Homeಮುಖಪುಟಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರಿಕೆ

ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರಿಕೆ

- Advertisement -
- Advertisement -

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬುಧವಾರ ಟೀಂ ಇಂಡಿಯಾದ ಕೋಚಿಂಗ್ ಸಿಬ್ಬಂದಿಗಳ ಅವಧಿಯನ್ನು ವಿಸ್ತರಿಸುವುದಾಗಿ ಘೋಷಿಸಿದ್ದು, ರಾಹುಲ್ ದ್ರಾವಿಡ್ ಭಾರತದ ಮುಖ್ಯ ಕೋಚ್ ಆಗಿ ಮುಂದುವರಿಯಲಿದ್ದಾರೆ.

ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಮತ್ತು ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಸೇರಿದಂತೆ ಸಹಾಯಕ ಕೋಚ್‌ಗಳು ಮತ್ತು ಇತರ ಸದಸ್ಯರ ಒಪ್ಪಂದದ ಅವಧಿಯನ್ನು ಬಿಸಿಸಿಐ ವಿಸ್ತರಿಸಿದೆ. BCCI ಕೋಚ್‌ಗಳ ಮುಂದುವರಿಕೆ ಅವಧಿಯ ಕುರಿತು ತಿಳಿಸಿಲ್ಲ. ಆದರೂ ದ್ರಾವಿಡ್  T20 ವಿಶ್ವಕಪ್ 2024ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ.

ನ.2021ರಲ್ಲಿ 2 ವರ್ಷಗಳ ಒಪ್ಪಂದದಂತೆ ದ್ರಾವಿಡ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಲಾಗಿತ್ತು. 2023ರ ODI ವಿಶ್ವಕಪ್ ಮುಕ್ತಾಯದೊಂದಿಗೆ ಈ ಅವಧಿ ಕೊನೆಗೊಂಡಿತ್ತು. ದ್ರಾವಿಡ್ ಅವರ ಕೋಚಿಂಗ್ ವೇಳೆ ಭಾರತವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ODI ವಿಶ್ವಕಪ್ ಎರಡರಲ್ಲೂ ರನ್ನರ್ ಅಪ್ ಸ್ಥಾನವನ್ನು ಗಳಿಸಿದೆ. ಇದಲ್ಲದೆ ಕಳೆದ 2 ವರ್ಷಗಳಲ್ಲಿ ಉತ್ತಮ ದಾಖಲೆಯನ್ನು ಹೊಂದಿದೆ.

ಇತ್ತೀಚೆಗೆ ಮುಕ್ತಾಯಗೊಂಡ ವಿಶ್ವಕಪ್ 2023ರ ನಂತರ ಅವರ ಒಪ್ಪಂದದ ಅವಧಿ ಮುಗಿದರೂ BCCI ರಾಹುಲ್ ದ್ರಾವಿಡ್ ಅವರನ್ನು ಮರು ನೇಮಕಕ್ಕೆ ಅಥವಾ ಅವಧಿಯನ್ನು ವಿಸ್ತರಿಸಲು ಸರ್ವಾನುಮತದಿಂದ ಒಪ್ಪಿಕೊಂಡಿದೆ.

ಭಾರತದ ಮುಖ್ಯ ತರಬೇತುದಾರರಾಗಿ ಮುಂದವರಿಕೆ ಬಳಿಕ ದ್ರಾವಿಡ್ ಅವರ ಮೊದಲ ನಿಯೋಜನೆಯು ದಕ್ಷಿಣ ಆಫ್ರಿಕಾದ ಪ್ರವಾಸವಾಗಿದೆ. ಇದಾದ ಬಳಿಕ ಜೂನ್‌ನಲ್ಲಿ ನಡೆಯಲಿರುವ ಟಿ 20 ವಿಶ್ವಕಪ್‌ಗೆ ಮೊದಲು ಭಾರತವು ಇಂಗ್ಲೆಂಡ್ ವಿರುದ್ಧ 5 ಟೆಸ್ಟ್‌ಗಳ ಸರಣಿಯನ್ನು ಆಯೋಜಿಸಲಿದೆ.

ಈ ಕುರಿತು ಮಾತನಾಡಿದ BCCI ಅಧ್ಯಕ್ಷ ರೋಜರ್ ಬಿನ್ನಿ, ರಾಹುಲ್ ದ್ರಾವಿಡ್ ಅವರ ದೂರದೃಷ್ಟಿ, ವೃತ್ತಿಪರತೆ ಮತ್ತು ಪ್ರಯತ್ನಗಳು ಟೀಮ್ ಇಂಡಿಯಾದ ಯಶಸ್ಸಿನಲ್ಲಿ ಪ್ರಮುಖ ಆಧಾರಸ್ತಂಭಗಳಾಗಿವೆ. ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಸವಾಲುಗಳನ್ನು ಸ್ವೀಕರಿಸಿದ್ದಕ್ಕಾಗಿ ನಾನು ಅವರಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತೇನೆ. ದ್ರಾವಿಡ್‌ ಅವಧಿಯಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ಅವರು ಮುಖ್ಯ ಕೋಚ್ ಆಗಿ ಉಳಿಯುವ ಪ್ರಸ್ತಾಪವನ್ನು ಸ್ವೀಕರಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ ಮತ್ತು ಇದು ದ್ರಾವಿಡ್‌ ಮತ್ತು ಬಿಸಿಸಿಐ ನಡುವಿನ ಸಂಬಂಧವನ್ನು ವೃದ್ಧಿಗೊಳಿಸುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ರಾಹುಲ್ ದ್ರಾವಿಡ್, ಟೀಮ್ ಇಂಡಿಯಾದೊಂದಿಗಿನ ಕಳೆದ ಎರಡು ವರ್ಷಗಳು ಸ್ಮರಣೀಯವಾಗಿವೆ. ಒಟ್ಟಾಗಿ ನಾವು ಏರಿಳಿತಗಳನ್ನು ಕಂಡಿದ್ದೇವೆ. ನಾವು ಡ್ರೆಸ್ಸಿಂಗ್ ರೂಮ್‌ನಲ್ಲಿ ಅಳವಡಿಸಿಕೊಂಡ ಸಂಸ್ಕೃತಿಯ ಬಗ್ಗೆ ನಮಗೆ ನಿಜವಾಗಿಯೂ ಹೆಮ್ಮೆ ಇದೆ. ನಮ್ಮ ತಂಡ ಹೊಂದಿರುವ ಕೌಶಲ್ಯ ಮತ್ತು ಪ್ರತಿಭೆ ಅಸಾಧಾರಣವಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಝಾನ್‌ಗೆ ಧ್ವನಿವರ್ಧಕ ಬಳಸಿದರೆ ಶಬ್ಧಮಾಲಿನ್ಯವಾಗುತ್ತದೆ ಎನ್ನುವುದು ತಪ್ಪು ಕಲ್ಪನೆ: ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...