Homeಕರ್ನಾಟಕರಂಗೀಲಾ ರಾಘುಸ್ವಾಮಿ ಚೇಲಾಗಳ ಕಿತಾಪತಿ, ಗಿರಿನಗರ ಪೊಲೀಸರ ಹುಚ್ಚಾಟದಿಂದ ಸತ್ತವರ ಮೇಲೆ ದಾಖಲಾಯ್ತು ಎಫ್‌ಐಆರ್‌

ರಂಗೀಲಾ ರಾಘುಸ್ವಾಮಿ ಚೇಲಾಗಳ ಕಿತಾಪತಿ, ಗಿರಿನಗರ ಪೊಲೀಸರ ಹುಚ್ಚಾಟದಿಂದ ಸತ್ತವರ ಮೇಲೆ ದಾಖಲಾಯ್ತು ಎಫ್‌ಐಆರ್‌

- Advertisement -
- Advertisement -

“ಅತ್ಯಾಚಾರ ಆರೋಪದ ವಿಷಯಕ್ಕೆ ಲೋಕಪ್ರಸಿದ್ಧನಾಗಿರುವ ರಾಮಚಂದ್ರಪುರ ಮಠದ ಸ್ವಾಮಿ ರಾಘು ಯಾನೆ ರಾಘವೇಶ್ವರ ಭಾರತಿ ಬುರ್ನಾಸ್ ಭಾನ್ಗಡಿಗಳಿಂದು ಸುದ್ದಿಯಾಗುತ್ತಲೇ ಇದ್ದಾನೆ. ಅದೆಂದೋ ಜೈಲುಪಾಲಾಗಬೇಕಿದ್ದ ಈ ಧರ್ಮಭ್ರಷ್ಟ ನ್ಯಾಯ ಆಡಳಿತ ವ್ಯವಸ್ಥೆಗಳನ್ನೇ ದಿಕ್ಕುತಪ್ಪಿಸಿ ತಿಂದುಂಡು ಬೋಗಸ್ ಪ್ರವಚನ ಬಿಗಿಯುತ್ತ ಲೌಕಿಕಾನಂದ ಅನುಭವಿಸುತ್ತಿದ್ದಾನೆ ಎಂಬ ಆರೋಪಗಳಿವೆ. ಕನ್ಯಾದೀಕ್ಷೆ, ಏಕಾಂತ ಸಂದರ್ಶನ, ಹೆಂಗಸರ ಹಣೆಗೆ ಕುಂಕುಮವಿಟ್ಟು ಮೈಸವರಿ ಆಶೀರ್ವಾದ ಮಾಡುವುದೇ ಮುಂತಾದ ಲೈಂಗಿಕ ಕುಚೇಷ್ಟೆಗಳಿಂದ ಹವ್ಯಕರ ಮಠವನ್ನು ತನ್ನ ಕಾಮಕಾಂಡದ ಅಡ್ಡೆ ಮಾಡಿಕೊಂಡಿದ್ದಾನೆ” ಎಂದು ಮೊಟ್ಟಮೊದಲು ಆರೋಪ ಮಾಡಿದ್ದು ಕುಮಟಾದ ಪ್ರಸಿದ್ಧ ವೈದ್ಯರೂ, ಸಾಮಾಜಿಕ ಮುಖಂಡರೂ ಹವ್ಯಕ ಹೀರೇಮಾಣಿಗಳೂ ಆಗಿದ್ದ ಡಾ.ಟಿ.ಟಿ.ಹೆಗಡೆ!

ಡಾ.ಹೆಗಡೆಯನ್ನು ರಾಘವ ಮಠ ಮಾಫಿಯಾ ಒಂದೆರಡು ರೀತಿಯಲ್ಲಿ ಕಾಡಲಿಲ್ಲ. ಹಲವು ಬಾರಿ ಅವರ ಮೇಲೆ ಭೀಭತ್ಸ ಹಲ್ಲೆಯಾಗಿತ್ತು. ಪೊಲೀಸರನ್ನು ಛೂ ಬಿಟ್ಟು ಕಾಡಿದ್ದರು. ಕೇಸುಗಳನ್ನು ಹಾಕಿಸಿದ್ದರು. ರಾಘುನ ಪೂರ್ವಾಶ್ರಮದ ಸಹೋದರಿ ಗ್ಯಾಂಗು ಕಟ್ಟಿಕೊಂಡು ಪೊರಕೆಯಿಂದ ಹೊಡೆಯಲು ಹೋಗಿ ತಮ್ಮನ ಕಲ್ಯಾಣ ಗುಣಗಳ ಅನಾವರಣವೂ ಮಾಡಿದ್ದಳು. ಎಂಬತ್ತರ ಗಡಿದಾಟಿದ್ದ ಡಾ.ಹೆಗಡೆ ಹಲ್ಲೆಯಿಂದ ಆಸ್ಪತ್ರೆಯಲ್ಲಿ ಕಳೆಯುವಂತಾಗಿತ್ತು. ಇಷ್ಟಾದರೂ ಹೆಗಡೆ ಹೆದರಲಿಲ್ಲ. ತ್ರಿಕಾಲ ಪೂಜೆ ಮಾಡದೆ ಹಣ-ಹೆಣ್ಣಿನ ವಾಸನೆಗೆ ಬಿದ್ದಿರುವ ರಾಘು ಗುರು ಪೀಠದಲ್ಲಿರಲು ಅನರ್ಹನೆಂದು ತನ್ನ ಕೊನೆಗಾಲದತನಕ ಹೇಳುತ್ತಲೇ ಇದ್ದರು. ರಾಘುನ ಪೀಠೋಚ್ಛಾಟನೆ ಮಾಡಲು ನ್ಯಾಯಾಲಯಕ್ಕೂ ಹೋಗಿದ್ದರು.

ಡಾ.ಹೆಗಡೆಯವರು ಸಾಮಾಜಿಕ ಕಳಕಳಿ, ಧಾರ್ಮಿಕ ಪಾಂಡಿತ್ಯ, ನೈತಿಕ ನಡವಳಿಕೆಯಿಂದ ಹವ್ಯಕ ಸಮುದಾಯದಲ್ಲಿ ಪ್ರೀತಿ-ಗೌರವ ಸಂಪಾದಿಸಿದ್ದರು. ಸ್ತ್ರೀ ಸಖ್ಯಾ ಸುಖ ಸಂತೃಪ್ತ “ಸನ್ಯಾಸಿ” ರಾಘುನ ಕಂಡರೆ ಹವ್ಯಕರು ಮೂಗು ಮುರಿಯುತ್ತಿದ್ದರೆ ಟಿ.ಟಿ.ಹೆಗಡೆಯನ್ನು ನೋಡಿದಾಕ್ಷಣ ತಲೆಬಾಗಿ ನಮಿಸುತ್ತಿದ್ದರು. ಆದರೆ ಹವ್ಯಕರು ರಾಘು ಗ್ಯಾಂಗಿನ ಬಹಿಷ್ಕಾರ, ಹಲ್ಲೆ, ಜೀವನೋಪಾಯ ವ್ಯವಹಾರಕ್ಕೆ ಕಲ್ಲುಹಾಕುವ ಕ್ರೌರ್ಯಕ್ಕೆ ಹೆದರಿ ಟಿ.ಟಿ.ಹೆಗಡೆಯ ಹೋರಾಟಕ್ಕೆ ಬೆಂಬಲ ನೀಡಲಿಲ್ಲ. ಇದಕ್ಕೆಲ್ಲಾ ಬೇಸರಿಸದೆ ಟಿ.ಟಿ.ಹೆಗಡೆ “ಜಾಣ” ಹವ್ಯಕರ ಕಣ್ಣಿನ ಪೊರೆ ತೆರೆಯಲು ಪ್ರಯತ್ನ ಮಾಡುತ್ತಲೇ ಇದ್ದರು ಎಂಬುದು‌ ಅವರನ್ನು ಬಲ್ಲವರೆಲ್ಲರೂ ಹೇಳುವ ಮಾತು.

ಮಠಬಾನಿಗಳನ್ನು ಎದುರುಹಾಕಿಕೊಂಡಿದ್ದ ಟಿ.ಟಿ.ಹೆಗಡೆಯವರು ಸುಮಾರು ಎರಡು ತಿಂಗಳ ಹಿಂದೆ ವಯೋಸಹಜ ಸಾವು ಕಂಡಿದ್ದಾರೆ. ಲಗಾಯ್ತಿನಿಂದಲೂ ಅನಾಚಾರಿ ರಾಘುನ ಚೇಲಾಗಿರಿ ಮಾಡುತ್ತಲೇ ಬಂದಿರುವ ಬೆಂಗಳೂರಿನ ಗಿರಿನಗರ ಪೊಲೀಸ್‌ ಅಧಿಕಾರಿಗಳು ದಿವಂಗತ ಟಿ.ಟಿ.ಹೆಗಡೆ ಮೇಲೆ ಕೇಸು ಜಡಿದಿದ್ದಾರೆ. ರಾಘುನ ವಿರುದ್ಧ ಅವಹೇಳನಕಾರಿ ಬರಹವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚುರಪಡಿಸುತ್ತಿದ್ದಾರೆಂಬ ಆರೋಪ ಹೊರಿಸಿದ್ದಾರೆ. ಪಾಪಾ ಟಿ.ಟಿ ಹೆಗಡೆಯವರು ಮರಣಹೊಂದಿ ಎರಡು ತಿಂಗಳಾದರೂ ಸಹ ಅವರನ್ನು ಬಿಡುತ್ತಿಲ್ಲ ಮಠಬಾನಿಗಳು. ಮಠದ ಸಿಇಓ ಕೆ.ಜಿ.ಭಟ್ಟ ಕೊಟ್ಟ ಕಂಪ್ಲೇಂಟಿನ ಮೇಲೆ ಎಫ್‌ಐಆರ್‌ ಕೂಡ ಹಾಕಿರುವ ಪೆದ್ದು ಪೊಲೀಸರು ಅದನ್ನು ನ್ಯಾಯಾಲಯಕ್ಕೂ ಸಲ್ಲಿಸಿದ್ದಾರೆ. ಎನ್‌ಸಿಆರ್‌ 207/19 ನಂಬರಿನ ಎಫ್‌ಐಆರ್ ಅನ್ನು 25-09-2019 ರಂದು ಕೋರ್ಟಿಗೆ ಸಲ್ಲಿಸಿರುವ ಪೊಲೀಸ್ ಅಧಿಕಾರಿಗಳು ಮತ್ತು ಮಠಬಾನಿಗಳ ಹುಚ್ಚಾಟಕ್ಕೆ ಜನ ಬಿದ್ದು ಬಿದ್ದು ನಗುತ್ತಿದ್ದಾರೆ!!

ಈ ಗಿರಿನಗರ ಪೊಲೀಸರು ಹಿಂದೆ ರಾಘುನ ವಿರುದ್ಧ ಅತ್ಯಾಚಾರ ಸಂತ್ರಸ್ತೆಯು ದೂರು ಕೊಡಲು ಹೋದಾಗಲೂ ಸತಾಯಿಸಿದ್ದರು. ರಾಘುನ ರಗಳೆ-ರಾದ್ಧಾಂತದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚಿಸಿದ್ದವರಿಗೆ, ಅಲ್ಲಲ್ಲಿ ಮಾತಾಡಿದವರಿಗೆಲ್ಲಾ ಈ ಗಿರಿನಗರ ಪೊಲೀಸರು ಹಿಂಸೆ ನೀಡಿದ್ದ ದೊಡ್ಡ ಪಟ್ಟಿಯೇ ಇದೆ. ಸತ್ತವರನ್ನು ಬಿಡದೇ ಕಾಡಿ ತೆವಲು ತೀರಿಸಿಕೊಳ್ಳುವ ಸ್ಯಾಡಿಸ್ಟ್ ರಾಘುನ ಪೀಠಕ್ಕೆ ಬಲಿಯಾದ ಪುತ್ತೂರಿನ ಶ್ಯಾಮಶಾಸ್ತ್ರಿಯ ಕುಟುಂಬ ಪಟ್ಟ ಕಷ್ಟ ಹೇಳತೀರದು. ಈಗ ದಿವಂಗತ ಟಿ.ಟಿ.ಹೆಗಡೆ ಮೇಲೆ ಮಸಲತ್ತಿನ ಎಫ್‌ಐಆರ್‌ ಆಗಿದೆ. ಹವ್ಯಕರಿಗೇಕೆ ನೈತಿಕ ಸಾತ್ವಿಕ ಸಿಟ್ಟು ಬರುತ್ತಿಲ್ಲ? ಹವ್ಯಕ ಕುಲಘಾತುಕ ರಾಘುನನ್ನ ಆ ಸಮುದಾಯ ಇನ್ನೆಷ್ಟು ದಿನ ಸಹಿಸಿಕೊಳ್ಳುತ್ತದೋ ಎಂಬ ಪ್ರಶ್ನೆ ಅವರನ್ನು ವಿರೋಧಿಸುತ್ತಿರುವ ಹವ್ಯಕರದ್ದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...