Homeಕರ್ನಾಟಕರಂಗೀಲಾ ರಾಘುಸ್ವಾಮಿ ಚೇಲಾಗಳ ಕಿತಾಪತಿ, ಗಿರಿನಗರ ಪೊಲೀಸರ ಹುಚ್ಚಾಟದಿಂದ ಸತ್ತವರ ಮೇಲೆ ದಾಖಲಾಯ್ತು ಎಫ್‌ಐಆರ್‌

ರಂಗೀಲಾ ರಾಘುಸ್ವಾಮಿ ಚೇಲಾಗಳ ಕಿತಾಪತಿ, ಗಿರಿನಗರ ಪೊಲೀಸರ ಹುಚ್ಚಾಟದಿಂದ ಸತ್ತವರ ಮೇಲೆ ದಾಖಲಾಯ್ತು ಎಫ್‌ಐಆರ್‌

- Advertisement -
- Advertisement -

“ಅತ್ಯಾಚಾರ ಆರೋಪದ ವಿಷಯಕ್ಕೆ ಲೋಕಪ್ರಸಿದ್ಧನಾಗಿರುವ ರಾಮಚಂದ್ರಪುರ ಮಠದ ಸ್ವಾಮಿ ರಾಘು ಯಾನೆ ರಾಘವೇಶ್ವರ ಭಾರತಿ ಬುರ್ನಾಸ್ ಭಾನ್ಗಡಿಗಳಿಂದು ಸುದ್ದಿಯಾಗುತ್ತಲೇ ಇದ್ದಾನೆ. ಅದೆಂದೋ ಜೈಲುಪಾಲಾಗಬೇಕಿದ್ದ ಈ ಧರ್ಮಭ್ರಷ್ಟ ನ್ಯಾಯ ಆಡಳಿತ ವ್ಯವಸ್ಥೆಗಳನ್ನೇ ದಿಕ್ಕುತಪ್ಪಿಸಿ ತಿಂದುಂಡು ಬೋಗಸ್ ಪ್ರವಚನ ಬಿಗಿಯುತ್ತ ಲೌಕಿಕಾನಂದ ಅನುಭವಿಸುತ್ತಿದ್ದಾನೆ ಎಂಬ ಆರೋಪಗಳಿವೆ. ಕನ್ಯಾದೀಕ್ಷೆ, ಏಕಾಂತ ಸಂದರ್ಶನ, ಹೆಂಗಸರ ಹಣೆಗೆ ಕುಂಕುಮವಿಟ್ಟು ಮೈಸವರಿ ಆಶೀರ್ವಾದ ಮಾಡುವುದೇ ಮುಂತಾದ ಲೈಂಗಿಕ ಕುಚೇಷ್ಟೆಗಳಿಂದ ಹವ್ಯಕರ ಮಠವನ್ನು ತನ್ನ ಕಾಮಕಾಂಡದ ಅಡ್ಡೆ ಮಾಡಿಕೊಂಡಿದ್ದಾನೆ” ಎಂದು ಮೊಟ್ಟಮೊದಲು ಆರೋಪ ಮಾಡಿದ್ದು ಕುಮಟಾದ ಪ್ರಸಿದ್ಧ ವೈದ್ಯರೂ, ಸಾಮಾಜಿಕ ಮುಖಂಡರೂ ಹವ್ಯಕ ಹೀರೇಮಾಣಿಗಳೂ ಆಗಿದ್ದ ಡಾ.ಟಿ.ಟಿ.ಹೆಗಡೆ!

ಡಾ.ಹೆಗಡೆಯನ್ನು ರಾಘವ ಮಠ ಮಾಫಿಯಾ ಒಂದೆರಡು ರೀತಿಯಲ್ಲಿ ಕಾಡಲಿಲ್ಲ. ಹಲವು ಬಾರಿ ಅವರ ಮೇಲೆ ಭೀಭತ್ಸ ಹಲ್ಲೆಯಾಗಿತ್ತು. ಪೊಲೀಸರನ್ನು ಛೂ ಬಿಟ್ಟು ಕಾಡಿದ್ದರು. ಕೇಸುಗಳನ್ನು ಹಾಕಿಸಿದ್ದರು. ರಾಘುನ ಪೂರ್ವಾಶ್ರಮದ ಸಹೋದರಿ ಗ್ಯಾಂಗು ಕಟ್ಟಿಕೊಂಡು ಪೊರಕೆಯಿಂದ ಹೊಡೆಯಲು ಹೋಗಿ ತಮ್ಮನ ಕಲ್ಯಾಣ ಗುಣಗಳ ಅನಾವರಣವೂ ಮಾಡಿದ್ದಳು. ಎಂಬತ್ತರ ಗಡಿದಾಟಿದ್ದ ಡಾ.ಹೆಗಡೆ ಹಲ್ಲೆಯಿಂದ ಆಸ್ಪತ್ರೆಯಲ್ಲಿ ಕಳೆಯುವಂತಾಗಿತ್ತು. ಇಷ್ಟಾದರೂ ಹೆಗಡೆ ಹೆದರಲಿಲ್ಲ. ತ್ರಿಕಾಲ ಪೂಜೆ ಮಾಡದೆ ಹಣ-ಹೆಣ್ಣಿನ ವಾಸನೆಗೆ ಬಿದ್ದಿರುವ ರಾಘು ಗುರು ಪೀಠದಲ್ಲಿರಲು ಅನರ್ಹನೆಂದು ತನ್ನ ಕೊನೆಗಾಲದತನಕ ಹೇಳುತ್ತಲೇ ಇದ್ದರು. ರಾಘುನ ಪೀಠೋಚ್ಛಾಟನೆ ಮಾಡಲು ನ್ಯಾಯಾಲಯಕ್ಕೂ ಹೋಗಿದ್ದರು.

ಡಾ.ಹೆಗಡೆಯವರು ಸಾಮಾಜಿಕ ಕಳಕಳಿ, ಧಾರ್ಮಿಕ ಪಾಂಡಿತ್ಯ, ನೈತಿಕ ನಡವಳಿಕೆಯಿಂದ ಹವ್ಯಕ ಸಮುದಾಯದಲ್ಲಿ ಪ್ರೀತಿ-ಗೌರವ ಸಂಪಾದಿಸಿದ್ದರು. ಸ್ತ್ರೀ ಸಖ್ಯಾ ಸುಖ ಸಂತೃಪ್ತ “ಸನ್ಯಾಸಿ” ರಾಘುನ ಕಂಡರೆ ಹವ್ಯಕರು ಮೂಗು ಮುರಿಯುತ್ತಿದ್ದರೆ ಟಿ.ಟಿ.ಹೆಗಡೆಯನ್ನು ನೋಡಿದಾಕ್ಷಣ ತಲೆಬಾಗಿ ನಮಿಸುತ್ತಿದ್ದರು. ಆದರೆ ಹವ್ಯಕರು ರಾಘು ಗ್ಯಾಂಗಿನ ಬಹಿಷ್ಕಾರ, ಹಲ್ಲೆ, ಜೀವನೋಪಾಯ ವ್ಯವಹಾರಕ್ಕೆ ಕಲ್ಲುಹಾಕುವ ಕ್ರೌರ್ಯಕ್ಕೆ ಹೆದರಿ ಟಿ.ಟಿ.ಹೆಗಡೆಯ ಹೋರಾಟಕ್ಕೆ ಬೆಂಬಲ ನೀಡಲಿಲ್ಲ. ಇದಕ್ಕೆಲ್ಲಾ ಬೇಸರಿಸದೆ ಟಿ.ಟಿ.ಹೆಗಡೆ “ಜಾಣ” ಹವ್ಯಕರ ಕಣ್ಣಿನ ಪೊರೆ ತೆರೆಯಲು ಪ್ರಯತ್ನ ಮಾಡುತ್ತಲೇ ಇದ್ದರು ಎಂಬುದು‌ ಅವರನ್ನು ಬಲ್ಲವರೆಲ್ಲರೂ ಹೇಳುವ ಮಾತು.

ಮಠಬಾನಿಗಳನ್ನು ಎದುರುಹಾಕಿಕೊಂಡಿದ್ದ ಟಿ.ಟಿ.ಹೆಗಡೆಯವರು ಸುಮಾರು ಎರಡು ತಿಂಗಳ ಹಿಂದೆ ವಯೋಸಹಜ ಸಾವು ಕಂಡಿದ್ದಾರೆ. ಲಗಾಯ್ತಿನಿಂದಲೂ ಅನಾಚಾರಿ ರಾಘುನ ಚೇಲಾಗಿರಿ ಮಾಡುತ್ತಲೇ ಬಂದಿರುವ ಬೆಂಗಳೂರಿನ ಗಿರಿನಗರ ಪೊಲೀಸ್‌ ಅಧಿಕಾರಿಗಳು ದಿವಂಗತ ಟಿ.ಟಿ.ಹೆಗಡೆ ಮೇಲೆ ಕೇಸು ಜಡಿದಿದ್ದಾರೆ. ರಾಘುನ ವಿರುದ್ಧ ಅವಹೇಳನಕಾರಿ ಬರಹವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚುರಪಡಿಸುತ್ತಿದ್ದಾರೆಂಬ ಆರೋಪ ಹೊರಿಸಿದ್ದಾರೆ. ಪಾಪಾ ಟಿ.ಟಿ ಹೆಗಡೆಯವರು ಮರಣಹೊಂದಿ ಎರಡು ತಿಂಗಳಾದರೂ ಸಹ ಅವರನ್ನು ಬಿಡುತ್ತಿಲ್ಲ ಮಠಬಾನಿಗಳು. ಮಠದ ಸಿಇಓ ಕೆ.ಜಿ.ಭಟ್ಟ ಕೊಟ್ಟ ಕಂಪ್ಲೇಂಟಿನ ಮೇಲೆ ಎಫ್‌ಐಆರ್‌ ಕೂಡ ಹಾಕಿರುವ ಪೆದ್ದು ಪೊಲೀಸರು ಅದನ್ನು ನ್ಯಾಯಾಲಯಕ್ಕೂ ಸಲ್ಲಿಸಿದ್ದಾರೆ. ಎನ್‌ಸಿಆರ್‌ 207/19 ನಂಬರಿನ ಎಫ್‌ಐಆರ್ ಅನ್ನು 25-09-2019 ರಂದು ಕೋರ್ಟಿಗೆ ಸಲ್ಲಿಸಿರುವ ಪೊಲೀಸ್ ಅಧಿಕಾರಿಗಳು ಮತ್ತು ಮಠಬಾನಿಗಳ ಹುಚ್ಚಾಟಕ್ಕೆ ಜನ ಬಿದ್ದು ಬಿದ್ದು ನಗುತ್ತಿದ್ದಾರೆ!!

ಈ ಗಿರಿನಗರ ಪೊಲೀಸರು ಹಿಂದೆ ರಾಘುನ ವಿರುದ್ಧ ಅತ್ಯಾಚಾರ ಸಂತ್ರಸ್ತೆಯು ದೂರು ಕೊಡಲು ಹೋದಾಗಲೂ ಸತಾಯಿಸಿದ್ದರು. ರಾಘುನ ರಗಳೆ-ರಾದ್ಧಾಂತದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚಿಸಿದ್ದವರಿಗೆ, ಅಲ್ಲಲ್ಲಿ ಮಾತಾಡಿದವರಿಗೆಲ್ಲಾ ಈ ಗಿರಿನಗರ ಪೊಲೀಸರು ಹಿಂಸೆ ನೀಡಿದ್ದ ದೊಡ್ಡ ಪಟ್ಟಿಯೇ ಇದೆ. ಸತ್ತವರನ್ನು ಬಿಡದೇ ಕಾಡಿ ತೆವಲು ತೀರಿಸಿಕೊಳ್ಳುವ ಸ್ಯಾಡಿಸ್ಟ್ ರಾಘುನ ಪೀಠಕ್ಕೆ ಬಲಿಯಾದ ಪುತ್ತೂರಿನ ಶ್ಯಾಮಶಾಸ್ತ್ರಿಯ ಕುಟುಂಬ ಪಟ್ಟ ಕಷ್ಟ ಹೇಳತೀರದು. ಈಗ ದಿವಂಗತ ಟಿ.ಟಿ.ಹೆಗಡೆ ಮೇಲೆ ಮಸಲತ್ತಿನ ಎಫ್‌ಐಆರ್‌ ಆಗಿದೆ. ಹವ್ಯಕರಿಗೇಕೆ ನೈತಿಕ ಸಾತ್ವಿಕ ಸಿಟ್ಟು ಬರುತ್ತಿಲ್ಲ? ಹವ್ಯಕ ಕುಲಘಾತುಕ ರಾಘುನನ್ನ ಆ ಸಮುದಾಯ ಇನ್ನೆಷ್ಟು ದಿನ ಸಹಿಸಿಕೊಳ್ಳುತ್ತದೋ ಎಂಬ ಪ್ರಶ್ನೆ ಅವರನ್ನು ವಿರೋಧಿಸುತ್ತಿರುವ ಹವ್ಯಕರದ್ದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...