Homeಮುಖಪುಟಪಟ್ಟು ಬಿಡದೇ ಕೊನೆಗೂ ಹತ್ರಾಸ್‌ ಸಂತ್ರಸ್ತ ಕುಟುಂಬ ಭೇಟಿಗೆ ಹೊರಟ ರಾಹುಲ್, ಪ್ರಿಯಾಂಕ ಗಾಂಧಿ

ಪಟ್ಟು ಬಿಡದೇ ಕೊನೆಗೂ ಹತ್ರಾಸ್‌ ಸಂತ್ರಸ್ತ ಕುಟುಂಬ ಭೇಟಿಗೆ ಹೊರಟ ರಾಹುಲ್, ಪ್ರಿಯಾಂಕ ಗಾಂಧಿ

"ನಾನು ಹತ್ರಾಸ್‌ನ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡುವ ಹಾಗೂ ಅವರ ನೋವು ಹಂಚಿಕೊಳ್ಳುವುದನ್ನು ಜಗತ್ತಿನ ಯಾವುದೂ ತಡೆಯಲು ಸಾಧ್ಯವಿಲ್ಲ" - ರಾಹುಲ್ ಗಾಂಧಿ

- Advertisement -
- Advertisement -

ಎರಡು ದಿನಗಳ ಹಿಂದೆಯಷ್ಟೇ ಹತ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲು ಹೊರಟಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದರು. ಆದರೆ ಅವರು ಇಂದು ಪಟ್ಟು ಬಿಡದೆ ಹತ್ರಾಸ್‌ಗೆ ಪ್ರಯಾಣಿಸಿದ್ದಾರೆ.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಇತರ ಮೂವರೊಂದಿಗೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಗೆ ಪ್ರಯಾಣಿಸುತ್ತಿದ್ದಾರೆ. ಮುಂದಿನ ಸೀಟಿನಲ್ಲಿ ರಾಹುಲ್ ಗಾಂಧಿ ಕುಳಿತಿದ್ದು, ಟೊಯೋಟಾ ಇನ್ನೋವಾ ಕಾರನ್ನು ಸ್ವತಃ ಪ್ರಿಯಾಂಕಾ ಗಾಂಧಿ ಚಲಾಯಿಸುತ್ತಿರುವ ಫೋಟೊಗಳನ್ನು ಎನ್‌ಡಿಟಿವಿ ಪ್ರಕಟಿಸಿದೆ.

ಇದನ್ನೂ ಓದಿ: ಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ವಿಧಿಸಿರುವ ನಿರ್ಬಂಧಗಳನ್ನು ಪರಿಗಣಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದ ಸಂಸದರ ನಿಯೋಗದ ಐವರು ಸದಸ್ಯರಿಗೆ ಮಾತ್ರ ನೋಯ್ಡಾ ಮೂಲಕ ಹತ್ರಾಸ್‌ಗೆ ಹೋಗಲು ಅನುಮತಿ ನೀಡಲಾಗಿದೆ ಎಂದು ಗೌತಮ ಬುದ್ಧ ನಗರ ಪೊಲೀಸರು ತಿಳಿಸಿದ್ದಾರೆ.

“ಐದು ಜನರಿಗಿಂತ ಹೆಚ್ಚಿನ ಜನರಿಲ್ಲದ ಯಾವುದೇ ಗುಂಪಿಗೆ ಹತ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲು ಅವಕಾಶವಿದೆ” ಎಂದು ಯುಪಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಅವಸ್ಥಿ ಹೇಳಿದ್ದಾರೆ.

ದೆಹಲಿ-ನೋಯ್ಡಾ ಡೈರೆಕ್ಟ್ (ಡಿಎನ್‌ಡಿ) ಫ್ಲೈಓವರ್‌ನ ಟೋಲ್ ಪ್ಲಾಜಾದಲ್ಲಿ ಸುಮಾರು 200 ಮಂದಿ ಶಸ್ತ್ರಸಜ್ಜಿತ ಯುಪಿ ಪೊಲೀಸರು ಅವರನ್ನು ತಡೆದರಾದರೂ, ಸ್ವಲ್ಪ ಸಮಯದ ನಂತರ ತಮ್ಮ ಪ್ರಯಾಣವನ್ನು ಮುಂದುವರಿಸಲು ಅವಕಾಶ ನೀಡಲಾಯಿತು.

ಕಾಂಗ್ರೆಸ್ ಸಂಸದ ಶಶಿ ತರೂರ್ ಕಾರು ಚಾಲನೆ ಮಾಡುತ್ತಿರುವ ಚಿತ್ರವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿ ದೆಹಲಿಯಿಂದ 180 ಕಿ.ಮೀ ದೂರದಲ್ಲಿರುವ ಹತ್ರಾಸ್‌ಗೆ ತೆರಳುತ್ತಿದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತ ಕುಟುಂಬದ ಪರವಾಗಿ ಹೈಕೋರ್ಟ್ ಮೆಟ್ಟಿಲೇರಿದ ರಾಜರತ್ನ ಅಂಬೇಡ್ಕರ್

“ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸಂಸದರು ಇಂದು ಮಧ್ಯಾಹ್ನ ಹತ್ರಾಸ್‌ಗೆ ತೆರಳಿ ಉತ್ತರ ಪ್ರದೇಶದಲ್ಲಿ ಅತ್ಯಾಚಾರದಿಂದ ಮೃತಪಟ್ಟ 19 ವರ್ಷದ ಮಗಳ ಕುಟುಂಬವನ್ನು ಭೇಟಿಯಾಗಲಿದ್ದಾರೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೂಡಾ ಟ್ವೀಟ್ ಮಾಡಿದ್ದಾರೆ.

ಸಾಮೂಹಿಕ ಅತ್ಯಾಚಾರದಿಂದ ಸಾವಿಗೀಡಾದ 19 ವರ್ಷದ ದಲಿತ ಯುವತಿಯ ಕುಟುಂಬವನ್ನು ಭೇಟಿಯಾಗಲು ಕಾಂಗ್ರೆಸ್ ನಾಯಕರ ಎರಡನೇ ಪ್ರಯತ್ನ ಇದಾಗಿದ್ದು, ಗುರುವಾರ ಕುಟುಂಬವನ್ನು ಭೇಟಿ ಮಾಡಲು ಪ್ರಯತ್ನಿಸಿದ್ದರು ಕೂಡಾ ಹತ್ರಾಸ್ ಜಿಲ್ಲಾ ಗಡಿಯಲ್ಲಿ ಅವರನ್ನು ಪೊಲೀಸರು ತಡೆದಿದ್ದರು.

ಈ ಬಾರಿ ರಾಹುಲ್ ಮತ್ತು ಪ್ರಿಯಾಂಕ ಗಾಂಧಿ ದೆಹಲಿಯಿಂದ ಮಧ್ಯಾಹ್ನ 2.30 ರ ಸುಮಾರಿಗೆ 30 ಕಾಂಗ್ರೆಸ್ ಸಂಸದರೊಂದಿಗೆ ಪ್ರಯಾಣ ಪ್ರಾರಂಭಿಸಿದ್ದಾರೆ ಎಂದು ಆನ್ ಮನೋರಮ ವರದಿ ಮಾಡಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ: ಎಸ್‌ಪಿ ಸೇರಿ 5 ಪೊಲೀಸರು ವಜಾ; ಜಿಲ್ಲೆಯಲ್ಲಿ ಒಂದು ತಿಂಗಳು ನಿಷೇದಾಜ್ಞೆ

#HathrasHorror ಎಂಬ ಹ್ಯಾಶ್‌ಟ್ಯಾಗ್ ಬಳಸಿ ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ರಾಹುಲ್ ಗಾಂಧಿ, “ಈ ಪ್ರೀತಿಯ ಹುಡುಗಿ ಮತ್ತು ಅವರ ಕುಟುಂಬದೊಂದಿಗೆ ಯುಪಿ ಸರ್ಕಾರ ಮತ್ತು ಅದರ ಪೊಲೀಸರು ನಡೆದುಕೊಳ್ಳುತ್ತಿರುವ ರೀತಿಯನ್ನು ನಾನು ಒಪ್ಪುವುದಿಲ್ಲ, ಭಾರತೀಯರು ಇದನ್ನು ಒಪ್ಪಿಕೊಳ್ಳಬಾರದು” ಎಂದು ಹೇಳಿದ್ದಾರೆ.

“ನಾನು ಹತ್ರಾಸ್‌ನ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡುವ ಹಾಗೂ ಅವರ ನೋವು ಹಂಚಿಕೊಳ್ಳುವುದನ್ನು ಜಗತ್ತಿನ ಯಾವುದೂ ತಡೆಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

“ಯುಪಿ ಸರ್ಕಾರ ನೈತಿಕವಾಗಿ ಭ್ರಷ್ಟವಾಗಿದೆ. ಸಂತ್ರಸ್ತೆಗೆ ಚಿಕಿತ್ಸೆ ನೀಡಲಿಲ್ಲ, ಸಮಯಕ್ಕೆ ದೂರು ಪಡೆಯಲಿಲ್ಲ, ದೇಹವನ್ನು ಬಲವಂತವಾಗಿ ಸುಟ್ಟುಹಾಕಿದರು, ಕುಟುಂಬವು ಬಂಧನದಲ್ಲಿದೆ, ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ. ಈಗ ಅವರಿಗೆ ಮಂಪರು ಪರೀಕ್ಷೆ ನಡೆಯಲಿದೆ ಎಂದು ಬೆದರಿಕೆ ಹಾಕಲಾಗುತ್ತಿದೆ. ಈ ನಡೆಯನ್ನು ದೇಶ ಒಪ್ಪುವುದಿಲ್ಲ. ಸಂತ್ರಸ್ತೆಯ ಕುಟುಂಬವನ್ನು ಬೆದರಿಸುವುದನ್ನು ನಿಲ್ಲಿಸಿ” ಎಂದು ಪ್ರಿಯಾಂಕ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪೊಲೀಸರು ನಮಗೆ ಬೆದರಿಕೆ ಒಡ್ಡುತ್ತಿದ್ದಾರೆ: ಹತ್ರಾಸ್ ಪ್ರಕರಣ ಸಂತ್ರಸ್ತೆಯ ಸಹೋದರ ಆರೋಪ

 

ಸೆಪ್ಟೆಂಬರ್ 14 ರಂದು ಹತ್ರಾಸ್‌ನ ಹಳ್ಳಿಯಲ್ಲಿ ದಲಿತ ಯುವತಿಯ ಮೇಲೆ ನಾಲ್ಕು ಮೇಲ್ಜಾತಿಯ ಪುರುಷರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಯುವತಿಯ ಸ್ಥಿತಿ ಹದಗೆಟ್ಟ ನಂತರ ಅವರನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಯುವತಿ ಮೃತಪಟ್ಟಿದ್ದರು.

ಆದರೆ ಮೃತದೇಹವನ್ನು ರಾತ್ರಿಯೆ ಕುಟುಂಬಕ್ಕೂ ನೀಡದೆ ಪೊಲೀಸರೇ ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಇದ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ಹಲವಾರು ಮಂದಿ ಸಾಕ್ಷಿ ಇಲ್ಲವಾಗಿಸಲು ಯುವತಿಯನ್ನು ಕೊಂದು ಸುಡಲಾಗಿದೆ ಎಂದು ಆರೋಪಿಸಿದ್ದರೆ, ಇನ್ನು ಕೆಲವರು ಸುಟ್ಟಿರುವುದು ಯಾರನ್ನು ಎಂದು ಪ್ರಶ್ನೆ ಎತ್ತಿದ್ದಾರೆ.

ಇದನ್ನೂ ಓದಿ: ಹತ್ರಾಸ್: ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ 200 ಕಾರ್ಯಕರ್ತರ ವಿರುದ್ಧ FIR

ವಿಡಿಯೋ ನೋಡಿ: ರಾಮ ರಾಜ್ಯ ಎಂದರೆ ದಲಿತ, ಮಹಿಳೆ, ಅಲ್ಪ ಸಂಖ್ಯಾತರ ಮೇಲೆ ಅತ್ಯಾಚಾರ, ದಾಳಿ ಮಾಡುವಂತದ್ದೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...