Homeಸಿನಿಮಾಕ್ರೀಡೆಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್

ಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್

'ಮೊಹಮ್ಮದ್ ಶಮಿ ಭಯ್ಯಾ, ನಿಮ್ಮ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ' ಎಂದು ಯಜುವೇಂದ್ರ ಚಹಲ್ ಟ್ವೀಟ್ ಮಾಡಿದರೆ 'ನಾವು ನಿಮ್ಮನ್ನು ಪ್ರೀತಿಸುತ್ತೇವೆ ಶಮಿ' ಎಂದು ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ. 

- Advertisement -
- Advertisement -

ಭಾರತ ತಂಡವು ಪಾಕಿಸ್ತಾನ ಎದುರು ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಭಾರತ ತಂಡದ ಹಿರಿಯ ಆಟಗಾರ ಸಚಿನ್ ತೆಂಡೂಲ್ಕರ್ ದನಿಗೂಡಿಸಿದ್ದಾರೆ.

“ಮೊಹಮ್ಮದ್ ಶಮಿ ನಾವೆಲ್ಲರೂ ನಿನ್ನ ಜೊತೆಗಿದ್ದೇವೆ. ಈ ಜನರ ಮನಸ್ಸು ದ್ವೇಷದಿಂದ ತುಂಬಿಹೋಗಿದೆ, ಏಕೆಂದರೆ ಅವರಿಗೆ ಪ್ರೀತಿ ನೀಡುವವರೇ ಇಲ್ಲ. ಅವರನ್ನು ಕ್ಷಮಿಸಿಬಿಡು” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಅದೇ ರೀತಿಯಾಗಿ ಟ್ವೀಟ್ ಮಾಡಿರುವ ಸಚಿನ್ ತೆಂಡೂಲ್ಕರ್, “ನಾವು ಭಾರತ ತಂಡವನ್ನು ಬೆಂಬಲಿಸಿದಾಗ, ತಂಡವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ವ್ಯಕ್ತಿಯನ್ನು ಬೆಂಬಲಿಸುತ್ತೇವೆ. ಮೊಹಮ್ಮದ್ ಶಮಿ ಬದ್ಧತೆಯ, ವಿಶ್ವ ದರ್ಜೆಯ ಬೌಲರ್. ಇತರ ಕ್ರೀಡಾಪಟುಗಳಂತೆ ಆ ದಿನ ಅವರದಾಗಿರಲಿಲ್ಲ. ನಾನು ಶಮಿ ಮತ್ತು ಟೀಮ್ ಇಂಡಿಯಾದ ಹಿಂದೆ ನಿಂತಿದ್ದೇನೆ” ಎಂದಿದ್ದಾರೆ.

‘ಮೊಹಮ್ಮದ್ ಶಮಿ ಭಯ್ಯಾ, ನಿಮ್ಮ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ’ ಎಂದು ಭಾರತದ ಖ್ಯಾತ ಬೌಲರ್ ಯಜುವೇಂದ್ರ ಚಹಲ್ ಟ್ವೀಟ್ ಮಾಡಿದರೆ ‘ನಾವು ನಿಮ್ಮನ್ನು ಪ್ರೀತಿಸುತ್ತೇವೆ ಶಮಿ’ ಎಂದು ಹಿರಿಯ ಆಟಗಾರ ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ.

“ಮೊಹಮ್ಮದ್ ಶಮಿ ಮೇಲಿನ ಆನ್‌ಲೈನ್ ದಾಳಿ ಆಘಾತಕಾರಿಯಾದುದ್ದು. ನಾವು ಶಮಿ ಪರವಾಗಿ ನಿಲ್ಲುತ್ತೇವೆ. ಅವರು ಚಾಂಪಿಯನ್ ಆಗಿದ್ದಾರೆ ಮತ್ತು ಭಾರತದ ಕ್ಯಾಪ್ ಧರಿಸುವ ಯಾರೇ ಆಗಲಿ ಅವರು ಈ ಆನ್‌ಲೈನ್ ದ್ವೇಷ ಕಾರುವವರಿಗಿಂತ ಹೆಚ್ಚಿನ ಮಟ್ಟದಲ್ಲಿ ಭಾರತವನ್ನು ತಮ್ಮ ಹೃದಯದಲ್ಲಿಟ್ಟುಕೊಂಡಿರುತ್ತಾರೆ. ನಿನ್ನೊಂದಿಗಿದ್ದೇನೆ ಶಮಿ, ಮುಂದಿನ ಪಂದ್ಯದಲ್ಲಿ ನಿಮ್ಮ ಪರಾಕ್ರಮ ತೋರಿಸಿ” ಎಂದು ಹಿರಿಯ ಆಟಗಾರ ವಿರೇಂದ್ರ ಸೆಹ್ವಾಗ್ ಬರೆದಿದ್ದಾರೆ.

ಮೊಹಮ್ಮದ್ ಶಮಿ ಭಾರತದ ಹೆಮ್ಮೆ ಎಂದು ಅಮನ್ ಶರ್ಮಾರವರು 2019ರ ವಿಶ್ವಕಪ್ ಪಂದ್ಯದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಭಾರತ – ಆಫ್ಘಾನಿಸ್ಥಾನ ನಡುವೆ ನಡೆದ ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ ಗೆಲ್ಲಲು ಆಫ್ಘಾನಿಸ್ಥಾನ 16 ರನ್ ಗಳಿಸಬೇಕಿತ್ತು. ಆಗ ಬೌಲ್ ಮಾಡಿದ ಶಮಿ ಕೇವಲ ನಾಲ್ಕು ರನ್ ನೀಡಿ ಸತತ ಮೂರು ವಿಕೆಟ್ (ಹ್ಯಾಟ್ರಿಕ್) ಗಳಿಸಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದರು. ಆಗ ಇಡೀ ದೇಶವೇ ಶಮಿಯವರನ್ನು ಕೊಂಡಾಡಿತ್ತು. ಈ ವಿಡಿಯೋವನ್ನು ಐಸಿಸಿ ಹಂಚಿಕೊಂಡಿದೆ.

ಭಾನುವಾರದ ಪಂದ್ಯದಲ್ಲಿ ಭಾರತ ಪಾಕ್ ಎದುರು 10 ವಿಕೆಟ್‌ಗಳ ಸೋಲೊಪ್ಪಿಕೊಂಡಿತ್ತು. ವಿರಾಟ್ ಕೊಹ್ಲಿ ಇಡೀ ತಂಡ ಚೆನ್ನಾಗಿ ಆಡಲಿಲ್ಲಿ ಎಂದು ವಿಮರ್ಶಿಸಿಕೊಂಡಿದ್ದರು. ಆದರೂ ಬಹಳಷ್ಟು ದುಷ್ಕರ್ಮಿಗಳು ಇನ್ಸ್ಟಾಗ್ರಾಮ್ ನಲ್ಲಿ ಮೊಹಮ್ಮದ್ ಶಮಿಯನ್ನು ಟ್ರೋಲ್ ಮಾಡಿ ನಿಂದಿಸಿದ್ದರು. ಅದಕ್ಕೆ ಮುಸ್ಲಿಂ ಧರ್ಮಿಯರಾಗಿದ್ದೇ ಏಕೈಕ ಕಾರಣವಾಗಿತ್ತು. 11 ಜನರ ತಂಡದಲ್ಲಿ ಶಮಿ ಒಬ್ಬರೆ ಮುಸ್ಲಿಂ ಆಗಿದ್ದರು. ಪಾಕಿಸ್ತಾನಕ್ಕೆ ಹೋಗು, ದೇಶದ್ರೋಹಿ ಎಂದು ಕೆಟ್ಟದಾಗಿ ದಾಳಿ ಮಾಡಿದ್ದರು. ಈ ದಾಳಿಯನ್ನು ಭಾರತದ ಹಲವಾರು ಕ್ರೀಡಾಪಟುಗಳು, ರಾಜಕಾರಣಿಗಳು ಖಂಡಿಸಿದ್ದರು.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!


ಭಾರತದ ಹಿರಿಯ ಆಟಗಾರ ಇರ್ಫಾನ್ ಪಠಾಣ್ ಟ್ವೀಟ್ ಮಾಡಿ, “ನಾನು ಕೂಡ ಭಾರತವು  ಪಾಕಿಸ್ತಾನದ ಎದುರು ಸೋತ ಕೆಲ ಪಂದ್ಯಗಳ ಭಾಗವಾಗಿದ್ದೇನೆ. ಆದರೆ ಆಗ ನನಗೆ ಯಾರೂ ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿರಲಿಲ್ಲ. ನಾನು ಕೆಲ ವರ್ಷಗಳ ಹಿಂದಿನ ಭಾರತದ ಬಗ್ಗೆ ಮಾತನಾಡುತ್ತಿದ್ದೇನೆ ಮತ್ತು ಈ ದುಷ್ಕರ್ಮಿಗಳನ್ನು ತಡೆಯಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲ ಟ್ವೀಟ್ ಮಾಡಿ, “ನಿನ್ನೆ ರಾತ್ರಿ ಭಾರತ ಸೋತ ಪಂದ್ಯದಲ್ಲಿ 11 ಜನರ ತಂಡದಲ್ಲಿ ಮೊಹಮ್ಮದ್ ಶಮಿ ಒಬ್ಬರಾಗಿದ್ದರು. ಅವರೊಬ್ಬರೆ ಮೈದಾನದಲ್ಲಿರಲಿಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಕ್ರೂರವಾಗಿ ನಿಂದಿಸಲ್ಪಟ್ಟ ಮತ್ತು ಟ್ರೋಲ್‌ಗೆ ಒಳಗಾದ ನಿಮ್ಮ ತಂಡದ ಸಹ ಆಟಗಾರನ ಪರವಾಗಿ ನಿಲ್ಲಲು ನಿಮಗೆ ಸಾಧ್ಯವಾಗದಿದ್ದರೆ ಟೀಮ್ ಇಂಡಿಯಾ, ನೀವು ಬ್ಲಾಕ್ ಲೈವ್ಸ್ ಮ್ಯಾಟರ್‌ಗಾಗಿ ಮಂಡಿಯೂರಿದ್ದ ಯಾವುದೇ ಲೆಕ್ಕಕ್ಕೆ ಬರುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬಿಜೆಪಿ ಸಂಸದ ಮತ್ತು ಮಾಜಿ ಆಟಗಾರ ಗೌತಮ್ ಗಂಭೀರ್ “ಪಾಕ್ ಗೆದ್ದಾಗ ಪಟಾಕಿ ಸಿಡಿಸಿದವರು ಭಾರತೀಯರಲ್ಲ. ನಾವು ನಮ್ಮ ಹುಡುಗರ ಜೊತೆ ನಿಲ್ಲುತ್ತೇವೆ. ನಾಚಿಕೆಗೇಡು” ಎಂದು ಟ್ವೀಟ್ ಮಾಡಿದ್ದಾರೆ. ಅವರು ಶಮಿ ಬಗ್ಗೆ ಉಲ್ಲೇಖ ಮಾಡಿಲ್ಲ.

ಅದಕ್ಕೆ ವಿನಯ್ ಕುಮಾರ್ ಎಂಬುವವರು ಬ್ಲಾಕ್ ಲೈವ್ಸ್ ಮ್ಯಾಟರ್ ಗೆ ಗೌರವ ಸಲ್ಲಿಸಲು ಮಂಡಿಯೂರಿದ ಎಷ್ಟು ಆಟಗಾರರು ಶಮಿ ಪರವಾಗಿ ನಿಂತರು ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...