Homeಮುಖಪುಟ2018ರ ಮಾನನಷ್ಟ ಮೊಕದ್ದಮೆ: ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

2018ರ ಮಾನನಷ್ಟ ಮೊಕದ್ದಮೆ: ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

- Advertisement -
- Advertisement -

2018ರ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸುಲ್ತಾನ್‌ಪುರದ ವಿಶೇಷ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ವಕೀಲ ಸಂತೋಷ್ ಪಾಂಡೆ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ್ದು, ರಾಹುಲ್ ಗಾಂಧಿ ಇಂದು ನ್ಯಾಯಾಲಯಕ್ಕೆ ಶರಣಾದರು ಮತ್ತು ನ್ಯಾಯಾಲಯವು ಅವರನ್ನು 30-45 ನಿಮಿಷಗಳ ಕಾಲ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿದೆ. ಬಳಿಕ ಅವರ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು, ಜಾಮೀನನ್ನು ನೀಡಲಾಗಿದೆ. ಈ ಕುರಿತು ಮುಂದಿನ ವಿಚಾರಣೆಯ ದಿನಾಂಕವನ್ನು ಇನ್ನೂ ನೀಡಲಾಗಿಲ್ಲ. ತಲಾ 25,000 ರೂಪಾಯಿಗಳ ಎರಡು ಜಾಮೀನು ಬಾಂಡ್‌ಗಳನ್ನು ಸಲ್ಲಿಸುವಂತೆ ನ್ಯಾಯಾಲಯ ರಾಹುಲ್‌ಗೆ ಸೂಚಿಸಿದೆ.

ಆಗಸ್ಟ್ 4, 2018ರಂದು ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದರು. ಮೇ 8, 2018 ರಂದು ಕರ್ನಾಟಕದಲ್ಲಿನ ಚುನಾವಣೆಯ ವೇಳೆ ಬೆಂಗಳೂರಿನಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ, ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದರು.

ಬಿಜೆಪಿಯು ಪ್ರಾಮಾಣಿಕ ಮತ್ತು ಸ್ವಚ್ಛ ರಾಜಕಾರಣದ ಬದ್ಧತೆ ಬಗ್ಗೆ ಪ್ರತಿಪಾದಿಸಿದರೂ ಅದನ್ನು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪಕ್ಷದ ಅಧ್ಯಕ್ಷ ಮುನ್ನಡೆಸುತ್ತಿದ್ದಾರೆ ಎಂದು ರಾಹುಲ್ ಗಾಂಧಿಯವರು ಹೇಳಿರುವ ಹೇಳಿಕೆಯನ್ನು ದೂರುದಾರರು ಉಲ್ಲೇಖಿಸಿದ್ದಾರೆ. ರಾಹುಲ್‌ ಗಾಂಧಿ ಹೇಳಿಕೆಯ ಸಮಯದಲ್ಲಿ ಅಮಿತ್ ಶಾ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು. ರಾಹುಲ್‌ ಗಾಂಧಿಯವರ ಹೇಳಿಕೆಗೆ ಸರಿಸುಮಾರು ನಾಲ್ಕು ವರ್ಷಗಳ ಮೊದಲು, ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಶಾ ಅವರನ್ನು ಆರೋಪ ಮುಕ್ತಗೊಳಿಸಿತ್ತು. ಅಮಿತ್‌ ಶಾ ಗುಜರಾತ್‌ನಲ್ಲಿ ಗೃಹ ಸಚಿವರಾಗಿದ್ದ ಅವಧಿಯಲ್ಲಿ ಈ ಬೆಳವಣಿಗೆ ನಡೆದಿತ್ತು.

ಭಾರತ್ ಜೋಡೋ ನ್ಯಾಯ ಯಾತ್ರೆಯ ಹಿನ್ನೆಲೆ ಜನವರಿ 18ರಂದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ  ವಿಚಾರಣೆಗೆ ರಾಹುಲ್‌ ಗಾಂಧಿ ಹಾಜರಾಗಿರಲಿಲ್ಲ. ಇಂದು ರಾಹುಲ್‌ ಗಾಂಧಿ ಕೋರ್ಟ್‌ಗೆ ಹಾಜರಾಗಿದ್ದರು.

ಈ ಕುರಿತು ದೂರುದಾರ ವಿಜಯ್ ಮಿಶ್ರಾ ಮಾತನಾಡಿದ್ದು, ಬಿಜೆಪಿ ದೇಶದ ಅತಿದೊಡ್ಡ ಪಕ್ಷವಾಗಿದೆ, ಅದರ ಅಂದಿನ ಅಧ್ಯಕ್ಷರನ್ನು ಕೊಲೆಗಾರ ಎಂದು ಕರೆಯುವುದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ಈ ಮೊದಲು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ರಾಹುಲ್ ಗಾಂಧಿ, ಆಗಸ್ಟ್ 2018ರಲ್ಲಿ ಬಿಜೆಪಿ ನಾಯಕರೊಬ್ಬರು ರಾಹುಲ್ ಗಾಂಧಿ ವಿರುದ್ಧ ದಾಖಲಿಸಿದ್ದ ಮಾನಹಾನಿ ಪ್ರಕರಣದಲ್ಲಿ 36 ಗಂಟೆ ಮೊದಲು ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿದ್ದು, ಇಂದು ಅವರು ಸುಲ್ತಾನ್‌ಪುರ್‌ನಲ್ಲಿನ ಜಿಲ್ಲಾ ಸಿವಿಲ್ ನ್ಯಾಯಾಲಯದೆದುರು ಹಾಜರಾಗಲಿದ್ದಾರೆ. ಭಾರತ್ ಜೋಡೊ ನ್ಯಾಯ ಯಾತ್ರೆಯ ಹಳಿ ತಪ್ಪಿಸಲು ಸಾಧ್ಯವಿಲ್ಲ. ರಾಹುಲ್ ಗಾಂಧಿಯನ್ನು ಮೌನವಾಗಿಸಲು ಸಾಧ್ಯವಿಲ್ಲ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದರು.

ಇದನ್ನು ಓದಿ: ನಿಯಮಿತ ವೇತನದ ಉದ್ಯೋಗ: ಹಿನ್ನೆಡೆ ಕಂಡ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...