Homeಅಂಕಣಗಳುಹವ್ಯಕ ತರುಣರ ಸಮಸ್ಯೆ ಹಾಗೇ ಉಳಿಯಿತಲ್ಲಾ!

ಹವ್ಯಕ ತರುಣರ ಸಮಸ್ಯೆ ಹಾಗೇ ಉಳಿಯಿತಲ್ಲಾ!

- Advertisement -
- Advertisement -

ಈ ವರ್ಷದ ಅಂತ್ಯಭಾಗದಲ್ಲಿ ನಡೆದ ಮಹತ್ವದ ಘಟನೆಗಳಲ್ಲಿ ಮೊದಲನೆಯದಾವುದೆಂದರೆ, ಅದು ಅಖಿಲ ಹವ್ಯಕ ಮಹಾಸಭಾದ ಅಮೃತ ಮಹೋತ್ಸವವಂತಲ್ಲಾ. ಹವ್ಯಕ ಸಮಾಜ ನಮ್ಮ ನಡುವೆ ತುಂಬಾ ಪ್ರಭಾವಿಯಾದ ಸಮಾಜ ಎಂಬುದರಲ್ಲಿ ಎರಡನೇ ಮಾತಿಲ್ಲ, ಮೂರನೇ ಸದ್ದಿಲ್ಲ! ಈ ಜನಾಂಗದ ಜಗದ್ಗುರು ಮಠದ ಭಕ್ತೆಗೆ ನಾನೇ ರಾಮ, ನೀನೇ ನನಗಾಗಿ ಜನ್ಮವೆತ್ತಿ ಹುಡುಕುತ್ತಾ ಬಂದ ಸೀತೆ ಎಂದು ನಂಬಿಸಿದ ಪುರುಷೋತ್ತಮ. ಸದರಿ ರಾಘವನ ರಾಸಲೀಲೆ ಅತಿಯಾದ ಕಾರಣಕ್ಕೆ ನೊಂದ ಸೀತೆ ಕೋರ್ಟ್ ಮೆಟ್ಟಿಲೇರಿದಳು. ಆದರೇನು ರಾಘವೇಶ್ವರನ ಪ್ರಭಾವಕ್ಕೆ ಅಂಜಿದ ಜಡ್ಜ್‍ಗಳು ಈ ಕೇಸನ್ನು ನಾವು ಮುಟ್ಟುವುದಿಲ್ಲ ಎಂದು ಹಿಂದೆ ಸರಿದರು. ಧೈರ್ಯ ಮಾಡಿದ ಜಡ್ಜ್ ಒಬ್ಬರು `ಈ ರಾಮನ ಅಪರಾವತಾರಿ, ಪೊಲೀಸರ ಸ್ಥಳ ತನಿಖಾ ವರದಿ ಪ್ರಕಾರ 159 ಬಾರಿ ರತಿಸುಖ ರಾಸಲೀಲೆ ನಡೆಸಿರುವುದರಿಂದ ಒಪ್ಪಿತ ವಿಲಾಸ ಕ್ರೀಡೆಯಾಗುತ್ತದೆ. ಆದ್ದರಿಂದ ಇದು ಅತ್ಯಾಚಾರಕ್ಕೆ ದೂರ’ ಎನ್ನಲಾಗಿ ಇಡೀ ಹವ್ಯಕರಲ್ಲಿನ ರಾಘು ಅಭಿಮಾನಿಗಳು ಅಂದೇ ಅಮೃತ ಮಹೋತ್ಸವ ಮಾಡಿ ರಾಘು ಮೆರೆಸುವ ತೀರ್ಮಾನ ಕೈಗೊಂಡರಂತಲ್ಲಾ ಥೂತ್ತೇರಿ.

******

 

ರಾಘವೇಶ್ವರ ನೆಲೆಸಿರುವ ಪ್ರದೇಶದ ಶಾಸಕ ಹರತಾಳ ಹಾಲಪ್ಪ ರಾಘವನ ಪರಮ ಭಕ್ತ. ಆದ್ದರಿಂದ ಸಾಗರದ ಹವ್ಯಕರು ಆತನನ್ನು ಗೆಲ್ಲಿಸಿದರಂತಲ್ಲಾ. ಯಾಕೆಂದರೆ ಆ ಹಾಳು ತಿಮ್ಮಪ್ಪ ದಿನ ಬೆಳಗಾಯ್ತೆಂದರೆ ಜನಗಳ ಕೆಲಸ ಕುರಿತು ಯೋಚಿಸುತ್ತಾನೆ. ಕಾರ್ಯಕರ್ತರ ಖಾಸಗಿ ವಿಷಯವನೆಂದೂ ಕೇಳಿಲ್ಲ. ಅದೇ ಹಾಲಪ್ಪ ಜನರ ಖಾಸಗಿ ವಿಷಯ ಕೇಳುತ್ತಾನೆ. ಸಾಧ್ಯವಾದರೆ ಮನೆಗೂ ಬಂದುಬಿಡುತ್ತಾನೆ. ನಮ್ಮ ಮಡದಿಯ ಕೈಯಿಂದ ಕಾಫಿ ಮಾಡಿಸಿಕೊಂಡು ಕುಡಿಯುತ್ತಾನೆ. ನಮ್ಮ ಕೈಯಿಂದಲೇ ಬೀಡಿ ಸಿಗರೇಟು ಮಾತ್ರೆ ತರಿಸುತ್ತಾನೆ. ಇಂತಹ ಜನಾನುರಾಗಿ ಹಾಲಪ್ಪನೆಲ್ಲಿ ಆ ತಿಮ್ಮಪ್ಪನೆಲ್ಲಿ ಎಂದು ಚಿಂತಿಸಿ ಹಾಲಪ್ಪನನ್ನೇ ಆರಿಸಿದರಂತಲ್ಲಾ. ಅಂಥಾ ರಾಘವನಿಗೆ ಇಂತ ಹಾಲಪ್ಪನೇ ಸರಿ ಎಂದು ಹವ್ಯಕರು ಚಿಂತಿಸಿದ್ದಾಗ ರಾಘವನ ರಾಡಿ ತೆಗೆಯದೆ ಮೌನವಾಗಿದ್ದ ತಿಮ್ಮಪ್ಪನಿಗೆ ಹವ್ಯಕರು ಸರಿಯಾದ ಶಾಸ್ತಿ ಮಾಡಿದರಲ್ಲಾ. ಸದರಿ ಹಾಲಪ್ಪ ಯಾರಾದರೂ ಹವ್ಯಕರನ್ನ ಬೈದರೆ ನಾನು ಸುಮ್ಮನಿರುವುದಿಲ್ಲ, ರಾತ್ರಿ ನಿಮ್ಮ ಮನೆಗೇ ಬಂದು ಬಿಡುತ್ತೇನೆಂದು ಹೆದರಿಸಿದ್ದಾನಂತಲ್ಲಾ ಥೂತ್ತೇರಿ.

******

 

ಹವ್ಯಕರು ಹೆಚ್ಚು ನೆಲೆಸಿರುವ ಸಾಗರ ಪ್ರಾಂತ್ಯದಲ್ಲಿನ ಪ್ರತಿ ಹಳ್ಳಿಗಳಿಲ್ಲಿ 20ರಿಂದ 30 ಹುಡುಗರು ಅವಿವಾಹಿತರಾಗಿಯೇ ಇದ್ದಾರಂತಲ್ಲಾ. ಈ ಸಮಸ್ಯೆ ರಾಮಚಂದ್ರಾಪುರ ಮಠದ ಗುರುಗಳನ್ನ ತೀವ್ರವಾಗಿ ಕಾಡಬೇಕಿತ್ತು. ಆದರೆ ತರುಣರ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಿಕೊಂಡ ಗುರುಗಳ ಅನೈತಿಕ ಬದುಕನ್ನೇ ಮನ್ನಿಸಿದ ಜನ, ಅವರಿಗೆ ಪೂರ್ಣ ಬೆಂಬಲ ಕೊಡುವ ನಿರ್ಣಯವನ್ನೇ ಕೈಗೊಂಡರಂತಲ್ಲಾ. ಕಾರಣ ಈ ರಾಮಚಂದ್ರಾಪುರ ಮಠ ಜಗತ್ತಿನ ಏಕೈಕ ಮಠ ಅಂತಹ ಮಠದಲ್ಲಿ ಈ ತರಹ ಇರುವ ಏಕೈಕ ಜಗದ್ಗುರು ರಾಘವೇಶ್ವರ ಅವರ ಅಜನ್ಮ ಬ್ರಹ್ಮಚಾರಿ ಬದುಕನ್ನ ಕೊಂಡಾಡುತ್ತ ತರುಣರು, ಕನ್ಯೆ ಇಲ್ಲದ ತಮ್ಮ ಬದುಕನ್ನು ಪೂರ್ಣಗೊಳಿಸಬೇಕು ಎಂಬ ಗುಪ್ತ ಚರ್ಚೆ ಬೆಂಗಳೂರಲ್ಲಿ ಆಯ್ತಂತಲ್ಲಾ. ಅದೇನಾದರಾಗಲಿ ಅಖಿಲ ಭಾರತ ಹವ್ಯಕ ಮಹಾಸಭೆಯಲ್ಲಿ ಹವ್ಯಕ ತರುಣರ ಲೈಂಗಿಕ ಸಮಸ್ಯೆ ಚರ್ಚೆಗೇ ಬರದಿರುವುದಕ್ಕೆ ಕಾರಣ `ಎಲ್ಲರೂ ಅವರ ಜಗದ್ಗುರು ದಾರಿಯಲ್ಲಿ ನಡೆಯುತ್ತಾರೆ, ಇಲ್ಲವಾದಲ್ಲಿ ಅವರ ಬದುಕು ಅವರ ಕೈಯಲ್ಲಿ’ ಎಂಬ ತಾತ್ಸಾರದ ಮನೋಭಾವವೇ ಕಾರಣವಂತಲ್ಲಾ ಥೂತ್ತೇರಿ.

 

******

 

ಸಮ್ಮಿಶ್ರ ಸರಕಾರದ ವರಸೆ ನೋಡಿದ ರೈತರು ಈ ಸರಕಾರದಿಂದ ನಮ್ಮ ಸಾಲಮನ್ನಾ ಸಾಧ್ಯವೇ ಎಂದು ಚಿಂತಿಸುತ್ತಿರುವಾಗ, ಭಾವುಕರಾದ ಕುಮಾರಣ್ಣ `ರೈತ ಬಾಂಧವರೇ ಮತ್ತು ಅಣ್ಣತಮ್ಮಂದಿರೆ ಮತ್ತು ಅಕ್ಕಭಾವಂದಿರೆ ಹಾಗೂ ನಮ್ಮ ತಂದೆಯ ಅಭಿಮಾನಿಗಳೇ, ಏನು ನೀವು ಒಂದು ಅನುಮಾನ ಪಡ್ತಾ ಇರತಕ್ಕಂತ ವಿಷಯ ಏನಿದೆ ಅದು ನನಿಗೆ ಅರ್ಥ ಆಗ್ತಕ್ಕಂತದ್ದು. ಆ ದಿಸೆಲಿ ಯಾರು ಅನುಮಾನ ಪಡಬೇಡಿ. ಈಗಾಗಲೇ ರಾಜ್ಯೋತ್ಸವ ಪಡೆದಿರತಕ್ಕಂತ ಪ್ರಶಸ್ತಿ ವಿಜೇತರಿಗೆ ಕೊಡತಕ್ಕಂತ 63 ಲಕ್ಷ ರೂಪಾಯಿ ಹಣವನ್ನ ಒದಗಿಸಿ ಕೊಟ್ಟ ನಂತರ ನಮ್ಮ ರೈತ ಬಾಂಧವರ ಸಾಲವನ್ನ ಮನ್ನಾ ಮಾಡ್ತಕ್ಕಂತದ್ದರ ಬಗ್ಗೆ ಚಿಂತನೆ ಮಾಡ್ತಿನಿ. ನನ್ನ ಜೀವಿತಾವಧಿಯಲ್ಲೇ ನಿಮ್ಮ ಸಾಲ ಏನಿದೆ ಅದು ಯಾವುದೇ ಬ್ಯಾಂಕಿನಲ್ಲಿರಲಿ ಅಥವಾ ಬಡ್ಡಿ ದಂಧೆಯವರದ್ದೇ ಇರಲಿ, ಅದನ್ನ ಮನ್ನಾ ಮಾಡ್ತಕ್ಕಂತದಕ್ಕೆ ಬೇಗ ತೀರ್ಮಾನಕ್ಕೆ ಬರ್ತಕ್ಕಂತ ಕ್ಯೆಲುಸ ಮಾಡ್ತಿನಿ. ಈ ವಿಷಯದಲ್ಲಿ ನೀವು ಯಾವುದೇ ಚಾಡಿ ಮಾತನ್ನ ಕೇಳದೆ ನನ್ನನ್ನ ನಂಬಿದರೆ ನನ್ನ ಏಕೈಕ ಪುತ್ರ ನಿಖಿಲ್‍ಗೌಡನ ಮೇಲೆ ಆಣೆ ಮಾಡಿ ಹೇಳ್ತೀನಿ, ನಿಮ್ಮ ರುಣ ಇಟ್ಟಗಳಲ್ಲ’ ಎಂದರಂತಲ್ಲಾ ಥೂತ್ತೇರಿ.

******

 

ಹಳೇ ಕಾಯಿಲೆಯ ಹೊಸ ಮನುಷ್ಯ ದಾಬಸ್‍ಪೇಟೆಯ ಡಿಶ್‍ನಾಗ್ ಮುಂದಿನ ಚುನಾವಣೆಯಲ್ಲಿ ದೇಶದ ಜನ ಮುಂದೆ ಮತ್ತೆ ಮೋದಿಯವರೇ ಇರಲಿ ಎಂದು ತೀರ್ಮಾನಿಸಿದರೆ ಆಶ್ಚರ್ಯವಿಲ್ಲ ಎಂಬ ಬೆದರಿಕೆ ಹುಟ್ಟಿಸಿದ್ದಾರಲ್ಲಾ. ಈ ರಾಜಕೀಯ ಪಂಡಿತರ ಪ್ರಕಾರ ಉತ್ತರ ಭಾರತದಲ್ಲಿ ಅಧಿಕಾರ ಕಳೆದುಕೊಂಡ ಬಿಜೆಪಿಯಲ್ಲಿ ಜನ ಗುರುತಿಸಿರುವ ಸಮಸ್ಯೆ ಇದೆ ಎಂದು ವ್ಯಾಖ್ಯಾನಿಸಿದ್ದಾರೆ. ಬಿಜೆಪಿಯಲ್ಲಿ ಇರಬಹುದಾದ ಆ ನಿಗೂಢ ಸಮಸ್ಯೆ ಯಾವುದೆಂಬುದನ್ನ ಪ್ರಖರ ಸಮಾಜವಾದಿಗಳು ವಿವರಿಸುವ ಗೋಜಿಗೆ ಹೋಗಿಲ್ಲ. ಕಾಂಗೈನ ಅಣುಅಣುವನ್ನ ವಿಶ್ಲೇಷಿಸಿ ಅವರ ಟೀಕೆಯಲ್ಲೇ ಖುಷಿಕಾಣುವ ಈ ರಾಜಕೀಯ ಪಂಡಿತರು ಬಿ.ಜೆ.ಪಿ ಸಮಸ್ಯೆಯನ್ನ ಅನಾವರಣ ಮಾಡಬೇಕಿತ್ತು. ಅದು ಬಿಟ್ಟು ಪಬ್ಲಿಕ್ ಟಿವಿಯ ಕಡ್ಡಿ ರಂಗನಂತೆ ಕಾಂಗೈ ಸೋತ ಕ್ಷೇತ್ರಗಳ ಬಗ್ಗೆ ಟೀಕೆಗೆ ತಮ್ಮ ವಿದ್ವತ್ತನ್ನ ಬಳಸಬಾರದಿತ್ತು. ಉತ್ತರ ಭಾರತದ ರಾಜ್ಯಗಳು ಬಿಜೆಪಿಯ ದೈತ್ಯ ಶಕ್ತಿ ಎದುರು ಬರಿಗೈಲಿ ಚುನಾವಣೆ ಎದುರಿಸಿ ಕಾಂಗೈ ಗೆಲ್ಲಿಸಿವೆ. ಇದು ಗುಪ್ತ ಬಿಜೆಪಿ ಅಭಿಮಾನಿ ವಿದ್ವಾಂಸರಿಗೆ ನಿದ್ದೆಗೆಡಿಸುವ ಸಂಗತಿಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...