Homeಮುಖಪುಟತಮಿಳುನಾಡು ಸರ್ಕಾರದ ಆರ್ಥಿಕ ಸಲಹಾ ಮಂಡಳಿಯ ಭಾಗವಾದ ರಘುರಾಂ ರಾಜನ್, ಎಸ್ತರ್ ಡುಫ್ಲೊ

ತಮಿಳುನಾಡು ಸರ್ಕಾರದ ಆರ್ಥಿಕ ಸಲಹಾ ಮಂಡಳಿಯ ಭಾಗವಾದ ರಘುರಾಂ ರಾಜನ್, ಎಸ್ತರ್ ಡುಫ್ಲೊ

2003-2006 ರವರೆಗೆ ಐಎಂಎಫ್‌ನ ಮುಖ್ಯ ಹಣಕಾಸು ತಜ್ಞರು ಮತ್ತು ಸಂಶೋಧನಾ ನಿರ್ದೇಶಕರಾಗಿದ್ದ ರಘುರಾಂ ರಾಜನ್‌ರವರು 2007-2008ರ ಸಮಯದಲ್ಲಿ ಜಾಗತಿಕ ಆರ್ಥಿಕ ಕುಸಿತದ ಕುರಿತು ಎಚ್ಚರಿಕೆ ನೀಡಿದ ಮೊದಲಿಗರಾಗಿದ್ದರು.

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ಸರ್ಕಾರವು ‘ನೂತನ ಮುಖ್ಯಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಗೆ’ ಜಗತ್ಪ್ರಸಿದ್ದ ಅರ್ಥಶಾಸ್ತ್ರಜ್ಞರನ್ನು ನೇಮಿಸಿಕೊಂಡು ಗಮನ ಸೆಳೆದಿದೆ.

ಸಮಿತಿಯಲ್ಲಿ ಆರ್‌ಬಿಐನ್‌ ಮಾಜಿ ಗರ್ವನರ್ ರಘುರಾಮ್ ರಾಜನ್, ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞೆ ಎಸ್ತರ್ ಡುಫ್ಲೊ, ಕೇಂದ್ರ ಸರ್ಕಾರದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್, ಅಭಿವೃದ್ಧಿ ಅರ್ಥಶಾಸ್ತ್ರಜ್ಞ ಜೀನ್ ಡ್ರೆಜ್ ಮತ್ತು ಮಾಜಿ ಕೇಂದ್ರ ಹಣಕಾಸು ಕಾರ್ಯದರ್ಶಿ ಎಸ್ ನಾರಾಯಣ್ ಸೇರಿದ್ದಾರೆ.

ಇಂದು ತಮಿಳುನಾಡು ರಾಜ್ಯಪಾಲರಾದ ಭನ್ವಾರಿಲಾಲ್ ಪುರೋಹಿತ್ ಸಮಿತಿಯನ್ನು ಘೋಷಿಸಿ “ಈ ಮಂಡಳಿಯ ಶಿಫಾರಸುಗಳನ್ನು ಆಧರಿಸಿ, ಸರ್ಕಾರವು ರಾಜ್ಯದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುತ್ತದೆ ಮತ್ತು ಆರ್ಥಿಕ ಬೆಳವಣಿಗೆಯ ಅನುಕೂಲಗಳು ಸಮಾಜದ ಎಲ್ಲಾ ವಿಭಾಗಗಳನ್ನು ತಲುಪುವಂತೆ ನೋಡಿಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ರಾಜ್ಯ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ರಾಜ್ಯಕ್ಕೆ ತ್ವರಿತ ಮತ್ತು ಒಳಗೊಳ್ಳುವ ಆರ್ಥಿಕ ಬೆಳವಣಿಗೆಯ ಹಾದಿಯನ್ನು ರೂಪಿಸುವ ನಿಟ್ಟಿನಲ್ಲಿ ಈ ಮಂಡಳಿ ಕಾರ್ಯನಿರ್ವಹಿಸಲಿದೆ. ಹಣಕಾಸು ನೀತಿಗಳು ಜಿಲ್ಲೆಗಳ ಕೈಗಾರಿಕಾ ನೆಲೆಯನ್ನು ವೈವಿಧ್ಯಗೊಳಿಸುವುದು ಮತ್ತು ತಾಂತ್ರಿಕ ಉನ್ನತೀಕರಣವನ್ನು ಖಾತರಿಪಡಿಸಲು ಇದು ಶ್ರಮಿಸುತ್ತದೆ” ಎಂದು ತಿಳಿಸಿದ್ದಾರೆ.

ಎಂಎಸ್‌ಎಂಇಗಳನ್ನು ಪುನರುಜ್ಜೀವನಗೊಳಿಸುವ ಯೋಜನೆಗಳನ್ನು ರೂಪಿಸಲು ಕೈಗಾರಿಕೋದ್ಯಮಿಗಳು, ಬ್ಯಾಂಕಿಂಗ್ ಮತ್ತು ಹಣಕಾಸು ತಜ್ಞರು ಮತ್ತು ಸರ್ಕಾರಿ ಅಧಿಕಾರಿಗಳನ್ನು ಒಳಗೊಂಡ ತಜ್ಞರ ಸಮಿತಿಯನ್ನು ರಚಿಸಲಾಗುವುದು. ಆರ್ಥಿಕ ಸಲಹಾ ಸಮಿತಿ ಮತ್ತು ಇತರ ಗುಂಪುಗಳು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಅಧ್ಯಯನ ಮಾಡುತ್ತವೆ ಮತ್ತು ರಾಜ್ಯದ ಆರ್ಥಿಕತೆಯನ್ನು ಸದೃಢವಾಗಿಸಲು ಬದಲಾವಣೆಗಳನ್ನು ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಅಲ್ಲದೆ ತಮಿಳುನಾಡು ಸರ್ಕಾರವು ಕೃಷಿ ಮತ್ತು ತಮಿಳು ಮಾಧ್ಯಮದ ವಿದ್ಯಾರ್ಥಿಗಳಿಗೆ ಉದ್ಯೋಗಕ್ಕಾಗಿ ಪ್ರತ್ಯೇಕ ಬಜೆಟ್‌ ಅನ್ನು ಮೀಸಲಿಡುತ್ತದೆ ಎಂದು ಅವರು ಘೋಷಿಸಿದ್ದಾರೆ.

ಈ ಆರ್ಥಿಕ ಸಲಹಾ ಮಂಡಳಿಯ ಸದಸ್ಯರು ಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದು, ಅಪಾರ ಅನುಭವವುಳ್ಳವರಾಗಿದ್ದಾರೆ. ಕೆಲವರು ಕೇಂದ್ರ ಸರ್ಕಾರದ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮೋದಿ ಸರ್ಕಾರದ ನೀತಿಗಳನ್ನು ಖಂಡಿಸಿ ಹೊರಬಂದಿದ್ದಾರೆ. ಅಂತವರನ್ನು ತಮಿಳುನಾಡು ಸರ್ಕಾರ ತಮ್ಮ ಸಲಹಾ ಸಮಿತಿಗೆ ನೇಮಿಸಿಕೊಂಡು ದೇಶದ ಗಮನ ಸೆಳೆದಿದೆ.

2003-2006 ರವರೆಗೆ ಐಎಂಎಫ್‌ನ ಮುಖ್ಯ ಹಣಕಾಸು ತಜ್ಞರು ಮತ್ತು ಸಂಶೋಧನಾ ನಿರ್ದೇಶಕರಾಗಿದ್ದ ರಘುರಾಂ ರಾಜನ್‌ರವರು 2007-2008ರ ಸಮಯದಲ್ಲಿ ಜಾಗತಿಕ ಆರ್ಥಿಕ ಕುಸಿತದ ಕುರಿತು ಎಚ್ಚರಿಕೆ ನೀಡಿದ ಮೊದಲಿಗರಾಗಿದ್ದರು.

ಎಸ್ತರ್ ಡುಫ್ಲೊರವರು ಜಾಗತಿಕ ಬಡತನವನ್ನು ಹೋಗಲಾಡಿಸುವ ಪ್ರಾಯೋಗಿಕ ವಿಧಾನಕ್ಕಾಗಿ 2019ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಪಡೆದ ಅರ್ಥಶಾಸ್ತ್ರಜ್ಞೆಯಾಗಿದ್ದಾರೆ.

2014 ರಿಂದ 2018ರವರೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದ ಅರವಿಂದ್ ಸುಬ್ರಮಣಿಯನ್‌ಯವರು ಸರ್ಕಾರದ ನೀತಿಗಳನ್ನು ಟೀಕಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಹೊರಬಂದಿದ್ದರು.

ಇಂತಹ ಅನುಭವಿಗಳನ್ನು ನೇಮಿಸಿಕೊಂಡು ರಾಜ್ಯದ ಆರ್ಥಿಕತೆಯನ್ನು ರೂಪಿಸಲು ತಮಿಳುನಾಡು ಸರ್ಕಾರ ಹೊರಟಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.


ಇದನ್ನೂ ಓದಿ: ಈಗ ಸರ್ಕಾರವೇನು ಮಾಡಬೇಕು?: ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡಫ್ಲೊ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಮಿಳುನಾಡಿನ ಸ್ಟಾಲಿನ (ಪ್ರಪಂಚದ ಖ್ಯಾತ ಅರ್ಥ ಶಾಸ್ತ್ರಜ್ಞರನ್ನು ಒಳಗೊಂಡ ಸಲಹಾ ಮಂಡಳಿಯ ನೇಮಕಾತಿ )ಹಾಗು ಕೇರಳದ ವಿಜಯನ್ ರವರು (ನವ್ಯ ಹಾಗೂ ವಿನೂತನ ಮಂತ್ರಿ ಮಂಡಲ ), ರಾಜ್ಯಗಳ ಆಡಳಿತದಲ್ಲಿ ಹೊಸ ಅಧ್ಯಯವನ್ನೇ ಬರೆಯುತ್ತಿದ್ದಾರೆ.
    ಅವರ ಯಶಸ್ಸಿನಲ್ಲೇ ದೇಶದ ಯಶಸ್ಸಿದೆ
    ??????????????

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...