Homeಮುಖಪುಟನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

- Advertisement -
- Advertisement -

ಗುಜರಾತ್‌ನ ಕ್ರೀಡಾಂಗಣವೊಂದಕ್ಕೆ ನರೇಂದ್ರ ಮೋದಿಯವರ ಹೆಸರನ್ನು ಮರುನಾಮಕರಣ ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತೊಮ್ಮೆ ಕೇಂದ್ರ ಸರ್ಕಾರದ ಕಾಲೆಳೆದಿದ್ದಾರೆ. “ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಹೇಗೆ ಕಳಚಿಕೊಳ್ಳುತ್ತಿದೆ ನೋಡಿ” ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಅದ್ಭುತ! ಸತ್ಯ ತಾನಾಗಿಯೇ ಬಹಿರಂಗಗೊಳ್ಳುತ್ತಿದೆ. ನರೇಂದ್ರ ಮೋದಿ ಕ್ರೀಡಾಂಗಣ, ಅದಾನಿ ಎಂಡ್ ಮತ್ತು ರಿಲಯನ್ಸ್‌ ಎಂಡ್. ಜೇ ಶಾ ಅವರ ಅಧ್ಯಕ್ಷತೆಯಲ್ಲಿ. #HumDoHumareDo” ಎಂದು ಮೋದಿ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

ನರೇಂದ್ರ ಮೋದಿಯವರ ಸರ್ಕಾರವು ನಾವಿಬ್ಬರು ನಮಗಿಬ್ಬರು ಎನ್ನುವಂತೆ ವರ್ತಿಸುತ್ತಿದೆ ಎಂದು ರಾಹುಲ್ ಗಾಂಧಿ ಇತ್ತೀಚೆಗೆ ಹೇಳಿದ್ದರು. ಮೋದಿ-ಶಾ ಎನ್ನುವ ಇಬ್ಬರಿಗೆ ಅಂಬಾನಿ-ಅದಾನಿ ಎನ್ನುವ ಇಬ್ಬರಿದ್ದಾರೆ ಎಂದು ಹೇಳಿದ್ದರು. ಅಂದರೆ ಕೇಂದ್ರ ಸರ್ಕಾರವು ತನ್ನ ಎಲ್ಲಾ ಕ್ರಮಗಳನ್ನೂ ಸಹ ಕಾರ್ಪೋರೇಟ್‌ಗಳ ಪರವಾಗಿಯೇ ಮಾಡುತ್ತಿದೆ ಎಂದು ಆರೋಪಿಸಿದ್ದರು.

ಈಗ ಗುಜರಾತ್‌ ನ ಅಹ್ಮದಾಬಾದ್‌ ನಲ್ಲಿನ ಸರ್ದಾರ್‌ ಪಟೇಲ್‌ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಎಂದು ಹೆಸರಿಡಲಾಗಿದೆ. ಕೊನೆಯ ಕ್ಷಣದವರೆಗೂ ಈ ಕುರಿತಾದಂತೆ ಯಾವುದೇ ಮಾಹಿತಿಯೂ ಹೊರ ಬಿದ್ದಿರಲಿಲ್ಲ. ಇದೀಗ ʼನರೇಂದ್ರ ಮೋದಿʼ ಸ್ಟೇಡಿಯಂನಲ್ಲಿ ʼಅದಾನಿ ಪೆವಿಲಿಯನ್‌ʼ ಮತ್ತು ʼರಿಲಯನ್ಸ್‌ ಎಂಡ್‌ʼ ಇರುವುದು ಬೆಳಕಿಗೆ ಬಂದಿದೆ.

ರಾಹುಲ್‌ ಗಾಂಧಿ ಪಾರ್ಲಿಮೆಂಟ್‌ ನಲ್ಲಿ ಹೇಳಿದ್ದ ʼಹಮ್‌ ದೋ ಹಮಾರೆ ದೋʼ ಎಂಬ ಹೇಳಿಕೆಯು ಇಲ್ಲಿ ಅನ್ವರ್ಥವಾಗಿದೆ ಎಂದು ಬಳಕೆದಾರರೊಬ್ಬರು ವ್ಯಂಗ್ಯವಾಡಿದ್ದಾರೆ. “ಎಲ್ಲವೂ ಆಯಿತು, ಇನ್ನು ಗುಜರಾತ್‌ ಅನ್ನು ಮೋದಿಸ್ತಾನ್‌ ಎಂದೂ ರಾಜ್‌ ಕೋಟ್‌ ಅನ್ನು ರಿಲಯನ್ಸ್‌ ಕೋಟ್‌ ಎಂದು ಮರುನಾಮಕರಣ ಮಾಡಲಿಕ್ಕಿದೆಯೇ?”, ಇಬ್ಬರು ಬಂಡವಾಳಶಾಹಿಗಳ ಹೆಸರಿರುವ ಸ್ಟೇಡಿಯಂಗೆ ಮೋದಿ ಹೆಸರಿಟ್ಟದ್ದು ಒಳ್ಳೆಯದಾಯಿತು, ಇಲ್ಲವಾದಲ್ಲಿ ಸರ್ದಾರ್‌ ಪಟೇಲರಿಗೆ ಅವಮಾನವಾಗುತ್ತಿತ್ತು” ಎಂದು ಟ್ವಿಟರ್ ಬಳಕೆದಾರರು ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ ರಾಹುಲ್ ಗಾಂಧಿ ಮಾಡಿರುವ ಆರೋಪ ಈ ಮೂಲಕ ಬಹಿರಂಗಗೊಳ್ಳುತ್ತಿದೆ.


ಇದನ್ನೂ ಓದಿ: ದಲಿತ ಮದುಮಗ ಪೇಟ ಧರಿಸಿದರೆ ಸಹಿಸಲ್ಲ: ಮದುವೆ ಮೆರವಣಿಗೆಯಲ್ಲಿ ಕಲ್ಲು ತೂರಿದ ಮೇಲ್ಜಾತಿ ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...