Homeಚಳವಳಿನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ: ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ

ನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ: ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ

ನೋಟು ರದ್ದತಿ ಮಾಡಿದರು. ಕಪ್ಪು ಹಣ ತರುತ್ತೇವೆ, ಭ್ರಷ್ಟಾಚಾರ ನಿಲ್ಲುಸುತ್ತೇವೆ ಎಂದು ಸುಳ್ಳು ಹೇಳಿ ಜನಸಾಮಾನ್ಯರನ್ನು ಲೂಟಿ ಮಾಡಿ ಅಂಬಾನಿ ಮತ್ತು ಅದಾನಿಯವರ ಜೇಬು ತುಂಬಿಸಿದರು ಎಂದು ರಾಹುಲ್‌ ಆರೋಪಿಸಿದ್ದಾರೆ.

- Advertisement -
- Advertisement -

“ನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ; ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ ಮತ್ತು ಯಾವುದೇ ಕಾಂಗ್ರೆಸ್ಸಿಗರು ಹಾಗೆ ಮಾಡುವುದಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಸಾರಿದ್ದಾರೆ.

ಭಾರತ ಉಳಿಸಿ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು “ಭಾರತದ ಆರ್ಥಿಕತೆಯನ್ನು ನಾಶಪಡಿಸಿದ್ದಕ್ಕಾಗಿ ದೇಶದ ಕ್ಷಮೆಯಾಚಿಸಬೇಕಾಗಿರುವುದು ನರೇಂದ್ರ ಮೋದಿ ಮತ್ತು ಅವರ ಸಹಾಯಕ ಅಮಿತ್ ಶಾ” ಎಂದು  ಹೇಳಿದ್ದಾರೆ.

ಭಾರತ ದೇಶದ ಶಕ್ತಿ, ಭಾರತ ಆತ್ಮ ಇಲ್ಲಿನ ಆರ್ಥಿಕ ವ್ಯವಸ್ಥೆಯಾಗಿತ್ತು. ಇಡೀ ವಿಶ್ವ ನಮ್ಮನ್ನು ನೋಡುತ್ತಿತ್ತು. ಹಲವು ಧರ್ಮ, ಜಾತಿ ಮತ್ತು ಹಲವಾರು ವಿಚಾರಧಾರೆಗಳು ಸೇರಿ 9% ಜಿಡಿಪಿ ತಂದಿದ್ದೆವು. ಚೀನಾ ಮತ್ತು ಇಂಡಿಯಾ ಸೇರಿ ಚಿಂಡಿಯಾ ಎಂದು ಕರೆಯುತ್ತಿದ್ದರು. ಚಿಂಡಿಯಾ ವಿಶ್ವದ ಭವಿಷ್ಯ ಎಂದು ಕರೆಯಲಾಗುತ್ತಿದೆ. ಆದರೆ ಈಗ ಏನಾಗಿದೆ ಎಂದು ನೀವೇ ನೋಡುತ್ತಿದ್ದೀರಿ. ಭಾರತದ ಭವಿಷ್ಯವನ್ನು ನರೇಂದ್ರ ಮೋದಿ ತಮ್ಮ ಕೈಯ್ಯಾರೆ ಹಾಳು ಮಾಡಿದ್ದರೆ ಎಂದು ರಾಹುಲ್‌ ಗಾಂಧಿ ಕಿಡಿಕಾರಿದರು.

ನೋಟು ರದ್ದತಿ ಮಾಡಿದರು. ಕಪ್ಪು ಹಣ ತರುತ್ತೇವೆ, ಭ್ರಷ್ಟಾಚಾರ ನಿಲ್ಲುಸುತ್ತೇವೆ ಎಂದು ಸುಳ್ಳು ಹೇಳಿ ಜನಸಾಮಾನ್ಯರನ್ನು ಲೂಟಿ ಮಾಡಿ ಅಂಬಾನಿ ಮತ್ತು ಅದಾನಿಯವರ ಜೇಬು ತುಂಬಿಸಿದರು ಎಂದು ರಾಹುಲ್‌ ಆರೋಪಿಸಿದ್ದಾರೆ.

ಇನ್ನು ಗಬ್ಬರ್‌ ಸಿಂಗ್‌ ಟ್ಯಾಕ್ಸ್‌ ಪದ್ದತಿ ಜಾರಿಗೆ ತಂದು 45 ವರ್ಷಗಳಲ್ಲಿಯೇ ಅತಿ ಹೆಚ್ಚಿನ ನಿರುದ್ಯೋಗ ದರ ಮಾಡಿದರು. 9%ಇದ್ದ ಜಿಡಿಪಿಯನ್ನು 4%ಗೆ ತಂದು ನಿಲ್ಲಿಸಿದರು. ಭಾರತದ ಆರ್ಥಿಕತೆಯನ್ನು ಮಾಡಿದ್ದು ನಮ್ಮ ಅತ್ಯಂತ ದೊಡ್ಡ ಶತ್ರು ಅಲ್ಲ ಬದಲಿಗೆ ನಮ್ಮ ಪ್ರಧಾನಿಯಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಇದರಿಂದ ನಷ್ಟ ಅನುಭವಿಸಿದ್ದಾರೆ ಎಂದರು.

ಒಂದು ಲಕ್ಷಕ್ಕೂ ಹೆಚ್ಚಿನ ಕಾಂಟ್ರಾಕ್ಟ್‌ಅನ್ನು ಅದಾನಿಯೊಬ್ಬರಿಗೆ ಮೋದಿ ನೀಡಿದ್ದಾರೆ. ಏಕೆ? ಇದು ಭ್ರಷ್ಟಾಚಾರವಲ್ಲವೇ? ಒಂದು ಲಕ್ಷದ ನಲವತ್ತು ಲಕ್ಷ ಕೋಟಿ ರೂಪಾಯಿಗಳನ್ನು ಅತೀ ಶ್ರೀಮಂತರ ಸಾಲವನ್ನು ಮನ್ನಾ ಮಾಡಿದ ಸರ್ಕಾರ ಬಡಜನರು ಬಳಸುವ ಫೋನ್‌ ಕರೆಗಳ ದರವನ್ನು 15% ಹೆಚ್ಚಿಸಿದ್ದಾರೆ.

ಭಾರತದ ರೈತರು, ಕಾರ್ಮಿಕರು, ಯುವಜನರ ಜೇಬಿನಲ್ಲಿ ಹಣ ಎಲ್ಲಿಯವರೆಗೂ ಬರುವುದಿಲ್ಲ ಅಲ್ಲಿಯವರೆಗೆ ನಮ್ಮ ಅರ್ಥ ವ್ಯವಸ್ಥೆ ಸುಧಾರಿಸುವುದಿಲ್ಲ. ಮೊದಲು ಬಡವರ, ರೈತರ, ಕಾರ್ಮಿಕರ ಕೈಗೆ ಬರಬೇಕು. ಅವರು ಖರೀದಿಸುತ್ತಾರೆ. ಬೇಡಿಕೆ ಹೆಚ್ಚಾದಂತೆ ಫ್ಯಾಕ್ಟರಿಗಳು ಹೆಚ್ಚು ಉತ್ಪಾದನೆ ಮಾಡಲು ಜನರಿಗೆ ಉದ್ಯೋಗ ನೀಡುತ್ತಾರೆ. ಇದು ಒಂದು ವ್ಯವಸ್ಥೇ ಇದನ್ನು ನರೇಂದ್ರ ಮೋದಿ ಹಾಳು ಮಾಡಿದರು.

ಕಾಂಗ್ರೆಸ್‌ ಆಡಳಿತದ ಪಂಜಾಬ್‌, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಘಡ ಸೇರಿದಂತೆ ಹಲವು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇವೆ. ಕೆಲವೆಡೆ ಎಂಎಸ್‌ಪಿ ಕೊಡುತ್ತಿದ್ದೇವೆ. ಮನರೇಗಾ ಯೋಜನೆ ಯಾಕೆ ಜಾರಿಗೆ ತಂದೆವು? ನಮಗೆ ಗೊತ್ತು ರೈತರು ಚೆನ್ನಾಗಿದ್ದರೆ ದೇಶ ಚೆನ್ನಾಗಿರುತ್ತದೆ ಎಂದು ಅವರು ಹೇಳಿದರು.

ಇಡೀ ದೇಶ ನರೇಂದ್ರ ಗಾಂಧಿಯವರನ್ನು ಆಯ್ಕೆ ಮಾಡಿತು. ಏಕೆಂದರೆ ದೇಶಕ್ಕೆ ಒಳ್ಳೆಯದು ಮಾಡಲಿ ಎಂದು. ಆದರೆ ಅವರು ಮಾಡಿದ್ದೇನು? ದೇಶವನ್ನು ಹಳ್ಳ ಹಿಡಿಸಿದರು ಎಂದು ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ.

ಭಾರತದ ಟಿವಿಗಳಲ್ಲಿ ಕೇವಲ ನರೇಂದ್ರ ಮೋದಿಯವರು ಮಾತ್ರ ಕಾಣಿಸಿಕೊಳ್ಳುತ್ತಾರೆ. ಎಲ್ಲಾ ಜಾಹೀರಾತುಗಳಲ್ಲಿಯೂ ಅವರೇ ಕಾಣಿಸುತ್ತಾರೆ. ಮನಮೋಹನ್‌ ಸಿಂಗ್‌ ಕಾಣಿಸುವುದಿಲ್ಲ ಅಲ್ಲವೇ? ನರೇಂದ್ರ ಮೊದಿಯವರ ಜಾಹಿರಾತು ಕೊಡಲು ಅವರಿಗೆ ಹಣ ಎಲ್ಲಿಂದ ಬರುತ್ತದೆ? ಅದು ನಮ್ಮೆಲ್ಲರ ತೆರಿಗೆ ಹಣವಲ್ಲವೇ? ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಖಮೇನಿ ಪುತ್ರ ಮೊಜ್ತಬಾ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ಹೆಸರಿಸಿದ ಇರಾನ್ ತಜ್ಞರ ಸಭೆ?

ದಿವಂಗತ ಅಯತೊಲ್ಲಾ ಅಲಿ ಖಮೇನಿಯವರ ಪುತ್ರ 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ತಜ್ಞರ ಸಭೆಯು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಇರಾನ್ ಅಂತಾರಾಷ್ಟ್ರೀಯ...

ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ...

ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು...

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...