Homeಮುಖಪುಟ2018ರ ಮಾನನಷ್ಟ ಮೊಕದ್ದಮೆ: ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

2018ರ ಮಾನನಷ್ಟ ಮೊಕದ್ದಮೆ: ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

- Advertisement -
- Advertisement -

2018ರ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸುಲ್ತಾನ್‌ಪುರದ ವಿಶೇಷ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ವಕೀಲ ಸಂತೋಷ್ ಪಾಂಡೆ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ್ದು, ರಾಹುಲ್ ಗಾಂಧಿ ಇಂದು ನ್ಯಾಯಾಲಯಕ್ಕೆ ಶರಣಾದರು ಮತ್ತು ನ್ಯಾಯಾಲಯವು ಅವರನ್ನು 30-45 ನಿಮಿಷಗಳ ಕಾಲ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿದೆ. ಬಳಿಕ ಅವರ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು, ಜಾಮೀನನ್ನು ನೀಡಲಾಗಿದೆ. ಈ ಕುರಿತು ಮುಂದಿನ ವಿಚಾರಣೆಯ ದಿನಾಂಕವನ್ನು ಇನ್ನೂ ನೀಡಲಾಗಿಲ್ಲ. ತಲಾ 25,000 ರೂಪಾಯಿಗಳ ಎರಡು ಜಾಮೀನು ಬಾಂಡ್‌ಗಳನ್ನು ಸಲ್ಲಿಸುವಂತೆ ನ್ಯಾಯಾಲಯ ರಾಹುಲ್‌ಗೆ ಸೂಚಿಸಿದೆ.

ಆಗಸ್ಟ್ 4, 2018ರಂದು ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದರು. ಮೇ 8, 2018 ರಂದು ಕರ್ನಾಟಕದಲ್ಲಿನ ಚುನಾವಣೆಯ ವೇಳೆ ಬೆಂಗಳೂರಿನಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ, ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದರು.

ಬಿಜೆಪಿಯು ಪ್ರಾಮಾಣಿಕ ಮತ್ತು ಸ್ವಚ್ಛ ರಾಜಕಾರಣದ ಬದ್ಧತೆ ಬಗ್ಗೆ ಪ್ರತಿಪಾದಿಸಿದರೂ ಅದನ್ನು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪಕ್ಷದ ಅಧ್ಯಕ್ಷ ಮುನ್ನಡೆಸುತ್ತಿದ್ದಾರೆ ಎಂದು ರಾಹುಲ್ ಗಾಂಧಿಯವರು ಹೇಳಿರುವ ಹೇಳಿಕೆಯನ್ನು ದೂರುದಾರರು ಉಲ್ಲೇಖಿಸಿದ್ದಾರೆ. ರಾಹುಲ್‌ ಗಾಂಧಿ ಹೇಳಿಕೆಯ ಸಮಯದಲ್ಲಿ ಅಮಿತ್ ಶಾ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು. ರಾಹುಲ್‌ ಗಾಂಧಿಯವರ ಹೇಳಿಕೆಗೆ ಸರಿಸುಮಾರು ನಾಲ್ಕು ವರ್ಷಗಳ ಮೊದಲು, ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಶಾ ಅವರನ್ನು ಆರೋಪ ಮುಕ್ತಗೊಳಿಸಿತ್ತು. ಅಮಿತ್‌ ಶಾ ಗುಜರಾತ್‌ನಲ್ಲಿ ಗೃಹ ಸಚಿವರಾಗಿದ್ದ ಅವಧಿಯಲ್ಲಿ ಈ ಬೆಳವಣಿಗೆ ನಡೆದಿತ್ತು.

ಭಾರತ್ ಜೋಡೋ ನ್ಯಾಯ ಯಾತ್ರೆಯ ಹಿನ್ನೆಲೆ ಜನವರಿ 18ರಂದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ  ವಿಚಾರಣೆಗೆ ರಾಹುಲ್‌ ಗಾಂಧಿ ಹಾಜರಾಗಿರಲಿಲ್ಲ. ಇಂದು ರಾಹುಲ್‌ ಗಾಂಧಿ ಕೋರ್ಟ್‌ಗೆ ಹಾಜರಾಗಿದ್ದರು.

ಈ ಕುರಿತು ದೂರುದಾರ ವಿಜಯ್ ಮಿಶ್ರಾ ಮಾತನಾಡಿದ್ದು, ಬಿಜೆಪಿ ದೇಶದ ಅತಿದೊಡ್ಡ ಪಕ್ಷವಾಗಿದೆ, ಅದರ ಅಂದಿನ ಅಧ್ಯಕ್ಷರನ್ನು ಕೊಲೆಗಾರ ಎಂದು ಕರೆಯುವುದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ಈ ಮೊದಲು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ರಾಹುಲ್ ಗಾಂಧಿ, ಆಗಸ್ಟ್ 2018ರಲ್ಲಿ ಬಿಜೆಪಿ ನಾಯಕರೊಬ್ಬರು ರಾಹುಲ್ ಗಾಂಧಿ ವಿರುದ್ಧ ದಾಖಲಿಸಿದ್ದ ಮಾನಹಾನಿ ಪ್ರಕರಣದಲ್ಲಿ 36 ಗಂಟೆ ಮೊದಲು ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿದ್ದು, ಇಂದು ಅವರು ಸುಲ್ತಾನ್‌ಪುರ್‌ನಲ್ಲಿನ ಜಿಲ್ಲಾ ಸಿವಿಲ್ ನ್ಯಾಯಾಲಯದೆದುರು ಹಾಜರಾಗಲಿದ್ದಾರೆ. ಭಾರತ್ ಜೋಡೊ ನ್ಯಾಯ ಯಾತ್ರೆಯ ಹಳಿ ತಪ್ಪಿಸಲು ಸಾಧ್ಯವಿಲ್ಲ. ರಾಹುಲ್ ಗಾಂಧಿಯನ್ನು ಮೌನವಾಗಿಸಲು ಸಾಧ್ಯವಿಲ್ಲ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದರು.

ಇದನ್ನು ಓದಿ: ನಿಯಮಿತ ವೇತನದ ಉದ್ಯೋಗ: ಹಿನ್ನೆಡೆ ಕಂಡ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...