Homeಮುಖಪುಟತಮಿಳುನಾಡು ಸರ್ಕಾರದ ಆರ್ಥಿಕ ಸಲಹಾ ಮಂಡಳಿಯ ಭಾಗವಾದ ರಘುರಾಂ ರಾಜನ್, ಎಸ್ತರ್ ಡುಫ್ಲೊ

ತಮಿಳುನಾಡು ಸರ್ಕಾರದ ಆರ್ಥಿಕ ಸಲಹಾ ಮಂಡಳಿಯ ಭಾಗವಾದ ರಘುರಾಂ ರಾಜನ್, ಎಸ್ತರ್ ಡುಫ್ಲೊ

2003-2006 ರವರೆಗೆ ಐಎಂಎಫ್‌ನ ಮುಖ್ಯ ಹಣಕಾಸು ತಜ್ಞರು ಮತ್ತು ಸಂಶೋಧನಾ ನಿರ್ದೇಶಕರಾಗಿದ್ದ ರಘುರಾಂ ರಾಜನ್‌ರವರು 2007-2008ರ ಸಮಯದಲ್ಲಿ ಜಾಗತಿಕ ಆರ್ಥಿಕ ಕುಸಿತದ ಕುರಿತು ಎಚ್ಚರಿಕೆ ನೀಡಿದ ಮೊದಲಿಗರಾಗಿದ್ದರು.

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ಸರ್ಕಾರವು ‘ನೂತನ ಮುಖ್ಯಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಗೆ’ ಜಗತ್ಪ್ರಸಿದ್ದ ಅರ್ಥಶಾಸ್ತ್ರಜ್ಞರನ್ನು ನೇಮಿಸಿಕೊಂಡು ಗಮನ ಸೆಳೆದಿದೆ.

ಸಮಿತಿಯಲ್ಲಿ ಆರ್‌ಬಿಐನ್‌ ಮಾಜಿ ಗರ್ವನರ್ ರಘುರಾಮ್ ರಾಜನ್, ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞೆ ಎಸ್ತರ್ ಡುಫ್ಲೊ, ಕೇಂದ್ರ ಸರ್ಕಾರದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್, ಅಭಿವೃದ್ಧಿ ಅರ್ಥಶಾಸ್ತ್ರಜ್ಞ ಜೀನ್ ಡ್ರೆಜ್ ಮತ್ತು ಮಾಜಿ ಕೇಂದ್ರ ಹಣಕಾಸು ಕಾರ್ಯದರ್ಶಿ ಎಸ್ ನಾರಾಯಣ್ ಸೇರಿದ್ದಾರೆ.

ಇಂದು ತಮಿಳುನಾಡು ರಾಜ್ಯಪಾಲರಾದ ಭನ್ವಾರಿಲಾಲ್ ಪುರೋಹಿತ್ ಸಮಿತಿಯನ್ನು ಘೋಷಿಸಿ “ಈ ಮಂಡಳಿಯ ಶಿಫಾರಸುಗಳನ್ನು ಆಧರಿಸಿ, ಸರ್ಕಾರವು ರಾಜ್ಯದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುತ್ತದೆ ಮತ್ತು ಆರ್ಥಿಕ ಬೆಳವಣಿಗೆಯ ಅನುಕೂಲಗಳು ಸಮಾಜದ ಎಲ್ಲಾ ವಿಭಾಗಗಳನ್ನು ತಲುಪುವಂತೆ ನೋಡಿಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ರಾಜ್ಯ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ರಾಜ್ಯಕ್ಕೆ ತ್ವರಿತ ಮತ್ತು ಒಳಗೊಳ್ಳುವ ಆರ್ಥಿಕ ಬೆಳವಣಿಗೆಯ ಹಾದಿಯನ್ನು ರೂಪಿಸುವ ನಿಟ್ಟಿನಲ್ಲಿ ಈ ಮಂಡಳಿ ಕಾರ್ಯನಿರ್ವಹಿಸಲಿದೆ. ಹಣಕಾಸು ನೀತಿಗಳು ಜಿಲ್ಲೆಗಳ ಕೈಗಾರಿಕಾ ನೆಲೆಯನ್ನು ವೈವಿಧ್ಯಗೊಳಿಸುವುದು ಮತ್ತು ತಾಂತ್ರಿಕ ಉನ್ನತೀಕರಣವನ್ನು ಖಾತರಿಪಡಿಸಲು ಇದು ಶ್ರಮಿಸುತ್ತದೆ” ಎಂದು ತಿಳಿಸಿದ್ದಾರೆ.

ಎಂಎಸ್‌ಎಂಇಗಳನ್ನು ಪುನರುಜ್ಜೀವನಗೊಳಿಸುವ ಯೋಜನೆಗಳನ್ನು ರೂಪಿಸಲು ಕೈಗಾರಿಕೋದ್ಯಮಿಗಳು, ಬ್ಯಾಂಕಿಂಗ್ ಮತ್ತು ಹಣಕಾಸು ತಜ್ಞರು ಮತ್ತು ಸರ್ಕಾರಿ ಅಧಿಕಾರಿಗಳನ್ನು ಒಳಗೊಂಡ ತಜ್ಞರ ಸಮಿತಿಯನ್ನು ರಚಿಸಲಾಗುವುದು. ಆರ್ಥಿಕ ಸಲಹಾ ಸಮಿತಿ ಮತ್ತು ಇತರ ಗುಂಪುಗಳು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಅಧ್ಯಯನ ಮಾಡುತ್ತವೆ ಮತ್ತು ರಾಜ್ಯದ ಆರ್ಥಿಕತೆಯನ್ನು ಸದೃಢವಾಗಿಸಲು ಬದಲಾವಣೆಗಳನ್ನು ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಅಲ್ಲದೆ ತಮಿಳುನಾಡು ಸರ್ಕಾರವು ಕೃಷಿ ಮತ್ತು ತಮಿಳು ಮಾಧ್ಯಮದ ವಿದ್ಯಾರ್ಥಿಗಳಿಗೆ ಉದ್ಯೋಗಕ್ಕಾಗಿ ಪ್ರತ್ಯೇಕ ಬಜೆಟ್‌ ಅನ್ನು ಮೀಸಲಿಡುತ್ತದೆ ಎಂದು ಅವರು ಘೋಷಿಸಿದ್ದಾರೆ.

ಈ ಆರ್ಥಿಕ ಸಲಹಾ ಮಂಡಳಿಯ ಸದಸ್ಯರು ಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದು, ಅಪಾರ ಅನುಭವವುಳ್ಳವರಾಗಿದ್ದಾರೆ. ಕೆಲವರು ಕೇಂದ್ರ ಸರ್ಕಾರದ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮೋದಿ ಸರ್ಕಾರದ ನೀತಿಗಳನ್ನು ಖಂಡಿಸಿ ಹೊರಬಂದಿದ್ದಾರೆ. ಅಂತವರನ್ನು ತಮಿಳುನಾಡು ಸರ್ಕಾರ ತಮ್ಮ ಸಲಹಾ ಸಮಿತಿಗೆ ನೇಮಿಸಿಕೊಂಡು ದೇಶದ ಗಮನ ಸೆಳೆದಿದೆ.

2003-2006 ರವರೆಗೆ ಐಎಂಎಫ್‌ನ ಮುಖ್ಯ ಹಣಕಾಸು ತಜ್ಞರು ಮತ್ತು ಸಂಶೋಧನಾ ನಿರ್ದೇಶಕರಾಗಿದ್ದ ರಘುರಾಂ ರಾಜನ್‌ರವರು 2007-2008ರ ಸಮಯದಲ್ಲಿ ಜಾಗತಿಕ ಆರ್ಥಿಕ ಕುಸಿತದ ಕುರಿತು ಎಚ್ಚರಿಕೆ ನೀಡಿದ ಮೊದಲಿಗರಾಗಿದ್ದರು.

ಎಸ್ತರ್ ಡುಫ್ಲೊರವರು ಜಾಗತಿಕ ಬಡತನವನ್ನು ಹೋಗಲಾಡಿಸುವ ಪ್ರಾಯೋಗಿಕ ವಿಧಾನಕ್ಕಾಗಿ 2019ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಪಡೆದ ಅರ್ಥಶಾಸ್ತ್ರಜ್ಞೆಯಾಗಿದ್ದಾರೆ.

2014 ರಿಂದ 2018ರವರೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದ ಅರವಿಂದ್ ಸುಬ್ರಮಣಿಯನ್‌ಯವರು ಸರ್ಕಾರದ ನೀತಿಗಳನ್ನು ಟೀಕಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಹೊರಬಂದಿದ್ದರು.

ಇಂತಹ ಅನುಭವಿಗಳನ್ನು ನೇಮಿಸಿಕೊಂಡು ರಾಜ್ಯದ ಆರ್ಥಿಕತೆಯನ್ನು ರೂಪಿಸಲು ತಮಿಳುನಾಡು ಸರ್ಕಾರ ಹೊರಟಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.


ಇದನ್ನೂ ಓದಿ: ಈಗ ಸರ್ಕಾರವೇನು ಮಾಡಬೇಕು?: ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡಫ್ಲೊ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಮಿಳುನಾಡಿನ ಸ್ಟಾಲಿನ (ಪ್ರಪಂಚದ ಖ್ಯಾತ ಅರ್ಥ ಶಾಸ್ತ್ರಜ್ಞರನ್ನು ಒಳಗೊಂಡ ಸಲಹಾ ಮಂಡಳಿಯ ನೇಮಕಾತಿ )ಹಾಗು ಕೇರಳದ ವಿಜಯನ್ ರವರು (ನವ್ಯ ಹಾಗೂ ವಿನೂತನ ಮಂತ್ರಿ ಮಂಡಲ ), ರಾಜ್ಯಗಳ ಆಡಳಿತದಲ್ಲಿ ಹೊಸ ಅಧ್ಯಯವನ್ನೇ ಬರೆಯುತ್ತಿದ್ದಾರೆ.
    ಅವರ ಯಶಸ್ಸಿನಲ್ಲೇ ದೇಶದ ಯಶಸ್ಸಿದೆ
    ??????????????

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...