಭಾವವೇ ಕಾರಣವಂತಲ್ಲಾ ಥೂತ್ತೇರಿ.

 

******

 

ಸಮ್ಮಿಶ್ರ ಸರಕಾರದ ವರಸೆ ನೋಡಿದ ರೈತರು ಈ ಸರಕಾರದಿಂದ ನಮ್ಮ ಸಾಲಮನ್ನಾ ಸಾಧ್ಯವೇ ಎಂದು ಚಿಂತಿಸುತ್ತಿರುವಾಗ, ಭಾವುಕರಾದ ಕುಮಾರಣ್ಣ `ರೈತ ಬಾಂಧವರೇ ಮತ್ತು ಅಣ್ಣತಮ್ಮಂದಿರೆ ಮತ್ತು ಅಕ್ಕಭಾವಂದಿರೆ ಹಾಗೂ ನಮ್ಮ ತಂದೆಯ ಅಭಿಮಾನಿಗಳೇ, ಏನು ನೀವು ಒಂದು ಅನುಮಾನ ಪಡ್ತಾ ಇರತಕ್ಕಂತ ವಿಷಯ ಏನಿದೆ ಅದು ನನಿಗೆ ಅರ್ಥ ಆಗ್ತಕ್ಕಂತದ್ದು. ಆ ದಿಸೆಲಿ ಯಾರು ಅನುಮಾನ ಪಡಬೇಡಿ. ಈಗಾಗಲೇ ರಾಜ್ಯೋತ್ಸವ ಪಡೆದಿರತಕ್ಕಂತ ಪ್ರಶಸ್ತಿ ವಿಜೇತರಿಗೆ ಕೊಡತಕ್ಕಂತ 63 ಲಕ್ಷ ರೂಪಾಯಿ ಹಣವನ್ನ ಒದಗಿಸಿ ಕೊಟ್ಟ ನಂತರ ನಮ್ಮ ರೈತ ಬಾಂಧವರ ಸಾಲವನ್ನ ಮನ್ನಾ ಮಾಡ್ತಕ್ಕಂತದ್ದರ ಬಗ್ಗೆ ಚಿಂತನೆ ಮಾಡ್ತಿನಿ. ನನ್ನ ಜೀವಿತಾವಧಿಯಲ್ಲೇ ನಿಮ್ಮ ಸಾಲ ಏನಿದೆ ಅದು ಯಾವುದೇ ಬ್ಯಾಂಕಿನಲ್ಲಿರಲಿ ಅಥವಾ ಬಡ್ಡಿ ದಂಧೆಯವರದ್ದೇ ಇರಲಿ, ಅದನ್ನ ಮನ್ನಾ ಮಾಡ್ತಕ್ಕಂತದಕ್ಕೆ ಬೇಗ ತೀರ್ಮಾನಕ್ಕೆ ಬರ್ತಕ್ಕಂತ ಕ್ಯೆಲುಸ ಮಾಡ್ತಿನಿ. ಈ ವಿಷಯದಲ್ಲಿ ನೀವು ಯಾವುದೇ ಚಾಡಿ ಮಾತನ್ನ ಕೇಳದೆ ನನ್ನನ್ನ ನಂಬಿದರೆ ನನ್ನ ಏಕೈಕ ಪುತ್ರ ನಿಖಿಲ್‍ಗೌಡನ ಮೇಲೆ ಆಣೆ ಮಾಡಿ ಹೇಳ್ತೀನಿ, ನಿಮ್ಮ ರುಣ ಇಟ್ಟಗಳಲ್ಲ’ ಎಂದರಂತಲ್ಲಾ ಥೂತ್ತೇರಿ.

******

 

ಹಳೇ ಕಾಯಿಲೆಯ ಹೊಸ ಮನುಷ್ಯ ದಾಬಸ್‍ಪೇಟೆಯ ಡಿಶ್‍ನಾಗ್ ಮುಂದಿನ ಚುನಾವಣೆಯಲ್ಲಿ ದೇಶದ ಜನ ಮುಂದೆ ಮತ್ತೆ ಮೋದಿಯವರೇ ಇರಲಿ ಎಂದು ತೀರ್ಮಾನಿಸಿದರೆ ಆಶ್ಚರ್ಯವಿಲ್ಲ ಎಂಬ ಬೆದರಿಕೆ ಹುಟ್ಟಿಸಿದ್ದಾರಲ್ಲಾ. ಈ ರಾಜಕೀಯ ಪಂಡಿತರ ಪ್ರಕಾರ ಉತ್ತರ ಭಾರತದಲ್ಲಿ ಅಧಿಕಾರ ಕಳೆದುಕೊಂಡ ಬಿಜೆಪಿಯಲ್ಲಿ ಜನ ಗುರುತಿಸಿರುವ ಸಮಸ್ಯೆ ಇದೆ ಎಂದು ವ್ಯಾಖ್ಯಾನಿಸಿದ್ದಾರೆ. ಬಿಜೆಪಿಯಲ್ಲಿ ಇರಬಹುದಾದ ಆ ನಿಗೂಢ ಸಮಸ್ಯೆ ಯಾವುದೆಂಬುದನ್ನ ಪ್ರಖರ ಸಮಾಜವಾದಿಗಳು ವಿವರಿಸುವ ಗೋಜಿಗೆ ಹೋಗಿಲ್ಲ. ಕಾಂಗೈನ ಅಣುಅಣುವನ್ನ ವಿಶ್ಲೇಷಿಸಿ ಅವರ ಟೀಕೆಯಲ್ಲೇ ಖುಷಿಕಾಣುವ ಈ ರಾಜಕೀಯ ಪಂಡಿತರು ಬಿ.ಜೆ.ಪಿ ಸಮಸ್ಯೆಯನ್ನ ಅನಾವರಣ ಮಾಡಬೇಕಿತ್ತು. ಅದು ಬಿಟ್ಟು ಪಬ್ಲಿಕ್ ಟಿವಿಯ ಕಡ್ಡಿ ರಂಗನಂತೆ ಕಾಂಗೈ ಸೋತ ಕ್ಷೇತ್ರಗಳ ಬಗ್ಗೆ ಟೀಕೆಗೆ ತಮ್ಮ ವಿದ್ವತ್ತನ್ನ ಬಳಸಬಾರದಿತ್ತು. ಉತ್ತರ ಭಾರತದ ರಾಜ್ಯಗಳು ಬಿಜೆಪಿಯ ದೈತ್ಯ ಶಕ್ತಿ ಎದುರು ಬರಿಗೈಲಿ ಚುನಾವಣೆ ಎದುರಿಸಿ ಕಾಂಗೈ ಗೆಲ್ಲಿಸಿವೆ. ಇದು ಗುಪ್ತ ಬಿಜೆಪಿ ಅಭಿಮಾನಿ ವಿದ್ವಾಂಸರಿಗೆ ನಿದ್ದೆಗೆಡಿಸುವ ಸಂಗತಿಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...