Homeಮುಖಪುಟ'ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಅಂಶಗಳನ್ನು ಬೇಕಾದರೆ ಕದಿಯಿರಿ: ಮೋದಿಗೆ ರಾಹುಲ್ ಸಲಹೆ..

‘ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಅಂಶಗಳನ್ನು ಬೇಕಾದರೆ ಕದಿಯಿರಿ: ಮೋದಿಗೆ ರಾಹುಲ್ ಸಲಹೆ..

- Advertisement -
- Advertisement -

ಸರ್ಕಾರಿ ಕಂಪನಿಗಳ ಖಾಸಗೀಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿದಾಳಿ ನಡೆಸಿದ್ದಾರೆ. ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಾತ್ರ ಇದರ ಸುಳಿವು ಸಹ ಇಲ್ಲವೇನೋ ಎಂಬಂತೆ ನಟಿಸುತ್ತಿದೆ. ಪ್ರಧಾನಿ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂಗ್ರೆಸ್ ಪ್ರಣಾಳಿಕೆಯ ವಿಚಾರಗಳು ಮತ್ತು ಅಂಶಗಳನ್ನು ಬೇಕಾದರೆ ಕದ್ದು ಅಳವಡಿಸಿಕೊಳ್ಳಬಹುದು ಎಂದು ರಾಹುಲ್ ಹೇಳಿದ್ದಾರೆ.

ಪ್ರಧಾನಿ ಮೋದಿ ಹೇಳಿಕೆಯನ್ನು ಖಂಡಿಸಿ, ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಗ್ರಾಮೀಣ ಪ್ರದೇಶಗಳು ಹಲವು ಸಮಸ್ಯೆಗಳಿಂದ ಬಳಲುತ್ತಿವೆ. ದೇಶದ ಅರ್ಥವ್ಯವಸ್ಥೆ ನೆಲಕಚ್ಚಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ಇದ್ಯಾವುದರ ಅರಿವೂ ಇಲ್ಲವೆಂಬಂತೆ ನಟಿಸುತ್ತಿದೆ. ಪ್ರಧಾನಿ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಕೆಲವು ಅಂಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಸ್ಯೆಗೆ ಕಡಿವಾಣ ಹಾಕಬೇಕು ಎಂದಿದ್ದಾರೆ. ಕಳೆದ ಆರು ವರ್ಷಗಳಲ್ಲೇ ಭಾರತದ ಜಿಡಿಪಿ ಪ್ರಮಾಣ ಶೇ. 5ರಷ್ಟು ಕುಸಿದಿದೆ. ಆರ್ಥಿಕತೆ ಬೆಳವಣಿಗೆಯಿಲ್ಲದೆ, ಮಂದಗತಿಯಲ್ಲಿ ಸಾಗುತ್ತಿದೆ. ಕಳೆದ ಐದು ತಿಂಗಳಲ್ಲಿ ಆಟೋಮೊಬೈಲ್ ವಲಯ ಸೇರಿದಂತೆ ಅನೇಕ ವಲಯಗಳು ಉತ್ಪಾದನೆ ಮತ್ತು ಬೇಡಿಕೆ ಕುಸಿದಿದೆ.

ಕೇಂದ್ರ ಸರ್ಕಾರ ಆರ್ಥಿಕತೆಯ ಸುಧಾರಣೆಗೆ ಮತ್ತು ಪುನರುಜ್ಜೀವನಕ್ಕಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಆದರೆ ಸಾರ್ವಜನಿಕ ಬ್ಯಾಂಕ್ ಗಳನ್ನು ವಿಲೀನಗೊಳಿಸಿದೆ. ಕಾರ್ಪೋರೇಟ್ ತೆರಿಗೆಯನ್ನು ಕಡಿತಗೊಳಿಸಿದೆ. ಕಾಂಗ್ರೆಸ್ ಮತ್ತು ವಿಪಕ್ಷಗಳು ಕೇಂದ್ರ ಸರ್ಕಾರದ ಆರ್ಥಿಕತೆ ನೀತಿಯ ಧೋರಣೆಯನ್ನು ಖಂಡಿಸಿವೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮಾತನಾಡಿ, ಮಂದಗತಿಯಲ್ಲಿ ಸಾಗುತ್ತಿರುವ ಆರ್ಥಿಕತೆ ಸಾಕಷ್ಟು ಸಮಸ್ಯೆಗಳಿಗೆ ಕಾರಣವಾಗಲಿದೆ. ಹೀಗೆ ನಡೆದರೆ 2024ರ ವೇಳೆಗೆ 5 ಟ್ರಿಲಿಯನ್ ಡಾಲರ್ ಅಭಿವೃದ್ಧಿ ಕಾಣುವುದು ಅಸಾಧ್ಯ ಎಂದು ವ್ಯಂಗ್ಯವಾಡಿದ್ದರು.

ಇನ್ನು ಹರ್ಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಯುಕ್ತ ರ್ಯಾಲಿ ನಡೆಸಿರುವ ರಾಹುಲ್ ಗಾಂಧಿ, ಕುಸಿಯುತ್ತಿರುವ ಆರ್ಥಿಕತೆ, ನಿರುದ್ಯೋಗ ಮತ್ತು ಉತ್ಪಾದನೆ, ಬೇಡಿಕೆ, ಹೂಡಿಕೆ ಕುಸಿತದ ಪ್ರಶ್ನೆಗಳನ್ನು ಮುಂದಿಟ್ಟು, ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದಲ್ಲಿ ಸಾರ್ವಜನಿಕ ವಲಯದ ಉದ್ಯಮಗಳನ್ನು ಮೋದಿ ಸರ್ಕಾರ ಸೂಟು-ಬೂಟು ಗೆಳೆಯರಿಗೆ ಮಾರಿಕೊಳ್ಳುತ್ತಿದೆ. ಸಾವಿರಾರು ಕಾರ್ಮಿಕರು ಅನಿಶ್ಚಿತತೆ ಮತ್ತು ಉದ್ಯೋಗ ಕಳೆದುಕೊಳ್ಳುವ ಭಯದಲ್ಲಿ ಬದುಕುತ್ತಿದ್ದಾರೆ. ದೇಶವನ್ನು ಲೂಟಿ ಮಾಡುತ್ತಿರುವ ಇಂತಹ ಕ್ರಮಗಳನ್ನು ವಿರೋಧಿಸುತ್ತೇನೆ. ಎಂದೆಂದಿಗೂ ಕಾರ್ಮಿಕರ ಹೆಗಲಿಗೆ ಹೆಗಲು ಕೊಟ್ಟು ಹೋರಾಟ ನಡೆಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...