Homeಮುಖಪುಟಮೋದಿ 'ಭ್ರಷ್ಟಾಚಾರದ ಚಾಂಪಿಯನ್', ಬಿಜೆಪಿ 150ರ ಗಡಿ ದಾಟುವುದಿಲ್ಲ: ರಾಹುಲ್ ಗಾಂಧಿ

ಮೋದಿ ‘ಭ್ರಷ್ಟಾಚಾರದ ಚಾಂಪಿಯನ್’, ಬಿಜೆಪಿ 150ರ ಗಡಿ ದಾಟುವುದಿಲ್ಲ: ರಾಹುಲ್ ಗಾಂಧಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ “ಭ್ರಷ್ಟಾಚಾರದ ಚಾಂಪಿಯನ್”ಆಗಿದ್ದು, ಚುನಾವಣಾ ಬಾಂಡ್ ಯೋಜನೆಯು ವಿಶ್ವದ ಅತಿದೊಡ್ಡ “ಸುಲಿಗೆ ಯೋಜನೆಯಾಗಿದೆ” ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷ ಇಂಡಿಯಾ ಬಣದ ಪರವಾಗಿ ಜನರ ಒಲವು ಇದೆ ಮತ್ತು ಬಿಜೆಪಿ 150 ಸ್ಥಾನಗಳಿಗೆ ತೃಪ್ತಿಪಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಈಗ ರದ್ದುಗೊಂಡಿರುವ ಚುನಾವಣಾ ಬಾಂಡ್‌ಗಳನ್ನು ಟೀಕಿಸಿದ ರಾಹುಲ್‌ ಗಾಂಧಿ, ಚುನಾವಣಾ ನಿಧಿಯಲ್ಲಿ ಪಾರದರ್ಶಕತೆ ತರಲು ಈ ಯೋಜನೆಯನ್ನು ತರಲಾಗಿದೆ ಎಂದು ಪ್ರಧಾನಿ ಹೇಳಿಕೊಳ್ಳುತ್ತಾರೆ ಆಗಿದ್ದರೆ ಅದನ್ನು ಸುಪ್ರೀಂಕೋರ್ಟ್ ಈಗ ಏಕೆ ರದ್ದುಗೊಳಿಸಿದೆ ಎಂದು ಪ್ರಶ್ನಿಸಿದ್ದಾರೆ.

ಚುನಾವಣಾ ಬಾಂಡ್‌ಗಳ ಯೋಜನೆಯು ವಿಶ್ವದ ಅತಿದೊಡ್ಡ ಸುಲಿಗೆ ಯೋಜನೆಯಾಗಿದೆ. ಭಾರತದ ಉದ್ಯಮಿಗಳಿಗೆ ಅದು ಚೆನ್ನಾಗಿ ತಿಳಿದಿದೆ. ಪ್ರಧಾನಿ ಈ ಬಗ್ಗೆ ಎಷ್ಟೇ ಸ್ಪಷ್ಟಪಡಿಸಿದರೂ ಅದು ಯಾವುದೇ ಪರಿಣಾಮ ಬೀರುವುದಿಲ್ಲ, ಏಕೆಂದರೆ ಪ್ರಧಾನಿ ಭ್ರಷ್ಟಾಚಾರದ ಚಾಂಪಿಯನ್ ಎಂದು ಇಡೀ ರಾಷ್ಟ್ರಕ್ಕೆ ತಿಳಿದಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಒಂದೇ ಬಾರಿಗೆ ಬಡತನವನ್ನು ಕೊನೆಗೊಳಿಸುತ್ತದೆ ಎಂಬ ಮೋದಿಯವರ ಟೀಕೆಗಳ ಕುರಿತು ರಾಹುಲ್‌ ಗಾಂಧಿ ಪ್ರತಿಕ್ರಿಯಿಸಿದ್ದು, ಬಡತನವು ಒಂದೇ ಬಾರಿಗೆ ಕೊನೆಗೊಳ್ಳುತ್ತದೆ ಎಂದು ಯಾರೂ ಹೇಳಲಿಲ್ಲ ಆದರೆ ನಾವು ಅದಕ್ಕಾಗಿ ಬಲವಾದ ಪ್ರಯತ್ನಗಳನ್ನು ಮಾಡಬಹುದು ಎಂದು ಹೇಳಿದ್ದಾರೆ.

ಒಂದೆಡೆ, ಆರೆಸ್ಸೆಸ್‌ ಮತ್ತು ಬಿಜೆಪಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದರೆ, ಮತ್ತೊಂದೆಡೆ, ಇಂಡಿಯಾ ಮೈತ್ರಿಕೂಟ ಮತ್ತು ಕಾಂಗ್ರೆಸ್ ಪಕ್ಷಗಳು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಪ್ರಯತ್ನಿಸುತ್ತಿವೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಉತ್ತರ ಪ್ರದೇಶದ ಅಮೇಥಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಕೇಳಿದ ಪ್ರಶ್ನೆಗೆ, ಈ ಬಗ್ಗೆ ತಮ್ಮ ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ ಎಂದು ಹೇಳಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶದ ಗಾಜಿಯಾಬಾದ್‌ನಿಂದ ಗಾಜಿಪುರದವರೆಗೆ ಬದಲಾವಣೆಯ ಗಾಳಿ ಬೀಸಲಿದೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭವ್ಯವಾದ ವಿದಾಯ ಹೇಳಲಾಗುತ್ತದೆ. ಲೋಕಸಭೆ ಚುನಾವಣೆಯಲ್ಲಿ ಒಂದೇ ಒಂದು ಮತವೂ ವಿಭಜನೆಯಾಗದಂತೆ ನೋಡಿಕೊಳ್ಳಬೇಕು ಎಂದು ಇದೇ ವೇಳೆ ಅಖಿಲೇಶ್‌ ಯಾದವ್ ಅವರು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆಯಲ್ಲಿ ಎಸ್‌ಪಿ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿವೆ. 80 ಲೋಕಸಭಾ ಕ್ಷೇತ್ರ ಇರುವ ಉತ್ತರಪ್ರದೇಶದಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಎಸ್‌ಪಿ ಮತ್ತು ಇತರ ಕೆಲವು ಎನ್‌ಡಿಎ ಮಿತ್ರಪಕ್ಷಗಳು ಉಳಿದ 63 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ. ದೇಶದಲ್ಲಿ ಏಳು ಹಂತದ ಲೋಕಸಭೆ ಚುನಾವಣೆ ಏಪ್ರಿಲ್ 19 ರಂದು ಆರಂಭವಾಗಲಿದ್ದು, ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ‘ಮೋದಿ ಅಲೆ ಇಲ್ಲ, ಭ್ರಮೆಯಲ್ಲಿರಬೇಡಿ’ ಎಂದ ಬಿಜೆಪಿ ಅಭ್ಯರ್ಥಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...