Homeಅಂಕಣಗಳುಹವ್ಯಕ ತರುಣರ ಸಮಸ್ಯೆ ಹಾಗೇ ಉಳಿಯಿತಲ್ಲಾ!

ಹವ್ಯಕ ತರುಣರ ಸಮಸ್ಯೆ ಹಾಗೇ ಉಳಿಯಿತಲ್ಲಾ!

- Advertisement -
- Advertisement -

ಈ ವರ್ಷದ ಅಂತ್ಯಭಾಗದಲ್ಲಿ ನಡೆದ ಮಹತ್ವದ ಘಟನೆಗಳಲ್ಲಿ ಮೊದಲನೆಯದಾವುದೆಂದರೆ, ಅದು ಅಖಿಲ ಹವ್ಯಕ ಮಹಾಸಭಾದ ಅಮೃತ ಮಹೋತ್ಸವವಂತಲ್ಲಾ. ಹವ್ಯಕ ಸಮಾಜ ನಮ್ಮ ನಡುವೆ ತುಂಬಾ ಪ್ರಭಾವಿಯಾದ ಸಮಾಜ ಎಂಬುದರಲ್ಲಿ ಎರಡನೇ ಮಾತಿಲ್ಲ, ಮೂರನೇ ಸದ್ದಿಲ್ಲ! ಈ ಜನಾಂಗದ ಜಗದ್ಗುರು ಮಠದ ಭಕ್ತೆಗೆ ನಾನೇ ರಾಮ, ನೀನೇ ನನಗಾಗಿ ಜನ್ಮವೆತ್ತಿ ಹುಡುಕುತ್ತಾ ಬಂದ ಸೀತೆ ಎಂದು ನಂಬಿಸಿದ ಪುರುಷೋತ್ತಮ. ಸದರಿ ರಾಘವನ ರಾಸಲೀಲೆ ಅತಿಯಾದ ಕಾರಣಕ್ಕೆ ನೊಂದ ಸೀತೆ ಕೋರ್ಟ್ ಮೆಟ್ಟಿಲೇರಿದಳು. ಆದರೇನು ರಾಘವೇಶ್ವರನ ಪ್ರಭಾವಕ್ಕೆ ಅಂಜಿದ ಜಡ್ಜ್‍ಗಳು ಈ ಕೇಸನ್ನು ನಾವು ಮುಟ್ಟುವುದಿಲ್ಲ ಎಂದು ಹಿಂದೆ ಸರಿದರು. ಧೈರ್ಯ ಮಾಡಿದ ಜಡ್ಜ್ ಒಬ್ಬರು `ಈ ರಾಮನ ಅಪರಾವತಾರಿ, ಪೊಲೀಸರ ಸ್ಥಳ ತನಿಖಾ ವರದಿ ಪ್ರಕಾರ 159 ಬಾರಿ ರತಿಸುಖ ರಾಸಲೀಲೆ ನಡೆಸಿರುವುದರಿಂದ ಒಪ್ಪಿತ ವಿಲಾಸ ಕ್ರೀಡೆಯಾಗುತ್ತದೆ. ಆದ್ದರಿಂದ ಇದು ಅತ್ಯಾಚಾರಕ್ಕೆ ದೂರ’ ಎನ್ನಲಾಗಿ ಇಡೀ ಹವ್ಯಕರಲ್ಲಿನ ರಾಘು ಅಭಿಮಾನಿಗಳು ಅಂದೇ ಅಮೃತ ಮಹೋತ್ಸವ ಮಾಡಿ ರಾಘು ಮೆರೆಸುವ ತೀರ್ಮಾನ ಕೈಗೊಂಡರಂತಲ್ಲಾ ಥೂತ್ತೇರಿ.

******

 

ರಾಘವೇಶ್ವರ ನೆಲೆಸಿರುವ ಪ್ರದೇಶದ ಶಾಸಕ ಹರತಾಳ ಹಾಲಪ್ಪ ರಾಘವನ ಪರಮ ಭಕ್ತ. ಆದ್ದರಿಂದ ಸಾಗರದ ಹವ್ಯಕರು ಆತನನ್ನು ಗೆಲ್ಲಿಸಿದರಂತಲ್ಲಾ. ಯಾಕೆಂದರೆ ಆ ಹಾಳು ತಿಮ್ಮಪ್ಪ ದಿನ ಬೆಳಗಾಯ್ತೆಂದರೆ ಜನಗಳ ಕೆಲಸ ಕುರಿತು ಯೋಚಿಸುತ್ತಾನೆ. ಕಾರ್ಯಕರ್ತರ ಖಾಸಗಿ ವಿಷಯವನೆಂದೂ ಕೇಳಿಲ್ಲ. ಅದೇ ಹಾಲಪ್ಪ ಜನರ ಖಾಸಗಿ ವಿಷಯ ಕೇಳುತ್ತಾನೆ. ಸಾಧ್ಯವಾದರೆ ಮನೆಗೂ ಬಂದುಬಿಡುತ್ತಾನೆ. ನಮ್ಮ ಮಡದಿಯ ಕೈಯಿಂದ ಕಾಫಿ ಮಾಡಿಸಿಕೊಂಡು ಕುಡಿಯುತ್ತಾನೆ. ನಮ್ಮ ಕೈಯಿಂದಲೇ ಬೀಡಿ ಸಿಗರೇಟು ಮಾತ್ರೆ ತರಿಸುತ್ತಾನೆ. ಇಂತಹ ಜನಾನುರಾಗಿ ಹಾಲಪ್ಪನೆಲ್ಲಿ ಆ ತಿಮ್ಮಪ್ಪನೆಲ್ಲಿ ಎಂದು ಚಿಂತಿಸಿ ಹಾಲಪ್ಪನನ್ನೇ ಆರಿಸಿದರಂತಲ್ಲಾ. ಅಂಥಾ ರಾಘವನಿಗೆ ಇಂತ ಹಾಲಪ್ಪನೇ ಸರಿ ಎಂದು ಹವ್ಯಕರು ಚಿಂತಿಸಿದ್ದಾಗ ರಾಘವನ ರಾಡಿ ತೆಗೆಯದೆ ಮೌನವಾಗಿದ್ದ ತಿಮ್ಮಪ್ಪನಿಗೆ ಹವ್ಯಕರು ಸರಿಯಾದ ಶಾಸ್ತಿ ಮಾಡಿದರಲ್ಲಾ. ಸದರಿ ಹಾಲಪ್ಪ ಯಾರಾದರೂ ಹವ್ಯಕರನ್ನ ಬೈದರೆ ನಾನು ಸುಮ್ಮನಿರುವುದಿಲ್ಲ, ರಾತ್ರಿ ನಿಮ್ಮ ಮನೆಗೇ ಬಂದು ಬಿಡುತ್ತೇನೆಂದು ಹೆದರಿಸಿದ್ದಾನಂತಲ್ಲಾ ಥೂತ್ತೇರಿ.

******

 

ಹವ್ಯಕರು ಹೆಚ್ಚು ನೆಲೆಸಿರುವ ಸಾಗರ ಪ್ರಾಂತ್ಯದಲ್ಲಿನ ಪ್ರತಿ ಹಳ್ಳಿಗಳಿಲ್ಲಿ 20ರಿಂದ 30 ಹುಡುಗರು ಅವಿವಾಹಿತರಾಗಿಯೇ ಇದ್ದಾರಂತಲ್ಲಾ. ಈ ಸಮಸ್ಯೆ ರಾಮಚಂದ್ರಾಪುರ ಮಠದ ಗುರುಗಳನ್ನ ತೀವ್ರವಾಗಿ ಕಾಡಬೇಕಿತ್ತು. ಆದರೆ ತರುಣರ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಿಕೊಂಡ ಗುರುಗಳ ಅನೈತಿಕ ಬದುಕನ್ನೇ ಮನ್ನಿಸಿದ ಜನ, ಅವರಿಗೆ ಪೂರ್ಣ ಬೆಂಬಲ ಕೊಡುವ ನಿರ್ಣಯವನ್ನೇ ಕೈಗೊಂಡರಂತಲ್ಲಾ. ಕಾರಣ ಈ ರಾಮಚಂದ್ರಾಪುರ ಮಠ ಜಗತ್ತಿನ ಏಕೈಕ ಮಠ ಅಂತಹ ಮಠದಲ್ಲಿ ಈ ತರಹ ಇರುವ ಏಕೈಕ ಜಗದ್ಗುರು ರಾಘವೇಶ್ವರ ಅವರ ಅಜನ್ಮ ಬ್ರಹ್ಮಚಾರಿ ಬದುಕನ್ನ ಕೊಂಡಾಡುತ್ತ ತರುಣರು, ಕನ್ಯೆ ಇಲ್ಲದ ತಮ್ಮ ಬದುಕನ್ನು ಪೂರ್ಣಗೊಳಿಸಬೇಕು ಎಂಬ ಗುಪ್ತ ಚರ್ಚೆ ಬೆಂಗಳೂರಲ್ಲಿ ಆಯ್ತಂತಲ್ಲಾ. ಅದೇನಾದರಾಗಲಿ ಅಖಿಲ ಭಾರತ ಹವ್ಯಕ ಮಹಾಸಭೆಯಲ್ಲಿ ಹವ್ಯಕ ತರುಣರ ಲೈಂಗಿಕ ಸಮಸ್ಯೆ ಚರ್ಚೆಗೇ ಬರದಿರುವುದಕ್ಕೆ ಕಾರಣ `ಎಲ್ಲರೂ ಅವರ ಜಗದ್ಗುರು ದಾರಿಯಲ್ಲಿ ನಡೆಯುತ್ತಾರೆ, ಇಲ್ಲವಾದಲ್ಲಿ ಅವರ ಬದುಕು ಅವರ ಕೈಯಲ್ಲಿ’ ಎಂಬ ತಾತ್ಸಾರದ ಮನೋಭಾವವೇ ಕಾರಣವಂತಲ್ಲಾ ಥೂತ್ತೇರಿ.

 

******

 

ಸಮ್ಮಿಶ್ರ ಸರಕಾರದ ವರಸೆ ನೋಡಿದ ರೈತರು ಈ ಸರಕಾರದಿಂದ ನಮ್ಮ ಸಾಲಮನ್ನಾ ಸಾಧ್ಯವೇ ಎಂದು ಚಿಂತಿಸುತ್ತಿರುವಾಗ, ಭಾವುಕರಾದ ಕುಮಾರಣ್ಣ `ರೈತ ಬಾಂಧವರೇ ಮತ್ತು ಅಣ್ಣತಮ್ಮಂದಿರೆ ಮತ್ತು ಅಕ್ಕಭಾವಂದಿರೆ ಹಾಗೂ ನಮ್ಮ ತಂದೆಯ ಅಭಿಮಾನಿಗಳೇ, ಏನು ನೀವು ಒಂದು ಅನುಮಾನ ಪಡ್ತಾ ಇರತಕ್ಕಂತ ವಿಷಯ ಏನಿದೆ ಅದು ನನಿಗೆ ಅರ್ಥ ಆಗ್ತಕ್ಕಂತದ್ದು. ಆ ದಿಸೆಲಿ ಯಾರು ಅನುಮಾನ ಪಡಬೇಡಿ. ಈಗಾಗಲೇ ರಾಜ್ಯೋತ್ಸವ ಪಡೆದಿರತಕ್ಕಂತ ಪ್ರಶಸ್ತಿ ವಿಜೇತರಿಗೆ ಕೊಡತಕ್ಕಂತ 63 ಲಕ್ಷ ರೂಪಾಯಿ ಹಣವನ್ನ ಒದಗಿಸಿ ಕೊಟ್ಟ ನಂತರ ನಮ್ಮ ರೈತ ಬಾಂಧವರ ಸಾಲವನ್ನ ಮನ್ನಾ ಮಾಡ್ತಕ್ಕಂತದ್ದರ ಬಗ್ಗೆ ಚಿಂತನೆ ಮಾಡ್ತಿನಿ. ನನ್ನ ಜೀವಿತಾವಧಿಯಲ್ಲೇ ನಿಮ್ಮ ಸಾಲ ಏನಿದೆ ಅದು ಯಾವುದೇ ಬ್ಯಾಂಕಿನಲ್ಲಿರಲಿ ಅಥವಾ ಬಡ್ಡಿ ದಂಧೆಯವರದ್ದೇ ಇರಲಿ, ಅದನ್ನ ಮನ್ನಾ ಮಾಡ್ತಕ್ಕಂತದಕ್ಕೆ ಬೇಗ ತೀರ್ಮಾನಕ್ಕೆ ಬರ್ತಕ್ಕಂತ ಕ್ಯೆಲುಸ ಮಾಡ್ತಿನಿ. ಈ ವಿಷಯದಲ್ಲಿ ನೀವು ಯಾವುದೇ ಚಾಡಿ ಮಾತನ್ನ ಕೇಳದೆ ನನ್ನನ್ನ ನಂಬಿದರೆ ನನ್ನ ಏಕೈಕ ಪುತ್ರ ನಿಖಿಲ್‍ಗೌಡನ ಮೇಲೆ ಆಣೆ ಮಾಡಿ ಹೇಳ್ತೀನಿ, ನಿಮ್ಮ ರುಣ ಇಟ್ಟಗಳಲ್ಲ’ ಎಂದರಂತಲ್ಲಾ ಥೂತ್ತೇರಿ.

******

 

ಹಳೇ ಕಾಯಿಲೆಯ ಹೊಸ ಮನುಷ್ಯ ದಾಬಸ್‍ಪೇಟೆಯ ಡಿಶ್‍ನಾಗ್ ಮುಂದಿನ ಚುನಾವಣೆಯಲ್ಲಿ ದೇಶದ ಜನ ಮುಂದೆ ಮತ್ತೆ ಮೋದಿಯವರೇ ಇರಲಿ ಎಂದು ತೀರ್ಮಾನಿಸಿದರೆ ಆಶ್ಚರ್ಯವಿಲ್ಲ ಎಂಬ ಬೆದರಿಕೆ ಹುಟ್ಟಿಸಿದ್ದಾರಲ್ಲಾ. ಈ ರಾಜಕೀಯ ಪಂಡಿತರ ಪ್ರಕಾರ ಉತ್ತರ ಭಾರತದಲ್ಲಿ ಅಧಿಕಾರ ಕಳೆದುಕೊಂಡ ಬಿಜೆಪಿಯಲ್ಲಿ ಜನ ಗುರುತಿಸಿರುವ ಸಮಸ್ಯೆ ಇದೆ ಎಂದು ವ್ಯಾಖ್ಯಾನಿಸಿದ್ದಾರೆ. ಬಿಜೆಪಿಯಲ್ಲಿ ಇರಬಹುದಾದ ಆ ನಿಗೂಢ ಸಮಸ್ಯೆ ಯಾವುದೆಂಬುದನ್ನ ಪ್ರಖರ ಸಮಾಜವಾದಿಗಳು ವಿವರಿಸುವ ಗೋಜಿಗೆ ಹೋಗಿಲ್ಲ. ಕಾಂಗೈನ ಅಣುಅಣುವನ್ನ ವಿಶ್ಲೇಷಿಸಿ ಅವರ ಟೀಕೆಯಲ್ಲೇ ಖುಷಿಕಾಣುವ ಈ ರಾಜಕೀಯ ಪಂಡಿತರು ಬಿ.ಜೆ.ಪಿ ಸಮಸ್ಯೆಯನ್ನ ಅನಾವರಣ ಮಾಡಬೇಕಿತ್ತು. ಅದು ಬಿಟ್ಟು ಪಬ್ಲಿಕ್ ಟಿವಿಯ ಕಡ್ಡಿ ರಂಗನಂತೆ ಕಾಂಗೈ ಸೋತ ಕ್ಷೇತ್ರಗಳ ಬಗ್ಗೆ ಟೀಕೆಗೆ ತಮ್ಮ ವಿದ್ವತ್ತನ್ನ ಬಳಸಬಾರದಿತ್ತು. ಉತ್ತರ ಭಾರತದ ರಾಜ್ಯಗಳು ಬಿಜೆಪಿಯ ದೈತ್ಯ ಶಕ್ತಿ ಎದುರು ಬರಿಗೈಲಿ ಚುನಾವಣೆ ಎದುರಿಸಿ ಕಾಂಗೈ ಗೆಲ್ಲಿಸಿವೆ. ಇದು ಗುಪ್ತ ಬಿಜೆಪಿ ಅಭಿಮಾನಿ ವಿದ್ವಾಂಸರಿಗೆ ನಿದ್ದೆಗೆಡಿಸುವ ಸಂಗತಿಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...