Homeಮುಖಪುಟಕಪ್ಪು ಫಂಗಸ್‌‌ ಬಗ್ಗೆ ಕೇಂದ್ರಕ್ಕೆ 3 ಪ್ರಶ್ನೆಗಳನ್ನು ಕೇಳಿದ ರಾಹುಲ್ ಗಾಂಧಿ

ಕಪ್ಪು ಫಂಗಸ್‌‌ ಬಗ್ಗೆ ಕೇಂದ್ರಕ್ಕೆ 3 ಪ್ರಶ್ನೆಗಳನ್ನು ಕೇಳಿದ ರಾಹುಲ್ ಗಾಂಧಿ

- Advertisement -
- Advertisement -

ದೇಶದಲ್ಲಿ ಕಪ್ಪು ಫಂಗಸ್‌‌ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಂಗಳವಾರ ಮತ್ತೆ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ. ಅವರ ಮೂರು ಪ್ರಶ್ನೆಗಳಿಗೆ ಕೇಂದ್ರ ಸರ್ಕಾರದಿಂದ ಉತ್ತರವನ್ನು ಕೋರಿದ್ದಾರೆ.

ಕಪ್ಪು ಫಂಗಸ್‌‌ ಬಗ್ಗೆ ಅವರು ಟ್ವಿಟರ್‌ನಲ್ಲಿ ಕೇಂದ್ರದೊಂದಿಗೆ ಪ್ರಶ್ನೆ ಕೇಳಿದ್ದು, ಸಾಂಕ್ರಮಿಕದ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

“ಒಂದನೆಯದಾಗಿ ಸೋಂಕಿಗೆ ಬಳಸುವ ಆಂಫೊಟೆರಿಸಿನ್ ಬಿ ಔಷಧದ ಕೊರತೆಗೆ ಸರ್ಕಾರ ಏನು ಮಾಡುತ್ತಿದೆ. ಎರಡನೆಯದ್ದು ಈ ಔಷಧಿಯನ್ನು ರೋಗಿಗಳಿಗೆ ತಲುಪಿಸುವ ವಿಧಾನವೇನು? ಮೂರನೆಯದಾಗಿ, ಚಿಕಿತ್ಸೆ ನೀಡುವ ಬದಲು ಮೋದಿ ಸರ್ಕಾರವು ಜನತೆಯನ್ನು ಔಪಚಾರಿಕತೆಗೆ ಯಾಕೆ ಸಿಲುಕಿಸುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

ಇಷ್ಟೇ ಅಲ್ಲದೆ ನಿರುದ್ಯೋಗ ಹೆಚ್ಚಳ ಮತ್ತು ಜಿಡಿಪಿ ಇಳಿಕೆಯ ಬಗ್ಗೆಯು ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರುದ್ಯೋಗ ಹಚ್ಚಳದ ಚಾರ್ಟ್ ಅನ್ನು ತಮ್ಮ ಟ್ವೀಟ್‌ನಲ್ಲಿ ಹಂಚಿಕೊಂಡಿರುವ ಅವರು “ಪ್ರಧಾನ ಮಂತ್ರಿಯ ‘ಹಾಲ್‌ ಆಫ್‌ ಶೇಮ್‌’, ಕನಿಷ್ಠ ಜಿಡಿಪಿ ಮತ್ತು ಗರಿಷ್ಠ ನಿರುದ್ಯೋಗ” ಎಂದು ಅವರು ಹೇಳಿದ್ದಾರೆ.

ದೇಶಾದ್ಯಂತ ಕೊರೊನಾ ಸೋಂಕು ಪ್ರಚೋದಿತ ಕಪ್ಪು ಫಂಗಸ್‌ ಪ್ರಕರಣವು ಗಮನಾರ್ಹವಾಗಿ ಹೆಚ್ಚಳಗೊಂಡಿದೆ, ಫಂಗಸ್‌ನಿಂದ ಸಾವಿನ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯಾದೆ. ಕರ್ನಾಟಕದಲ್ಲಿ ಇದುವರೆಗೆ 1,250 ಪ್ರಕರಣಗಳು ಪತ್ತೆಯಾಗಿದ್ದು, 39 ಸಂಬಂಧಿತ ಸಾವುಗಳು ವರದಿಯಾಗಿವೆ. ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಸೋಂಕಿನಿಂದ 39 ಜನರು ಸಾವನ್ನಪ್ಪಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಶುಕ್ರವಾರ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಉತ್ತರ ಪ್ರದೇಶದ ಮೀರತ್‌ನಲ್ಲಿ ಒಟ್ಟು 147 ಕಪ್ಪು ಫಂಗಸ್‌ ಪ್ರಕರಣಗಳು ವರದಿಯಾಗಿವೆ.

ಇದನ್ನೂ ಓದಿ: ದೀದಿ V/s ಮೋದಿ: ಬಿಜೆಪಿಯಿಂದ ಟಿಎಂಸಿಗೆ ಮತ್ತೆ ವಾಪಸಾಗಲು ಬಯಸುತ್ತಿರುವ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...