Homeಕರ್ನಾಟಕ’ರಾಗಿಣಿ ಬಿಜೆಪಿ ಸದಸ್ಯರಲ್ಲ; ಅವರ ಕಾರ್ಯಚಟುವಟಿಕೆಗಳಿಗೆ ಪಕ್ಷ ಹೊಣೆಯಾಗದು: ಬಿಜೆಪಿ

’ರಾಗಿಣಿ ಬಿಜೆಪಿ ಸದಸ್ಯರಲ್ಲ; ಅವರ ಕಾರ್ಯಚಟುವಟಿಕೆಗಳಿಗೆ ಪಕ್ಷ ಹೊಣೆಯಾಗದು: ಬಿಜೆಪಿ

ರಾಗಿಣಿ ಬಿಜೆಪಿಯ ರಾಯಭಾರಿ ಎಂದು ಕಾಂಗ್ರೆಸ್ ಆರೋಪಿಸಿದೆ

- Advertisement -
- Advertisement -

ಡ್ರಗ್ಸ್‌ ಜಾಲದಲ್ಲಿ ನಟಿ ರಾಗಿಣಿ ದ್ವಿವೇದಿ ಅವರ ಬಂಧನವಾದ ನಂತರ ಅವರಿಗೂ ಬಿಜೆಪಿಗೂ ಇರುವ ನಂಟಿನ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಆದರೆ ಬಿಜೆಪಿ ಅವರಿಂದ ಅಂತರ ಕಾಯ್ದುಕೊಳ್ಳಲು ಪ್ರಯತ್ನಿಸುತ್ತಿದ್ದು, ನಟಿ ರಾಗಿಣಿ ಬಿಜೆಪಿ ಸದಸ್ಯರಲ್ಲ. ಅವರ ವೈಯಕ್ತಿಕ ಅಥವಾ ವೃತ್ತಿ ಜೀವನದ ಕಾರ್ಯಚಟುವಟಿಕೆಗಳಿಗೆ ಪಕ್ಷ ಹೊಣೆಯಾಗದು ಎಂದು ಹೇಳಿದೆ.

ಬಿಜೆಪಿಯ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್‌ ಕಾರ್ಣಿಕ್, “ರಾಗಿಣಿ ಬಿಜೆಪಿ ಸದಸ್ಯರಲ್ಲ. ಪಕ್ಷವು ಅವರಿಗೆ ಚುನಾವಣೆಯಲ್ಲಿ ಯಾವುದೇ ಜವಾಬ್ದಾರಿ ವಹಿಸಿರಲಿಲ್ಲ. 2019 ರ ಉಪಚುನಾವಣೆ ವೇಳೆ ಸ್ವಇಚ್ಛೆಯಿಂದ ಬಿಜೆಪಿಯ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರು. ಅವರ ವೈಯಕ್ತಿಕ ಅಥವಾ ವೃತ್ತಿ ಜೀವನದ ಕಾರ್ಯಚಟುವಟಿಕೆಗಳಿಗೆ ಪಕ್ಷ ಹೊಣೆಯಾಗದು. ಅದಕ್ಕೆ ಉತ್ತರಿಸುವ ಅಗತ್ಯವು ಇಲ್ಲ. ಈ ಘಟನೆಗೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಿಂದ ಪಕ್ಷವು ಅಂತರ ಕಾಯ್ದುಕೊಳ್ಳಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಮಾಫಿಯ ಪ್ರಕರಣ: ಪೊಲೀಸರ ವಶದಲ್ಲಿರುವ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್ ಬಿಜೆಪಿ ಕಾರ್ಯಕರ್ತನೆ?

ಆದರೆ ನಟಿ ರಾಗಿಣಿಗೆ ಬಿಜೆಪಿಯೊಂದಿಗೆ ನಿರಂತರ ಸಂಪರ್ಕವಿದ್ದು, ಎಪ್ರಿಲ್ 13, 2019 ರಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ ರಾವ್‌ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗುವ ಕಾರ್ಯಕ್ರಮ ನಿಗದಿಯಾಗಿತ್ತಾದರೂ, ಕಾರಣಾತರಗಳಿಂದ ರದ್ದಾಗಿತ್ತು.

ಕೆಳೆದ ವಾರ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿ ವಿಚಾರಣೆ ಎದುರಿಸಿದ್ದ ಆರೋಪಿ ಕಾರ್ತಿಕ್ ರಾಜ್ ಬಿಜೆಪಿ ಪಕ್ಷದ ಕಾರ್ಯಕರ್ತನೆಂಬ ಆರೋಪ ಕೇಳಿಬಂದಿತ್ತು. ಅಷ್ಟೇ ಅಲ್ಲದೆ ಬಿಜೆಪಿ ನಾಯಕ ಮಾಜಿ ಸಚಿವ ಜನಾರ್ಧನ ರೆಡ್ಡಿಯೊಂದಿಗೆ ಕಾರ್ತಿಕ್ ರಾಜ್ ನಿಂತ ಪೋಟೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಈ ನಡುವೆ ಮಾಜಿ ಸಚಿವ ದಿವಂಗತ ಜೀವರಾಜ್ ಆಳ್ವ ಅವರ ಮಗ ಆದಿತ್ಯ ಆಳ್ವ ನಾಪತ್ತೆಯಾಗಿದ್ದು, ಇವರು ಪ್ರಕರಣದಲ್ಲಿ ಆರನೆ ಆರೋಪಿ ಎಂದು ಕನ್ನಡ ಪ್ರಭ ವರದಿ ಮಾಡಿದೆ. ಆದಿತ್ಯನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು, ಪತ್ತೆಗಾಗಿ ಮೂರು ವಿಶೇಷ ತಂಡ ರಚಿಸಿದ್ದಾರೆ.

ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್‌, ಸೆನೆಗಲ್‌ ಮೂಲದ ಡ್ರಗ್‌ ಪೆಡ್ಲರ್‌ ಲೂಮ್ ಪೆಪ್ಪೆರ್‌‌, ವಿರೇನ್‌ ಖನ್ನಾ ಹಾಗೂ ರಾಹುಲ್‌ನನ್ನು ಪೊಲೀಸರು ನಿನ್ನೆಯು ತೀವ್ರ ವಿಚಾರಣೆ ನಡೆಸಿದ್ದಾರೆ. ಲೂಮ್ ಪೆಪ್ಪೆರ್ ಅಂತರಾಷ್ಟ್ರೀಯ ಡ್ರಗ್ ಪೆಡ್ಲೆರ್ ಎಂದು ತಿಳಿದು ಬಂದಿದ್ದು, ಆತ ವಿಚಾರಣೆ ವೇಳೆ ಹಲವರು ಹೆಸರನ್ನು ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ನಿನ್ನೆ ರಾಗಿಣಿ  ಮನೆಯಲ್ಲಿ ಗಾಂಜಾ ತುಂಬಿಟ್ಟಿದ್ದ ಸಿಗರೇಟ್‌ ಪತ್ತೆಯಾಗಿದ್ದು, ಸಿಸಿಬಿ ಕಸ್ಟಡಿಯಲ್ಲಿರುವ ರಾಗಿಣಿ “ನನಗೂ ಸಿಗರೇಟ್‌ಗಳಿಗೂ ಯಾವುದೇ ಸಂಬಂಧವಿಲ್ಲ, ನಾನು ಧೂಮಪಾನಿಯಲ್ಲ” ಎಂದು ಹೇಳಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಈ ಮಧ್ಯೆ ಕಾಂಗ್ರೆಸ್ ಬಿಜೆಪಿ ವಿರುದ್ದ ತೀವ್ರ ದಾಳಿ ಮಾಡಿದ್ದು, ರಾಗಿಣಿ ಬಿಜೆಪಿಯ ರಾಯಭಾರಿ ಎಂದು ಆರೋಪಿಸಿದೆ. “2019 ರ ಲೋಕಸಭಾ ಚುನಾವಣೆಯಲ್ಲಿ ಸಿ.ಟಿ.ರವಿ ವಿಧಾನಸಭಾ ಕ್ಷೇತ್ರ ಚಿಕ್ಕಮಗಳೂರಿನಲ್ಲಿ ರಾಗಿಣಿ ಬಿಜೆಪಿ ಪರ ಪ್ರಚಾರ ನಡೆಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ, ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಜೊತೆಯೂ ರಾಗಿಣಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ” ಎಂದು ಆರೋಪಿಸಿರುವ ಕೆಪಿಸಿಸಿಯ ವಕ್ತಾರ ಎಂ. ಲಕ್ಷ್ಮಣ್ ಕೆಲವು ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ.

ನಿನ್ನೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ಕಳೆದ 10 ವರ್ಷಗಳ ಜಿಲ್ಲಾವಾರು ವಿವರಗಳನ್ನು ನೀಡಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....