Homeಮುಖಪುಟಪಟ್ಟು ಬಿಡದೇ ಕೊನೆಗೂ ಹತ್ರಾಸ್‌ ಸಂತ್ರಸ್ತ ಕುಟುಂಬ ಭೇಟಿಗೆ ಹೊರಟ ರಾಹುಲ್, ಪ್ರಿಯಾಂಕ ಗಾಂಧಿ

ಪಟ್ಟು ಬಿಡದೇ ಕೊನೆಗೂ ಹತ್ರಾಸ್‌ ಸಂತ್ರಸ್ತ ಕುಟುಂಬ ಭೇಟಿಗೆ ಹೊರಟ ರಾಹುಲ್, ಪ್ರಿಯಾಂಕ ಗಾಂಧಿ

"ನಾನು ಹತ್ರಾಸ್‌ನ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡುವ ಹಾಗೂ ಅವರ ನೋವು ಹಂಚಿಕೊಳ್ಳುವುದನ್ನು ಜಗತ್ತಿನ ಯಾವುದೂ ತಡೆಯಲು ಸಾಧ್ಯವಿಲ್ಲ" - ರಾಹುಲ್ ಗಾಂಧಿ

- Advertisement -
- Advertisement -

ಎರಡು ದಿನಗಳ ಹಿಂದೆಯಷ್ಟೇ ಹತ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲು ಹೊರಟಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದರು. ಆದರೆ ಅವರು ಇಂದು ಪಟ್ಟು ಬಿಡದೆ ಹತ್ರಾಸ್‌ಗೆ ಪ್ರಯಾಣಿಸಿದ್ದಾರೆ.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಇತರ ಮೂವರೊಂದಿಗೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಗೆ ಪ್ರಯಾಣಿಸುತ್ತಿದ್ದಾರೆ. ಮುಂದಿನ ಸೀಟಿನಲ್ಲಿ ರಾಹುಲ್ ಗಾಂಧಿ ಕುಳಿತಿದ್ದು, ಟೊಯೋಟಾ ಇನ್ನೋವಾ ಕಾರನ್ನು ಸ್ವತಃ ಪ್ರಿಯಾಂಕಾ ಗಾಂಧಿ ಚಲಾಯಿಸುತ್ತಿರುವ ಫೋಟೊಗಳನ್ನು ಎನ್‌ಡಿಟಿವಿ ಪ್ರಕಟಿಸಿದೆ.

ಇದನ್ನೂ ಓದಿ: ಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ವಿಧಿಸಿರುವ ನಿರ್ಬಂಧಗಳನ್ನು ಪರಿಗಣಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದ ಸಂಸದರ ನಿಯೋಗದ ಐವರು ಸದಸ್ಯರಿಗೆ ಮಾತ್ರ ನೋಯ್ಡಾ ಮೂಲಕ ಹತ್ರಾಸ್‌ಗೆ ಹೋಗಲು ಅನುಮತಿ ನೀಡಲಾಗಿದೆ ಎಂದು ಗೌತಮ ಬುದ್ಧ ನಗರ ಪೊಲೀಸರು ತಿಳಿಸಿದ್ದಾರೆ.

“ಐದು ಜನರಿಗಿಂತ ಹೆಚ್ಚಿನ ಜನರಿಲ್ಲದ ಯಾವುದೇ ಗುಂಪಿಗೆ ಹತ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲು ಅವಕಾಶವಿದೆ” ಎಂದು ಯುಪಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಅವಸ್ಥಿ ಹೇಳಿದ್ದಾರೆ.

ದೆಹಲಿ-ನೋಯ್ಡಾ ಡೈರೆಕ್ಟ್ (ಡಿಎನ್‌ಡಿ) ಫ್ಲೈಓವರ್‌ನ ಟೋಲ್ ಪ್ಲಾಜಾದಲ್ಲಿ ಸುಮಾರು 200 ಮಂದಿ ಶಸ್ತ್ರಸಜ್ಜಿತ ಯುಪಿ ಪೊಲೀಸರು ಅವರನ್ನು ತಡೆದರಾದರೂ, ಸ್ವಲ್ಪ ಸಮಯದ ನಂತರ ತಮ್ಮ ಪ್ರಯಾಣವನ್ನು ಮುಂದುವರಿಸಲು ಅವಕಾಶ ನೀಡಲಾಯಿತು.

ಕಾಂಗ್ರೆಸ್ ಸಂಸದ ಶಶಿ ತರೂರ್ ಕಾರು ಚಾಲನೆ ಮಾಡುತ್ತಿರುವ ಚಿತ್ರವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿ ದೆಹಲಿಯಿಂದ 180 ಕಿ.ಮೀ ದೂರದಲ್ಲಿರುವ ಹತ್ರಾಸ್‌ಗೆ ತೆರಳುತ್ತಿದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತ ಕುಟುಂಬದ ಪರವಾಗಿ ಹೈಕೋರ್ಟ್ ಮೆಟ್ಟಿಲೇರಿದ ರಾಜರತ್ನ ಅಂಬೇಡ್ಕರ್

“ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸಂಸದರು ಇಂದು ಮಧ್ಯಾಹ್ನ ಹತ್ರಾಸ್‌ಗೆ ತೆರಳಿ ಉತ್ತರ ಪ್ರದೇಶದಲ್ಲಿ ಅತ್ಯಾಚಾರದಿಂದ ಮೃತಪಟ್ಟ 19 ವರ್ಷದ ಮಗಳ ಕುಟುಂಬವನ್ನು ಭೇಟಿಯಾಗಲಿದ್ದಾರೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೂಡಾ ಟ್ವೀಟ್ ಮಾಡಿದ್ದಾರೆ.

ಸಾಮೂಹಿಕ ಅತ್ಯಾಚಾರದಿಂದ ಸಾವಿಗೀಡಾದ 19 ವರ್ಷದ ದಲಿತ ಯುವತಿಯ ಕುಟುಂಬವನ್ನು ಭೇಟಿಯಾಗಲು ಕಾಂಗ್ರೆಸ್ ನಾಯಕರ ಎರಡನೇ ಪ್ರಯತ್ನ ಇದಾಗಿದ್ದು, ಗುರುವಾರ ಕುಟುಂಬವನ್ನು ಭೇಟಿ ಮಾಡಲು ಪ್ರಯತ್ನಿಸಿದ್ದರು ಕೂಡಾ ಹತ್ರಾಸ್ ಜಿಲ್ಲಾ ಗಡಿಯಲ್ಲಿ ಅವರನ್ನು ಪೊಲೀಸರು ತಡೆದಿದ್ದರು.

ಈ ಬಾರಿ ರಾಹುಲ್ ಮತ್ತು ಪ್ರಿಯಾಂಕ ಗಾಂಧಿ ದೆಹಲಿಯಿಂದ ಮಧ್ಯಾಹ್ನ 2.30 ರ ಸುಮಾರಿಗೆ 30 ಕಾಂಗ್ರೆಸ್ ಸಂಸದರೊಂದಿಗೆ ಪ್ರಯಾಣ ಪ್ರಾರಂಭಿಸಿದ್ದಾರೆ ಎಂದು ಆನ್ ಮನೋರಮ ವರದಿ ಮಾಡಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ: ಎಸ್‌ಪಿ ಸೇರಿ 5 ಪೊಲೀಸರು ವಜಾ; ಜಿಲ್ಲೆಯಲ್ಲಿ ಒಂದು ತಿಂಗಳು ನಿಷೇದಾಜ್ಞೆ

#HathrasHorror ಎಂಬ ಹ್ಯಾಶ್‌ಟ್ಯಾಗ್ ಬಳಸಿ ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ರಾಹುಲ್ ಗಾಂಧಿ, “ಈ ಪ್ರೀತಿಯ ಹುಡುಗಿ ಮತ್ತು ಅವರ ಕುಟುಂಬದೊಂದಿಗೆ ಯುಪಿ ಸರ್ಕಾರ ಮತ್ತು ಅದರ ಪೊಲೀಸರು ನಡೆದುಕೊಳ್ಳುತ್ತಿರುವ ರೀತಿಯನ್ನು ನಾನು ಒಪ್ಪುವುದಿಲ್ಲ, ಭಾರತೀಯರು ಇದನ್ನು ಒಪ್ಪಿಕೊಳ್ಳಬಾರದು” ಎಂದು ಹೇಳಿದ್ದಾರೆ.

“ನಾನು ಹತ್ರಾಸ್‌ನ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡುವ ಹಾಗೂ ಅವರ ನೋವು ಹಂಚಿಕೊಳ್ಳುವುದನ್ನು ಜಗತ್ತಿನ ಯಾವುದೂ ತಡೆಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

“ಯುಪಿ ಸರ್ಕಾರ ನೈತಿಕವಾಗಿ ಭ್ರಷ್ಟವಾಗಿದೆ. ಸಂತ್ರಸ್ತೆಗೆ ಚಿಕಿತ್ಸೆ ನೀಡಲಿಲ್ಲ, ಸಮಯಕ್ಕೆ ದೂರು ಪಡೆಯಲಿಲ್ಲ, ದೇಹವನ್ನು ಬಲವಂತವಾಗಿ ಸುಟ್ಟುಹಾಕಿದರು, ಕುಟುಂಬವು ಬಂಧನದಲ್ಲಿದೆ, ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ. ಈಗ ಅವರಿಗೆ ಮಂಪರು ಪರೀಕ್ಷೆ ನಡೆಯಲಿದೆ ಎಂದು ಬೆದರಿಕೆ ಹಾಕಲಾಗುತ್ತಿದೆ. ಈ ನಡೆಯನ್ನು ದೇಶ ಒಪ್ಪುವುದಿಲ್ಲ. ಸಂತ್ರಸ್ತೆಯ ಕುಟುಂಬವನ್ನು ಬೆದರಿಸುವುದನ್ನು ನಿಲ್ಲಿಸಿ” ಎಂದು ಪ್ರಿಯಾಂಕ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪೊಲೀಸರು ನಮಗೆ ಬೆದರಿಕೆ ಒಡ್ಡುತ್ತಿದ್ದಾರೆ: ಹತ್ರಾಸ್ ಪ್ರಕರಣ ಸಂತ್ರಸ್ತೆಯ ಸಹೋದರ ಆರೋಪ

 

ಸೆಪ್ಟೆಂಬರ್ 14 ರಂದು ಹತ್ರಾಸ್‌ನ ಹಳ್ಳಿಯಲ್ಲಿ ದಲಿತ ಯುವತಿಯ ಮೇಲೆ ನಾಲ್ಕು ಮೇಲ್ಜಾತಿಯ ಪುರುಷರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಯುವತಿಯ ಸ್ಥಿತಿ ಹದಗೆಟ್ಟ ನಂತರ ಅವರನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಯುವತಿ ಮೃತಪಟ್ಟಿದ್ದರು.

ಆದರೆ ಮೃತದೇಹವನ್ನು ರಾತ್ರಿಯೆ ಕುಟುಂಬಕ್ಕೂ ನೀಡದೆ ಪೊಲೀಸರೇ ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಇದ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ಹಲವಾರು ಮಂದಿ ಸಾಕ್ಷಿ ಇಲ್ಲವಾಗಿಸಲು ಯುವತಿಯನ್ನು ಕೊಂದು ಸುಡಲಾಗಿದೆ ಎಂದು ಆರೋಪಿಸಿದ್ದರೆ, ಇನ್ನು ಕೆಲವರು ಸುಟ್ಟಿರುವುದು ಯಾರನ್ನು ಎಂದು ಪ್ರಶ್ನೆ ಎತ್ತಿದ್ದಾರೆ.

ಇದನ್ನೂ ಓದಿ: ಹತ್ರಾಸ್: ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ 200 ಕಾರ್ಯಕರ್ತರ ವಿರುದ್ಧ FIR

ವಿಡಿಯೋ ನೋಡಿ: ರಾಮ ರಾಜ್ಯ ಎಂದರೆ ದಲಿತ, ಮಹಿಳೆ, ಅಲ್ಪ ಸಂಖ್ಯಾತರ ಮೇಲೆ ಅತ್ಯಾಚಾರ, ದಾಳಿ ಮಾಡುವಂತದ್ದೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...