Homeಮುಖಪುಟ2 ವರ್ಷದ ಶಿಕ್ಷೆ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಹುಲ್ ಗಾಂಧಿ: ನಾಳೆ ಅರ್ಜಿ ವಿಚಾರಣೆ

2 ವರ್ಷದ ಶಿಕ್ಷೆ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಹುಲ್ ಗಾಂಧಿ: ನಾಳೆ ಅರ್ಜಿ ವಿಚಾರಣೆ

- Advertisement -
- Advertisement -

ಕಳ್ಳರೆಲ್ಲ ಮೋದಿ ಉಪನಾಮದವರೆ ಏಕಿದ್ದಾರೆ ಎಂಬ ಹೇಳಿಕೆಗೆ ಸೂರತ್ ಕೋರ್ಟ್‌ನಿಂದ 2 ವರ್ಷಗಳ ಜೈಲುಶಿಕ್ಷೆಗೆ ಒಳಗಾಗಿರುವ ರಾಹುಲ್ ಗಾಂಧಿಯವರು ತಮ್ಮ ವಿರುದ್ಧದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರೆ. ಸೋಮವಾರ ಅವರ ಮೇಲ್ಮನವಿ ಅರ್ಜಿ ಸೂರತ್ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ ಎನ್ನಲಾಗಿದೆ.

2019 ರ ರಾಹುಲ್ ಗಾಂಧಿ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಮೂರ್ತಿ ಎಚ್ ಎಚ್ ವರ್ಮಾ ಅವರ ಮಾರ್ಚ್ 23ರ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿದೆ. ಮ್ಯಾಜಿಸ್ಟ್ರೇಟ್ ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದರು. ನಂತರ ಅವರ ಲೋಕಸಭಾ ಸದಸ್ಯತ್ವ ಅನರ್ಹಗೊಳಿಸಲಾಯಿತು.

ಮಾರ್ಚ್ 23ರ ಆದೇಶದ ಸಂದರ್ಭದಲ್ಲಿಯೇ 15,000 ರೂಪಾಯಿಗಳ ಶ್ಯೂರಿಟಿಯ ಮೇಲೆ ರಾಹುಲ್ ಗಾಂಧಿಯವರಿಗೆ ಜಾಮೀನು ನೀಡಿದ್ದು, ಮೇಲ್ಮನವಿ ಸಲ್ಲಿಸಲು 30 ದಿನಗಳವರೆಗೆ ತಮ್ಮ ಆದೇಶವನ್ನು ಅಮಾನತುಗೊಳಿಸಿದೆ.

2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ರಾಹುಲ್‌, ”ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಸರ್‌ನೇಮ್ ಏಕಿರುತ್ತದೆ?” ಎಂದು ಪ್ರಶ್ನಿಸಿದ್ದರು. ಈ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎರಡು ಕಡೆ ಮಾನನಷ್ಟ ಮೊಕದ್ದಮೆಗಳು ದಾಖಲಾಗಿವೆ.

ಅಲ್ಲದೆ  ”ಆರ್‌ಎಸ್‌ಎಸ್ ಸದಸ್ಯರು 21 ನೇ ಶತಮಾನದ ಕೌರವರು” ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಮತ್ತೊಂದು ಮಾನನಷ್ಟ ಮೊಕ್ಕದ್ದಮೆ ದಾಖಲಾಗಿದೆ. ಜನವರಿ 9, 2023ರಂದು ಹರಿಯಾಣದ ಅಂಬಾಲಾದಲ್ಲಿ ಭಾರತ್ ಜೋಡೋ ಯಾತ್ರೆಯ ನಂತರ ಸ್ಟ್ರೀಟ್ ಕಾರ್ನರ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಅವರು, ”ಕೌರವರು ಯಾರು? ನಾನು ಮೊದಲು ನಿಮಗೆ 21 ನೇ ಶತಮಾನದ ಕೌರವರ ಬಗ್ಗೆ ಹೇಳುತ್ತೇನೆ ಕೇಳಿ, ಅವರು ಖಾಕಿ ಹಾಫ್ ಪ್ಯಾಂಟ್ ಧರಿಸುತ್ತಾರೆ, ಕೈಯಲ್ಲಿ ಲಾಠಿ ಹಿಡಿದು ಮತ್ತು ಶಾಖಾಗಳನ್ನು ನಡೆಸುತ್ತಾರೆ. ಭಾರತದ ಇಬ್ಬರು, ಮೂವರು ಕೋಟ್ಯಾಧಿಪತಿಗಳು ಕೌರವರ ಜೊತೆ ನಿಂತಿದ್ದಾರೆ” ಎಂದು RSS ಗುರಿಯಾಗಿಸಿಕೊಂಡು ರಾಹುಲ್ ಹೇಳಿದ್ದರು.

ಇದನ್ನೂ ಓದಿ: RSS ಸದಸ್ಯರು 21ನೇ ಶತಮಾನದ ಕೌರವರು ಹೇಳಿಕೆಗೆ ರಾಹುಲ್ ವಿರುದ್ಧ ಮತ್ತೊಂದು ಮಾನನಷ್ಟ ಕೇಸ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...