Homeಕರ್ನಾಟಕರಂಗೀಲಾ ರಾಘುಸ್ವಾಮಿ ಚೇಲಾಗಳ ಕಿತಾಪತಿ, ಗಿರಿನಗರ ಪೊಲೀಸರ ಹುಚ್ಚಾಟದಿಂದ ಸತ್ತವರ ಮೇಲೆ ದಾಖಲಾಯ್ತು ಎಫ್‌ಐಆರ್‌

ರಂಗೀಲಾ ರಾಘುಸ್ವಾಮಿ ಚೇಲಾಗಳ ಕಿತಾಪತಿ, ಗಿರಿನಗರ ಪೊಲೀಸರ ಹುಚ್ಚಾಟದಿಂದ ಸತ್ತವರ ಮೇಲೆ ದಾಖಲಾಯ್ತು ಎಫ್‌ಐಆರ್‌

- Advertisement -
- Advertisement -

“ಅತ್ಯಾಚಾರ ಆರೋಪದ ವಿಷಯಕ್ಕೆ ಲೋಕಪ್ರಸಿದ್ಧನಾಗಿರುವ ರಾಮಚಂದ್ರಪುರ ಮಠದ ಸ್ವಾಮಿ ರಾಘು ಯಾನೆ ರಾಘವೇಶ್ವರ ಭಾರತಿ ಬುರ್ನಾಸ್ ಭಾನ್ಗಡಿಗಳಿಂದು ಸುದ್ದಿಯಾಗುತ್ತಲೇ ಇದ್ದಾನೆ. ಅದೆಂದೋ ಜೈಲುಪಾಲಾಗಬೇಕಿದ್ದ ಈ ಧರ್ಮಭ್ರಷ್ಟ ನ್ಯಾಯ ಆಡಳಿತ ವ್ಯವಸ್ಥೆಗಳನ್ನೇ ದಿಕ್ಕುತಪ್ಪಿಸಿ ತಿಂದುಂಡು ಬೋಗಸ್ ಪ್ರವಚನ ಬಿಗಿಯುತ್ತ ಲೌಕಿಕಾನಂದ ಅನುಭವಿಸುತ್ತಿದ್ದಾನೆ ಎಂಬ ಆರೋಪಗಳಿವೆ. ಕನ್ಯಾದೀಕ್ಷೆ, ಏಕಾಂತ ಸಂದರ್ಶನ, ಹೆಂಗಸರ ಹಣೆಗೆ ಕುಂಕುಮವಿಟ್ಟು ಮೈಸವರಿ ಆಶೀರ್ವಾದ ಮಾಡುವುದೇ ಮುಂತಾದ ಲೈಂಗಿಕ ಕುಚೇಷ್ಟೆಗಳಿಂದ ಹವ್ಯಕರ ಮಠವನ್ನು ತನ್ನ ಕಾಮಕಾಂಡದ ಅಡ್ಡೆ ಮಾಡಿಕೊಂಡಿದ್ದಾನೆ” ಎಂದು ಮೊಟ್ಟಮೊದಲು ಆರೋಪ ಮಾಡಿದ್ದು ಕುಮಟಾದ ಪ್ರಸಿದ್ಧ ವೈದ್ಯರೂ, ಸಾಮಾಜಿಕ ಮುಖಂಡರೂ ಹವ್ಯಕ ಹೀರೇಮಾಣಿಗಳೂ ಆಗಿದ್ದ ಡಾ.ಟಿ.ಟಿ.ಹೆಗಡೆ!

ಡಾ.ಹೆಗಡೆಯನ್ನು ರಾಘವ ಮಠ ಮಾಫಿಯಾ ಒಂದೆರಡು ರೀತಿಯಲ್ಲಿ ಕಾಡಲಿಲ್ಲ. ಹಲವು ಬಾರಿ ಅವರ ಮೇಲೆ ಭೀಭತ್ಸ ಹಲ್ಲೆಯಾಗಿತ್ತು. ಪೊಲೀಸರನ್ನು ಛೂ ಬಿಟ್ಟು ಕಾಡಿದ್ದರು. ಕೇಸುಗಳನ್ನು ಹಾಕಿಸಿದ್ದರು. ರಾಘುನ ಪೂರ್ವಾಶ್ರಮದ ಸಹೋದರಿ ಗ್ಯಾಂಗು ಕಟ್ಟಿಕೊಂಡು ಪೊರಕೆಯಿಂದ ಹೊಡೆಯಲು ಹೋಗಿ ತಮ್ಮನ ಕಲ್ಯಾಣ ಗುಣಗಳ ಅನಾವರಣವೂ ಮಾಡಿದ್ದಳು. ಎಂಬತ್ತರ ಗಡಿದಾಟಿದ್ದ ಡಾ.ಹೆಗಡೆ ಹಲ್ಲೆಯಿಂದ ಆಸ್ಪತ್ರೆಯಲ್ಲಿ ಕಳೆಯುವಂತಾಗಿತ್ತು. ಇಷ್ಟಾದರೂ ಹೆಗಡೆ ಹೆದರಲಿಲ್ಲ. ತ್ರಿಕಾಲ ಪೂಜೆ ಮಾಡದೆ ಹಣ-ಹೆಣ್ಣಿನ ವಾಸನೆಗೆ ಬಿದ್ದಿರುವ ರಾಘು ಗುರು ಪೀಠದಲ್ಲಿರಲು ಅನರ್ಹನೆಂದು ತನ್ನ ಕೊನೆಗಾಲದತನಕ ಹೇಳುತ್ತಲೇ ಇದ್ದರು. ರಾಘುನ ಪೀಠೋಚ್ಛಾಟನೆ ಮಾಡಲು ನ್ಯಾಯಾಲಯಕ್ಕೂ ಹೋಗಿದ್ದರು.

ಡಾ.ಹೆಗಡೆಯವರು ಸಾಮಾಜಿಕ ಕಳಕಳಿ, ಧಾರ್ಮಿಕ ಪಾಂಡಿತ್ಯ, ನೈತಿಕ ನಡವಳಿಕೆಯಿಂದ ಹವ್ಯಕ ಸಮುದಾಯದಲ್ಲಿ ಪ್ರೀತಿ-ಗೌರವ ಸಂಪಾದಿಸಿದ್ದರು. ಸ್ತ್ರೀ ಸಖ್ಯಾ ಸುಖ ಸಂತೃಪ್ತ “ಸನ್ಯಾಸಿ” ರಾಘುನ ಕಂಡರೆ ಹವ್ಯಕರು ಮೂಗು ಮುರಿಯುತ್ತಿದ್ದರೆ ಟಿ.ಟಿ.ಹೆಗಡೆಯನ್ನು ನೋಡಿದಾಕ್ಷಣ ತಲೆಬಾಗಿ ನಮಿಸುತ್ತಿದ್ದರು. ಆದರೆ ಹವ್ಯಕರು ರಾಘು ಗ್ಯಾಂಗಿನ ಬಹಿಷ್ಕಾರ, ಹಲ್ಲೆ, ಜೀವನೋಪಾಯ ವ್ಯವಹಾರಕ್ಕೆ ಕಲ್ಲುಹಾಕುವ ಕ್ರೌರ್ಯಕ್ಕೆ ಹೆದರಿ ಟಿ.ಟಿ.ಹೆಗಡೆಯ ಹೋರಾಟಕ್ಕೆ ಬೆಂಬಲ ನೀಡಲಿಲ್ಲ. ಇದಕ್ಕೆಲ್ಲಾ ಬೇಸರಿಸದೆ ಟಿ.ಟಿ.ಹೆಗಡೆ “ಜಾಣ” ಹವ್ಯಕರ ಕಣ್ಣಿನ ಪೊರೆ ತೆರೆಯಲು ಪ್ರಯತ್ನ ಮಾಡುತ್ತಲೇ ಇದ್ದರು ಎಂಬುದು‌ ಅವರನ್ನು ಬಲ್ಲವರೆಲ್ಲರೂ ಹೇಳುವ ಮಾತು.

ಮಠಬಾನಿಗಳನ್ನು ಎದುರುಹಾಕಿಕೊಂಡಿದ್ದ ಟಿ.ಟಿ.ಹೆಗಡೆಯವರು ಸುಮಾರು ಎರಡು ತಿಂಗಳ ಹಿಂದೆ ವಯೋಸಹಜ ಸಾವು ಕಂಡಿದ್ದಾರೆ. ಲಗಾಯ್ತಿನಿಂದಲೂ ಅನಾಚಾರಿ ರಾಘುನ ಚೇಲಾಗಿರಿ ಮಾಡುತ್ತಲೇ ಬಂದಿರುವ ಬೆಂಗಳೂರಿನ ಗಿರಿನಗರ ಪೊಲೀಸ್‌ ಅಧಿಕಾರಿಗಳು ದಿವಂಗತ ಟಿ.ಟಿ.ಹೆಗಡೆ ಮೇಲೆ ಕೇಸು ಜಡಿದಿದ್ದಾರೆ. ರಾಘುನ ವಿರುದ್ಧ ಅವಹೇಳನಕಾರಿ ಬರಹವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚುರಪಡಿಸುತ್ತಿದ್ದಾರೆಂಬ ಆರೋಪ ಹೊರಿಸಿದ್ದಾರೆ. ಪಾಪಾ ಟಿ.ಟಿ ಹೆಗಡೆಯವರು ಮರಣಹೊಂದಿ ಎರಡು ತಿಂಗಳಾದರೂ ಸಹ ಅವರನ್ನು ಬಿಡುತ್ತಿಲ್ಲ ಮಠಬಾನಿಗಳು. ಮಠದ ಸಿಇಓ ಕೆ.ಜಿ.ಭಟ್ಟ ಕೊಟ್ಟ ಕಂಪ್ಲೇಂಟಿನ ಮೇಲೆ ಎಫ್‌ಐಆರ್‌ ಕೂಡ ಹಾಕಿರುವ ಪೆದ್ದು ಪೊಲೀಸರು ಅದನ್ನು ನ್ಯಾಯಾಲಯಕ್ಕೂ ಸಲ್ಲಿಸಿದ್ದಾರೆ. ಎನ್‌ಸಿಆರ್‌ 207/19 ನಂಬರಿನ ಎಫ್‌ಐಆರ್ ಅನ್ನು 25-09-2019 ರಂದು ಕೋರ್ಟಿಗೆ ಸಲ್ಲಿಸಿರುವ ಪೊಲೀಸ್ ಅಧಿಕಾರಿಗಳು ಮತ್ತು ಮಠಬಾನಿಗಳ ಹುಚ್ಚಾಟಕ್ಕೆ ಜನ ಬಿದ್ದು ಬಿದ್ದು ನಗುತ್ತಿದ್ದಾರೆ!!

ಈ ಗಿರಿನಗರ ಪೊಲೀಸರು ಹಿಂದೆ ರಾಘುನ ವಿರುದ್ಧ ಅತ್ಯಾಚಾರ ಸಂತ್ರಸ್ತೆಯು ದೂರು ಕೊಡಲು ಹೋದಾಗಲೂ ಸತಾಯಿಸಿದ್ದರು. ರಾಘುನ ರಗಳೆ-ರಾದ್ಧಾಂತದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚಿಸಿದ್ದವರಿಗೆ, ಅಲ್ಲಲ್ಲಿ ಮಾತಾಡಿದವರಿಗೆಲ್ಲಾ ಈ ಗಿರಿನಗರ ಪೊಲೀಸರು ಹಿಂಸೆ ನೀಡಿದ್ದ ದೊಡ್ಡ ಪಟ್ಟಿಯೇ ಇದೆ. ಸತ್ತವರನ್ನು ಬಿಡದೇ ಕಾಡಿ ತೆವಲು ತೀರಿಸಿಕೊಳ್ಳುವ ಸ್ಯಾಡಿಸ್ಟ್ ರಾಘುನ ಪೀಠಕ್ಕೆ ಬಲಿಯಾದ ಪುತ್ತೂರಿನ ಶ್ಯಾಮಶಾಸ್ತ್ರಿಯ ಕುಟುಂಬ ಪಟ್ಟ ಕಷ್ಟ ಹೇಳತೀರದು. ಈಗ ದಿವಂಗತ ಟಿ.ಟಿ.ಹೆಗಡೆ ಮೇಲೆ ಮಸಲತ್ತಿನ ಎಫ್‌ಐಆರ್‌ ಆಗಿದೆ. ಹವ್ಯಕರಿಗೇಕೆ ನೈತಿಕ ಸಾತ್ವಿಕ ಸಿಟ್ಟು ಬರುತ್ತಿಲ್ಲ? ಹವ್ಯಕ ಕುಲಘಾತುಕ ರಾಘುನನ್ನ ಆ ಸಮುದಾಯ ಇನ್ನೆಷ್ಟು ದಿನ ಸಹಿಸಿಕೊಳ್ಳುತ್ತದೋ ಎಂಬ ಪ್ರಶ್ನೆ ಅವರನ್ನು ವಿರೋಧಿಸುತ್ತಿರುವ ಹವ್ಯಕರದ್ದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...