Homeಅಂಕಣಗಳುಹವ್ಯಕ ತರುಣರ ಸಮಸ್ಯೆ ಹಾಗೇ ಉಳಿಯಿತಲ್ಲಾ!

ಹವ್ಯಕ ತರುಣರ ಸಮಸ್ಯೆ ಹಾಗೇ ಉಳಿಯಿತಲ್ಲಾ!

- Advertisement -
- Advertisement -

ಈ ವರ್ಷದ ಅಂತ್ಯಭಾಗದಲ್ಲಿ ನಡೆದ ಮಹತ್ವದ ಘಟನೆಗಳಲ್ಲಿ ಮೊದಲನೆಯದಾವುದೆಂದರೆ, ಅದು ಅಖಿಲ ಹವ್ಯಕ ಮಹಾಸಭಾದ ಅಮೃತ ಮಹೋತ್ಸವವಂತಲ್ಲಾ. ಹವ್ಯಕ ಸಮಾಜ ನಮ್ಮ ನಡುವೆ ತುಂಬಾ ಪ್ರಭಾವಿಯಾದ ಸಮಾಜ ಎಂಬುದರಲ್ಲಿ ಎರಡನೇ ಮಾತಿಲ್ಲ, ಮೂರನೇ ಸದ್ದಿಲ್ಲ! ಈ ಜನಾಂಗದ ಜಗದ್ಗುರು ಮಠದ ಭಕ್ತೆಗೆ ನಾನೇ ರಾಮ, ನೀನೇ ನನಗಾಗಿ ಜನ್ಮವೆತ್ತಿ ಹುಡುಕುತ್ತಾ ಬಂದ ಸೀತೆ ಎಂದು ನಂಬಿಸಿದ ಪುರುಷೋತ್ತಮ. ಸದರಿ ರಾಘವನ ರಾಸಲೀಲೆ ಅತಿಯಾದ ಕಾರಣಕ್ಕೆ ನೊಂದ ಸೀತೆ ಕೋರ್ಟ್ ಮೆಟ್ಟಿಲೇರಿದಳು. ಆದರೇನು ರಾಘವೇಶ್ವರನ ಪ್ರಭಾವಕ್ಕೆ ಅಂಜಿದ ಜಡ್ಜ್‍ಗಳು ಈ ಕೇಸನ್ನು ನಾವು ಮುಟ್ಟುವುದಿಲ್ಲ ಎಂದು ಹಿಂದೆ ಸರಿದರು. ಧೈರ್ಯ ಮಾಡಿದ ಜಡ್ಜ್ ಒಬ್ಬರು `ಈ ರಾಮನ ಅಪರಾವತಾರಿ, ಪೊಲೀಸರ ಸ್ಥಳ ತನಿಖಾ ವರದಿ ಪ್ರಕಾರ 159 ಬಾರಿ ರತಿಸುಖ ರಾಸಲೀಲೆ ನಡೆಸಿರುವುದರಿಂದ ಒಪ್ಪಿತ ವಿಲಾಸ ಕ್ರೀಡೆಯಾಗುತ್ತದೆ. ಆದ್ದರಿಂದ ಇದು ಅತ್ಯಾಚಾರಕ್ಕೆ ದೂರ’ ಎನ್ನಲಾಗಿ ಇಡೀ ಹವ್ಯಕರಲ್ಲಿನ ರಾಘು ಅಭಿಮಾನಿಗಳು ಅಂದೇ ಅಮೃತ ಮಹೋತ್ಸವ ಮಾಡಿ ರಾಘು ಮೆರೆಸುವ ತೀರ್ಮಾನ ಕೈಗೊಂಡರಂತಲ್ಲಾ ಥೂತ್ತೇರಿ.

******

 

ರಾಘವೇಶ್ವರ ನೆಲೆಸಿರುವ ಪ್ರದೇಶದ ಶಾಸಕ ಹರತಾಳ ಹಾಲಪ್ಪ ರಾಘವನ ಪರಮ ಭಕ್ತ. ಆದ್ದರಿಂದ ಸಾಗರದ ಹವ್ಯಕರು ಆತನನ್ನು ಗೆಲ್ಲಿಸಿದರಂತಲ್ಲಾ. ಯಾಕೆಂದರೆ ಆ ಹಾಳು ತಿಮ್ಮಪ್ಪ ದಿನ ಬೆಳಗಾಯ್ತೆಂದರೆ ಜನಗಳ ಕೆಲಸ ಕುರಿತು ಯೋಚಿಸುತ್ತಾನೆ. ಕಾರ್ಯಕರ್ತರ ಖಾಸಗಿ ವಿಷಯವನೆಂದೂ ಕೇಳಿಲ್ಲ. ಅದೇ ಹಾಲಪ್ಪ ಜನರ ಖಾಸಗಿ ವಿಷಯ ಕೇಳುತ್ತಾನೆ. ಸಾಧ್ಯವಾದರೆ ಮನೆಗೂ ಬಂದುಬಿಡುತ್ತಾನೆ. ನಮ್ಮ ಮಡದಿಯ ಕೈಯಿಂದ ಕಾಫಿ ಮಾಡಿಸಿಕೊಂಡು ಕುಡಿಯುತ್ತಾನೆ. ನಮ್ಮ ಕೈಯಿಂದಲೇ ಬೀಡಿ ಸಿಗರೇಟು ಮಾತ್ರೆ ತರಿಸುತ್ತಾನೆ. ಇಂತಹ ಜನಾನುರಾಗಿ ಹಾಲಪ್ಪನೆಲ್ಲಿ ಆ ತಿಮ್ಮಪ್ಪನೆಲ್ಲಿ ಎಂದು ಚಿಂತಿಸಿ ಹಾಲಪ್ಪನನ್ನೇ ಆರಿಸಿದರಂತಲ್ಲಾ. ಅಂಥಾ ರಾಘವನಿಗೆ ಇಂತ ಹಾಲಪ್ಪನೇ ಸರಿ ಎಂದು ಹವ್ಯಕರು ಚಿಂತಿಸಿದ್ದಾಗ ರಾಘವನ ರಾಡಿ ತೆಗೆಯದೆ ಮೌನವಾಗಿದ್ದ ತಿಮ್ಮಪ್ಪನಿಗೆ ಹವ್ಯಕರು ಸರಿಯಾದ ಶಾಸ್ತಿ ಮಾಡಿದರಲ್ಲಾ. ಸದರಿ ಹಾಲಪ್ಪ ಯಾರಾದರೂ ಹವ್ಯಕರನ್ನ ಬೈದರೆ ನಾನು ಸುಮ್ಮನಿರುವುದಿಲ್ಲ, ರಾತ್ರಿ ನಿಮ್ಮ ಮನೆಗೇ ಬಂದು ಬಿಡುತ್ತೇನೆಂದು ಹೆದರಿಸಿದ್ದಾನಂತಲ್ಲಾ ಥೂತ್ತೇರಿ.

******

 

ಹವ್ಯಕರು ಹೆಚ್ಚು ನೆಲೆಸಿರುವ ಸಾಗರ ಪ್ರಾಂತ್ಯದಲ್ಲಿನ ಪ್ರತಿ ಹಳ್ಳಿಗಳಿಲ್ಲಿ 20ರಿಂದ 30 ಹುಡುಗರು ಅವಿವಾಹಿತರಾಗಿಯೇ ಇದ್ದಾರಂತಲ್ಲಾ. ಈ ಸಮಸ್ಯೆ ರಾಮಚಂದ್ರಾಪುರ ಮಠದ ಗುರುಗಳನ್ನ ತೀವ್ರವಾಗಿ ಕಾಡಬೇಕಿತ್ತು. ಆದರೆ ತರುಣರ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಿಕೊಂಡ ಗುರುಗಳ ಅನೈತಿಕ ಬದುಕನ್ನೇ ಮನ್ನಿಸಿದ ಜನ, ಅವರಿಗೆ ಪೂರ್ಣ ಬೆಂಬಲ ಕೊಡುವ ನಿರ್ಣಯವನ್ನೇ ಕೈಗೊಂಡರಂತಲ್ಲಾ. ಕಾರಣ ಈ ರಾಮಚಂದ್ರಾಪುರ ಮಠ ಜಗತ್ತಿನ ಏಕೈಕ ಮಠ ಅಂತಹ ಮಠದಲ್ಲಿ ಈ ತರಹ ಇರುವ ಏಕೈಕ ಜಗದ್ಗುರು ರಾಘವೇಶ್ವರ ಅವರ ಅಜನ್ಮ ಬ್ರಹ್ಮಚಾರಿ ಬದುಕನ್ನ ಕೊಂಡಾಡುತ್ತ ತರುಣರು, ಕನ್ಯೆ ಇಲ್ಲದ ತಮ್ಮ ಬದುಕನ್ನು ಪೂರ್ಣಗೊಳಿಸಬೇಕು ಎಂಬ ಗುಪ್ತ ಚರ್ಚೆ ಬೆಂಗಳೂರಲ್ಲಿ ಆಯ್ತಂತಲ್ಲಾ. ಅದೇನಾದರಾಗಲಿ ಅಖಿಲ ಭಾರತ ಹವ್ಯಕ ಮಹಾಸಭೆಯಲ್ಲಿ ಹವ್ಯಕ ತರುಣರ ಲೈಂಗಿಕ ಸಮಸ್ಯೆ ಚರ್ಚೆಗೇ ಬರದಿರುವುದಕ್ಕೆ ಕಾರಣ `ಎಲ್ಲರೂ ಅವರ ಜಗದ್ಗುರು ದಾರಿಯಲ್ಲಿ ನಡೆಯುತ್ತಾರೆ, ಇಲ್ಲವಾದಲ್ಲಿ ಅವರ ಬದುಕು ಅವರ ಕೈಯಲ್ಲಿ’ ಎಂಬ ತಾತ್ಸಾರದ ಮನೋಭಾವವೇ ಕಾರಣವಂತಲ್ಲಾ ಥೂತ್ತೇರಿ.

 

******

 

ಸಮ್ಮಿಶ್ರ ಸರಕಾರದ ವರಸೆ ನೋಡಿದ ರೈತರು ಈ ಸರಕಾರದಿಂದ ನಮ್ಮ ಸಾಲಮನ್ನಾ ಸಾಧ್ಯವೇ ಎಂದು ಚಿಂತಿಸುತ್ತಿರುವಾಗ, ಭಾವುಕರಾದ ಕುಮಾರಣ್ಣ `ರೈತ ಬಾಂಧವರೇ ಮತ್ತು ಅಣ್ಣತಮ್ಮಂದಿರೆ ಮತ್ತು ಅಕ್ಕಭಾವಂದಿರೆ ಹಾಗೂ ನಮ್ಮ ತಂದೆಯ ಅಭಿಮಾನಿಗಳೇ, ಏನು ನೀವು ಒಂದು ಅನುಮಾನ ಪಡ್ತಾ ಇರತಕ್ಕಂತ ವಿಷಯ ಏನಿದೆ ಅದು ನನಿಗೆ ಅರ್ಥ ಆಗ್ತಕ್ಕಂತದ್ದು. ಆ ದಿಸೆಲಿ ಯಾರು ಅನುಮಾನ ಪಡಬೇಡಿ. ಈಗಾಗಲೇ ರಾಜ್ಯೋತ್ಸವ ಪಡೆದಿರತಕ್ಕಂತ ಪ್ರಶಸ್ತಿ ವಿಜೇತರಿಗೆ ಕೊಡತಕ್ಕಂತ 63 ಲಕ್ಷ ರೂಪಾಯಿ ಹಣವನ್ನ ಒದಗಿಸಿ ಕೊಟ್ಟ ನಂತರ ನಮ್ಮ ರೈತ ಬಾಂಧವರ ಸಾಲವನ್ನ ಮನ್ನಾ ಮಾಡ್ತಕ್ಕಂತದ್ದರ ಬಗ್ಗೆ ಚಿಂತನೆ ಮಾಡ್ತಿನಿ. ನನ್ನ ಜೀವಿತಾವಧಿಯಲ್ಲೇ ನಿಮ್ಮ ಸಾಲ ಏನಿದೆ ಅದು ಯಾವುದೇ ಬ್ಯಾಂಕಿನಲ್ಲಿರಲಿ ಅಥವಾ ಬಡ್ಡಿ ದಂಧೆಯವರದ್ದೇ ಇರಲಿ, ಅದನ್ನ ಮನ್ನಾ ಮಾಡ್ತಕ್ಕಂತದಕ್ಕೆ ಬೇಗ ತೀರ್ಮಾನಕ್ಕೆ ಬರ್ತಕ್ಕಂತ ಕ್ಯೆಲುಸ ಮಾಡ್ತಿನಿ. ಈ ವಿಷಯದಲ್ಲಿ ನೀವು ಯಾವುದೇ ಚಾಡಿ ಮಾತನ್ನ ಕೇಳದೆ ನನ್ನನ್ನ ನಂಬಿದರೆ ನನ್ನ ಏಕೈಕ ಪುತ್ರ ನಿಖಿಲ್‍ಗೌಡನ ಮೇಲೆ ಆಣೆ ಮಾಡಿ ಹೇಳ್ತೀನಿ, ನಿಮ್ಮ ರುಣ ಇಟ್ಟಗಳಲ್ಲ’ ಎಂದರಂತಲ್ಲಾ ಥೂತ್ತೇರಿ.

******

 

ಹಳೇ ಕಾಯಿಲೆಯ ಹೊಸ ಮನುಷ್ಯ ದಾಬಸ್‍ಪೇಟೆಯ ಡಿಶ್‍ನಾಗ್ ಮುಂದಿನ ಚುನಾವಣೆಯಲ್ಲಿ ದೇಶದ ಜನ ಮುಂದೆ ಮತ್ತೆ ಮೋದಿಯವರೇ ಇರಲಿ ಎಂದು ತೀರ್ಮಾನಿಸಿದರೆ ಆಶ್ಚರ್ಯವಿಲ್ಲ ಎಂಬ ಬೆದರಿಕೆ ಹುಟ್ಟಿಸಿದ್ದಾರಲ್ಲಾ. ಈ ರಾಜಕೀಯ ಪಂಡಿತರ ಪ್ರಕಾರ ಉತ್ತರ ಭಾರತದಲ್ಲಿ ಅಧಿಕಾರ ಕಳೆದುಕೊಂಡ ಬಿಜೆಪಿಯಲ್ಲಿ ಜನ ಗುರುತಿಸಿರುವ ಸಮಸ್ಯೆ ಇದೆ ಎಂದು ವ್ಯಾಖ್ಯಾನಿಸಿದ್ದಾರೆ. ಬಿಜೆಪಿಯಲ್ಲಿ ಇರಬಹುದಾದ ಆ ನಿಗೂಢ ಸಮಸ್ಯೆ ಯಾವುದೆಂಬುದನ್ನ ಪ್ರಖರ ಸಮಾಜವಾದಿಗಳು ವಿವರಿಸುವ ಗೋಜಿಗೆ ಹೋಗಿಲ್ಲ. ಕಾಂಗೈನ ಅಣುಅಣುವನ್ನ ವಿಶ್ಲೇಷಿಸಿ ಅವರ ಟೀಕೆಯಲ್ಲೇ ಖುಷಿಕಾಣುವ ಈ ರಾಜಕೀಯ ಪಂಡಿತರು ಬಿ.ಜೆ.ಪಿ ಸಮಸ್ಯೆಯನ್ನ ಅನಾವರಣ ಮಾಡಬೇಕಿತ್ತು. ಅದು ಬಿಟ್ಟು ಪಬ್ಲಿಕ್ ಟಿವಿಯ ಕಡ್ಡಿ ರಂಗನಂತೆ ಕಾಂಗೈ ಸೋತ ಕ್ಷೇತ್ರಗಳ ಬಗ್ಗೆ ಟೀಕೆಗೆ ತಮ್ಮ ವಿದ್ವತ್ತನ್ನ ಬಳಸಬಾರದಿತ್ತು. ಉತ್ತರ ಭಾರತದ ರಾಜ್ಯಗಳು ಬಿಜೆಪಿಯ ದೈತ್ಯ ಶಕ್ತಿ ಎದುರು ಬರಿಗೈಲಿ ಚುನಾವಣೆ ಎದುರಿಸಿ ಕಾಂಗೈ ಗೆಲ್ಲಿಸಿವೆ. ಇದು ಗುಪ್ತ ಬಿಜೆಪಿ ಅಭಿಮಾನಿ ವಿದ್ವಾಂಸರಿಗೆ ನಿದ್ದೆಗೆಡಿಸುವ ಸಂಗತಿಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...