Homeಮುಖಪುಟತಮಿಳುನಾಡು ಸರ್ಕಾರದ ಆರ್ಥಿಕ ಸಲಹಾ ಮಂಡಳಿಯ ಭಾಗವಾದ ರಘುರಾಂ ರಾಜನ್, ಎಸ್ತರ್ ಡುಫ್ಲೊ

ತಮಿಳುನಾಡು ಸರ್ಕಾರದ ಆರ್ಥಿಕ ಸಲಹಾ ಮಂಡಳಿಯ ಭಾಗವಾದ ರಘುರಾಂ ರಾಜನ್, ಎಸ್ತರ್ ಡುಫ್ಲೊ

2003-2006 ರವರೆಗೆ ಐಎಂಎಫ್‌ನ ಮುಖ್ಯ ಹಣಕಾಸು ತಜ್ಞರು ಮತ್ತು ಸಂಶೋಧನಾ ನಿರ್ದೇಶಕರಾಗಿದ್ದ ರಘುರಾಂ ರಾಜನ್‌ರವರು 2007-2008ರ ಸಮಯದಲ್ಲಿ ಜಾಗತಿಕ ಆರ್ಥಿಕ ಕುಸಿತದ ಕುರಿತು ಎಚ್ಚರಿಕೆ ನೀಡಿದ ಮೊದಲಿಗರಾಗಿದ್ದರು.

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ಸರ್ಕಾರವು ‘ನೂತನ ಮುಖ್ಯಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಗೆ’ ಜಗತ್ಪ್ರಸಿದ್ದ ಅರ್ಥಶಾಸ್ತ್ರಜ್ಞರನ್ನು ನೇಮಿಸಿಕೊಂಡು ಗಮನ ಸೆಳೆದಿದೆ.

ಸಮಿತಿಯಲ್ಲಿ ಆರ್‌ಬಿಐನ್‌ ಮಾಜಿ ಗರ್ವನರ್ ರಘುರಾಮ್ ರಾಜನ್, ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞೆ ಎಸ್ತರ್ ಡುಫ್ಲೊ, ಕೇಂದ್ರ ಸರ್ಕಾರದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್, ಅಭಿವೃದ್ಧಿ ಅರ್ಥಶಾಸ್ತ್ರಜ್ಞ ಜೀನ್ ಡ್ರೆಜ್ ಮತ್ತು ಮಾಜಿ ಕೇಂದ್ರ ಹಣಕಾಸು ಕಾರ್ಯದರ್ಶಿ ಎಸ್ ನಾರಾಯಣ್ ಸೇರಿದ್ದಾರೆ.

ಇಂದು ತಮಿಳುನಾಡು ರಾಜ್ಯಪಾಲರಾದ ಭನ್ವಾರಿಲಾಲ್ ಪುರೋಹಿತ್ ಸಮಿತಿಯನ್ನು ಘೋಷಿಸಿ “ಈ ಮಂಡಳಿಯ ಶಿಫಾರಸುಗಳನ್ನು ಆಧರಿಸಿ, ಸರ್ಕಾರವು ರಾಜ್ಯದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುತ್ತದೆ ಮತ್ತು ಆರ್ಥಿಕ ಬೆಳವಣಿಗೆಯ ಅನುಕೂಲಗಳು ಸಮಾಜದ ಎಲ್ಲಾ ವಿಭಾಗಗಳನ್ನು ತಲುಪುವಂತೆ ನೋಡಿಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ರಾಜ್ಯ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ರಾಜ್ಯಕ್ಕೆ ತ್ವರಿತ ಮತ್ತು ಒಳಗೊಳ್ಳುವ ಆರ್ಥಿಕ ಬೆಳವಣಿಗೆಯ ಹಾದಿಯನ್ನು ರೂಪಿಸುವ ನಿಟ್ಟಿನಲ್ಲಿ ಈ ಮಂಡಳಿ ಕಾರ್ಯನಿರ್ವಹಿಸಲಿದೆ. ಹಣಕಾಸು ನೀತಿಗಳು ಜಿಲ್ಲೆಗಳ ಕೈಗಾರಿಕಾ ನೆಲೆಯನ್ನು ವೈವಿಧ್ಯಗೊಳಿಸುವುದು ಮತ್ತು ತಾಂತ್ರಿಕ ಉನ್ನತೀಕರಣವನ್ನು ಖಾತರಿಪಡಿಸಲು ಇದು ಶ್ರಮಿಸುತ್ತದೆ” ಎಂದು ತಿಳಿಸಿದ್ದಾರೆ.

ಎಂಎಸ್‌ಎಂಇಗಳನ್ನು ಪುನರುಜ್ಜೀವನಗೊಳಿಸುವ ಯೋಜನೆಗಳನ್ನು ರೂಪಿಸಲು ಕೈಗಾರಿಕೋದ್ಯಮಿಗಳು, ಬ್ಯಾಂಕಿಂಗ್ ಮತ್ತು ಹಣಕಾಸು ತಜ್ಞರು ಮತ್ತು ಸರ್ಕಾರಿ ಅಧಿಕಾರಿಗಳನ್ನು ಒಳಗೊಂಡ ತಜ್ಞರ ಸಮಿತಿಯನ್ನು ರಚಿಸಲಾಗುವುದು. ಆರ್ಥಿಕ ಸಲಹಾ ಸಮಿತಿ ಮತ್ತು ಇತರ ಗುಂಪುಗಳು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಅಧ್ಯಯನ ಮಾಡುತ್ತವೆ ಮತ್ತು ರಾಜ್ಯದ ಆರ್ಥಿಕತೆಯನ್ನು ಸದೃಢವಾಗಿಸಲು ಬದಲಾವಣೆಗಳನ್ನು ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಅಲ್ಲದೆ ತಮಿಳುನಾಡು ಸರ್ಕಾರವು ಕೃಷಿ ಮತ್ತು ತಮಿಳು ಮಾಧ್ಯಮದ ವಿದ್ಯಾರ್ಥಿಗಳಿಗೆ ಉದ್ಯೋಗಕ್ಕಾಗಿ ಪ್ರತ್ಯೇಕ ಬಜೆಟ್‌ ಅನ್ನು ಮೀಸಲಿಡುತ್ತದೆ ಎಂದು ಅವರು ಘೋಷಿಸಿದ್ದಾರೆ.

ಈ ಆರ್ಥಿಕ ಸಲಹಾ ಮಂಡಳಿಯ ಸದಸ್ಯರು ಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದು, ಅಪಾರ ಅನುಭವವುಳ್ಳವರಾಗಿದ್ದಾರೆ. ಕೆಲವರು ಕೇಂದ್ರ ಸರ್ಕಾರದ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮೋದಿ ಸರ್ಕಾರದ ನೀತಿಗಳನ್ನು ಖಂಡಿಸಿ ಹೊರಬಂದಿದ್ದಾರೆ. ಅಂತವರನ್ನು ತಮಿಳುನಾಡು ಸರ್ಕಾರ ತಮ್ಮ ಸಲಹಾ ಸಮಿತಿಗೆ ನೇಮಿಸಿಕೊಂಡು ದೇಶದ ಗಮನ ಸೆಳೆದಿದೆ.

2003-2006 ರವರೆಗೆ ಐಎಂಎಫ್‌ನ ಮುಖ್ಯ ಹಣಕಾಸು ತಜ್ಞರು ಮತ್ತು ಸಂಶೋಧನಾ ನಿರ್ದೇಶಕರಾಗಿದ್ದ ರಘುರಾಂ ರಾಜನ್‌ರವರು 2007-2008ರ ಸಮಯದಲ್ಲಿ ಜಾಗತಿಕ ಆರ್ಥಿಕ ಕುಸಿತದ ಕುರಿತು ಎಚ್ಚರಿಕೆ ನೀಡಿದ ಮೊದಲಿಗರಾಗಿದ್ದರು.

ಎಸ್ತರ್ ಡುಫ್ಲೊರವರು ಜಾಗತಿಕ ಬಡತನವನ್ನು ಹೋಗಲಾಡಿಸುವ ಪ್ರಾಯೋಗಿಕ ವಿಧಾನಕ್ಕಾಗಿ 2019ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಪಡೆದ ಅರ್ಥಶಾಸ್ತ್ರಜ್ಞೆಯಾಗಿದ್ದಾರೆ.

2014 ರಿಂದ 2018ರವರೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದ ಅರವಿಂದ್ ಸುಬ್ರಮಣಿಯನ್‌ಯವರು ಸರ್ಕಾರದ ನೀತಿಗಳನ್ನು ಟೀಕಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಹೊರಬಂದಿದ್ದರು.

ಇಂತಹ ಅನುಭವಿಗಳನ್ನು ನೇಮಿಸಿಕೊಂಡು ರಾಜ್ಯದ ಆರ್ಥಿಕತೆಯನ್ನು ರೂಪಿಸಲು ತಮಿಳುನಾಡು ಸರ್ಕಾರ ಹೊರಟಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.


ಇದನ್ನೂ ಓದಿ: ಈಗ ಸರ್ಕಾರವೇನು ಮಾಡಬೇಕು?: ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡಫ್ಲೊ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಮಿಳುನಾಡಿನ ಸ್ಟಾಲಿನ (ಪ್ರಪಂಚದ ಖ್ಯಾತ ಅರ್ಥ ಶಾಸ್ತ್ರಜ್ಞರನ್ನು ಒಳಗೊಂಡ ಸಲಹಾ ಮಂಡಳಿಯ ನೇಮಕಾತಿ )ಹಾಗು ಕೇರಳದ ವಿಜಯನ್ ರವರು (ನವ್ಯ ಹಾಗೂ ವಿನೂತನ ಮಂತ್ರಿ ಮಂಡಲ ), ರಾಜ್ಯಗಳ ಆಡಳಿತದಲ್ಲಿ ಹೊಸ ಅಧ್ಯಯವನ್ನೇ ಬರೆಯುತ್ತಿದ್ದಾರೆ.
    ಅವರ ಯಶಸ್ಸಿನಲ್ಲೇ ದೇಶದ ಯಶಸ್ಸಿದೆ
    ??????????????

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...